Homeಮುಖಪುಟಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

ಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಸ್ಪರ್ಧಿಸಿದ್ದರು. ಅವರ ಭವಿಷ್ಯವೇನಾಯಿತು? ಅವರು ಗೆಲುವು ಸಾಧಿಸಿದರೆ ಎಂಬುದರ ವಿವರ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಜೆಡಿಎಸ್ ಸೇರಿದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದರು. ಆದರೆ ಅವರು ಸೋಲು ಕಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲುವು ಸಾಧಿಸಿದ್ದಾರೆ.
  2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಅವರು ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಜಯ ಕಂಡರು.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದರು. ಆದರೆ ಅವರು ಕಾಂಗ್ರೆಸ್‌ನ ಅಜಯ್ ಸಿಂಗ್ ವಿರುದ್ಧ ಸೋಲು ಕಂಡರು.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ರಾಘವೇಂದ್ರ ಹಿಟ್ನಾಳ್ ಎದುರು ಸೋಲು ಅನುಭವಿಸಿದರು.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ಶಿವಲಿಂಗೇಗೌಡರ ಎದುರು ಸೋಲು ಕಂಡರು.

6. ವರುಣ: ಭಾರತೀ ಶಂಕರ್ – ಸಿದ್ದರಾಮಯ್ಯನವರ ಎದುರು ಸೋಲು ಕಂಡರು

7. ಅರಕಲಗೂಡು: ಎ.ಮಂಜುರವರು ಬಿಜೆಪಿ ತೊರೆದು ಬಂದು ಕಾಂಗ್ರೆಸ್‌ನ ಶ್ರೀಧರ್‌ ಗೌಡರ ಎದುರು ಜಯ ಸಾಧಿಸಿ ಶಾಸಕರಾಗಿದ್ದಾರೆ.

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪಯವರು ಕಾಂಗ್ರೆಸ್‌ನ ಶ್ರೀನಿವಾಸ್‌ರವರ ಎದುರು ಹೀನಾಯ ಸೋಲು ಕಂಡರು.

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್ ರವರು ಹಗರಿಬೊಮ್ಮನಹಳ್ಳಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ ಕಾಂಗ್ರೆಸ್‌ನ ರಹೀಂ ಖಾನ್ ಎದುರು ಸೋಲು ಕಂಡರು.

11. ಯಾದಗಿರಿ: ಎ.ಬಿ ಮಲಕರೆಡ್ಡಿಯವರು ಕಾಂಗ್ರೆಸ್‌ನ ಚನ್ನರೆಡ್ಡಿ ಪಾಟೀಲ್ ಎದುರು ಸೋಲು ಕಂಡರು.

12. ಶಹಾಪುರ: ಗುರು ಪಾಟೀಲ್ ಸಿರವಾರ್‌ರವರು ಕಾಂಗ್ರೆಸ್‌ನ ಶರಣ ಬಸಪ್ಪ ಎದುರು ಸೋಲು ಕಂಡರು.

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್ ರವರು ಕಾಂಗ್ರೆಸ್‌ನ ಶಿವಾನಂದ ಪಾಟೀಲ್ ಎದುರು ಸೋಲು ಕಂಡರು.

14. ಕಾರವಾರ: ಚೈತ್ರ ಕೋಟೇಕಾರ್ ಕಾಂಗ್ರೆಸ್‌ನ ಸತೀಶ್ ಸೈಲ್ ಎದುರು ಸೋಲು ಕಂಡರು.

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಅಲಿ ರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ. ಆದರೆ ಅಲ್ಲಿ ಬಿಜೆಪಿಯ ಭರತ್ ಶೆಟ್ಟಿಯವರ ಎದರು ಸೋಲು ಕಂಡರು.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ವಿರೇಂದ್ರ ಪಪ್ಪಿಯವರ ಎದುರು ಸೋಲು ಕಂಡರು.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್‌ ಕೆ.ಎಸ್ ಆನಂದ್ ಎದುರು ಸೋಲು ಕಂಡರು.

4. ಬಳ್ಳಾರಿ ನಗರ: ಅನಿಲ್ ಲಾಡ್ ಜೆಡಿಎಸ್ ಅಭ್ಯರ್ಥಿಯಾದರು. ಆದರೆ ನಾರಾ ಭರತ್ ರೆಡ್ಡಿ ಎದುರು ಹೀನಾಯ ಸೋಲು ಕಂಡರು.

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ವೈ.ಎಚ್ ಮೇಟಿ ಎದುರು ಸೋಲು ಕಂಡರು.

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ ಜೆಡಿಎಸ್ ಸೇರಿದರು. ಆದರೆ ಬಿಜೆಪಿ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡರು.

7. ಹಾನಗಲ್: ಮನೋಹರ್ ತಹಸೀಲ್ದಾರ್ ಜೆಡಿಎಸ್ ಸೇರಿದರೂ ಸಹ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಎದುರು ಹೀನಾಯ ಸೋಲು ಕಂಡರು.

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್ ಜೆಡಿಎಸ್ ಸೇರಿದರು. ಆದರೆ ಗುರು ದೇಶಪಾಂಡೆ ವಿರುದ್ಧ ಸೋಲು ಕಂಡರು.

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿರೆಡ್ಡಿಯವರು ಕಾಂಗ್ರೆಸ್‌ನ ಕೋನರೆಡ್ಡಿಯವರ ಎದುರು ಸೋತರು.

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ ಜೆಡಿಎಸ್ ಸೇರಿ ಕಾಂಗ್ರೆಸ್‌ನ ವಿಶ್ವಾಸ್ ವಸಂತ್ ವೈದ್ಯರ ಎದುರು ಸೋತರು.

11. ರಾಯಬಾಗ: ಪ್ರದೀಪ್ ಮಾಳಗಿ ಜೆಡಿಎಸ್ ಸೇರಿ ಬಿಜೆಪಿಯ ಐಹೋಳೆ ಮಹಾಲಿಂಗಪ್ಪನವರ ಎದುರು ಸೋಲು ಕಂಡರು.

12. ಕುಡಚಿ: ಆನಂದ್ ಮಾಳಗಿ ಕಾಂಗ್ರೆಸ್‌ನ ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ್ ಎದುರು ಸೋತರು.

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ಬಿ.ಜಿ ಗೋವಿಂದಪ್ಪನವರ ಎದುರು ಸೋತರು.

ಒಟ್ಟಾರೆಯಾಗಿ 27 ಜನ ಕಡೆಯ ಕ್ಷಣದಲ್ಲಿ ಜೆಡಿಎಸ್ ಪಕ್ಷಕ್ಕೆ ಧುಮುಕಿ ಟಿಕೆಟ್ ಗಿಟ್ಟಿಸಿಕೊಂಡರು. ಆದರೆ ಕೇವಲ ಇಬ್ಬರು ಮಾತ್ರ ಗೆಲುವು ಸಾಧಿಸಿದರು. ಉಳಿದ 25 ಮಂದಿ ಹೀನಾಯ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...