Homeಮುಖಪುಟಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

ಕಾಂಗ್ರೆಸ್-ಬಿಜೆಪಿ ಟಿಕೆಟ್ ಸಿಗದೇ ಜೆಡಿಎಸ್ ಸೇರಿದವರ ಭವಿಷ್ಯವೇನಾಯಿತು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನ 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಸ್ಪರ್ಧಿಸಿದ್ದರು. ಅವರ ಭವಿಷ್ಯವೇನಾಯಿತು? ಅವರು ಗೆಲುವು ಸಾಧಿಸಿದರೆ ಎಂಬುದರ ವಿವರ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಜೆಡಿಎಸ್ ಸೇರಿದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದರು. ಆದರೆ ಅವರು ಸೋಲು ಕಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲುವು ಸಾಧಿಸಿದ್ದಾರೆ.
  2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಅವರು ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿ ನಯನ ಮೋಟಮ್ಮ ಜಯ ಕಂಡರು.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದರು. ಆದರೆ ಅವರು ಕಾಂಗ್ರೆಸ್‌ನ ಅಜಯ್ ಸಿಂಗ್ ವಿರುದ್ಧ ಸೋಲು ಕಂಡರು.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ರಾಘವೇಂದ್ರ ಹಿಟ್ನಾಳ್ ಎದುರು ಸೋಲು ಅನುಭವಿಸಿದರು.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದರು. ಆದರೆ ಕಾಂಗ್ರೆಸ್‌ನ ಶಿವಲಿಂಗೇಗೌಡರ ಎದುರು ಸೋಲು ಕಂಡರು.

6. ವರುಣ: ಭಾರತೀ ಶಂಕರ್ – ಸಿದ್ದರಾಮಯ್ಯನವರ ಎದುರು ಸೋಲು ಕಂಡರು

7. ಅರಕಲಗೂಡು: ಎ.ಮಂಜುರವರು ಬಿಜೆಪಿ ತೊರೆದು ಬಂದು ಕಾಂಗ್ರೆಸ್‌ನ ಶ್ರೀಧರ್‌ ಗೌಡರ ಎದುರು ಜಯ ಸಾಧಿಸಿ ಶಾಸಕರಾಗಿದ್ದಾರೆ.

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪಯವರು ಕಾಂಗ್ರೆಸ್‌ನ ಶ್ರೀನಿವಾಸ್‌ರವರ ಎದುರು ಹೀನಾಯ ಸೋಲು ಕಂಡರು.

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್ ರವರು ಹಗರಿಬೊಮ್ಮನಹಳ್ಳಿಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ ಕಾಂಗ್ರೆಸ್‌ನ ರಹೀಂ ಖಾನ್ ಎದುರು ಸೋಲು ಕಂಡರು.

11. ಯಾದಗಿರಿ: ಎ.ಬಿ ಮಲಕರೆಡ್ಡಿಯವರು ಕಾಂಗ್ರೆಸ್‌ನ ಚನ್ನರೆಡ್ಡಿ ಪಾಟೀಲ್ ಎದುರು ಸೋಲು ಕಂಡರು.

12. ಶಹಾಪುರ: ಗುರು ಪಾಟೀಲ್ ಸಿರವಾರ್‌ರವರು ಕಾಂಗ್ರೆಸ್‌ನ ಶರಣ ಬಸಪ್ಪ ಎದುರು ಸೋಲು ಕಂಡರು.

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್ ರವರು ಕಾಂಗ್ರೆಸ್‌ನ ಶಿವಾನಂದ ಪಾಟೀಲ್ ಎದುರು ಸೋಲು ಕಂಡರು.

14. ಕಾರವಾರ: ಚೈತ್ರ ಕೋಟೇಕಾರ್ ಕಾಂಗ್ರೆಸ್‌ನ ಸತೀಶ್ ಸೈಲ್ ಎದುರು ಸೋಲು ಕಂಡರು.

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಅಲಿ ರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ. ಆದರೆ ಅಲ್ಲಿ ಬಿಜೆಪಿಯ ಭರತ್ ಶೆಟ್ಟಿಯವರ ಎದರು ಸೋಲು ಕಂಡರು.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್ ಅಭ್ಯರ್ಥಿ ವಿರೇಂದ್ರ ಪಪ್ಪಿಯವರ ಎದುರು ಸೋಲು ಕಂಡರು.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು. ಆದರೆ ಕಾಂಗ್ರೆಸ್‌ ಕೆ.ಎಸ್ ಆನಂದ್ ಎದುರು ಸೋಲು ಕಂಡರು.

4. ಬಳ್ಳಾರಿ ನಗರ: ಅನಿಲ್ ಲಾಡ್ ಜೆಡಿಎಸ್ ಅಭ್ಯರ್ಥಿಯಾದರು. ಆದರೆ ನಾರಾ ಭರತ್ ರೆಡ್ಡಿ ಎದುರು ಹೀನಾಯ ಸೋಲು ಕಂಡರು.

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ವೈ.ಎಚ್ ಮೇಟಿ ಎದುರು ಸೋಲು ಕಂಡರು.

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ ಜೆಡಿಎಸ್ ಸೇರಿದರು. ಆದರೆ ಬಿಜೆಪಿ ಅಭ್ಯರ್ಥಿ ಎದುರು ಹೀನಾಯ ಸೋಲು ಕಂಡರು.

7. ಹಾನಗಲ್: ಮನೋಹರ್ ತಹಸೀಲ್ದಾರ್ ಜೆಡಿಎಸ್ ಸೇರಿದರೂ ಸಹ ಕಾಂಗ್ರೆಸ್‌ನ ಶ್ರೀನಿವಾಸ ಮಾನೆ ಎದುರು ಹೀನಾಯ ಸೋಲು ಕಂಡರು.

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್ ಜೆಡಿಎಸ್ ಸೇರಿದರು. ಆದರೆ ಗುರು ದೇಶಪಾಂಡೆ ವಿರುದ್ಧ ಸೋಲು ಕಂಡರು.

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿರೆಡ್ಡಿಯವರು ಕಾಂಗ್ರೆಸ್‌ನ ಕೋನರೆಡ್ಡಿಯವರ ಎದುರು ಸೋತರು.

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ ಜೆಡಿಎಸ್ ಸೇರಿ ಕಾಂಗ್ರೆಸ್‌ನ ವಿಶ್ವಾಸ್ ವಸಂತ್ ವೈದ್ಯರ ಎದುರು ಸೋತರು.

11. ರಾಯಬಾಗ: ಪ್ರದೀಪ್ ಮಾಳಗಿ ಜೆಡಿಎಸ್ ಸೇರಿ ಬಿಜೆಪಿಯ ಐಹೋಳೆ ಮಹಾಲಿಂಗಪ್ಪನವರ ಎದುರು ಸೋಲು ಕಂಡರು.

12. ಕುಡಚಿ: ಆನಂದ್ ಮಾಳಗಿ ಕಾಂಗ್ರೆಸ್‌ನ ಮಹೇಂದ್ರ ಕಲ್ಲಪ್ಪ ತಮ್ಮಣ್ಣನವರ್ ಎದುರು ಸೋತರು.

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ ಜೆಡಿಎಸ್ ಸೇರಿದರು. ಆದರೆ ಕಾಂಗ್ರೆಸ್‌ನ ಬಿ.ಜಿ ಗೋವಿಂದಪ್ಪನವರ ಎದುರು ಸೋತರು.

ಒಟ್ಟಾರೆಯಾಗಿ 27 ಜನ ಕಡೆಯ ಕ್ಷಣದಲ್ಲಿ ಜೆಡಿಎಸ್ ಪಕ್ಷಕ್ಕೆ ಧುಮುಕಿ ಟಿಕೆಟ್ ಗಿಟ್ಟಿಸಿಕೊಂಡರು. ಆದರೆ ಕೇವಲ ಇಬ್ಬರು ಮಾತ್ರ ಗೆಲುವು ಸಾಧಿಸಿದರು. ಉಳಿದ 25 ಮಂದಿ ಹೀನಾಯ ಸೋಲು ಕಂಡಿದ್ದಾರೆ.

ಇದನ್ನೂ ಓದಿ: ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...