Homeಕರ್ನಾಟಕಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

ಚಾಮರಾಜನಗರ: 4 ಸ್ಥಾನಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ

- Advertisement -
- Advertisement -

ಚಾಮರಾಜನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 2018ರ ಚುನಾವಣೆಯಲ್ಲಿ ಗುಂಡ್ಲುಪೇಟೆಯಲ್ಲಿ ಬಿಜೆಪಿ, ಚಾಮರಾಜನಗರದಲ್ಲಿ ಕಾಂಗ್ರೆಸ್, ಹನೂರಿನಲ್ಲಿ ಕಾಂಗ್ರೆಸ್, ಚಾಮರಾಜನಗರದಲ್ಲಿ ಕಾಂಗ್ರೆಸ್‌, ಕೊಳ್ಳೇಗಾಲದಲ್ಲಿ ಬಿಎಸ್‌ಪಿ ಗೆದ್ದಿದ್ದವು.

ಚಾಮರಾಜನಗರ ವಿಧಾನಸಭಾ ಕ್ಷೇತ್ರ

ಪುಟ್ಟರಂಗಶೆಟ್ಟಿ (ಕಾಂಗ್ರೆಸ್)- ಮುನ್ನಡೆ

ವಿ.ಸೋಮಣ್ಣ (ಬಿಜೆಪಿ)- ಹಿನ್ನಡೆ

ಹ.ರ.ಮಹೇಶ್‌ (ಬಿಎಸ್‌ಪಿ)- ಹಿನ್ನಡೆ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿತ್ತು. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಸಚಿವ ವಿ.ಸೋಮಣ್ಣನವರು ಚಾಮರಾಜನಗರದಲ್ಲೂ ಸ್ಪರ್ಧಿಸಿದ್ದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ಗರಿಗೆದರಿತ್ತು. ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಸಿ.ಪುಟ್ಟರಂಗಶೆಟ್ಟಿಯವರಿಗೆ ಪೈಪೋಟಿ ಏರ್ಪಟ್ಟಿತ್ತು. ದಲಿತ ಮತಗಳು ನಿರ್ಣಾಯಕವಾಗಿರುವ ಈ ಕ್ಷೇತ್ರದಲ್ಲಿ ಹೋರಾಟಗಾರಿ ಹ.ರ.ಮಹೇಶ್ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಬಿಎಸ್‌ಪಿ ದಲಿತ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದರೆ ಕಾಂಗ್ರೆಸ್ ಸೋಲುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಆರಂಭಿಕವಾಗಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

***

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ

ಎ.ಆರ್‌.ಕೃಷ್ಣಮೂರ್ತಿ (ಕಾಂಗ್ರೆಸ್)- ಮುನ್ನಡೆ

ಎನ್.ಮಹೇಶ್ (ಬಿಜೆಪಿ)- ಹಿನ್ನಡೆ

ಬಿ.ಪುಟ್ಟಸ್ವಾಮಿ (ಜೆಡಿಎಸ್‌)- ಹಿನ್ನಡೆ

2018ರಲ್ಲಿ ಬಿಎಸ್‌ಪಿಯಿಂದ ಗೆದ್ದು, ನಂತರ ಉಚ್ಚಾಟಿತರಾಗಿ ಬಿಜೆಪಿ ಸೇರಿಕೊಂಡಿರುವ ಎನ್.ಮಹೇಶ್ ಅವರಿಗೆ ಸೈದ್ಧಾಂತಿಕ ವಿರೋಧ ಕ್ಷೇತ್ರದಲ್ಲಿ ವ್ಯಕ್ತವಾಗಿತ್ತು. ಸತತ ಸೋಲುಗಳನ್ನು ಕಂಡಿದ್ದ ಎ.ಆರ್‌.ಕೃಷ್ಣಮೂರ್ತಿಯವರಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿತ್ತು. ಮಹೇಶ್ ಅವರ ಸೈದ್ಧಾಂತಿಕ ಬದಲಾವಣೆಯ ಕಾರಣ ದೊಡ್ಡ ಮಟ್ಟದ ದಲಿತರು ಬಿಜೆಪಿಗೆ ಏಟು ನೀಡಿದ್ದಾರೆ. ಎನ್‌.ಮಹೇಶ್ ಅವರಿಗೆ ಹಿನ್ನಡೆಯಾಗಿದೆ. ಬಿಎಸ್‌ಪಿ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದರು.

***

ಹನೂರು ವಿಧಾನಸಭಾ ಕ್ಷೇತ್ರ

ಎಂ.ಆರ್‌.ಮಂಜುನಾಥ್ (ಜೆಡಿಎಸ್‌)- ಮುನ್ನಡೆ

ಆರ್‌.ನರೇಂದ್ರ (ಕಾಂಗ್ರೆಸ್)- ಹಿನ್ನಡೆ

ಪ್ರೀತನ್ ನಾಗಪ್ಪ (ಬಿಜೆಪಿ)- ಹಿನ್ನಡೆ

ರಾಜೂಗೌಡ ಮತ್ತು ಎಚ್‌.ನಾಗಪ್ಪ ಕುಟುಂಬವಷ್ಟೇ ದಶಕಗಳ ಕಾಲ ಈ ಕ್ಷೇತ್ರದ ಮೇಲೆ ಹಿಡಿತ ಸಾಧಿಸುತ್ತಾ ಬಂದಿವೆ. ಈಗಲೂ ಅಷ್ಟೇ ಎರಡು ಕುಟುಂಬಗಳ ನಡುವೆಯೇ ರಾಷ್ಟ್ರೀಯ ಪಕ್ಷಗಳ ಟಿಕೆಟ್ ಹಂಚಿಕೆಯಾಗಿತ್ತು. ಒಂದು ಕಾಲಕ್ಕೆ ಹನೂರು ವಿಧಾನಸಭಾ ಕ್ಷೇತ್ರವೂ ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಭದ್ರಕೋಟೆಯಾಗಿತ್ತು. ಆದರೆ ನಾಗಪ್ಪನವರು ಕಾಡುಗಳ್ಳ ವೀರಪ್ಪನ್ ಗುಂಡಿಗೆ ಬಲಿಯಾದ ಬಳಿಕ, ಅವರ ಪತ್ನಿ ಪರಿಮಳಾ ನಾಗಪ್ಪ ಸತತವಾಗಿ ಪಕ್ಷ ನಿಷ್ಠೆಯನ್ನು ಬದಲಿಸುತ್ತಾ ಬಂದಿರುವುದು ಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ನಾಗಪ್ಪ ಅವರ ಪುತ್ರ ಪ್ರೀತನ್ ನಾಗಪ್ಪ ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಇಲ್ಲಿ ಸೋತಿದ್ದರು. ರಾಜೂಗೌಡರ ಪುತ್ರ ನರೇಂದ್ರ ಹನೂರು ಕ್ಷೇತ್ರದಲ್ಲಿ ಸತತವಾಗಿ ಗೆಲ್ಲುತ್ತಾ ಬಂದಿದ್ದರು. ಆದರೆ ಜೆಡಿಎಸ್ಸಿನಲ್ಲಿ ಸಕ್ರಿಯವಾಗಿರುವ, ಕಳೆದ ಚುನಾವಣೆಯಲ್ಲಿ ಸೋತಿಸುವ ರಿಯಲ್ ಎಸ್ಟೇಟ್ ಉದ್ಯಮಿ, ಕುರುಬ ಸಮುದಾಯದ ಎಂ.ಆರ್.ಮಂಜುನಾಥ್ ಅವರನ್ನು ಜೆಡಿಎಸ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿಸಿತ್ತು. ಹೀಗಾಗಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಮಂಜುನಾಥ್ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಎರಡು ಕುಟುಂಬಗಳ ರಾಜಕಾರಣಕ್ಕೆ ಮತದಾರರು ಬೇಸತ್ತಿರುವಂತೆ ಆರಂಭಿಕ ಬೆಳವಣಿಗೆಗಳು ತೋರಿಸಿವೆ.

***

ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ

ಗಣೇಶ್ ಪ್ರಸಾದ್ (ಕಾಂಗ್ರೆಸ್)- ಮುನ್ನಡೆ

ಸಿ.ಎಸ್.ನಿರಂಜನಕುಮಾರ್‌ (ಬಿಜೆಪಿ)- ಹಿನ್ನಡೆ

ಕಡಬೂರು ಮಂಜುನಾಥ್ (ಜೆಡಿಎಸ್)- ಹಿನ್ನಡೆ

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅವರ ವಿರುದ್ಧ ಸತತ ಸೋಲುಗಳನ್ನು ಕಂಡಿದ್ದ ಸಿ.ಎಸ್.ನಿರಂಜನಕುಮಾರ್‌ 2018ರಲ್ಲಿ ಗೆದ್ದಿದ್ದರು. ಗೀತಾ ಮಹದೇವಪ್ರಸಾದ್ ಸೋತಿದ್ದರು. ಈ ಬಾರಿ ಮಹದೇವ್ ಪ್ರಸಾದ್ ಅವರ ಪುತ್ರ ಗಣೇಶ್ ಪ್ರಸಾದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಬಿಜೆಪಿಯಲ್ಲಿಯೇ ಇದ್ದ ಚಾಮುಲ್ ನಿರ್ದೇಶಕ ಎಂ.ಪಿ.ಸುನೀಲ್, ಕಡಬೂರು ಮಂಜುನಾಥ್ ಅವರು ಕಣದಲ್ಲಿದ್ದದ್ದು ಸಿ.ಎಸ್.ನಿರಂಜನ್‌ಕುಮಾರ್‌ ಅವರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಕ್ಷೇತ್ರದಲ್ಲಿ ಸಮಾಜ ಕಾರ್ಯದಲ್ಲಿ ನಿರತರಾಗಿದ್ದ ಗಣೇಶ್ ಪ್ರಸಾದ್ ಗೆಲುವಿನತ್ತ ಮುನ್ನಡೆದಿರುವುದು ತೋರುತ್ತಿದೆ. ಎಂ.ಪಿ.ಸುನೀಲ್ ಪಕ್ಷೇತರರಾಗಿ ಮತ್ತು ಕಡಬೂರು ಮಂಜುನಾಥ್ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿರುವುದು ಸಿ.ಎಸ್.ನಿರಂಜನಕುಮಾರ್‌ ಅವರಿಗೆ ಭಾರಿ ಹೊಡೆತ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...