Homeಕರ್ನಾಟಕಮತ ಎಣಿಕೆಗೆ ಕ್ಷಣಗಣನೆ; 2,615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಮತ ಎಣಿಕೆಗೆ ಕ್ಷಣಗಣನೆ; 2,615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಅಧಿಕಾರದ ಚುಕ್ಕಾಣಿಯನ್ನು ಯಾರು ಹಿಡಿಯಲಿದ್ದಾರೆಂಬ ಭವಿಷ್ಯ ಇಂದು ನಿರ್ಧಾರವಾಗಲಿದೆ.

ರಾಜ್ಯದ 3.67 ಕೋಟಿ ಮತದಾರರು ನೀಡಿರುವ ನಿರ್ಧಾರ ಇಂದು ಪ್ರಕಟವಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಈಗಾಗಲೇ ಸರ್ಕಾರ ರಚಿಸುವ ಕಸರತ್ತಿನಲ್ಲಿ ನಿರತವಾಗಿವೆ.

ಅತಂತ್ರ ಸರ್ಕಾರ ರಚನೆಯಾದಲ್ಲಿ ಮೈತ್ರಿಯ ಸೂಚನೆಯನ್ನು ಜೆಡಿಎಸ್ ನೀಡಿದರೆ, ಆಪರೇಷನ್‌ ಸಂಬಂಧ ಕಮಲ ಮತ್ತು ಕೈ ಪಕ್ಷಗಳೆರಡೂ ಸೂಚನೆ ನೀಡಿವೆ. ಮತದಾನೋತ್ತರ ಸಮೀಕ್ಷೆಗಳು ಹೆಚ್ಚಿನದಾಗಿ ಕಾಂಗ್ರೆಸ್‌ಗೆ ಒಲವು ತೋರಿಸಿದರೆ, ಕೆಲವು ಸಮೀಕ್ಷೆಗಳು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಿವೆ. ಹಲವು ಸಮೀಕ್ಷೆಗಳು ಅತಂತ್ರ ಸರ್ಕಾರದ ಸೂಚನೆಯನ್ನೂ ನೀಡಿವೆ.

ವಿಧಾನಸಭೆಯ 224 ಕ್ಷೇತ್ರಗಳ ಶಾಸಕರ ಆಯ್ಕೆಗೆ ಏಪ್ರಿಲ್‌ 10 ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದಾರೆ. 2,615 ಅಭ್ಯರ್ಥಿಗಳು ಕಣದಲ್ಲಿದ್ದು, ಜನರ ವಿಶ್ವಾಸಗೆದ್ದು ಯಾರು ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂಬುದು ಇಂದು ತಿಳಿಯಲಿದೆ.

ಬಿಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ.

“ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ.

100%
ಮತ ಎಣಿಕೆ ನಡೆಯಲಿರುವ ಕೇಂದ್ರಗಳು

28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಪ್ರತಿ ಮತ ಎಣಿಕೆ ಕೇಂದ್ರದಲ್ಲಿ ಅರೆಸೇನಾ ಪಡೆಗಳ ಜೊತೆಗೆ ಎಸಿಪಿಗಳು, ಇನ್‌ಸ್ಪೆಕ್ಟರ್‌ಗಳು, ಸಬ್‌ಇನ್‌ಸ್ಪೆಕ್ಟರ್‌ಗಳ ನಂತರ ಇಬ್ಬರು ಡಿಸಿಪಿಗಳು ಹಾಜರಿರುತ್ತಾರೆ. ಮುಂಜಾಗ್ರತೆ ವಹಿಸಿ ಸೆಕ್ಷನ್ 144 ಕೂಡ ಜಾರಿ ಮಾಡಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜು, ತಿಲಕನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜು ಮತ್ತು ದೇವನಹಳ್ಳಿಯ ಆಕಾಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮತ ಎಣಿಕೆ ನಡೆಯಲಿದೆ.

ಪೂರ್ವ ಮತ್ತು ಪಶ್ಚಿಮ ವಿಭಾಗದ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಭದ್ರತಾ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. 10 ಡಿಸಿಪಿಗಳು, 15 ಸಹಾಯಕ ಪೊಲೀಸ್ ಆಯುಕ್ತರು, 38 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 250 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಮತ್ತು ನಗರ ಪೊಲೀಸ್‌ನ ಇತರ 1,200 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅರೆಸೇನಾ ಪಡೆಗಳ 12 ಕಂಪನಿಗಳು, 36 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಮತ್ತು ಸಿಟಿ ಆರ್ಮ್ಡ್ ರಿಸರ್ವ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರತಿ ಮತ ಎಣಿಕೆ ಕೇಂದ್ರಕ್ಕೆ ಮೂವರು ಎಸಿಪಿಗಳು, ಆರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು 50 ಸಬ್ ಇನ್‌ಸ್ಪೆಕ್ಟರ್‌ಗಳ ಜೊತೆಗೆ 300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ಜಾರಿ ಇರಲಿದೆ.

ನಿಚ್ಚಳ ಬಹುಮತದ ಸಾಧ್ಯತೆಯನ್ನು ಹೆಚ್ಚಿನ ಸಮೀಕ್ಷೆಗಳ ಫಲಿತಾಂಶಗಳು ಅಲ್ಲಗಳೆದಿವೆ. ಹೀಗಾಗಿ 2018ರ ಚುನಾವಣೆಯಂತೆ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದೇ ಎಂಬ ಚರ್ಚೆಯೂ ರಾಜ್ಯದಲ್ಲಿ ಬಿರುಸಾಗಿದೆ.

ಮತ ಎಣಿಕೆಗೂ ಮುನ್ನವೇ ಮೂರು ಪ್ರಮುಖ ಪಕ್ಷಗಳನ್ನು ಪಕ್ಷಾಂತರದ ಭೀತಿ ಆವರಿಸಿಕೊಂಡಿದೆ. ಮತ ಎಣಿಕೆ ಪೂರ್ಣಗೊಳ್ಳುತ್ತಿದ್ದಂತೆಯೇ ಪಕ್ಷದ ಶಾಸಕರನ್ನು ಕರೆದೊಯ್ದು ಸುರಕ್ಷಿತ ಸ್ಥಳದಲ್ಲಿ ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಆಯಾ ಪಕ್ಷಗಳ ನಾಯಕರು ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ಶುಕ್ರವಾರವೇ ಸಭೆಗಳನ್ನು ನಡೆಸಿದ್ದಾರೆ.

ಚುನಾವಣಾ ಕಣದಲ್ಲಿ ಪ್ರಬಲರಾಗಿರುವ ಪಕ್ಷೇತರರು ಮತ್ತು ಕಡಿಮೆ ಸಂಖ್ಯೆಯ ಸ್ಥಾನ ಗಳಿಸಬಹುದಾದ ಪಕ್ಷಗಳ ಮೇಲೆ ಪ್ರಮುಖ ರಾಜಕೀಯ ಪಕ್ಷಗಳು ಗಮನ ಹರಿಸಿವೆ. ಅತಂತ್ರ ಸ್ಥಿತಿ ನಿರ್ಮಾಣವಾದರೆ ಅಂತಹ ಶಾಸಕರನ್ನು ಸೆಳೆಯುವ ತಂತ್ರ ರೂಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...