Homeಕರ್ನಾಟಕಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್...

ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ

- Advertisement -
- Advertisement -

ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯದಲ್ಲಿ ನಿರತರಾಗಿರುವ ಯಡಿಯೂರಪ್ಪನವರಿಗೆ ಸಿಹಿ-ಕಹಿ ಅನುಭವಗಳಾಗುತ್ತಿವೆ. ಪರಿಹಾರಕ್ಕೆ 5000 ಕೋಟಿ ನೆರವು ಬೇಕಿದೆ, ದಾನಿಗಳು ಸಹಕರಿಸಿ ಎಂಬ ಯಡಿಯೂರಪ್ಪನವರ ಮನವಿಗೆ ಬಹಳಷ್ಟು ಜನ ಮಿಡಿದು ಸಹಾಯ ಮಾಡುತ್ತಿದ್ದಾರೆ. ಇನ್ನು ಮತ್ತಷ್ಟು ಜನ ಖಂಡಿ ಸಹಾಯ ಮಾಡುತ್ತೇವೆ ಆದರೆ ಮೊದಲು ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್ ಘೋಷಿಸಬೇಕು. ನಂತರ ರಾಜ್ಯಸರ್ಕಾರ ಘೋಷಿಸಬೇಕು. ಆಗಲು ಸಾಲದಿದ್ದರೆ ನಾಡಿನ ಜನತೆ ಖಂಡಿತ ಶಕ್ತಿ ಮೀರಿ ಸಹಾಯ ಮಾಡುತ್ತಾರೆ. ಮೊದಲು ನಿಮ್ಮ ಕೆಲಸ ಮಾಡಿ ಎಂದು ಸಿಎಂಗೆ ತಾಕೀತು ಮಾಡಿದ್ದಾರೆ.

ಇನ್ನೊಂದಷ್ಟು ಜನ ಜಡಿಮಳೆಯಲ್ಲಿಯೇ ಈ ಸರ್ಕಾರವನ್ನು ಮತ್ತಷ್ಟು ತರಾಟೆಗೆ ತೆಗೆದುಕೊಂಡು ಆಪರೇಷನ್ ಕಮಲಕ್ಕೆ ಹಣ ಇದೆ. ಪ್ರವಾಹ ಸಂತ್ರಸ್ತರಿಗೆ ಗಂಜಿ ನೀಡಲು ಹಣವಿಲ್ಲವೇ? ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಟ್ರೋಲ್ ಗಳ ಸುರಿಮಳೆ ಸುರಿಸಿದ್ದಾರೆ.

‘ಅತೃಪ್ತರಿಗೆ ಖಾಸಗಿ ವಿಮಾನ ತರಿಸಲು ಯೋಗ್ಯತೆ ಇದೆ, ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಲು ರಕ್ಷಣಾ ವಿಮಾನ ತರಸಲು ಯೋಗ್ಯತೆ ಇಲ್ಲವೇ? ಶೇಮ್ ಶೇಮ್’ ಎಂದು ಅರುಣ್ ಕುಮಾರ್ ರವರು ಫೇಸ್ ಬುಕ್ ನಲ್ಲಿ ಬರೆದಿದ್ದಾರೆ.

ಪವನ್ ಕುಮಾರ್ ಎಂಬುವವರು “ಖಂಡಿತ ಕನ್ನಡಿಗರು ಈ ಪ್ರವಾಹಕ್ಕೆ ಸ್ಪಂದಿಸುತ್ತಾರೆ, ಇದರಲ್ಲಿ ಎರಡು ಮಾತಿಲ್ಲ. ಆದರೆ ನೀವು ಶಾಸಕರನ್ನು ಖರೀದಿಸಲು, ರೆಸಾರ್ಟ್ ಬುಕ್ ಮಾಡಲು ಬಳಸುವ ಹಣವನ್ನು ಈ ಸಂತ್ರಸ್ತರಿಗಾಗಿ ಬಳಸಿ.. ನಿಮ್ಮದೇ ಕೇಂದ್ರ ಸರ್ಕಾರದಿಂದಲೂ ನಿಧಿಗಳನ್ನು ತನ್ನಿ” ಎಂದು ಬರೆದಿದ್ದಾರೆ.

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಸರಿಯಾಗಿ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಸರಿಯಾದ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!
#KarnatakaFloods #ಯಡಿಯುರಪ್ಪಎಲ್ಲಿದ್ದಿಯಪ್ಪl ಎಂಬ ಬರಹ ವಾಟ್ಸಾಪ್ ನಲ್ಲಿ ಹರಿದಾಡುತ್ತಿದೆ.

ನಿರಂತರವಾಗಿ ಬಿಜೆಪಿಗರನ್ನು ಚುನಾಯಿಸುತ್ತಿರುವ ಕೊಡಗು ಕುಸಿದಾಗ ಬರಲು ಮೋದಿಯವರಿಗೆ ಬಿಡುವಾಗಲಿಲ್ಲ.
25 ಬಿಜೆಪಿ ಸಂಸದರನ್ನು ಸಂಸತ್ತಿಗೆ ಕಳುಹಿಸಿರುವ ಕರ್ನಾಟಕ ಈಗ ಮುಳುಗಿದೆ;
ಮೋದಿಯವರಿಗೆ ಬಿಡುವಾಗುತ್ತದೋ ನೋಡಬೇಕು. #ಕರ್ನಾಟಕ_ಪ್ರವಾಹ ಎಂದು ಶ್ರೀನಿವಾಸ ಕಾರ್ಕಳರವರು ಬರೆದುಕೊಂಡಿದ್ದಾರೆ.

ಪ್ರಹ್ಲಾದ್ ಜೋಷಿಗೆ ಪ್ರವಾಹದ ಬಗ್ಗೆ ಮಾಹಿತೀನೆ ಇಲ್ವಂತೆ
ಇಂತವರನ್ನು ಸಂಸದರಾಗಿ ಪಡೆದ ಧಾರವಾಡ ಜಿಲ್ಲೆಯ ಜನತೆಯೇ ಧನ್ಯರು ಎಂದು ಶೃತಿ ಶಂಕರ್ ರವರು ವ್ಯಂಗ್ಯವಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...