Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...