Homeಮುಖಪುಟಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

ಭರ್ಜರಿ ಬಹುಮತ: ಕಾಂಗ್ರೆಸ್ ಗೆಲುವಿಗೆ ಕಾರಣವಾದ 5 ಅಂಶಗಳು

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸುವತ್ತ ದಾಪುಗಾಲಿಟ್ಟಿದೆ. ಆಡಳಿತರೂಢ ಬಿಜೆಪಿ ಹೀನಾಯ ಸೋಲಿನೊಂದಿಗೆ ಮುಖಭಂಗ ಅನುಭವಿಸಿದೆ. ಈ ರೀತಿಯ ನಿರ್ಣಾಯಕ ಫಲಿತಾಂಶಕ್ಕೆ ಕಾರಣವೇನು ಎಂಬ ಚರ್ಚೆಗಳು ಆರಂಭವಾಗಿವೆ. ಕಾಂಗ್ರೆಸ್ ಭರ್ಜರಿ ಜಯ ಕಾಣಲು ಕಾರಣವಾದ 5 ಅಂಶಗಳನ್ನು ಪಟ್ಟಿಮಾಡುವ ಪ್ರಯತ್ನ ಇಲ್ಲಿದೆ.

  1. ಕಾಂಗ್ರೆಸ್ ಘೋಷಿಸಿದ 5 ಗ್ಯಾರಂಟಿ ಯೋಜನೆಗಳು

ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಬಿಡುಗಡೆಗೂ ಮುನ್ನವೇ 200 ಯೂನಿಟ್‌ವರೆಗೂ ಉಚಿತ ವಿದ್ಯುತ್, ಮನೆಯೊಡತಿಗೆ 2000 ರೂ, ನಿರುದ್ಯೋಗಿಗಳಿಗೆ 3000 ರೂ ನಿರುದ್ಯೋಗ ಭತ್ಯೆ, ಬಿಪಿಎಲ್ ಕಾರ್ಡುದಾರರಿಗೆ ತಲಾ 10ಕೆಜಿ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್ ಎಂಬ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಿದವು.

2. ಜಾತ್ಯತೀತತೆ ಬೆಂಬಲಿಸಿದ್ದು, ದೃಢವಾಗಿ ನಿಂತಿದ್ದು

ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮತೀಯ ಗೂಂಡಾಗಿರಿ, ದ್ವೇ‍ಷ ಭಾಷಣ, ಅನ್ಯಧರ್ಮ ದ್ವೇ‍ಷಗಳಲ್ಲಿ ಮುಳುಗಿಹೋಯಿತು. ಹಲಾಲ್-ಹಿಜಾಬ್, ಮುಸ್ಲಿಮರಿಗೆ ವ್ಯಾಪಾರಕ್ಕೆ ಅಡ್ಡಿ, ಉರಿಗೌಡ – ನಂಜೇಗೌಡ ವಿವಾದ ಹುಟ್ಟು ಹಾಕಿದರು. ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರು. ಆದರೆ ಈ ಎಲ್ಲಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತತೆಯ ಪರವಾಗಿ ದೃಢವಾಗಿ ನಿಂತಿತು. ಭಾರತ್ ಜೋಡೋ ಯಾತ್ರೆ ನಡೆಸಿ ದ್ವೇಷದ ವಿರುದ್ದ ದನಿಯೆತ್ತಿದ್ದು. ತಮ್ಮ ಪ್ರಣಾಳಿಕೆಯನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದುಕೊಂಡಿತು. ಅದು ಅವರಿಗೆ ಜಯ ತಂದುಕೊಟ್ಟಿತು.

3. ಪ್ರಾದೇಶಿಕತೆ ಪರ ನಿಂತ ಕಾಂಗ್ರೆಸ್

ಬಿಜೆಪಿಯ ಹಿಂದಿ ಹೇರಿಕೆ, ಅಮುಲ್ ಮಾರಾಟ, ಜಿಎಸ್‌ಟಿ ಮೋಸ, ನೆರೆ-ಬರ ಪರಿಹಾರ ಕೊಡದಿರುವುದನ್ನು ಕಾಂಗ್ರೆಸ್ ಕಟುವಾಗಿ ಟೀಕಿಸಿತು. ಕನ್ನಡ ಮತ್ತು ಕರ್ನಾಟಕದ ಪರ ದನಿ ಎತ್ತಿತ್ತು. ಅದು ಅವರ ಗೆಲುವಿಗೆ ಸಹಕಾರಿಯಾಯಿತು.

4. ಟಿಕೆಟ್ ಹಂಚಿಕೆಯಲ್ಲಿ ಜಾಣತನ: ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೆಳೆದುಕೊಂಡಿದ್ದು

ಕಾಂಗ್ರೆಸ್ ಪಕ್ಷ ಬೇಗನೇ ಟಿಕೆಟ್ ಘೋಷಿಸಿತು. ಬಂಡಾಯವನ್ನು ಸಮರ್ಪಕವಾಗಿ ನಿಭಾಯಿಸಿತು. ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಸೇರಿದಂತೆ ಬೇರೆ ಪಕ್ಷಗಳ ಟಿಕೆಟ್ ವಂಚಿತರನ್ನು ಸೆಳೆದುಕೊಂಡಿತು. ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಟ್ಟಾಗಿ ಚುನಾವಣೆ ಎದುರಿಸಿ ಗೆಲುವು ಕಂಡರು.

5. ಬಿಜೆಪಿ ಸರ್ಕಾರದ ವಿರುದ್ಧವಿದ್ದ ಆಡಳಿತವಿರೋಧಿ ಅಲೆ, 40% ಕಮಿಷನ್ ವಿರುದ್ಧ ಜನಾಕ್ರೋಶ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದ ಬಿಜೆಪಿ ಜನಪರ ಆಡಳಿತ ನೀಡುವಲ್ಲಿ ವಿಫಲವಾಯಿತು. ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಿತು. ಬಿಪಿಎಲ್ ಅರ್ಜಿದಾರರಿಗೆ ನೀಡುವ ಅಕ್ಕಿಯ ಕಡಿತ ಮಾಡಿತು. ಕೋವಿಡ್ ನಿರ್ವಹಣೆಯಲ್ಲಿ, ಆಕ್ಸಿಜನ್, ಆಸ್ಪತ್ರೆ ಬೆಡ್ ಪೂರೈಸುವಲ್ಲಿ ಸಂಪೂರ್ಣ ವಿಫಲವಾಯಿತು. ಪಠ್ಯ ಪುಸ್ತಕ  ಒಂದು ಕಡೆ ಹಿಂದಿನ ಸರ್ಕಾರದ ಕಲ್ಯಾಣ ಯೋಜನೆಗಳನ್ನು ಕಡಿತ ಮಾಡಿದರೆ ಇನ್ನೊಂದು ಕಡೆ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಯಿತು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ನಿರಂತರವಾಗಿ ಏರಿದ್ದು ಜನರನ್ನು ಬಾಧಿಸತೊಡಗಿತು. ಇದೆಲ್ಲವನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಾಂಗ್ರೆಸ್ ಶಕ್ತಿ ಮೀರಿ ಯತ್ನಿಸಿತು. ಸಾಮಾಜಿಕ ಜಾಲತಾಣಗಳ ಮೂಲಕ ಮಾತ್ರವಲ್ಲದೇ ಹಲವಾರು ಬೀದಿ ಹೋರಾಟಗಳನ್ನು ನಡೆಸಿತು.

ಸಾಲು ಸಾಲು ಹಗರಣಗಳಲ್ಲಿ ಮುಳುಗಿದ ಬಿಜೆಪಿ –  ಟ್ಯಾಗ್ ಕೊಟ್ಟ ಕಾಂಗ್ರೆಸ್

ಯಡಿಯೂರಪ್ಪನವರು ಕರ್ನಾಟಕದ ಸಿಎಂ ಆಗುತ್ತಲೆ ಅವರ ಪುತ್ರ ಸೂಪರ್ ಸಿಎಂ ಎನಿಸಿಕೊಂಡರು. ಸರ್ಕಾರದಲ್ಲಿ ಹಸ್ತಕ್ಷೇಪ ಮಾತ್ರವಲ್ಲದೇ ಭಾರೀ ಭ್ರಷ್ಟಾಚಾರ ನಡೆಸುತ್ತಾರೆ ಎಂಬ ಆರೋಪಗಳು ಕೇಳಿ ಬಂದವು. (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ನಗದನ್ನೂ ಮತ್ತು ಶೆಲ್ ಕಂಪೆನಿಗಳ ಮೂಲಕವಾಗಿಯೂ ಲಂಚ ಪಡೆದಿದ್ದಾರೆ ಎಂಬ ಆರೋಪ ಎದುರಿಸಿದ್ದರು. ಈ ಕುರಿತು ಪವರ್ ಟಿವಿ ಸ್ಟಿಂಗ್ ಆಪರೇಷನ್ ನಡೆಸಿ ನಿರಂತರ ವರದಿ ಮಾಡಿತ್ತು. ಈ ಪ್ರಕರಣದ ತನಿಖೆ ಇಂದಿಗೂ ನಡೆಯುತ್ತಿದೆ.

ಇನ್ನು ಬೊಮ್ಮಾಯಿಯವರು ಸಿಎಂ ಆಗುತ್ತಲೇ 40% ಕಮಿಷನ್ ಸರ್ಕಾರ, ಬಿಟ್ ಕಾಯಿನ್ ಹಗರಣ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ – ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ, ಮಠಗಳ ಅನುದಾನದಲ್ಲಿಯೂ 30% ಕಮಿಷನ್!, ಪಿಎಸ್‌ಐ ಹಗರಣ, ಮತದಾರರ ಪಟ್ಟಿ ಹಗರಣ, ಸ್ಯಾಂಟ್ರೋ ರವಿ ಕೇಸ್, ಮಾಡಾಳ್ ಹಗರಣ.. ಹೀಗೆ ಪಟ್ಟಿ ಬೆಳೆಯುತ್ತಲೇ ಇರುವುದು ಬಿಜೆಪಿ ಸೋಲಿಗೆ, ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಯಿತು.

ಇದನ್ನೂ ಓದಿ: ಮುರಿಯಲಾಗದ 37 ವರ್ಷಗಳ ಇತಿಹಾಸ; ಆಡಳಿತರೂಢ ಸರ್ಕಾರ ಕೆಡವಿದ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...