Homeಕರ್ನಾಟಕಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದ ಬಿಜೆಪಿ ಇದೀಗ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?

- Advertisement -
- Advertisement -

”ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ” ಎಂದು 2014ರಲ್ಲಿ ದೇಶದ ಚುಕ್ಕಾಣೆ ಹಿಡಿದ ಭಾರತೀಯ ಜನತಾ ಪಕ್ಷ, ಆರಂಭದಲ್ಲಿ ದೇಶದ ಹಲವು ರಾಜ್ಯಗಳಲ್ಲಿ ದಿಗ್ವಿಜಯ ಸಾಧಿಸಿತು. ಆದರೆ, ಅತಿ ಕಡೆಮೆ ಅವಧಿಯಲ್ಲಿಯೇ ದೇಶಾದ್ಯಂತ ಬಿಜೆಪಿ ಆಡಳಿತದ ವಿರೋಧಿ ಅಲೆ ಶುರುವಾಗಿದೆ. ಹಾಗಾಗಿಯೇ ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುತ್ತಿದೆ. ಇದೀಗ ಕರ್ನಾಟಕದಲ್ಲೂ ಅತ್ಯಂತ ಹೀನಾಯವಾಗಿ ಸೋಲುವ ಮೂಲಕ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

2014ರಲ್ಲಿ ಕೇಂದ್ರದಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ, ಈಶಾನ್ಯ ರಾಜ್ಯಗಳಿಂದ ಮೊದಲುಗೊಂಡು ಎಲ್ಲೆಡೆ ಬಿಜೆಪಿ ಅಲೆ ಎದ್ದಿತ್ತು. ಮೋದಿ ಎಂಬ ಬಿರುಗಾಳಿಗೆ ಸಿಕ್ಕಿ ಹಲವು ರಾಜಕೀಯ ಪಕ್ಷಗಳು ನೆಲಕಚ್ಚಿದವು. ಕಾಂಗ್ರೆಸ್, ಎಸ್ಪಿ, ಬಿಎಸ್ಪಿ, ಎನ್‌ಸಿಪಿ, ಆರ್‌ಜೆಡಿ, ಎಡಪಕ್ಷಗಳು ಸೇರಿದಂತೆ ಘಟಾನುಘಟಿಗಳೇ ಮೋದಿ ಸುನಾಮಿಗೆ ಸುಸ್ತಾದವು. ಆದರೆ ಟಿಎಂಸಿ, ಎಲ್‌ಡಿಎಫ್, ಟಿಡಿಪಿ, ಟಿಆರ್‌ಎಸ್‌, ಎಐಎಡಿಎಂಕೆ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳನ್ನು ಅಲುಗಾಡಿಸಲು ಮೋದಿ ನೇತೃತ್ವದ ಬಿಜೆಪಿಗೆ ಸಾಧ್ಯವಾಗಿರಲಿಲ್ಲ.

2019ರಲ್ಲಿ ಮೋದಿ ಸರ್ಕಾರ 2ನೇ ಅವಧಿಗೆ ಅಧಿಕಾರದ ಗದ್ದುಗೆ ಹಿಡಿಯುವ ಉತ್ಸಾಹದಲ್ಲಿತ್ತು. ಆದರೆ ಅಷ್ಟೊತ್ತಿಗಾಗಲೇ ದೇಶದ ಜನರು ಬೆಲೆ ಏರಿಕೆಗೆ ಹಾಗೂ ಅಭಿವೃದ್ಧಿಯಲ್ಲೂ ಕಳಪೆ ಸಾಧನೆಯಿಂದಾಗಿ ಜನರು ಬೇಸತ್ತು ಹೋಗಿದ್ದರು. ಹಾಗಾಗಿ ಹಲವು ರಾಜ್ಯಗಳಲ್ಲಿ ಬಿಜೆಪಿ ಸೋಲಿನತ್ತ ಮುಖ ಮಾಡಿತ್ತು. ಮೋದಿ ತವರು ಕ್ಷೇತ್ರ ಗುಜರಾತ್‌ನಲ್ಲಿ ಕಾಂಗ್ರೆಸ್‌ ಎದುರು ಗೆಲುವು ಸಾಧಿಸಲು ಹರಸಾಹಸಪಡಬೇಕಾಯಿತು. ಅಷ್ಟರಮಟ್ಟಿಗೆ ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ಪ್ರತಿರೋಧ ಕೊಟ್ಟಿತ್ತು! ಇದಾದ ನಂತರ ನಡೆದ ಚುನಾವಣೆಗಳಲ್ಲಿ ರಾಜಸ್ತಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಂಥಾ ದೊಡ್ಡ ರಾಜ್ಯಗಳಲ್ಲಿಯೂ ಬಿಜೆಪಿ ಅಧಿಕಾರ ಕಳೆದುಕೊಂಡಿತು. ಮೂರೂ ರಾಜ್ಯಗಳ ಘಟಾನುಘಟಿ ನಾಯಕರೇ ತಲೆತಗ್ಗಿಸಿ ನಿಲ್ಲಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುಲ್ವಾಮಾ ದಾಳಿ, ಸರ್ಜಿಕಲ್ ಸ್ಟ್ರೈಕ್‌ ವಿಚಾರವನ್ನು ರಾಷ್ಟ್ರ ರಕ್ಷಣೆ, ರಾಷ್ಟ್ರಭಕ್ತಿಯ ಭಾವನಾತ್ಮಕವಾಗಿ ಜನರಿಗೆ ಮತ್ತೆ ಮಂಕುಬೂದಿ ಎರಚುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿತು. ಮೋದಿ ಮೊದಲಿಗಿಂತಾ ಹೆಚ್ಚು ಶಕ್ತಿಯುತರಾಗಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರು!

ಬಿಜೆಪಿಗೆ ಇದೀಗ ಮತ್ತೆ ರಾಜ್ಯಗಳನ್ನು ಕಳೆದುಕೊಳ್ಳುವ ಭೀತಿ ಹೆಚ್ಚಾಗಿದೆ. ನಿನ್ನೆಯಷ್ಟೇ ಕರ್ನಾಟಕದಲ್ಲಿ ಬಿಜೆಪಿ ಬಹಳ ಹೀನಾಯವಾಗಿ ಸೋಲುಕಂಡಿದೆ. ದಕ್ಷಿಣಭಾರತದಲ್ಲಿ ಅಧಿಕಾರದಲ್ಲಿದ್ದ ಏಕೈಕ ರಾಜ್ಯ ಕರ್ನಾಟಕ ಆಗಿತ್ತು. ಆದರೆ ಇದೀಗ ಈ ಸೋಲು ಬಿಜೆಪಿಗೆ ದೊಡ್ಡಮಟ್ಟಿನ ನಷ್ಟಕ್ಕೆ ಕಾರಣವಾಗಿದೆ.

ಕರ್ನಾಟಕದಲ್ಲಿನ ಬಿಜೆಪಿಯ ಸೋಲು ಕೇಂದ್ರದ ಆಡಳಿತಾರೂಢ ಎನ್‌ಡಿಎ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ದಿಗ್ವಿಜಯ ಸಾಧಿಸಿದ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ, ರಾಜ್ಯಗಳಲ್ಲಿ ಮಾತ್ರ ಸೋಲಿನ ಹಾದಿ ಹಿಡಿಯುತ್ತಿದೆ. ದೇಶಾದ್ಯಂತ ವ್ಯಾಪಿಸಿದ್ದ ‘ಕೇಸರಿ’ ಸಾಮ್ರಾಜ್ಯ, ನಿಧಾನವಾಗಿ ಕರಗಲು ಆರಂಭಿಸಿದೆ! ಕಳೆದ 12 ತಿಂಗಳುಗಳ ಅವಧಿಯಲ್ಲಿ 5ನೇ ರಾಜ್ಯ ಬಿಜೆಪಿಯ ತೆಕ್ಕೆಯಿಂದ ‘ಕೈ’ ಜಾರಿದೆ! ಬಿಜೆಪಿ ಆಡಳಿತದ ಜಾರ್ಖಂಡ್ ರಾಜ್ಯ, ಕಾಂಗ್ರೆಸ್ ಹಾಗೂ ಜೆಎಂಎಂ ಪಾಲಾಗಿದೆ.

ಕರ್ನಾಟಕದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ 104 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೆಚ್ಚು ಸ್ಥಾನ ಹೊಂದಿರುವ ಪಕ್ಷವಾಯಿತು. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿದವು. ಈ ವೇಳೆ ಆಪರೇಷನ್ ಕಮಲ ಮಾಡಿದ ಬಿಜೆಪಿ ಅಧಿಕಾರಕ್ಕೆ ಬಂದಿತು. ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಜೋರಾಗಿದ್ದಿದ್ದರಿಂದ, ಕೇಂದ್ರ ನಾಯಕರೆಲ್ಲ ಎರಡು ತಿಂಗಳುಗಳ ಕಾಲ ರಾಜ್ಯ ಪ್ರವಾಸ ಮಾಡಿ, ರ್ಯಾಲಿಗಳನ್ನು ಮಾಡಿದರು. ಆದರೆ ಕರ್ನಾಟಕದ ಜನರು ಈ ಬಾರಿ ಬಿಜೆಪಿಯನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಕೇವಲ 66 ಸ್ಥಾನಗಳನ್ನು ನೀಡಿದ್ದಾರೆ. ಇನ್ನೂ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳನ್ನು ನೀಡುವ ಮೂಲಕ ಅಧಿಕಾರ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳು (10)

ಅರುಣಾಚಲ ಪ್ರದೇಶ, ಅಸ್ಸಾಂ, ಗುಜರಾತ್, ಹರಿಯಾಣ, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಉತ್ತರಪ್ರದೇಶ, ಉತ್ತರಾಖಂಡ, ಗೋವಾ

ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ (4)

ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ಮಹಾರಾಷ್ರ್ಟ

ಕಾಂಗ್ರೆಸ್ ಅಥವಾ ಅದರ ಮೈತ್ರಿಕೂಟ ಅಧಿಕಾರದಲ್ಲಿರುವ ರಾಜ್ಯಗಳು (7)

ಬಿಹಾರ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ಜಾರ್ಖಂಡ್, ಕರ್ನಾಟಕ, ರಾಜಸ್ಥಾನ, ತಮಿಳುನಾಡು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...