Homeಕರ್ನಾಟಕಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

ಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಮೈಸೂರು ರಂಗಾಯಣ ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಜಾತಿಯ ಉರಿಗೌಡ ಮತ್ತು ನಂಜೇಗೌಡ ಎಂದು ಕಾಲ್ಪನಿಕ ಪಾತ್ರಗಳನ್ನು ಸೃಷ್ಟಿಸಿ, ಒಕ್ಕಲಿಗರು ವೀರರು ಶೂರರು ಎಂದು ಹೇಳಲು ಹೊರಟಿದ್ದರು. ಈ ಕಾಲ್ಪನಿಕ ಕಥೆಯನ್ನೇ ಬಿಜೆಪಿಯ ಒಕ್ಕಲಿಗ ರಾಜಕಾರಣಿಗಳಾದ ಸಿಟಿ ರವಿ ಹಾಗೂ ಅಶ್ವತ್ಥ ನಾರಾಯಣ ಅವರು ಸತ್ಯ ಎಂದು ಪ್ರತಿಪಾದಿಸಲು ಹೊರಟರು. ಆದರೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಆ ಸಮುದಾಯದ ಸ್ವಾಮೀಜಿ ಇದಕ್ಕೆ ವಿರೋಧ ಮಾಡಿದರು. ದೇಶಭಕ್ತ ಟಿಪ್ಪು ಸುಲ್ತಾನನನ್ನು ಕೊಂದ ದೇಶದ್ರೋಹಿ ಪಟ್ಟ ಒಕ್ಕಲಿಗರಿಗೆ ಬೇಡ ಎಂದು ಹೇಳುವ ಮೂಲಕ ಈ ಕಾಲ್ಪನಿಕ ಪಾತ್ರಗಳನ್ನು ಒಪ್ಪಲಿಲ್ಲ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.

ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾ ಹೇಳಿಕೆ ನೀಡಿದ್ದಾರೆ. ”ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

”ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ” ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ನಡೆದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...