Homeಕರ್ನಾಟಕಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

ಬಿಜೆಪಿ ಸೋಲಿನ ಬೆನ್ನಲ್ಲೇ ಉರಿಗೌಡ-ನಂಜೇಗೌಡ ಪಾತ್ರಗಳ ಸೃಷ್ಟಿಕರ್ತ ಅಡ್ಡಂಡ ಸಿ. ಕಾರ್ಯಪ್ಪ ರಾಜೀನಾಮೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತ ಹಿನ್ನೆಲೆ ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ ನೀಡಿದ್ದಾರೆ.

ಮೈಸೂರು ರಂಗಾಯಣ ನಿರ್ದೇಶಕರಾದ ಬಳಿಕ ಅಡ್ಡಂಡ ಕಾರ್ಯಪ್ಪ ಹಲವು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು. ಅಡ್ಡಂಡ ಕಾರ್ಯಪ್ಪ ರಚಿತ ಟಿಪ್ಪು ನಿಜ ಕನಸುಗಳು ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಟಿಪ್ಪುವನ್ನು ಕೊಂದಿದ್ದು ಒಕ್ಕಲಿಗ ಜಾತಿಯ ಉರಿಗೌಡ ಮತ್ತು ನಂಜೇಗೌಡ ಎಂದು ಕಾಲ್ಪನಿಕ ಪಾತ್ರಗಳನ್ನು ಸೃಷ್ಟಿಸಿ, ಒಕ್ಕಲಿಗರು ವೀರರು ಶೂರರು ಎಂದು ಹೇಳಲು ಹೊರಟಿದ್ದರು. ಈ ಕಾಲ್ಪನಿಕ ಕಥೆಯನ್ನೇ ಬಿಜೆಪಿಯ ಒಕ್ಕಲಿಗ ರಾಜಕಾರಣಿಗಳಾದ ಸಿಟಿ ರವಿ ಹಾಗೂ ಅಶ್ವತ್ಥ ನಾರಾಯಣ ಅವರು ಸತ್ಯ ಎಂದು ಪ್ರತಿಪಾದಿಸಲು ಹೊರಟರು. ಆದರೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಆ ಸಮುದಾಯದ ಸ್ವಾಮೀಜಿ ಇದಕ್ಕೆ ವಿರೋಧ ಮಾಡಿದರು. ದೇಶಭಕ್ತ ಟಿಪ್ಪು ಸುಲ್ತಾನನನ್ನು ಕೊಂದ ದೇಶದ್ರೋಹಿ ಪಟ್ಟ ಒಕ್ಕಲಿಗರಿಗೆ ಬೇಡ ಎಂದು ಹೇಳುವ ಮೂಲಕ ಈ ಕಾಲ್ಪನಿಕ ಪಾತ್ರಗಳನ್ನು ಒಪ್ಪಲಿಲ್ಲ.

ಉರಿಗೌಡ ಮತ್ತು ನಂಜೇಗೌಡ ಎಂಬ ಕಾಲ್ಪನಿಕ ಪಾತ್ರಗಳನ್ನು ರಚಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡಿದ್ದಾರೆ. ಈ ಎರಡು ಪಾತ್ರಗಳ ಮೂಲಕ ಒಕ್ಕಲಿಗರನ್ನು ಅವಮಾನಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಆರೋಪಿಸಿದ್ದವು.

ಇದೀಗ ಬಿಜೆಪಿ ಸೋತ ಹಿನ್ನೆಲೆ ಅಡ್ಡಂಡ ಕಾರ್ಯಪ್ಪ ಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪತ್ರಿಕಾ ಹೇಳಿಕೆ ನೀಡಿದ್ದಾರೆ. ”ನನ್ನನ್ನು ನಿರ್ದೇಶಕನನ್ನಾಗಿ ನೇಮಿಸಿದ್ದ ಬಿಜೆಪಿ ನೇತೃತ್ವದ ಸರ್ಕಾರ ವಿಧಾನ ಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿದೆ. ಜನಾದೇಶವನ್ನು ಗೌರವಿಸುತ್ತೇನೆ. ಈ ಕಾರಣದಿಂದ ನೈತಿಕ ಜವಾಬ್ದಾರಿಯಿಂದ ಮೈಸೂರು ರಂಗಾಯಣದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

”ನಾನು 2019ರ ಡಿ.31ರಂದು ಅಧಿಕಾರ ವಹಿಸಿಕೊಂಡಾಗ ರಂಗಾಯಣದ ಆರ್ಥಿಕ ಸ್ಥಿತಿ ಅಷ್ಟೇನೂ ಚೆನ್ನಾಗಿರಲಿಲ್ಲ. ಈಗ ₹2.09 ಕೋಟಿ ನಿರಖು ಠೇವಣಿ ಇದೆ. ಸಂಸ್ಥೆಯ ಬ್ಯಾಂಕ್‌ ಖಾತೆಯಲ್ಲಿ ₹1.57 ಕೋಟಿ ಉಳಿತಾಯದ ಹಣವಿದೆ. ಸಂಸ್ಥೆಯ ಪ್ರದರ್ಶನ, ದಾನಿಗಳ ನೆರವು, ಅನುದಾನ ಇತ್ಯಾದಿಗಳನ್ನು ಮಿತವ್ಯಯ ಮಾಡಿ ಉಳಿಕೆ ಮಾಡಲಾಗಿದೆ. ಸರ್ಕಾರದ ಇಡುಗಂಟು ಮೊತ್ತ ₹4 ಕೋಟಿ ಇದ್ದು, ಬಡ್ಡಿ ಮೊತ್ತ ₹50 ಲಕ್ಷ ಸಂಸ್ಥೆಗೆ ಸಿಗಲಿದೆ. ಒಟ್ಟು ₹4.16 ಕೋಟಿ ಮೊತ್ತ ಸಂಸ್ಥೆಯ ಖಾತೆಯಲ್ಲಿದೆ. ರಾಜ್ಯದ ಬೇರೆ ರಂಗಾಯಣ ಸಂಸ್ಥೆಗಳ ಖಾತೆಯಲ್ಲಿ ₹15 ಲಕ್ಷ ಕೂಡ ಉಳಿತಾಯ ಇಲ್ಲ. 3 ವರ್ಷ ಹಗಲಿರುಳು ದುಡಿದು ಮೈಸೂರು ರಂಗಾಯಣದ ಆರ್ಥಿಕ ಸ್ಥಿತಿ ಭದ್ರಪಡಿಸಿದ್ದೇನೆ” ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ನಡೆದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 66, ಕಾಂಗ್ರೆಸ್ 135 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಗೆದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...