Homeಕರ್ನಾಟಕಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಸೋಲು ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಬೇಕೆಂದು ತೋರಿಸುತ್ತಿದೆ ಎಂದು ಬಿಜೆಪಿ ವಕ್ತಾರ ವಾಮನ ಆಚಾರ್ಯ ಅಭಿಪ್ರಾಯ ತಾಳಿದ್ದಾರೆ. ಸೋಮವಾರ ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಬರೆದ ಲೇಖನದಲ್ಲಿ ಬಿಜೆಪಿ ಸೋಲಿನ ಆತ್ಮಾವಲೋಕವನ್ನು ಅವರು ಮಾಡಿದ್ದಾರೆ.

224 ಸ್ಥಾನಗಳಿಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್, 1989 ನಂತರದಲ್ಲಿ ಅತಿಹೆಚ್ಚು ಸ್ಥಾನ ಪಡೆದ ಪಕ್ಷವಾಗಿ ದಿಗ್ವಿಜಯ ಸಾಧಿಸಿದೆ. ಪ್ರಸ್ತುತ ಬಿಜೆಪಿ 66 ಸ್ಥಾನಗಳನ್ನು ಗೆದ್ದುಕೊಂಡರೆ, ದಕ್ಷಿಣ ಭಾರತದಲ್ಲಿನ ತನ್ನ ಅಧಿಕಾರ ಕಳೆದುಕೊಂಡಿದೆ.

ಈ ಕುರಿತು ಲೇಖನ ಬರೆದಿರುವ ಆಚಾರ್ಯ, “ಕರ್ನಾಟಕದಲ್ಲಿ ಕೇಸರಿ ಪಕ್ಷದ ಸೋಲು ರಾಜ್ಯದಲ್ಲಿ ನಿರ್ಣಾಯಕ ನಾಯಕತ್ವದ ಕೊರತೆಯನ್ನು ಎತ್ತಿಹಿಡಿದಿದೆ. ಮೋದಿಯವರ ರ್‍ಯಾಲಿಗಳು ಸಹ ಬಿಜೆಪಿಯ ಸ್ಥಾನಗಳನ್ನು ಉಳಿಸಿಕೊಳ್ಳಲು ವಿಫಲವಾಗಿವೆ” ಎಂದು ತಿಳಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಅವರ ನಾಯಕತ್ವವು ಮತದಾರರ ಅಥವಾ ಪಕ್ಷದ ಕಾರ್ಯಕರ್ತರ ನಾಡಿಮಿಡಿತವನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಅವರಲ್ಲಿ [ಬೊಮ್ಮಾಯಿ] ಯಾರೂ ಪ್ರಬಲ ನಾಯಕತ್ವವನ್ನು ಕಾಣಲಿಲ್ಲ. ಅವರನ್ನು ಯಾವಾಗಲೂ ರಾಜಿ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ” ಎಂದು ಆಚಾರ್ಯ ಟೀಕಿಸಿದ್ದಾರೆ. “ಬೇರೆಡೆ ಬಿಜೆಪಿಯ ಅನುಭವದಂತೆಯೇ, ಪ್ರಬಲ ಮುಖ್ಯಮಂತ್ರಿ ಅಭ್ಯರ್ಥಿಗಳ ಕೊರತೆಯು ತುಂಬಾ ದುಬಾರಿಯಾಗಿ ಈ ಚುನಾವಣೆ ಪರಿಣಮಿಸಿದೆ” ಎಂದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಾಡಿರುವ ಭ್ರಷ್ಟಾಚಾರ ಆರೋಪಗಳು ಮತದಾರರ ಮೇಲೆ ಪರಿಣಾಮ ಬೀರಿವೆ ಎಂದು ಪಕ್ಷದ ವಕ್ತಾರರು ಗಮನ ಸೆಳೆದ್ದಾರೆ. ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರವು ಉದ್ಯೋಗ ನೇಮಕಾತಿ ಮತ್ತು ವರ್ಗಾವಣೆಗಾಗಿ ಭಾರೀ ಲಂಚವನ್ನು ಪಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರ ರೇಟ್‌ ಕಾರ್ಡ್ ಬಿಡುಗಡೆ ಮಾಡಿ ಜಾಹೀರಾತನ್ನೂ ನೀಡಿತ್ತು.

“ಎಲ್ಲ ಯಶಸ್ವಿ ಸರ್ಕಾರಗಳು ಭ್ರಷ್ಟಾಚಾರವನ್ನು ಹೊಸ ಮಟ್ಟಕ್ಕೆ ಕೊಂಡೊಯ್ಯುತ್ತಿವೆ” ಎಂದಿರುವ ವಾವನ ಆಚಾರ್ಯ, “ಬಿಜೆಪಿ ಸರ್ಕಾರದಿಂದ ಈ ಪ್ರವೃತ್ತಿಯನ್ನು ಬದಲಾಯಿಸಲಾಗಿಲ್ಲ” ಎಂದು ಟೀಕಿಸಿದ್ದಾರೆ.

ಅಭಿವೃದ್ಧಿ, ಮೂಲಸೌಕರ್ಯ ವಿಷಯದಲ್ಲಿ ಜನರಿಗೆ ತೋರಿಸಲು ಏನೂ ಇಲ್ಲದ ಕಾರಣ ಪಕ್ಷವು ಅಧಿಕಾರಕ್ಕೆ ಮರಳಲು ವಿಫಲವಾಗಿದೆ ಎಂದು ಆಚಾರ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಇತರ ಹಿಂದುಳಿದ ವರ್ಗಗಳ ಕೋಟಾದಲ್ಲಿದ್ದ ಮುಸ್ಲಿಮರ 4% ಮೀಸಲಾತಿಯನ್ನು ರದ್ದುಗೊಳಿಸಿದ್ದರೂ ಮತದಾರರನ್ನು ಸೆಳೆಯುವಲ್ಲಿ ಬಿಜೆಪಿ ವಿಫಲವಾಗಿದೆ ಎಂದಿದ್ದಾರೆ.

ಇದನ್ನೂ ಓದಿರಿ: ವಿವಿಧ ಜಾತಿಗಳಿಗೆ ಮೂರು ಪಕ್ಷಗಳು ಟಿಕೆಟ್ ನೀಡಿದೆಷ್ಟು? ಗೆದ್ದಿದೆಷ್ಟು?

ಮಾರ್ಚ್‌ನಲ್ಲಿ ನಡೆದ ತನ್ನ ಕೊನೆಯ ಕ್ಯಾಬಿನೆಟ್ ಸಭೆಯಲ್ಲಿ, ರಾಜ್ಯದ ಬಿಜೆಪಿ ಸರ್ಕಾರವು ಮುಸ್ಲಿಮರ ಮೀಸಲಾತಿಯನ್ನು ರದ್ದುಗೊಳಿಸಿತು. ಆ ಮೀಸಲಾತಿಯನ್ನು ರಾಜ್ಯದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗ ಮತ್ತು ವೀರಶೈವ-ಲಿಂಗಾಯತರಿಗೆ ಸಮಾನವಾಗಿ ಹಂಚಿಕೆ ಮಾಡಿತು.

“ಬಿಜೆಪಿ ಸರ್ಕಾರದ ಹದಿನಾಲ್ಕು ಮಂತ್ರಿಗಳು ಚುನಾವಣೆಯಲ್ಲಿ ಸೋತರು” ಎಂಬ ಅಂಶದತ್ತ ಅವರು ಗಮನ ಸೆಳೆದಿದ್ದಾರೆ. “ಇದು ಏನನ್ನಾದರೂ ಹೇಳುತ್ತದೆ. ಮೀಸಲಾತಿಯ ಕುರಿತ ಕೊನೆ ಕ್ಷಣದ ಕಸರತ್ತು ಸಹಾಯ ಮಾಡಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಹೊಸ ನಾಯಕತ್ವವನ್ನು ಹೇಗೆ ತರಬಹುದು ಮತ್ತು ಮೋದಿ ಮೇಲಿನ ಅವಲಂಬನೆಯನ್ನು ಹೇಗೆ ಕಡಿಮೆ ಮಾಡಬಹುದು ಸೇರಿದಂತೆ ಹಲವಾರು ಪ್ರಶ್ನೆಗಳ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪಕ್ಷದ ವಕ್ತಾರರು ಸಲಹೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...