Homeಕರ್ನಾಟಕಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

- Advertisement -
- Advertisement -

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡಿದ್ದು, ”ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಕಾಂಗ್ರೆಸ್‌ ಜತೆ ಸೇರಿಕೊಂಡು ಹಣ ಪಡೆದು ಬಿಜೆಪಿಯ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಿ ಸೋತಿರುವ ಪ್ರಮೋದ್ ಮುತಾಲಿಕ್ ಒರ್ವ ಡೀಲ್ ಮಾಸ್ಟರ್, ಹಣಕ್ಕಾಗಿ ಅವರು ಏನು ಬೇಕಾದರೂ ಮಾಡುವ ಮನಸ್ಥಿತಿಯುಳ್ಳವರು” ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಮೋದ್ ಮುತಾಲಿಕ್ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು. ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು, ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ ದಾಖಲೆಗಳು ಬೇಕಾ?” ಎಂದು ಮುತಾಲಿಕ್‌ ಅವರನ್ನು ಪ್ರಶ್ನಿಸಿದರು.

”ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ಪ್ರಜಾಪ್ರಭುತ್ವ ಮೇಲೆ ನಂಬಿಕೆ ಹಾಗೂ ಕಾರ್ಕಳ ತಾಲೂಕಿನ ಅಭಿವೃದ್ಧಿಗೆ ಮತ ನೀಡಿದ್ದೀರಿ ಅದಕ್ಕಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.

ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು. ”ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ” ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....