Homeಕರ್ನಾಟಕಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಉ.ಕರ್ನಾಟಕದಲ್ಲಿ ಹಿಂದೂಗಳ ಹತ್ಯೆ ಮಾಡಿಸಿದ್ದಾರೆ: ಸುನೀಲ್ ಕುಮಾರ್

- Advertisement -
- Advertisement -

”ಪ್ರಮೋದ್ ಮುತಾಲಿಕ್ ಈ ಹಿಂದೆ ಅನಂತಕುಮಾರ್ ವಿರುದ್ಧ ಸ್ಪರ್ಧೆ ಮಾಡಿದ್ದರು. ಇವತ್ತು ಕಾರ್ಕಳದಲ್ಲಿ ಸ್ಪರ್ಧೆ ಮಾಡಿದ್ರಿ, ಲೋಕಸಭಾ ಚುನಾವಣೆಯಲ್ಲಿ ಎಲ್ಲಿಗೆ ಡೀಲ್‌ಗೆ ಹೊರಟಿದ್ದೀರಿ? ಪ್ರಮೋದ್ ಮುತಾಲಿಕ ಒಬ್ಬ ಡೀಲ್ ಮಾಸ್ಟರ್” ಎಂದು ಚುನಾವಣೆ ಬಳಿಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆಯಲ್ಲಿ ಗೆದ್ದ ಬಳಿಕ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಸುನಿಲ್ ಮಾತನಾಡಿದ್ದು, ”ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್, ಕಾಂಗ್ರೆಸ್‌ ಜತೆ ಸೇರಿಕೊಂಡು ಹಣ ಪಡೆದು ಬಿಜೆಪಿಯ ವಿರುದ್ಧ ಕಾರ್ಕಳದಲ್ಲಿ ಸ್ಪರ್ಧಿಸಿ ಸೋತಿರುವ ಪ್ರಮೋದ್ ಮುತಾಲಿಕ್ ಒರ್ವ ಡೀಲ್ ಮಾಸ್ಟರ್, ಹಣಕ್ಕಾಗಿ ಅವರು ಏನು ಬೇಕಾದರೂ ಮಾಡುವ ಮನಸ್ಥಿತಿಯುಳ್ಳವರು” ಎಂದು ಮುತಾಲಿಕ್ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಮೋದ್ ಮುತಾಲಿಕ್ ಪ್ರಹ್ಲಾದ್ ಜೋಷಿ, ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿ ಸೋತರು. ಎಲ್ಲಾ ಕಡೆಗಳಲ್ಲಿ ಸೋತು ಡೀಲ್ ಕುದುರಿಸುವವರು, ಟೈಗರ್ ಗ್ಯಾಂಗ್ ಹೆಸರಿನಲ್ಲಿ ಉತ್ತರ ಕರ್ನಾಟಕದಲ್ಲಿ ಹಿಂದುಗಳ ಹತ್ಯೆಯನ್ನು ಮಾಡಿಸಿದ್ದಾರೆ, ಆ ಹತ್ಯೆ ಮಾಡಿದ ಕೊಲೆಗಡುಗರು ಈಗಲೂ ಗುಲ್ಬರ್ಗಾ ಜೈಲಿನಲ್ಲಿದ್ದಾರೆ ದಾಖಲೆಗಳು ಬೇಕಾ?” ಎಂದು ಮುತಾಲಿಕ್‌ ಅವರನ್ನು ಪ್ರಶ್ನಿಸಿದರು.

”ಪ್ರಮೋದ್ ಮುತಾಲಿಕ್ ಅವರು ಕಾಂಗ್ರೆಸ್​ನವರಿಂದ ಹಣ ಪಡೆದು ಚುನಾವಣೆಗೆ ಸ್ಪರ್ಧಿಸಿದ್ದರು. ನನ್ನ ವಿರುದ್ಧ ಸಾಕಷ್ಟು ಪ್ರತಿ ತಂತ್ರಗಳನ್ನು ಹೂಡಲಾಗಿತ್ತು. ಜನರಿಗೆ ನನ್ನ ಅಭಿವೃದ್ಧಿ ಕೆಲಸಗಳ ಬಗ್ಗೆ ತಪ್ಪು ಮಾಹಿತಿ ನೀಡುತ್ತಾ ಜನರನ್ನು ನಂಬಿಸುವ ಪ್ರಯತ್ನ ಮಾಡಿದ್ದರು. ಆದರೆ ಜನ ಕೊನೆಯಲ್ಲಿ ಸರಿಯಾದ ಉತ್ತರ ನೀಡಿದ್ದಾರೆ ಎನ್ನುವ ಮೂಲಕ ಹೊಸ ಬಾಂಬ್ ಹಾಕಿದ್ದಾರೆ. ಇತ್ತ ಸುನಿಲ್ ಆರೋಪಗಳಿಗೆ ದೇವರೇ ಉತ್ತರ ನೀಡಬೇಕು ಎಂದು ಪ್ರಮೋದ್ ಮುತಾಲಿಕ್ ದೇವರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನೊಂದ ಹಿಂದೂ ಕಾರ್ಯಕರ್ತರು ಹೆಸರಿನಲ್ಲಿ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ

ಪ್ರಜಾಪ್ರಭುತ್ವ ಮೇಲೆ ನಂಬಿಕೆ ಹಾಗೂ ಕಾರ್ಕಳ ತಾಲೂಕಿನ ಅಭಿವೃದ್ಧಿಗೆ ಮತ ನೀಡಿದ್ದೀರಿ ಅದಕ್ಕಾಗಿ ಮತದಾರರಿಗೆ ಹಾಗೂ ಕಾರ್ಯಕರ್ತರ ಪರಿಶ್ರಮಕ್ಕೆ ಧನ್ಯವಾದ ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಮತಕ್ಷೇತ್ರದಿಂದ ಬಿಜೆಪಿಯ ಸುನೀಲ್ ಕುಮಾರ್ ವಿರುದ್ಧ ಪಕ್ಷೇತರರಾಗಿ ಪ್ರಮೋದ್ ಮುತಾಲಿಕ್ ಸ್ಪರ್ಧೆ ಮಾಡಿದ್ದರು. ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್ ಅವರ ವಿರುದ್ಧ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದರು.

ಚುನಾವಣಾ ಪ್ರಚಾರದುದ್ದಕ್ಕೂ ಸುನಿಲ್ ಕುಮಾರ್​ ವಿರುದ್ಧ ನೇರ ನೇರ ವಾಗ್ದಾಳಿ ನಡೆಸಿದ ಮುತಾಲಿಕ್, ಸುನಿಲ್ ವಿರುದ್ಧ ಹೊಸ ವಿವಾದಗಳನ್ನು ಸೃಷ್ಟಿಸಿದ್ದರು. ”ಅಭಿವೃದ್ಧಿ ಹೆಸರಿನಲ್ಲಿ ಕಾರ್ಕಳದಲ್ಲಿ ಸುನಿಲ್ ಕುಮಾರ್ ಏನು ಮಾಡಿಲ್ಲ, ಕೇಂದ್ರ ಮತ್ತು ರಾಜ್ಯ ಸರಕಾರದ ಅನುದಾನಗಳನ್ನ ಸಮರ್ಪಕವಾಗಿ ಬಳಸಿಕೊಂಡಿಲ್ಲ” ಎನ್ನುವ ದೂರುಗಳ ಜೊತೆ ಹಿಂದೂ ಕಾರ್ಯಕರ್ತರನ್ನ ಕಡೆಗಣಿಸಿದ್ದಾರೆ. ದುರಹಂಕಾರದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...