Homeಸಿನಿಮಾಕ್ರೀಡೆಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಸಾಧ್ಯ: ಆದರೆ ಈ ತಂಡಗಳೂ ಸೋಲಬೇಕು

- Advertisement -
- Advertisement -

ಐಪಿಎಲ್ 15ನೇ ಆವೃತ್ತಿಯ ಲೀಗ್ ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. 13 ಪಂದ್ಯಗಳಿಂದ 18 ಅಂಕ ಗಳಿಸಿರುವ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು 8 ಸೋಲು ಕಂಡ ಪರಿಣಾಮ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿವೆ. ಹಾಗಾಗಿ ಉಳಿದ 3 ಪ್ಲೇಆಫ್ ಸ್ಥಾನಕ್ಕಾಗಿ 7 ತಂಡಗಳು ಪೈಪೋಟಿ ನಡೆಸುತ್ತಿವೆ. ಇನ್ನೆರೆಡು ಪಂದ್ಯ ಗೆದ್ದರೆ RCB ಪ್ಲೇಆಫ್ ಪ್ರವೇಶ ಸಾಧ್ಯ. ಆದರೆ ಕೆಲವು ತಂಡಗಳು ಸೋಲಬೇಕಿದೆ. ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ.

12 ಪಂದ್ಯಗಳಿಂದ 6 ಜಯ ಮತ್ತು 6 ಸೋಲಿನೊಂದಿಗೆ 12 ಅಂಕ ಗಳಿಸಿರುವ RCB ಅಂಕ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದ್ದು, ಸತತ ನಾಲ್ಕನೇ ಬಾರಿಗೆ ಪ್ಲೇ ಆಫ್‌ ಪ್ರವೇಶಿಸಲು ಕಾದು ಕುಳಿತಿದೆ. ಗುಜರಾತ್ ಟೈಟನ್ಸ್ ಮೊದಲ ಸ್ಥಾನ, 15 ಅಂಕ ಪಡೆದಿರುವ ಚನ್ನೈ 2ನೇ ಸ್ಥಾನ, 14 ಅಂಕ ಪಡೆದಿರುವ ಮುಂಬೈ 3ನೇ ಸ್ಥಾನದಲ್ಲಿದ್ದರೆ, 13 ಅಂಕ ಪಡೆದಿರುವ ಲಕ್ನೋ ನಾಲ್ಕನೇ ಸ್ಥಾನದಲ್ಲಿದೆ. ಆರ್‌ಸಿಬಿ ನಂತರ ತಲಾ 12 ಅಂಕ ಪಡೆದಿರುವ ರಾಜಸ್ಥಾನ್ ರಾಯಲ್ಸ್ 6ನೇ, ಕೋಲ್ಕತ್ತಾ ನೈಟ್ ರೈಡರ್ಸ್ 7ನೇ ಮತ್ತು ಪಂಜಾಬ್ ಕಿಂಗ್ಸ್ 8 ನೇ ಸ್ಥಾನ ಪಡೆದಿವೆ. ಈ ಎಲ್ಲಾ ತಂಡಗಳಿಗೂ ಪ್ಲೇ ಆಫ್ ತಲುಪುವ ಅವಕಾಶವಿದೆ.

ಆರ್‌ಸಿಬಿ ಪ್ಲೇಆಫ್ ಸಾಧ್ಯತೆಗಳು ಹೀಗಿವೆ

ಆರ್‌ಸಿಬಿ ಮೇ 18 ರಂದು ಸನ್‌ರೈಸರ್ಸ್ ಹೈದರಾಬಾದ್ ಎದುರು ಮತ್ತು 21 ರಂದು ಗುಜರಾತ್ ಟೈಟನ್ಸ್ ಎದುರು ಸೆಣಸಲಿದೆ. ಆ ಎರಡೂ ಪಂದ್ಯಗಳಲ್ಲಿ ಗೆಲ್ಲಲೇಬೇಕು. ಅಷ್ಟು ಮಾತ್ರವಲ್ಲದೇ ಇತರ ತಂಡಗಳು ಸೋಲಬೇಕೆಂದು ಆರ್‌ಸಿಬಿ ಕಾದು ನೋಡಬೇಕಿದೆ. ಅವುಗಳೆಂದರೆ

ಮುಂಬೈ ತಂಡವು ಇಂದು ನಡೆಯುವ ಪಂದ್ಯದಲ್ಲಿ ಲಕ್ನೋ ವಿರುದ್ಧ ಜಯ ಗಳಿಸಬೇಕು. ಆಗ ಲಕ್ನೋ ಅವಕಾಶಗಳು ಕಡಿಮೆಯಾಗುತ್ತವೆ. ಒಂದು ವೇಲೆ ಲಕ್ನೋ ಗೆದ್ದಲ್ಲಿ ಮುಂಬೈ ತನ್ನ ಕೊನೆಯ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ಸೋತರೆ ಮುಂಬೈಯನ್ನು ಆರ್‌ಸಿಬಿ ಕೆಳಗೆ ತಳ್ಳಬಹುದಾಗಿದೆ. ಇನ್ನು ಲಕ್ನೋ ಮುಂಬೈ ವಿರುದ್ಧ ಗೆದ್ದರೂ ತನ್ನ ಕೊನೆಯ ಪಂದ್ಯ ಕೋಲ್ಕತ್ತಾ ಎದುರು ಸೋತರೆ ಅದು ಆರ್‌ಸಿಬಿಗೆ ಅನುಕೂಲವಾಗಲಿದೆ.

ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಡೆಲ್ಲಿ ಮತ್ತು ಹೈದರಾಬಾದ್ ಎದುರು ಸೋಲಬೇಕಿದೆ. ಆಗ ಆರ್‌ಸಿಬಿ ಪ್ಲೇಆಫ್ ಹಾದಿ ಸುಗಮವಾಗಲಿದೆ.

ರಾಜಸ್ಥಾನ್ ಮತ್ತು ಕೋಲ್ಕತ್ತಾ ತಂಡಗಳು 13 ಪಂದ್ಯಗಳಿಂದ 12 ಅಂಕ ಗಳಿಸಿವೆ. ಅವು ತಮ್ಮ ಕಡೆಯ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ ಆರ್‌ಸಿಬಿ, ಲಕ್ನೋ, ಮುಂಬೈ ತಂಡಗಳು ಸತತವಾಗಿ ಸೋಲಲಿ ಎಂದು ಹಾರೈಸುತ್ತಿವೆ.

ಆರ್‌ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್‌ನಲ್ಲಿ ಕೊಹ್ಲಿ, ಫಾಫ್ ಡುಪ್ಲೆಸಿ ಮತ್ತು ಮ್ಯಾಕ್ಸ್‌ವೆಲ್ ಬಿಟ್ಟರೆ ಉಳಿದವರು ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗ ಪರಿಣಾಮಕಾರಿ ಪ್ರದರ್ಶನ ನೀಡುತ್ತಿಲ್ಲ. ಉಳಿದ ಪಂದ್ಯಗಳಲ್ಲಿ ಸಾಂಘಿಕ ಪ್ರದರ್ಶನ ನೀಡಿದರೆ ಮಾತ್ರ ಪ್ಲೇಆಫ್ ಕನಸು ಕಾಣಬಹುದಾಗಿದೆ.

ಇದನ್ನೂ ಓದಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...