Homeಕರ್ನಾಟಕ2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ...

2024ರಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಬಂದರೆ ದೇಶಕ್ಕೆ ಆಪತ್ತು: ನಿರ್ಮಲಾ ಸೀತಾರಾಮನ್ ಪತಿ ಡಾ. ಪರಕಾಲ ಪ್ರಭಾಕರ್ ಹೇಳಿಕೆ

- Advertisement -
- Advertisement -

ನರೇಂದ್ರ ಮೋದಿ ಅವರು ಆರ್ಥಿಕತೆಯನ್ನು ದಿಗ್ಭ್ರಮೆಗೊಳಿಸುವಷ್ಟು ಅಸಮರ್ಥರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿಯೂ ಆಗಿರುವ ಅರ್ಥಶಾಸ್ತ್ರಜ್ಞ ಮತ್ತು ಸಾಮಾಜಿಕ ವಿಮರ್ಶಕ ಡಾ. ಪರಕಾಲ ಪ್ರಭಾಕರ್ ಎಂದು ಹೇಳಿದ್ದಾರೆ.

ಪ್ರಭಾಕರ್ ಅವರ ಹೊಸ ಪುಸ್ತಕ ‘ದಿ ಕ್ರೂಕ್ಡ್ ಟಿಂಬರ್ ಆಫ್ ನ್ಯೂ ಇಂಡಿಯಾ: ಎಸ್ಸೇಸ್ ಆನ್ ಎ ರಿಪಬ್ಲಿಕ್ ಇನ್ ಕ್ರೈಸಿಸ್’ಅನ್ನು (ಸ್ಪೀಕಿಂಗ್ ಟೈಗರ್ ಪ್ರಕಟಿಸಿದ) ಬೆಂಗಳೂರಿನಲ್ಲಿ ಭಾನುವಾರ ಔಪಚಾರಿಕವಾಗಿ ಬಿಡುಗಡೆ ಮಾಡಲಾಗಿದ್ದು, ಮೋದಿ ಸರ್ಕಾರದ ಸಮಸ್ಯೆಗಳು, ಆರ್ಥಿಕತೆ, ರಾಜಕೀಯ ಮತ್ತು ಇತರ ವಿಷಯಗಳ ಕುರಿತು ಪ್ರಬಂಧಗಳ ಸರಣಿಯನ್ನು ಒಳಗೊಂಡಿದೆ.

ಪ್ರಧಾನಿ ಮೋದಿ ಆಡಳಿತವು ಅರ್ಥಿಕತೆ ಮತ್ತು ಇತರ ಹಲವು ವಿಷಯಗಳ ನಿರ್ವಹಣೆಯಲ್ಲಿ ಅಸಮರ್ಥವಾಗಿದ್ದರೂ, ಜನರಲ್ಲಿ ಸುಪ್ತವಾಗಿರುವ ವಿಭಾ ಭಾವನೆಗಳನ್ನು ಹೊರ ತರಲು ಇದು ಅತ್ಯಂತ ಸಮರ್ಥವಾಗಿದೆ ಎಂದು ಡಾ, ಪರಕಾಲ ಅವರು, ಕರಣ್ ಥಾಪರ್ ಅವರೊಂದಿಗಿನ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ ನಿಂದ ಪಿಎಚ್‌.ಡಿ ಪಡೆದಿರುವ ಡಾ.ಪ್ರಭಾಕರ್ ಅವರು ಹಣಕಾಸು ಸಚಿವೆ ನಿರ್ಮಲಾ ತಾರಾಮನ್ ಅವರ ಪತಿ.

”2014ರ ಚುನಾವಣೆಯಲ್ಲಿ ಗೆಲ್ಲಲು ಬಳಸಿದ ಅಭಿವೃದ್ಧಿಯ ಹಲಗೆಯ ಮೇಲೆ ಗೆದ್ದ ಬಿಜೆಪಿಯು ಹಿಂದುತ್ವವನ್ನು ಕುತಂತ್ರದಿಂದ ಹಳ್ಳ ಸಾಗಣೆ ಮಾಡಿದೆ ಎಂದು ಅವರು ಹೇಳಿದ್ದಾರೆ. 2024 ರಲ್ಲಿ ಮತ್ತೊಂದು ಬಾರಿ ಮೋದಿ ಸರ್ಕಾರ ಬಂದರೆ ಅದು ಆರ್ಥಿಕತೆಗೆ ಮಾತ್ರವಲ್ಲದೆ, ಒಟ್ಟಾರೆ ಇಡೀ ರಾಷ್ಟ್ರಕ್ಕೆ ಆಪತ್ತು ತರಲಿದೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ ಎಂದು ವರದಿಯಾಗಿದೆ

”ಹಿಂದುತ್ವದಿಂದ ಸೇರಿ ಸರಾಗ ಜನರನ್ನು ಒಟ್ಟುಗೂಡಿಸುವ ಮತ್ತು ಅವರ ಕೇಳು ಪ್ರವೃತ್ತಿಯನ್ನು ಉದ್ದೀಪಿಸುವ ಪ್ರಭಾವಿ ಮೋದಿ ಮತ್ತು ಬಿಜೆಪಿಯ ಸಾಮರ್ಥ್ಯದಿಂದಾಗಿ ಅವರು ಜನಪ್ರಿಯತೆ ಹೊಂದಿದ್ದಾರೆ” ಎಂದು ಡಾ. ಪ್ರಭಾಕರ್ ವಾದಿಸಿದ್ದಾರೆ.

”ಆದರೆ 2011 ರ ಚುನಾವಣೆಯ ಪೂರ್ವದಲ್ಲಿ ನಡೆದ ಹೋರಾಟವು ಹಿಂದೂ ಮತ್ತು ಮುಸ್ಲಿಮರ ನಡುವೆ ಆಗಿರಲಿಲ್ಲ ಎಂದು ಒತ್ತಿ ಹೇಳಿದ ಅವರು, ಆ ಹೋರಾಟವು, ಬಡತನ ಮತ್ತು ನಿರುದ್ಯೋಗದ ವಿರುದ್ಧ ಹಿಂದೂಗಳು ಮತ್ತು ಮುಸ್ಲಿಮರು ಒಟ್ಟಾಗಿ ನಡೆಸಿದ ಹೋರಾಟವಾಗಿತ್ತು” ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಮೇಲಿನ ಅವಲಂಬನೆ ಕಡಿಮೆ ಮಾಡಬೇಕು; ಬಿಜೆಪಿ ವಕ್ತಾರ

”2014ರಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿಯವರು, ಉತ್ತಮ ಆಡಳಿತ ಸ್ವಚ್ಛ ಮತ್ತು ಭ್ರಷ್ಟಾಚಾರ ಮುಕ್ತ ಸರ್ಕಾರ ಮತ್ತು ‘ಅಭಿವೃದ್ಧಿ’ ಭರವಸೆ ನೀಡಿ ಮತ ಕೇಳಿದ್ದರು” ಎಂದು ಡಾ. ಪರಕಾಲ ಪ್ರಭಾಕರ್ ನೆನಪಿಸಿಕೊಂಡರು.

ಹಿಂದೂ ರಾಷ್ಟ್ರ ಮತ್ತು ಹಿಂದುತ್ವದ ನಿಜವಾದ ಉದ್ದೇಶವನ್ನು ಮುಂದಿಟ್ಟು ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೇಶದ ಜನರ ವಿಶ್ವಾಸವನ್ನು ಗೆದ್ದಿರಲಿಲ್ಲ ಎಂದ ಅವರು, ಅಭಿವೃದ್ಧಿಯ ಹಸರಿನಲ್ಲಿ ಹಿಂದುತ್ವವನ್ನು ಕಳ್ಳಸಾಗಣೆ ಮಾಡಲಾಗಿದೆ. ಟ್ರೋಜನ್ ಕುದುರೆಯಂತೆ ಅಭಿವೃದ್ಧಿ ಯನ್ನು ಬಳಸಲಾಗಿದೆ” ಎಂದು ಅವರು ಹೇಳಿದ್ದಾರೆ.

”ನಾಯಕತ್ವದ ಗುರಿಯು ಬಿರುಕುಗಳನ್ನು ತೆಗೆದುಹಾಕುವುದು ಮತ್ತು ಸಾಮರಸ್ಯವನ್ನು ಉತ್ತೇರಿಸುವುದು, ಅದನ್ನು ಬಿಟ್ಟು, ಕೋಮು ಭಾವನೆಗಳಿಗೆ ದಕ್ಕೆ ತರುವುದು ನಾಯಕರ ಕೆಲಸವಲ್ಲ” ಎಂದು ಡಾ. ಪ್ರಭಾಕರ್ ಹೇಳಿದರು.

”ಬಿಜೆಪಿ ಮತ್ತು ಮೋದಿ ಅವರು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಬಯಸಿದರೆ ಅದನ್ನು ಅವರು 2014 ರ ಚುನಾವಣೆಯಲ್ಲಿ ಸ್ಪರ್ಧಿಸುವಾಗಲೇ ಹೇಳಬೇಕಿತ್ತು” ಎಂದು ಪ್ರಭಾಕರ್ ಹೇಳಿದ್ದಾರೆ

ವಿಭಜನೆಯ ಸಮಯದಲ್ಲಿ ಭಾರತದಲ್ಲಿ ಹಿಂದೂ ಬಹುಸಂಖ್ಯಾತವಾದವು ಸ್ವೀಕಾರಾರ್ಹತೆಯನ್ನು ಕಂಡಿರಲಿಲ್ಲ ಎಂದು ಗಮನಸೆಳೆದ ಅವರು, ವಿಭಜನೆಯ ನಂತರ ಹಿಂದುತ್ನ ರಾಷ್ಟ್ರೀಯವಾದಿ ರಾಜಕಾರಣಕ್ಕೆ ಭಾರತದಲ್ಲಿ ಹೆಚ್ಚಿನ ಸಾಧ್ಯತೆ ಇತ್ತು. ದೇಶ ವಿಭಜನೆ ವೇಳೆ ಎರಡೂ ಸಮುದಾಯಗಳ ಲಕ್ಷಾಂತರ ಜನರು ಸಾಮೂಹಿಕವಾಗಿ ವಲಸೆ ಹೋಗುತ್ತಿದ್ದರು. ಎರೆಡೂ ದೇಶಕ್ಕೂ ಸಾವಿರಾರು ಮೃತದೇಹಗಳು ಬರುತ್ತಿದ್ದವು. ಆ ಸಮಯದಲ್ಲಿ ಅಭದ್ರತೆ ಮತ್ತು ಭಯ ಹೆಚ್ಚಿತ್ತು, ಆಗ ಹಿಂದುತ್ವ ರಾಜಕಾರಣ ಬೆಳೆಯಲು ಅನುಕೂಲ ಸನ್ನಿವೇಶ ಇದ್ದರೂ ಆಗ ಬಹುಸಂಖ್ಯಾತವಾದಕ್ಕೆ ಭಾರತದಲ್ಲಿ ಮಾನ್ಯತೆ ಸಿಗಲಿಲ್ಲ” ಎನ್ನುವುದನ್ನು ಅವರು ಗಮನ ಸೆಳೆದರು.

”ಏಳು ದಶಕಗಳ ನಂತರ ಹಿಂದು ರಾಜಕಾರಣಕ್ಕೆ ಸ್ವೀಕಾರ ಸಿಗುತ್ತಿದೆ, ಬಹುಶಃ ವಿಭಜನೆಯ ಬಗ್ಗೆ ಯಾವುದೇ ಕಹಿ ನೆನಪಿಲ್ಲದ ಮತ್ತು ಅದರಿಂದ ಬಳಲದಿರುವ ಭಾರತೀಯರ ತಲೆಮಾರಿನಲ್ಲಿ ಅದಕ್ಕೆ ಮಾನ್ಯತೆ ಸಿಗುತ್ತಿದೆ” ಎಂದು ಪ್ರಭಾಸ‌ ಗಮನಿಸಿದರು.

”ಅರ್ಥಶಾಸ್ತ್ರದಲ್ಲಿ ಕೆಲವು ಮೂಲಭೂತ ತರಬೇತಿ ಹೊಂದಿರುವ ಯಾವುದೇ ಅರ್ಥಶಾಸ್ತ್ರಜ್ಞರು, ಇಷ್ಟು ದೊಡ್ಡ ಪ್ರಮಾಣದಲ್ಲಿ ನೋಟು ಅಮಾನೀಕರಣವನ್ನು ಶಿಫಾರಸು ಮಾಡುತ್ತಿರಲಿಲ್ಲ” ಎಂದು ಪ್ರಭಾಕರ್ ಹೇಳಿದ್ದಾರೆ. ”ನೋಟು ರದ್ದತಿಯನ್ನು ಒಂದು ದೊಡ್ಡ ಪ್ರಮಾದ ಎಂದು ಕರೆದ ಅವರು, ಈ ನಡೆಯು ಪ್ರಮಾದಗಳನ್ನು ಹೆಚ್ಚಿಸಿತು ಮತ್ತು ಬಿಕ್ಕಟ್ಟನ್ನು ಉಲ್ಬಣಗೊಳಿಸಿತು” ಎಂದು ಡಾ. ಪ್ರಭಾಕರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...