Homeಕರ್ನಾಟಕಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

ಜನ ಮೆಚ್ಚಿದ ನಾಯಕಿ, ಹೋರಾಟಗಾರ್ತಿ ಕರೆಮ್ಮ ಜಿ.ನಾಯಕ

ನಾಯಕರ ದೊಡ್ಡಿಗಳಿಂದ 9 ಲಕ್ಷ ರೂ. ಕೊಡಲು ಬಂದರೆ ಅದನ್ನು ತೆಗೆದುಕೊಳ್ಳದೆ ಈಗಾಗಲೇ ಬಂದಿರುವ ಹಣ ನನ್ನಲ್ಲಿ ಹಾಗೇ ಉಳಿದಿದೆ ಎಂದಿದ್ದರು ಕರೆಮ್ಮ

- Advertisement -
- Advertisement -

ಕೃಷ್ಣಾ ನದಿಯ ತಟದಲ್ಲಿರುವ ಹಾಗೂ ನಾರಾಯಣಪುರ ಜಲಾಶಯಕ್ಕೆ ಸಮೀಪವೂ ಇರುವ ರಾಯಚೂರು ಜಿಲ್ಲೆಯ ತಾಲೂಕು ದೇವದುರ್ಗ. ಹಿಂದುಳಿದ ತಾಲ್ಲೂಕೆಂದು ಅಪಖ್ಯಾತಿ ಪಡೆದಾಗ ಇಲ್ಲಿನ ರೈತರಿಗೆ ಅನುಕೂಲವಾಗಲೆಂದು ನಾರಾಯಣಪುರ ಜಲಾಶಯದಿಂದ ನೀರು ತಂದು ನೀರಾವರಿ ಕ್ಷೇತ್ರವನ್ನಾಗಿ ಮಾಡಿದ ಕೀರ್ತಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ದೇವೇಗೌಡರಿಗೆ ಸಲ್ಲುತ್ತದೆ.

ರಾಯಚೂರು ಜಿಲ್ಲೆಯ ದೇವದುರ್ಗ ವಿಧಾನಸಭಾ ಕ್ಷೇತ್ರವೂ ಈ ಬಾರಿಯ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ ಕ್ಷೇತ್ರಗಳ ಪೈಕಿ ಒಂದು. ಕಳೆದ 20 ವರ್ಷಗಳಿಂದ ಅರಕೇರಾ ಕುಟುಂಬಕ್ಕೆ ಮಾತ್ರ ಸೀಮಿತವಾಗಿದ್ದ ಕ್ಷೇತ್ರ ಈ ಬಾರಿ ದಿ.ಎ.ವೆಂಕಟೇಶ ನಾಯಕ ಕುಟುಂಬೇತರರನ್ನು ಕ್ಷೇತ್ರದ ಜನ ಆಯ್ಕೆ ಮಾಡಿದ್ದಾರೆ. ಪ್ರತೀ ಚುನಾವಣೆಯಲ್ಲಿಯೂ ಒಂದೇ ಕುಟುಂಬದ ವ್ಯಕ್ತಿಗಳು ಮೂರು ಪಕ್ಷಗಳಿಂದ ಸ್ಪರ್ಧಿಸುತ್ತಿದ್ದುದರಿಂದ ಎರಡನೆಯ ವ್ಯಕ್ತಿ ಗೆಲ್ಲುವುದಿರಲಿ, ಸ್ಪರ್ಧಿಸಲು ಸಾಧ್ಯವಾಗುತ್ತಿರಲಿಲ್ಲ. ಈ ಬಾರಿ ಕರೆಮ್ಮ ಜಿ.ನಾಯಕ ಎನ್ನುವ ಸಾಮಾನ್ಯ ದಿಟ್ಟ ಮಹಿಳೆ ಕೆ.ಶಿವನಗೌಡನಾಯಕ ಎನ್ನುವ ಬಲಾಢ್ಯರನ್ನು ಸೋಲಿಸಿದ್ದಾರೆ.

2005ರಲ್ಲಿ ಗ್ರಾಮ ಪಂಚಾಯತಿ ಚುನಾವಣೆಯ ಮೂಲಕ ರಾಜಕೀಯ ಪ್ರವೇಶ ಮಾಡಿ ಅವಿರೋಧವಾಗಿ ಮುಷ್ಠೂರು ಪಂಚಾಯತಿಯ ಅಧ್ಯಕ್ಷರಾಗಿ ಕರೆಮ್ಮ ಆಯ್ಕೆಯಾದರು. ಆಗ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯಾಗಿದ್ದ ಇವರು ನಂತರ ಮಹಿಳಾ ಘಟಕದ ತಾಲ್ಲೂಕಾಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದು ರಾಜಕೀಯದಲ್ಲಿ ಸಕ್ರಿಯರಾದ ಕರೆಮ್ಮ ಆ ನಂತರ ಜಿಲ್ಲಾ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆಗ ಪಕ್ಷ ಬಿ.ಫಾರ್ಮ್‌ ನೀಡಿ ಮತ್ತೆ ವಾಪಸ್‌ ಪಡೆದಿದ್ದರಿಂದ ಬೇಸತ್ತ ಇವರು ಕಾಂಗ್ರೆಸ್‌ನಿಂದ ಹೊರ ಬಂದರು. ನಂತರ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿ ಕ್ಷೇತ್ರದಾದ್ಯಂತ
ಸಂಚರಿಸಿ ಪಕ್ಷ ಸಂಘಟಿಸಿ ಜನಮನ್ನಣೆ ಗಳಿಸಿದರು.

2018ರ ವಿಧಾನಸಭೆ ಚುನಾವಣೆಗೆ ಪಕ್ಷದ ಟಿಕೆಟ್‌ ಆಕಾಂಕ್ಷಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾದರು. ಕ್ಷೇತ್ರದಲ್ಲಿ ಇದನ್ನು ಗಮನಿಸಿದ ಬಿಜೆಪಿಯ ಕೆ.ಶಿವನಗೌಡ ನಾಯಕ ಹಣಬಲವನ್ನು ಬಳಸಿ ಕುತಂತ್ರದಿಂದ ಟಿಕೆಟನ್ನು ಕರೆಮ್ಮ ಅವರಿಗೆ ತಪ್ಪಿಸಿ, ತಮ್ಮ ಸಂಬಂಧಿಕರಾದ ವೆಂಕಟೇಶ್ ಪೂಜಾರಿ ಎನ್ನುವ ವ್ಯಕ್ತಿಗೆ ಕೊಡಿಸಿದ್ದರು. ಅ ನಂತರ ಟಿಕೆಟ್‌ ವಂಚಿತರಾದ ಕರೆಮ್ಮ ಜನಾಭಿಪ್ರಾಯವನ್ನು ಪಡೆದು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು 26,000 ಮತಗಳನ್ನು ಪಡೆಯುವ ಮೂಲಕ ಮೂರನೆಯ ಸ್ಥಾನಕ್ಕಿಳಿದು ಸೋಲು ಕಂಡರು.

ಸೋತರೂ ಧೃತಿಗೆಡದ ಗಟ್ಟಿಗಿತ್ತಿ ದಿಟ್ಟ ಮಹಿಳೆಯಾದ ಹಳ್ಳಿಗಾಡಿನ ಕರೆಮ್ಮ, ಮತ್ತೆ ಜನರ ಬಳಿಗೆ ಹೋಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತ ಸಣ್ಣಪುಟ್ಟ ಕೆಲಸಗಳಿಗೆ ಬೆನ್ನುಲುಬಾಗಿ ನಿಂತು ಕಳೆದ ಐದು ವರ್ಷ ಕ್ಷೇತ್ರದಲ್ಲಿ ವಿರೋಧ ಪಕ್ಷದ ರೀತಿಯಲ್ಲಿ ಹಾಲಿ ಶಾಸಕರ ವಿರುದ್ಧ ದನಿ ಎತ್ತುವ ಮೂಲಕ ಅಪಾರ ಜನರ ಪ್ರೀತಿ, ವಿಶ್ವಾಸ, ನಂಬಿಕೆಯನ್ನು ಗಳಿಸಿಕೊಂಡು ಜನರ ಮನಸ್ಸನ್ನು ಗೆದ್ದರು. ಸಾಮಾನ್ಯ ಬಡ ಕುಟುಂಬದಲ್ಲಿ ಜನಿಸಿ ಶಾಸಕರಾಗಿದ್ದು ಯಾರದ್ದೋ ಬೆಂಬಲದಿಂದಲ್ಲ, ಸತತ 8 ವರ್ಷಗಳಿಂದ ಕ್ಷೇತ್ರದ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿದ್ದರ ಪರಿಣಾಮ. 200 ಹಳ್ಳಿಗಳ ಜನ ಊರಿನ ಮಗಳೆಂದು ಹಾರೈಸಿ, ಸನ್ಮಾನಿಸಿ, ಉಡಿ ತುಂಬಿ ಹಾರೈಸಿದ್ದು, ಜೊತೆಗೆ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಜನರ ಸಮಸ್ಯೆಗಳನ್ನ ಆಲಿಸಿದ್ದು ಗೆಲುವಿಗೆ ಕಾರಣವಾಗಿದೆ. ಇಂಥ ಸಾಹಸದ ಮಹಿಳೆಯ ಗೆಲುವು ಜೆಡಿಎಸ್‌ ಪಕ್ಷಕ್ಕೆ ದೊಡ್ಡ ಸಾಧನೆಯೇ ಅನಿಸುತ್ತಿಲ್ಲ ಎಂಬುದೇ ಬೇಸರದ ಸಂಗತಿ.

ಕ್ಷೇತ್ರದಲ್ಲಿ ನಡೆದ ಪಂಚರತ್ನ ಯಾತ್ರೆ, ಮತಯಾಚನೆಯ ಬೃಹತ್‌ ಸಮಾವೇಶದಲ್ಲಿ ಒಬ್ಬಸಾಮಾನ್ಯ ಹೆಣ್ಣು ಮಗಳು ಸೇರಿಸಿದ್ದ ಜನಸ್ತೋಮವನ್ನು ಕಂಡು ಸಭೆಯಲ್ಲಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಕರೆಮ್ಮ ಈಗಾಗಲೇ ಗೆದ್ದುಬಿಟ್ಟಿದ್ದಾರೆ ಎಂದು ಹೇಳಿದ್ದರು. ಇದೆಲ್ಲ ಸಾಧ್ಯವಾಗಿದ್ದು ಹೇಗೆ? ಜನರ ಜೊತೆಗೆ ನಿರಂತರ ಸಂಪರ್ಕ, ಪರಿಶ್ರಮ ಮತ್ತು ಕಠಿಣ ಪ್ರಯತ್ನವಿದ್ದರೆ ಮಾತ್ರ ಗೆಲುವಾಗಬಲ್ಲದು ಎಂಬುದನ್ನು ನಿರೂಪಿಸಿದರು.

ಶಿವನಗೌಡ ನಾಯಕ ಜಿಲ್ಲೆಯಲ್ಲಿ ಪ್ರಭಾವಿ ನಾಯಕ. ಬಿಜೆಪಿ ಪಕ್ಷದ ಹೈಕಮಾಂಡ್‌ ಜೊತೆಗೂ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆದರೆ ತಾಲ್ಲೂಕಿನಲ್ಲಿ ವಿಪರೀತ ಮರಳು ದಂಧೆ, ಮಟಕಾ ದಂಧೆಯಂಥ ಕೆಲಸಗಳು ಇವರ ಕುಮ್ಮಕ್ಕುನಿಂದ ಲೈಸೆನ್ಸ್‌ ಇಲ್ಲದೆ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ಮೆರೆಯುತ್ತಿವೆ. ಅಷ್ಟೇ ಅಲ್ಲದೇ ಬಾರ್‌ ‍‍& ವೈನ್‌ ಶಾಪ್‌ಗಳು ಅವರ ಮಾಲೀಕತ್ವದಲ್ಲಿ ಅತೀ ಹೆಚ್ಚು ಜಿಲ್ಲೆಯಲ್ಲಿವೆ. ಅವರು ಜಿಲ್ಲೆಗೆ ಬಂದ ಪ್ರತಿ ಅಧಿಕಾರಿಗಳು ತನ್ನದೇ ಮಾತು ಕೇಳಿಕೊಂಡು ಇರಬೇಕೆನ್ನುವ ಅಹಂಕಾರ ಪ್ರದರ್ಶಿಸಿದರು, ಯಾವುದೇ ಅಧಿಕಾರಿಗಳು ಇರಲಿ ಏಕವಚನದಲ್ಲಿ ಬಾಯಿಗೆ ಬಂದಂತೆ ಮಾತಾಡಿದರು. ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದರೂ ಅಭಿವೃದ್ಧಿ ಮಾತ್ರ ಗೌಣ.

ಈ ಬಾರಿಯೂ ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್‌-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲ್ಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟದಿಂದ ಕರೆಮ್ಮರ ವಿರುದ್ಧ ಅವರದ್ದೇ ಕುಟುಂಬದ ರೂಪಾ ಶ್ರೀನಿವಾಸ ನಾಯಕ್‌ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದರು. ಯಾಕೆಂದರೆ ರೂಪಾ ಅವರು ರೈತಸಂಘದಲ್ಲಿ ಗುರುತಿಸಿಕೊಂಡಿದ್ದಾರೆ. ಅವರೂ ಸ್ಪರ್ಧಿಸಿದರೆ, ಕರೆಮ್ಮಗೆ ದೊರೆಯಬಹುದಾದ ಒಂದಷ್ಟು ಮತಗಳನ್ನು ರೂಪಾ ಸೆಳೆಯಬಹುದು ಎನ್ನುವ ಲೆಕ್ಕಾಚಾರವೂ ಇವರಲ್ಲಿತ್ತು. ಆದರೆ ಅದು ಫಲ ನೀಡಲಿಲ್ಲ.

ಇನ್ನು ಒಂದು ಕಾಲದಲ್ಲಿ ದೇವದುರ್ಗ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. ಆದರೆ ಈಗ ಕ್ಷೇತ್ರದಲ್ಲಿ ಒಳಒಪ್ಪಂದ ರಾಜಕಾರಣದಿಂದ ಕಾಂಗ್ರೆಸ್‌ ಪಕ್ಷ 3,000 ಮತಗಳು ಪಡೆಯುವ ಮೂಲಕ ತನ್ನ ಠೇವಣಿ ಕಳೆದುಕೊಂಡಿದೆ. ಕಾಂಗ್ರೆಸ್‌ನಲ್ಲಿದ್ದ ಬಿ.ವಿ ನಾಯಕ್, ಅಧಿಕಾರದಾಸೆಗಾಗಿ ಬಿಜೆಪಿ ಸೇರಿಕೊಂಡು ಮಾನ್ವಿಯಿಂದ ಸ್ಪರ್ಧಿಸಿ ಸೋತರು. ದೇವದುರ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀದೇವಿ ನಾಯಕ ಬಿಜೆಪಿಯ ಶಿವನಗೌಡ ನಾಯಕ ಇಬ್ಬರು ರಾತ್ರೋರಾತ್ರಿ ಮಾಡಿಕೊಂಡ ಒಪ್ಪಂದದ ರಾಜಕಾರಣವವನ್ನು ಅರ್ಥ ಮಾಡಿಕೊಂಡ ಕ್ಷೇತ್ರದ ಜನ ಪಕ್ಷದ ಕೆಲವು ಕಾರ್ಯಕರ್ತರು ಮತ್ತು ಮುಖಂಡರು ಜೆಡಿಎಸ್‌ನತ್ತ ಮುಖ ಮಾಡಿದರು.

ʼನಾನುಗೌರಿ.ಕಾಂʼ ಜೊತೆ ಮಾತನಾಡಿದ ಕರೆಮ್ಮ, “ತಾಲ್ಲೂಕಿನಲ್ಲಿ ಇದುವರೆಗೂ ಹೇಳಿಕೊಳ್ಳುವಂಥ ಅಭಿವೃದ್ಧಿ ಕಂಡಿಲ್ಲ. ತಾಲ್ಲೂಕಿನಲ್ಲಿ ಅಪೌಷ್ಟಿಕತೆ ಹೆಚ್ಚಿದೆ, ಸರಿಯಾದ ಆಸ್ಪತ್ರೆ ವ್ಯವಸ್ಥೆಯಿಲ್ಲ, ಹಳ್ಳಿಗಳಿಗೆ ಸರಿಯಾದ ಬಸ್ಸುಗಳ ವ್ಯವಸ್ಥೆ ಇಲ್ಲ, ಮಹಿಳೆಯರಿಗೆ ಸರಿಯಾದ ಶೌಚಾಲಯ ವ್ಯವಸ್ಥೆಯಿಲ್ಲ, ಈ ಸಮಸ್ಯೆಗಳನ್ನು ಹೋಗಲಾಡಿಸಬೇಕು, ಮೊದಲು ಅಭಿವೃದ್ಧಿ ಮಾಡಬೇಕು, ಕ್ಷೇತ್ರದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡುತ್ತೇವೆ. ಜೊತೆಗೆ ಕೆಲವು ಹಳ್ಳಿಗಳಿಗೆ ನೀರಾವರಿ ವ್ಯವಸ್ಥೆಯಿಲ್ಲ. ಅದನ್ನು ಜಾರಿ ಮಾಡಿಕೊಡಲು ಸರ್ಕಾರದ ಮೇಲೆ ಒತ್ತಡ ತಂದು ಅದನ್ನು ಜಾರಿಗೆ ತರುವ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

ಚುನಾವಣೆಯೆಂದರೆ ಅಭ್ಯರ್ಥಿಗಳು ಕೋಟಿಗಟ್ಟಲೇ ದುಡ್ಡು ಖರ್ಚು ಮಾಡಿ ಮತಗಳನ್ನು ಪಡೆದರೆ, ಆದರೆ ಅತ್ಯಂತ ಹಿಂದುಳಿದ ತಾಲ್ಲೂಕೆಂದು ಖ್ಯಾತಿ ಪಡೆದ ದೇವದುರ್ಗದಲ್ಲಿ ಜನರೇ ಅಭ್ಯರ್ಥಿಗಳ ಖರ್ಚು ನಿಭಾಯಿಸುವ ಪದ್ಧತಿಯನ್ನು ಈ ಕರೆಮ್ಮ ನಿರೂಪಿಸಿಬಿಟ್ಟರು. ಪ್ರತಿಯೊಂದು ಗ್ರಾಮವು ಕೂಡ ಚುನಾವಣಾ ಖರ್ಚಿಗಾಗಿ 2000-100000 ರೂ.ವರೆಗೆ ಅವರ ಉಡಿಯಲ್ಲಿ ಹಾಕಿ ಆಶೀರ್ವದಿಸಿ, ಹಾರೈಸಿದ ಉದಾಹರಣೆಯಿದೆ. ʼಚುನಾವಣೆಯ ಹಿಂದಿನ ದಿನ ಒಂಭತ್ತು ನಾಯಕರ ದೊಡ್ಡಿಗಳಿಂದ ಒಂಭತ್ತು ಲಕ್ಷ ರೂಪಾಯಿ ಕೊಡಲು ಬಂದರೆ ಅದನ್ನು ತೆಗೆದುಕೊಳ್ಳದೆ ಈಗಾಗಲೇ ಬಂದಿರುವ ಹಣ ನನ್ನಲ್ಲಿ ಹಾಗೇ ಉಳಿದಿದೆ, ಅದು ಖರ್ಚಾಗಿಲ್ಲ ನಿಮ್ಮದೇ ಊರಿನಲ್ಲಿ ನೀವೇ ಖರ್ಚು ಮಾಡಿ ಎಂದು ವಾಪಸ್ಸ್‌ ಕಳಿಸಿದ್ದರುʼ ಎಂದು ಸ್ಥಳೀಯರೊಬ್ಬರು ಹೇಳುತ್ತಾರೆ.

ಇದನ್ನೂ ಓದಿರಿ: ಬಜರಂಗದಳ ಬ್ಯಾನ್ ಚರ್ಚೆಯ ಸುತ್ತ

ಕರೆಮ್ಮ ಎರಡು ಬಾರಿ ಸೋತರೂ ಜನರ ಸಂಪರ್ಕ ಬಿಡಲಿಲ್ಲ. ನಿರಂತರವಾಗಿ ಜನರೊಂದಿಗೆ ಇರುವುದು ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿದೆ. ಇತ್ತೀಚೆಗೆ, ಗಬ್ಬೂರಿಗೆ ತಾಲೂಕು ಸ್ಥಾನಮಾನವನ್ನು ತಪ್ಪಿಸಿದ ಹಾಲಿ ಶಾಸಕರು, ಸ್ವಂತ ಊರಾದ ಅರಕೇರಾವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸುವ ಮೂಲಕ ಇಲ್ಲಿನ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಆದರಿಂದ ಕೆಲವು ಬಿಜೆಪಿ (ಲಿಂಗಾಯತ) ಮುಖಂಡರು ಶಿವನಗೌಡ ವಿರುದ್ಧ ತಿರುಗಿ ಬಿದ್ದಿದ್ದು ಕೂಡ ಕರೆಮ್ಮಗೆ ಲಾಭವಾಗಿದೆ.

ಸರಳತೆಯ ಜೊತೆಗೆ ಜನಗಳ ನಿರಂತರ ಸಂಪರ್ಕ, ಶಿವನಗೌಡ ಮತ್ತು ಪ್ರತಿಸ್ಪರ್ಧಿಗಳ ಕ್ಷುಲ್ಲಕ ಮಾತುಗಳು ಕರೆಮ್ಮನನ್ನು ಒಬ್ಬ ಜನನಾಯಕಿಯನ್ನಾಗಿ ರೂಪುಗೊಳಿಸಿದವು. ನಿರಂತರ ಸಂಪರ್ಕವಿದ್ದರೆ ಸಾಕು ಚುನಾವಣೆ ಗೆಲ್ಲಬಹುದು ಅಂತ ರಾಜ್ಯಕ್ಕೆ ತೋರಿಸಿಕೊಟ್ಟರು. ಈ ಗೆಲುವು ಇವತ್ತು ನಿನ್ನೆಯದಲ್ಲ. ಕರೆಮ್ಮನವರ ಸತತ 10 ವರ್ಷಗಳ ಪ್ರಯತ್ನ ಕ್ಷೇತ್ರದ ತುಂಬೆಲ್ಲ ಸಂಚರಿಸಿ ಜನಮನ ಗೆದ್ದಿರುವುದೇ ಈ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಯಿತು. ಸೋಲಿಸಲು ವಿರೋಧಿಗಳಿಂದ ಎಷ್ಟೇ ಪ್ರಯತ್ನ ನಡೆದರೂ ಕುಟುಂಬ ರಾಜಕಾರಣಿಗಳ ತಂತ್ರ-ಕುತಂತ್ರಗಳ ಆಟ ನಡೆಯಲಿಲ್ಲ. ಈ ದಿಟ್ಟಮಹಿಳೆಯ ಗೆಲುವು ಸುಲಭದಲ್ಲ. ಹತ್ತು ವರ್ಷಗಳ ಕಾಲ ಬಲಾಢ್ಯರು ಕೊಟ್ಟಿರುವ ಕಿರುಕುಳ ಅಷ್ಟಿಷ್ಟಲ್ಲ. ಅದೆಲ್ಲವನ್ನೂ ಎದುರಿಸಿ ನಿಂತು ಇವತ್ತು ಜಯ ಸಾಧಿಸಿದರು. ಇಂಥ ಹೋರಾಟದ ಗೆಲುವು ಪಕ್ಷದ ಮುಖ್ಯಸ್ಥರಿಗೆ ಗೊತ್ತಾಗುವುದೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...