Homeಕರ್ನಾಟಕಸಿಎಂ ಆಯ್ಕೆ ಕಗ್ಗಂಟು ಪರಿಹರಿಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಜಂಜಾಟ ಶುರು

ಸಿಎಂ ಆಯ್ಕೆ ಕಗ್ಗಂಟು ಪರಿಹರಿಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಜಂಜಾಟ ಶುರು

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ  ತೀವ್ರ ಪೈಪೋಟಿ ಏರ್ಪಟ್ಟಿತ್ತು. ಐದು ದಿನಗಳ ಕಾಲ ನಡೆದ ಕಾದಾಟಕ್ಕೆ ಬುಧವಾರ ತಡರಾತ್ರಿ ಬ್ರೇಕ್ ಬಿದ್ದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇದೇ ಶನಿವಾರ (ಮೇ 21) ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಗ್ಗಂಟನ್ನು ಪರಿಹರಿಸುವುದರಲ್ಲಿಯೇ ಹೈರಾಣಾಗಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ಇದೀಗ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯ ಜಂಜಾಟ ಶುರುವಾಗಲಿದೆ.

ಸಿದ್ದರಾಮಯ್ಯ, ಶಿವಕುಮಾರ್ ಅವರು ನಾಯಕತ್ವಕ್ಕಾಗಿ ಸೆಣಸಾಟ ನಡೆಸಿದ್ದರು. ಇದನ್ನು ಬಗೆಹರಿಸಲು ನಾನಾ ಪ್ರಯತ್ನ ನಡೆದರೂ ಇಬ್ಬರೂ ತಮ್ಮ ನಿಲುವಿಗೆ ಅಂಟಿಕೊಂಡರು. ಸಿಎಮ ಸ್ಥಾನ ತಮಗೆ ಯಾಕೆ ದಕ್ಕಬೇಕು ಎನ್ನುವ ಬಗ್ಗೆ ವರಿಷ್ಠರ ಮುಂದೆ ವಾದ ಮಂಡಿಸಿದ್ದರು. ಇಬ್ಬರೂ ಪಟ್ಟು ಬಿಡದಿದ್ದಾಗ, ಹೈಕಮಾಂಡ್‌ಗೆ ದೊಡ್ಡತಲೆನೋವಾಗಿ ಪರಿಣಮಿಸಿತು. ‘ಸಂಧಾನ ಸೂತ್ರ’ವನ್ನು ಹೆಣೆದ ಕಾಂಗ್ರೆಸ್‌ ವರಿಷ್ಠರು ಕೊನೆಗೂ ಇಬ್ಬರನ್ನೂ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. 2013-2018ರ ಅವಧಿಯಲ್ಲಿ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರು ಇದೇ 20ರಿಂದ ತಮ್ಮ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸಿದ್ದರಾಮಯ್ಯ–ಡಿಕೆ ಶಿವಕುಮಾರ್‌ ಪದಗ್ರಹಣ: ಯಾರಿಗೆಲ್ಲಾ ಆಹ್ವಾನ?

ಸಂಧಾನ ಯಶಸ್ವಿಯಾದ ಬಳಿಕ ಇಬ್ಬರನ್ನೂ ಒಟ್ಟಿಗೆ ನಿಲ್ಲಿಸಿ ಕೈ ಎತ್ತಿ ಹಿಡಿದು ‘ಒಗ್ಗಟ್ಟು’ ಪ್ರದರ್ಶಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸರ್ಕಾರ ರಚನೆಯ ಹಾದಿಗೆ ಸುಗಮವಾಗಿದೆ ಎನ್ನುವ ಸಂದೇಶ ರವಾನಿಸಿದರು. ಒಂದೇ ವಿಮಾನದಲ್ಲಿ ಬೆಂಗಳೂರಿಗೆ ಬಂದ ಇಬ್ಬರು ನಾಯಕರು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾದರು.

ಇದನ್ನೂ ಓದಿ: ಸಿಎಂ ಆಯ್ಕೆ ವಿಳಂಬಕ್ಕೆ ಬಿಜೆಪಿ ಟೀಕೆ; ಉದಾಹರಣೆ ಸಹಿತ ತಿರುಗೇಟು ನೀಡಿದ ಜೈರಾಮ್ ರಮೇಶ್

ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದೇ ದಿನ 20ಕ್ಕೂ ಹೆಚ್ಚು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಸಿದ್ದಾರೆ. ಸಚಿವ ಸಂಪುಟದಲ್ಲಿ ಯಾರಿರಬೇಕು ಎಂಬುದನ್ನು ನಿಶ್ಚಯಿಸಲು ಇಬ್ಬರು ನಾಯಕರು ಶುಕ್ರವಾರವೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ಸಮಾರಂಭದಲ್ಲಿ ಬಿಜೆಪಿಯೇತರ ವಿರೋಧ ಪಕ್ಷಗಳ ನಾಯಕರು, ವಿವಿಧ ರಾಜ್ಯಗಳ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ 135 ಶಾಸಕರು ಆಯ್ಕೆಯಾಗಿರುವುದರಿಂದ ಯಾರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂಬ ತೀರ್ಮಾನ ಕೈಗೊಳ್ಳುವುದು ಪರಿಷ್ಕರಿಗೆ ಸವಾಲಾಗಿದೆ. ಅನೇಕ ನಾಯಕರು ಈಗಾಗಲೇ ಸಚಿವ ಸ್ಥಾನಕ್ಕೆ ತಮ್ಮ ಹಕ್ಕು ಮಂಡಿಸಿದ್ದಾರೆ. ಜಾತಿ, ಪ್ರಾದೇಶಿಕತೆ ಹಾಗೂ ಸಿದ್ದರಾಮಯ್ಯ ಶಿವಕುಮಾರ್ ಅವರ ಆಪ್ತ ಬಣದ ವಾದವನ್ನು ಮುಂದಿಟ್ಟು, ಶಾಸಕರು, ಹಕ್ಕೊತ್ತಾಯ ಮಂಡಿಸುವುದರಿಂದಾಗಿ, ಆಯ್ಕೆ ಮತ್ತು ಖಾತೆ ಹಂಚಿಕೆ ವರಿಷ್ಟರನ್ನು ಇಕ್ಕಟ್ಟಿಗೆ ದೂಡುವ ಸಾಧ್ಯತೆಯೂ ಇದೆ. ಇಬ್ಬರು ನಾಯಕರು, ತಮ್ಮ ಆಪ್ತರಿಗೆ ಸಚಿವ ಸ್ಥಾನ ಹಾಗೂ ಆಯಕಟ್ಟಿನ ಖಾತೆ ಕೊಡಿಸಬೇಕಿರುವುದರಿಂದಾಗಿ ಈ ಪ್ರಕ್ರಿಯೆ ಮೇಲೆ ಎಲ್ಲರ ಕುತೂಹಲ ನೆಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...