Homeಕರ್ನಾಟಕಹಳೇ ಮೈಸೂರು ಪ್ರಾಂತ್ಯದಲ್ಲಿ ಬೀಸಿದ ಕಾಂಗ್ರೆಸ್ ಅಲೆ

ಹಳೇ ಮೈಸೂರು ಪ್ರಾಂತ್ಯದಲ್ಲಿ ಬೀಸಿದ ಕಾಂಗ್ರೆಸ್ ಅಲೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಗಳಿಸಿ, ಸರ್ಕಾರ ರಚಿಸಲು ಮುಂದಾಗಿದೆ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗಳಿಸುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಅದರ ಜೊತೆಗೆ ಮಧ್ಯ ಕರ್ನಾಟಕ ಮತ್ತು ಹಳೇ ಮೈಸೂರಿನಲ್ಲಿಯೂ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ ಪರಿಣಾಮ ಬಹುಮತಕ್ಕಿಂತ 22 ಹೆಚ್ಚುವರಿ ಸ್ಥಾನಗಳನ್ನು ಗೆದ್ದುಕೊಂಡಿದೆ.

ಸಾಮಾನ್ಯವಾಗಿ ಜೆಡಿಎಸ್-ಕಾಂಗ್ರೆಸ್ ನೆಲೆಯಾಗಿದ್ದ ಹಳೇ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಹಿಡಿತ ಕಳೆದುಕೊಳ್ಳುತ್ತಿದೆ. ಅಲ್ಲಿ ಈ ಬಾರಿ ಕಾಂಗ್ರೆಸ್ ಪಾರಮ್ಯ ಮೆರೆದರೆ, ಬಿಜೆಪಿ ಧೂಳೀಪಟವಾಗಿದೆ ಎಂಬುದನ್ನು 2023ರ ವಿಧಾನಸಭಾ ಫಲಿತಾಂಶಗಳು ಸ್ಪಷ್ಟಪಡಿಸುತ್ತಿವೆ.

ಕೊಡಗು 2, ಮೈಸೂರು 11, ಚಾಮರಾಜನಗರ 4, ಮಂಡ್ಯ 7, ಹಾಸನ 7, ರಾಮನಗರ 4, ಕೋಲಾರ 6, ಚಿಕ್ಕಬಳ್ಳಾಪುರ 5, ತುಮಕೂರಿನ 11 ಕ್ಷೇತ್ರಗಳು ಸೇರಿ ಹಳೇ ಮೈಸೂರು ಪ್ರಾಂತ್ಯವು 9 ಜಿಲ್ಲೆಗಳ 57 ಕ್ಷೇತ್ರಗಳನ್ನು ಹೊಂದಿದೆ. ಇಲ್ಲಿ ಈ ಬಾರಿ ಕಾಂಗ್ರೆಸ್ 36 ಸ್ಥಾನಗಳನ್ನು ಗೆದ್ದುಕೊಂಡರೆ, ಜೆಡಿಎಸ್ 14 ಸ್ಥಾನಗಳಿಗೆ ಕುಸಿದಿದೆ. ಬಿಜೆಪಿ 5 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಸರ್ವೋದಯ ಕರ್ನಾಟಕ ಒಂದು ಸ್ಥಾನ ಮತ್ತು ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಕಳೆದ ಚುನಾವಣೆಗಿಂತ 19 ಹೆಚ್ಚುವರಿ ಸ್ಥಾನಗಳನ್ನು ಗೆದ್ದುಕೊಂಡಿದೆ. ಜೆಡಿಎಸ್ 13 ಸ್ಥಾನ ಕಳೆದುಕೊಂಡರೆ, ಬಿಜೆಪಿ ಆರು ಸ್ಥಾನ ಕಳೆದುಕೊಂಡಿದೆ.

ಸದ್ಯ ಹಳೇ ಮೈಸೂರು ಪ್ರಾಂತ್ಯದಲ್ಲಿ ಪಕ್ಷಗಳ ಬಲಾಬಲ

 

ಪೂರ್ಣ ಪ್ರಮಾಣದಲ್ಲಿ ಕಾಂಗ್ರೆಸ್ ಕೈ ಹಿಡಿದ ಅಹಿಂದ ಮತಗಳು

ಈ ಮೊದಲು ಒಕ್ಕಲಿಗ ಸಮುದಾಯದ ಅರ್ಧದಷ್ಟು ಮತಗಳು, ಮುಸ್ಲಿಂ, ದಲಿತ ಸಮುದಾಯದ ಒಂದಷ್ಟು ಮತಗಳನ್ನು ಜೆಡಿಎಸ್ ಬಾಚಿಕೊಳ್ಳುತ್ತಿತ್ತು. ಹಾಗಾಗಿ ಕಳೆದ ಮೂರು ಚುನಾವಣೆಗಳಲ್ಲಿ ಅದು ಸಾಕಷ್ಟು ಸ್ಥಾನಗಳನ್ನು ಗಳಿಸಿತ್ತು. 2018ರಲ್ಲಂತೂ ಹೆಚ್.ಡಿ ಕುಮಾರಸ್ವಾಮಿಯವರು ಸಿಎಂ ಆಗಬೇಕೆಂಬ ಪ್ರಬಲ ಒಕ್ಕಲಿಗರ ಅಲೆ ಬೀಸಿತ್ತು. ಸಿದ್ದರಾಮಯ್ಯ ಒಕ್ಕಲಿಗರ ವಿರೋಧಿ ಎಂಬ ಕಥನ ಹರಿದಾಡಿತ್ತು. ಇದೆಲ್ಲದರ ಪರಿಣಾಮ ಜೆಡಿಎಸ್ 27 ಸ್ಥಾನಗಳಲ್ಲಿ ಗೆಲುವು ಕಂಡರೆ ಕಾಂಗ್ರೆಸ್ 17 ಸ್ಥಾನಗಳಿಗೆ ಕುಸಿದಿತ್ತು. ಆದರೆ ಎಚ್.ಡಿ ಕುಮಾರಸ್ವಾಮಿಯವರು ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಆಡಳಿತಾರೂಢ ಬಿಜೆಪಿಗಿಂತಲೂ ಕಾಂಗ್ರೆಸ್‌ಅನ್ನು ಟೀಕಿಸುವಲ್ಲಿ ಹೆಚ್ಚಿನ ಸಮಯ ಕಳೆದುಬಿಟ್ಟರು. ಬಿಜೆಪಿಯ ಜನವಿರೋಧಿ ಭೂಸುಧಾರಣೆ ಕಾಯ್ದೆಗೆ ಪರಿಷತ್‌ನಲ್ಲಿ ಜೆಡಿಎಸ್ ಬೆಂಬಲ ನೀಡಿತು. ಕಾಂಗ್ರೆಸ್‌ನ ಸಭಾಪತಿಯನ್ನು ಇಳಿಸಲು ಪರೋಕ್ಷ ಸಹಾಯ ಮಾಡಿತು. ಇದರಿಂದ ಬಿಜೆಪಿ ಪಕ್ಷ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಲು ಸಾಧ್ಯವಾಯಿತು. ಬಿಜೆಪಿಯು ನಂದಿನಿ ಮುಳುಗಿಸಲು ಪ್ರಯತ್ನಿಸಿದ್ದು, ಉರಿಗೌಡ-ನಂಜೇಗೌಡ ಸುಳ್ಳು ತಂದಿದ್ದನ್ನು ಕುಮಾರಸ್ವಾಮಿಯವರು ಟೀಕಿಸಿದರಾದರೂ, ಚುನಾವಣೆ ಸಮಯದಲ್ಲಿ ಅತಂತ್ರ ಫಲಿತಾಂಶ ಬಂದಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸುತ್ತದೆ ಎಂಬ ಗುಲ್ಲಿನ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಹಿಂದುತ್ವಕ್ಕೆ ವಿರುದ್ಧವಾದ ಧ್ರುವೀಕರಣಕ್ಕೆ ನಾಂದಿ ಹಾಡಿದ ಚುನಾವಣಾ ಫಲಿತಾಂಶ

ಅದೇ ಸಮಯದಲ್ಲಿ ಬಿಜೆಪಿ ಸರ್ಕಾರದ ಬೆಲೆ ಏರಿಕೆ, ದುರಾಡಳಿತದ ವಿರುದ್ಧ ಕಾಂಗ್ರೆಸ್ ದೊಡ್ಡ ದನಿಯೆತ್ತಿತ್ತು. ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಪ್ರಣಾಳಿಕೆಯಲ್ಲಿ ಬಡವರ ಪರವಾದ ಭರವಸೆಗಳನ್ನು ರೂಪಿಸಿತ್ತು. ಬಿಜೆಪಿಯ ಉರಿಗೌಡ, ನಂಜೇಗೌಡ ಎಂಬ ಪಾತ್ರಗಳ ಹಸಿ ಸುಳ್ಳಿನ ವಿರುದ್ಧ ತೊಡೆತಟ್ಟಿತು. ವಿಧಾನಪರಿಷತ್ ಗೆಲುವಿನ ನಂತರ ಪಕ್ಷ ಸಂಘಟನೆಯನ್ನು ಸದೃಢಗೊಳಿಸಿತ್ತು. ಸಿದ್ದರಾಮಯ್ಯನವರು ಸಿಎಂ ಆಗುತ್ತಾರೆ ಎಂಬ ಅಲೆ ಕಂಡು ಬಂತು. ಈ ಎಲ್ಲಾ ಕಾರಣಗಳಿಂದ ಒಂದಷ್ಟು ಒಕ್ಕಲಿಗ ಮತಗಳ ಜೊತೆಗೆ ಬಹುತೇಕ ಮುಸ್ಲಿಂ, ದಲಿತ ಮತ್ತು ಹಿಂದುಳಿದ ವರ್ಗದ ಕುರುಬ ಮತಗಳು ದಕ್ಕಿದವು. ಮುಸ್ಲಿಂ ಸಮುದಾಯದ ಶೇ.88, ದಲಿತ ಸಮುದಾಯದ ಶೇ.60 ಮತ್ತು ಕುರುಬ ಸಮುದಾಯದ ಶೇ.63 ರಷ್ಟು ಮತಗಳು ಕಾಂಗ್ರೆಸ್ ಪಾಲಾಗಿವೆ ಎಂಬ ಅಂದಾಜಿದೆ. ಅದರಿಂದಾಗಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿದೆ.

ಜೆಡಿಎಸ್ ಕುಸಿತಕ್ಕೆ ಕಾರಣಗಳು

ಜೆಡಿಎಸ್ ಪಕ್ಷದ ಕುಟುಂಬ ರಾಜಕಾರಣವೂ ಮೈಸೂರು ಪ್ರಾಂತ್ಯದ ಜನರಲ್ಲಿ ಬೇಸರ ಮೂಡಿಸಿದೆ. ಅವರ ಕುಟುಂಬ ಕನಿಷ್ಟ 8 ಜನ ಅಧಿಕಾರದಲ್ಲಿರುವುದು, ಮಂಡ್ಯ ಲೋಕಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಿದ್ದು, ಅಲ್ಲಿ ಸೋತ ನಂತರ ವಿಧಾನಸಭಾ ಚುನಾವಣೆಗೆ ರಾಮನಗರಕ್ಕೆ ತಂದಿದ್ದು, ಟಿಕೆಟ್ ಹಂಚಿಕೆಯಲ್ಲಿಯೂ ಸ್ಥಳೀಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದದ್ದು ಜೆಡಿಎಸ್‌ಗೆ ಮುಳುವಾಯಿತು. ಇದರಿಂದಾಗಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕೂಡ ಸೋಲುವ ಪರಿಸ್ಥಿತಿ ಉಂಟಾಯಿತು.

2017ರಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ಚಲುವರಾಯಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತು ಎಚ್.ಸಿ ಬಾಲಕೃಷ್ಣರವರು 2018ರ ಚುನಾವಣೆಯಲ್ಲಿ ಜೆಡಿಎಸ್ ಎದುರು ಸರಾಸರಿ 50,000 ಮತಗಳ ಬೃಹತ್ ಅಂತರದಲ್ಲಿ ಸೋಲು ಕಂಡಿದ್ದರು. ಅಷ್ಟರಮಟ್ಟಿಗೆ ಈ ಪಕ್ಷಾಂತರಿಗಳು ದೇವೇಗೌಡರ ಕುಟುಂಬಕ್ಕೆ ಮತ್ತು ಒಕ್ಕಲಿಗರಿಗೆ ದ್ರೋಹ ಮಾಡಿದರು ಎಂಬ ಕಥನ ಸೃಷ್ಟಿಸಲಾಗಿತ್ತು. ಆದರೆ ಐದು ವರ್ಷಗಳ ಒಳಗೆ ಅದೆಲ್ಲ ಸುಳ್ಳು, ಬದಲಿಗೆ ದೇವೇಗೌಡರ ಕುಟುಂಬವು ನಮಗೆ ಸ್ವಾತಂತ್ರ್ಯ ನೀಡುತ್ತಿಲ್ಲ, ನಮಗೆ ಬೆಲೆ ಕೊಡುತ್ತಿಲ್ಲ ಎಂದು ಜನರ ಮನವೊಲಿಸಲು ಸಫಲವಾದರು. ಹಾಗಾಗಿ ಈ ಚುನಾವಣೆಯಲ್ಲಿ ಆ ಮೂವರು ಜೆಡಿಎಸ್ ಎದುರು ಗೆಲುವು ಸಾಧಿಸಿದ್ದಾರೆ. ಪರಿಣಾಮವಾಗಿ ಮಂಡ್ಯದಲ್ಲಿ ಜೆಡಿಎಸ್ 6 ಕ್ಷೇತ್ರ ಕಳೆದುಕೊಂಡರೆ, ರಾಮನಗರದಲ್ಲಿ ಎರಡು ಸ್ಥಾನ ಕಳೆದುಕೊಂಡಿತು. ಮೈಸೂರು, ತುಮಕೂರಿನಲ್ಲಿಯೂ ಕೇವಲ ಎರಡೆರಡು ಸ್ಥಾನಗಳಿಗೆ ಸೀಮಿತವಾಗಿದೆ.

ಜಾತಿ ಆಧಾರದಲ್ಲಿ ನೋಡುವುದಾದರೆ ಶೇ.46 ರಷ್ಟು ಒಕ್ಕಲಿಗ ಮತಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾದರೂ ಸಹ ದಲಿತರ (ಕೇವಲ 14%) ಮತ್ತು ಮುಸ್ಲಿಮರ (ಕೇವಲ 8%) ಮತಗಳನ್ನು ಮಾತ್ರ ಪಡೆದಿದೆ ಎಂದು ಅಂದಾಜಿಸಲಾಗಿದೆ.

ಜೆಡಿಎಸ್ ಪಕ್ಷವು ಪ್ರಬಲ ಪ್ರಾದೇಶಿಕ ಪಕ್ಷವಾಗಿ ಕೆಲಸ ಮಾಡಲೇ ಇಲ್ಲ. ಕುಮಾರಸ್ವಾಮಿಯವರನ್ನು ಬಿಟ್ಟರೆ ಉಳಿದ ಸಮರ್ಥ ನಾಯಕರನ್ನು ಬೆಳೆಸದಿರುವುದು, ವಿರೋಧ ಪಕ್ಷವಾಗಿ ವರ್ತಿಸುವ ಬದಲು ಬಿಜೆಪಿಯ ಸ್ನೇಹಿತನಂತೆ ಹಲವು ಬಾರಿ ವರ್ತಿಸಿದ್ದು ಅದಕ್ಕೆ ಮುಳುವಾಯಿತು.

ನಡೆಯದ ಬಿಜೆಪಿ ಆಟಗಳು

ಬಿಜೆಪಿ ಪಕ್ಷವು ಬೇರೆ ಕಡೆಯಂತೆ ಇಲ್ಲಿಯೂ ಹಿಂದುತ್ವ ಪ್ರಯೋಗದ ಮೂಲಕ ಗೆಲ್ಲಲು ಹವಣಿಸಿತು. ಇಲ್ಲಿಯೂ ಹಿಂದು-ಮುಸ್ಲಿಂ ರಾಜಕಾರಣ ಮಾಡಲು ಮುಂದಾಯಿತು. ಹಾಗಾಗಿ ಒಕ್ಕಲಿಗರನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಯತ್ನಿಸಿತು. ಟಿಪ್ಪು ದೇವಸ್ಥಾನ ಕೆಡವಿ ಮಸೀದಿ ಕಟ್ಟಿದ ಎಂಬಂತಹ ಟಿಪ್ಪು ಸುಲ್ತಾನ್ ವಿರುದ್ಧದ ಸಲ್ಲದ ಅಪಪ್ರಚಾರಗಳನ್ನು ನಿರಂತರವಾಗಿ ನಡೆಸಿತು. ಟಿಪ್ಪು ಒಕ್ಕಲಿಗರಿಗೆ ಕಿರುಕುಳ ನೀಡಿದನೆಂದೂ, ಟಿಪ್ಪುವನ್ನು ಕೊಂದಿದ್ದು ಉರಿಗೌಡ ಮತ್ತು ನಂಜೇಗೌಡ ಎಂಬ ಇಬ್ಬರು ಒಕ್ಕಲಿಗ ಯೋಧರೆಂದೂ ಕಲ್ಪಿತ ಕತೆಗಳನ್ನು ಸೃಷ್ಟಿಸಿ ಒಕ್ಕಲಿಗರ ಮನಸ್ಸಿನಲ್ಲಿ ವಿಷ ಬಿತ್ತುವ ಕೆಲಸ ಮಾಡಿತು. ರಾಮನಗರದ ರಾಮದೇವರಬೆಟ್ಟದಲ್ಲಿ ದಕ್ಷಿಣದ ಅಯೋಧ್ಯೆಯನ್ನು ನಿರ್ಮಿಸುತ್ತೇವೆ ಎಂದು ಬೊಬ್ಬಿರಿಯಿತು. ಸಿ.ಎನ್ ಅಶ್ವತ್ಥ ನಾರಾಯಣ್, ಆರ್ ಅಶೋಕ್‌ರಂತಹ ಒಕ್ಕಲಿಗ ಸಚಿವರು ಇಂತಹ ಮಾತುಗಳನ್ನಾಡಿಕೊಂಡು ತುಂಬಾ ಓಡಾಡಿದರು. ಆದರೆ ಇವೆಲ್ಲವೂ ಬಿಜೆಪಿಗೆ ಉಲ್ಟಾ ಹೊಡೆದವು. ಜನರ ದೈನಂದಿನ ವಿಷಯಗಳನ್ನು ಮರೆಮಾಚಿ ಸುಳ್ಳುಗಳನ್ನು ಹೇಳಲು ಹೊರಟ ಬಿಜೆಪಿಗೆ ಮುಳುವಾದವು.

ಹಳೇ ಮೈಸೂರು ಭಾಗದ 9 ಜಿಲ್ಲೆಗಳ ಪೈಕಿ ಚಾಮರಾಜನಗರ, ಕೊಡಗು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಸೇರಿ 6 ಜಿಲ್ಲೆಗಳಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ಮೈಸೂರಿನ 11 ಸ್ಥಾನಗಳ ಪೈಕಿ ಬಿಜೆಪಿ ಒಂದರಲ್ಲಿ ಮಾತ್ರ ಗೆಲುವು ಕಾಣಲು ಸಾಧ್ಯವಾಗಿದೆ. ವಿ.ಸೋಮಣ್ಣ ಎರಡೂ ಕಡೆ ಸೋಲು ಕಂಡರು. ಬಿಜೆಪಿ ಕೊಡಗಿನ ಎರಡೂ ಕ್ಷೇತ್ರಗಳಲ್ಲಿ ಸೋಲು ಕಂಡಿದ್ದು ಅವರ ದುರಾಡಳಿತಕ್ಕೆ ಸಾಕ್ಷಿ ಎನ್ನಬಹುದು. ಇನ್ನು ಹಾಸನದಲ್ಲಿ ಅಹಂಕಾರದ ಮಾತುಗಳನ್ನಾಡಿದ ಪ್ರೀತಂ ಗೌಡರನ್ನು ಜನ ಮನೆಗೆ ಕಳಿಸಿದರು. ಆಪರೇಷನ್ ಕಮಲದ ಬಲೆಗೆ ಬಿದ್ದಿದ್ದ ಕೆ.ಆರ್ ಪೇಟೆಯ ನಾರಾಯಣಗೌಡ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಆದರೆ ಬಿಜೆಪಿ ಪಕ್ಷ ಕಳೆದ ಚುನಾವಣೆಗಿಂತ 6 ಸ್ಥಾನ ಕಡಿಮೆ ಪಡೆದರೂ ಸಹ ತನ್ನ ವೋಟ್ ಶೇರ್‌ಅನ್ನು ಅಲ್ಪ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದೆ. ಮುಖ್ಯವಾಗಿ ಮಂಡ್ಯ ಜಿಲ್ಲೆಯಲ್ಲಿ ಇದ್ದ ಏಕೈಕ ಸ್ಥಾನ ಕಳೆದುಕೊಂಡರೂ, 5 ಕ್ಷೇತ್ರಗಳಲ್ಲಿ ಸರಾಸರಿ 30,000 ದಷ್ಟು ಮತಗಳನ್ನು ಪಡೆದುಕೊಂಡಿದೆ. ಹಾಸನದಲ್ಲಿ ಎರಡು ಸ್ಥಾನ ಗೆದ್ದುಕೊಂಡಿದೆ. ತುಮಕೂರಿನಲ್ಲಿ ಎರಡು ಸ್ಥಾನದೊಂದಿಗೆ ಮತಗಳನ್ನು ಹೆಚ್ಚಿಸಿಕೊಂಡಿದೆ. ಇದು ಬಿಜೆಪಿಗೆ ಬಂದ ಮತಗಳು ಎನ್ನುವುದಕ್ಕಿಂತ ಅಭ್ಯರ್ಥಿಗಳ ವರ್ಚಸ್ಸಿನ ಮೇಲೆಯೂ ಮತ ಪಡೆದಿದ್ದಾರೆ. ಬಿಜೆಪಿ ಲಿಂಗಾಯಿತ ಸಮುದಾಯದ 64% ರಷ್ಟು ಮತಗಳು, ಒಬಿಸಿಯಿಂದ 45% ಮತ್ತು ಒಕ್ಕಲಿಗ ಸಮುದಾಯದ 25% ರಷ್ಟು ಮತಗಳನ್ನು ಪಡೆದುಕೊಂಡಿದೆ ಎಂದು ಅಂದಾಜಿಸಲಾಗುತ್ತಿದೆ. ಹಾಗಾಗಿ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಏನಾದರೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಆದರೆ ಮುಂದಿನ ಬಾರಿಯೂ ಅದು ಜನರ ಸಮಸ್ಯೆಗಳನ್ನು ಹೊರತುಪಡಿಸಿ ದ್ವೇಷದ ಅಜೆಂಡಾಗಳನ್ನೇ ಇಟ್ಟುಕೊಂಡು ಹೋದಲ್ಲಿ ನಿರಾಸೆ ಮತ್ತೆ ಕಟ್ಟಿಟ್ಟಬುತ್ತಿ ಎಂಬುದನ್ನು ಈ ಫಲಿತಾಂಶ ತೋರಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...