Homeಕರ್ನಾಟಕಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

ಸಿದ್ದು ಸರ್ಕಾರ: ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರಕ್ಕೆ ಸ್ಪಷ್ಟ ಭರವಸೆ ನೀಡದ ವರಿಷ್ಠರು

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪಟ್ಟು ಹಿಡಿದಿದ್ದರು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಸಂಧಾನ ಸಭೆ ಯಶಸ್ವಿಯಾಗಿದೆ. ಈ ವೇಳೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರ ಅನುಸರಿಸಲಾಗುತ್ತದೆಯೇ ಎನ್ನುವ ಪ್ರಶ್ನೆ ಎಲ್ಲರಿಗೂ ಮೂಡಿತ್ತು ಆದರೆ ಕಾಂಗ್ರೆಸ್ ಪಕ್ಷದ ವರಿಷ್ಠರು ಆ ಬಗ್ಗೆ ಸ್ಪಷ್ಟ ಭರವಸೆ ನೀಡಿಲ್ಲ.

ಹಿರಿಯ ನಾಯಕ ಸಿದ್ದರಾಮಯ್ಯ ಅವರ ಕೈಮೇಲಾಗಿದ್ದು, ಅವರಿಗೆ ಎರಡನೇ ಬಾರಿಗೆ ಕರ್ನಾಟಕದ ಮುಖ್ಯಮಂತ್ರಿ ಹುದ್ದೆ ಅರಸಿಕೊಂಡು ಬಂದಿದೆ. ಉಪಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಲಾಗಿದೆ.

ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರು, ”ಫಲಿತಾಂಶ ಪ್ರಕಟಗೊಂಡ ದಿನದಿಂದಲೇ ಅತ್ತು ಕರೆದ, ಹೊಣೆ ವಹಿಸುವ ಸಂದರ್ಭದಲ್ಲಿ ನೀಡಿರುವ ವಾಗ್ದಾನದಂತೆ ಕೂಲಿ ಕೊಡುವ ಭರವಸೆ ನೆನಪಿಸಿದ, ವರಿಷ್ಠರನ್ನು ಬೆದರಿಸುವ ತಂತ್ರ ಪ್ರಯೋಗಿಸಿದರು. ಹಲವು ಭಾವನಾತ್ಮಕ ಬಾಣಗಳನ್ನು ಎಸೆದರು. ಅವರ ಬೇಡಿಕೆ ಹಾಗೂ ಷರತ್ತುಗಳಿಗೆ ಭಾಗಶಃ ಮಣಿದ ಹೈಕಮಾಂಡ್, ಮುಂದಿನ ದಿನಗಳಲ್ಲಿ ಉಡುಗೊರೆ ನೀಡುವ ಭರವಸೆ ನೀಡಿ ಸಮಾಧಾನಪಡಿಸಿದೆ. ರಾಜ್ಯ ಕಾಂಗ್ರೆಸ್‌ನ ಸಾರಥಿ ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆ ಬಗ್ಗೆ ವರಿಷ್ಟರು ಹೇಳಿದ್ದೇನು?

”ಒಗ್ಗಟ್ಟಿನಿಂದ ಕೆಲಸ ಮಾಡಿ ಮುಂಬರುವ ಚುನಾವಣೆಗಳು, ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿಕೊಂಡು ಬನ್ನಿ, ಮುಂದೆ ನೋಡೋಣ” ಎಂಬ ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದಾರೆ. ಈಗಲೇ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಸೂತ್ರ ಹೆಣೆದರೆ ಆಡಳಿತ ಯಂತ್ರದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಭಾವಿಸಿದ ಹೈಕಮಾಂಡ್, ಜಾಳ್ಮೆಯ ಹೆಜ್ಜೆ ಇಟ್ಟಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಆರಂಭದಿಂದಲೂ ಸಿದ್ದರಾಮಯ್ಯ ಪರವಾಗಿ ಪ್ರಬಲವಾಗಿ ನಿಂತರು. ವೇಣುಗೋಪಾಲ್ ಹೆಣೆದ ‘ಸಿದ್ಧ’ ಸೂತ್ರವೇ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ..

ಶನಿವಾರ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿತು. ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿತು. ಮರುದಿನವೇ ಅಂದರೆ ರವಿವಾರ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಹೊಣೆಯನ್ನು ಹೈಕಮಾಂಡ್‌ಗೆ ಬಿಡುವ ತೀರ್ಮಾನಕ್ಕೆ ಬರಲಾಯಿತು. ಅದಕ್ಕೆ ಬಲವಾಗಿ ಆಕ್ಷೇಪ ವ್ಯಕ್ತಪಡಿಸಿದ ವೇಣುಗೋಪಾಲ್, ”ಈ ಪ್ರಕ್ರಿಯೆ ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರತಿಯೊಬ್ಬ ಶಾಸಕರು ತಮ್ಮ ಅಭಿಪ್ರಾಯ ನೀಡಬೇಕು” ಎಂದು ಹೇಳಿದರು.

ವೇಣುಗೋಪಾಲ್ ಅವರ ಮಾತಿಗೆ ಆರಂಭದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಒಪ್ಪಲಿಲ್ಲ. ಆಗ ವೇಣುಗೋಪಾಲ್ ಮನವೊಲಿಸಿದರು. ಆ ಬಳಿಕ ಪ್ರತಿಯೊಬ್ಬ ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಲಾಯಿತು. ಹೆಚ್ಚಿನ ಶಾಸಕರು ಸಿದ್ದರಾಮಯ್ಯ ಕಡೆಗೆ ಒಲವು ವ್ಯಕ್ತಪಡಿಸಿದರು. ಹೆಚ್ಚು ಶಾಸಕರ ಒಲವಿರುವ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅದಕ್ಕೂ ಮುನ್ನ ಶಿವಕುಮಾರ್ ಅವರನ್ನು ಮನವೊಲಿಸಬೇಕು. ಪಕ್ಷ ಬಹುಮತ ಗಳಿಸುವಲ್ಲಿ ಅವರ ಪರಿಶ್ರಮವೂ ಅಪಾರ ಎಂದು ರಾಹುಲ್ ಸಲಹೆ ನೀಡಿದರು.

ಶಿವಕುಮಾರ್ ಅವರು ಎರಡು ದಿನ ಹಿಡಿದ ಪಟ್ಟನ್ನು ಸಡಿಲಿಸಲೇ ಇಲ್ಲ. ಬುಧವಾರ ರಾತ್ರಿ ಶಿವಕುಮಾರ್ ಅವರನ್ನು ಕರೆಸಿಕೊಂಡ ವೇಣುಗೋಪಾಲ್ ಸುದೀರ್ಘವಾಗಿ ಸಮಾಲೋಚಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಒಂದು ಹಂತದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮಾತಿಗೂ ಶಿವಕುಮಾರ್ ಸೊಪ್ಪು ಹಾಕಲಿಲ್ಲ. ಮೂರು ದಿನಗಳ ಕಾಲ ನಡೆಸಿದ ಮನವೊಲಿಕೆಗೂ ಅವರು ಬಗ್ಗಲಿಲ್ಲ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಿರ್ದೇಶನದ ಮೇರೆಗೆ ಕೆ.ಸಿ.ವೇಣುಗೋಪಾಲ್‌ ಅವರು ಬುಧವಾರ ರಾತ್ರಿ ಸಿದ್ದರಾಮಯ್ಯ ಹಾಗೂ ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಶಿವಕುಮಾರ್‌ ಅವರೊಂದಿಗೆ ಸುಮಾರು ಮೂರು ಗಂಟೆ ಸಮಾಲೋಚಿಸಿದರು. ಅವರ ಎಲ್ಲ ಷರತ್ತುಗಳನ್ನು ಆಲಿಸಿದರು. ಹೈಕಮಾಂಡ್ ಮುಂದಿರುವ ಸೂತ್ರಗಳನ್ನು ಮುಂದಿಟ್ಟರು.

ಆಗ ಡಿಕೆ ಶಿವಕುಮಾರ್ ಅವರು, ”ನನಗೆ ಸೋನಿಯಾ ಅವರೇ ವಾಗ್ದಾನ ನೀಡಿದ್ದಾರೆ. ಅವರ ಜತೆಗೆ ಈಗ ಮಾತನಾಡಬೇಕು” ಎಂದು ಶಿವಕುಮಾರ್ ಹೇಳಿಕೊಂಡರು. ಮಧ್ಯರಾತ್ರಿಯಲ್ಲಿ ಸೋನಿಯಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆಗೂ ವ್ಯವಸ್ಥೆ ಮಾಡಲಾಯಿತು. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗಳು, ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡುವ ಅನಿವಾರ್ಯತೆಗಳ ಕುರಿತು ಈ ವೇಳೆ ಚರ್ಚೆಯಾಯಿತು. ಮುಖ್ಯಮಂತ್ರಿ ಹುದ್ದೆ ಬಿಟ್ಟು ಎಲ್ಲಭರವಸೆಗಳನ್ನು ಈಡೇರಿಸಲು ಪಕ್ಷವು ಒಪ್ಪಿತು. ಪಕ್ಷ ನಿಷ್ಠ’ ಶಿವಕುಮಾರ್ ಅವರು ನಡು ರಾತ್ರಿಯಲ್ಲಿ ವರಿಷ್ಠ ನಾಯಕರ ಮಾತಿಗೆ ಒಪ್ಪಿದರು. ನಾಲ್ಕು ಉಪಮುಖ್ಯಮಂತ್ರಿಯ ಹೈಕಮಾಂಡ್‌ ಸೂತ್ರಕ್ಕೆ ಶಿವಕುಮಾರ್‌ ಸುತಾರಂ ಒಪ್ಪಲಿಲ್ಲ. ನಾನೊಬ್ಬನೇ ಉಪಮುಖ್ಯಮಂತ್ರಿ ಇರಬೇಕು ಎಂದು ಕೊನೆಯ ಅಸ್ತ್ರ ಎಸೆದರು. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...