Homeಮುಖಪುಟರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

ರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೆ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾಚ್‌ 07, 1948ರಂದು ಕೋಲಾರ ಜಿಲ್ಲೆಯ ಶಿಢ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್ ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದರು.

ಹಾಗಾಗಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ರಾಜಕೀಯ ಪ್ರವೇಶಿಸಿ 1991 ರಲ್ಲಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆನಂತರ 1996, 1998, 1999, 2004, 2009, 2014ರವರೆಗೂ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರಿಗೆ ಸಲ್ಲುತ್ತದೆ.

2004ರಲ್ಲಿ ಸಾಗಾಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಮೊದಲ ಸೋಲು

ಕೆ.ಎಚ್ ಮುನಿಯಪ್ಪನವರಿಗೆ ಇಡೀ ಕೋಲಾರ ಜಿಲ್ಲೆಯ ಮೇಲೆ ತಮ್ಮದೇ ಹಿಡಿತ ಹೊಂದಿದ್ದಾರೆ. ಆದರೆ, ತಾಲೂಕುಗಳಲ್ಲಿ ಕಾಂಗ್ರೆಸ್ ವಿರುದ್ಧ ಇರುವ ಬೇರೆ ಪಕ್ಷದ ಎಂಎಲ್‌ಎಗಳು ಅಥವಾ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪವು ಅವರ ಮೇಲಿದೆ. ಹಾಗಾಗಿ ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಮುನಿಯಪ್ಪ ಬಣ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಸಕ್ರಿಯವಾಗಿದೆ. ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್ ಮುನಿಯಪ್ಪನವರು ಸಿಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದ ಪರಿಣಾಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...