Homeಮುಖಪುಟಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ವಿರುದ್ಧ ದ್ವೇಷ ಭಾವನೆ ಹರಡುವುದು, ಪ್ರೊಪಗಂಡ ಮಾಡುವುದು ಕೊನೆಗೆ ತಮಗೆ ಎಂತಹ ದುಷ್ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರಾಖಂಡ ರಾಜ್ಯದ ಈ ಬಿಜೆಪಿ ಮುಖಂಡ ತಾಜಾ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ. ತನ್ನ ಮಗಳು ಪ್ರೀತಿಸಿದ್ದ ಹುಡುಗನೊಂದಿಗೆ ಮದುವೆ ನಿಶ್ಚಯಿಸಿದ್ದರು. ಆದರೆ ಹಿಂದುತ್ವವಾದಿಗಳು ಅತಿಯಾದ ಒತ್ತಡಕ್ಕೆ ಬಲಿಯಾಗಿ ಸ್ವಂತ ಮಗಳ ಮದುವೆಯನ್ನೇ ರದ್ದುಗೊಳಿಸಬೇಕಾದ ದುಸ್ಥಿತಿ ಅವರದಾಗಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ನಾಗಲ್ ಪಾಲಿಕಾ (ಪುರಸಭೆ) ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಬೇನಮ್ ಅವರ ಪುತ್ರಿ ಮೋನಿಕಾ ಎಂಬುವವರು ಲಕ್ನೋ ವಿವಿಯಲ್ಲಿ ಓದುತ್ತಿದ್ದಾಗ ರಯೀಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರನ್ನು ಪ್ರೀತಿಸಿದ್ದರು. ಇಬ್ಬರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇದನ್ನು ಎರಡು ಕುಟುಂಬಗಳಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಮೇ 28 ರಂದು ಅವರ ಮದುವೆಗೆ ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಮದುವೆ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು ಈ ಅಂತರ್‌ಧರ್ಮೀಯ ಮದುವೆಗೆ ಅಡ್ಡಿಪಡಿಸಿದರು. ಮದುವೆ ರದ್ದುಗೊಳಿಸುವಂತೆ ತೀವ್ರ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ವಧುವಿನ ತಂದೆ ಬಿಜೆಪಿ ಮುಖಂಡ ಯಶಪಾಲ್ ಬೇನಮ್, “ಇದು 21ನೇ ಶತಮಾನ. ನಮ್ಮ ಮಕ್ಕಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಯಾರೂ ಅದನ್ನು ವಿರೋಧಿಸಬಾರದು” ಎಂದಿದ್ದರು. ಇಷ್ಟು ದಿನ ಬಿಜೆಪಿ ಪಕ್ಷ ಮತ್ತು ಹಿಂದುತ್ವವಾದಿಗಳು ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುತ್ತಿದ್ದಾಗ, ಲವ್ ಜಿಹಾದ್ ಎಂಬ ಸುಳ್ಳು ಕಥೆ ಕಟ್ಟುತ್ತಿದ್ದಾಗ ಅದನ್ನು ನೋಡಿ ಬೆಂಬಲಿಸಿದ್ದ ಅಥವಾ ಸುಮ್ಮನಿದ್ದ ಯಶಪಾಲ್ ಬೇನಮ್ ಈಗ ತನ್ನದೇ ಮಗಳ ಮದುವೆಗೆ ಬರುತ್ತಿರುವ ವಿರೋಧವನ್ನು ಟೀಕಿಸಿದ್ದಾರೆ.

‘ಈ ಘಟನೆಯನ್ನು ಧರ್ಮದ ಮೂಲಕ ನೋಡುತ್ತಿರುವವರಿಗೆ ನಾನು ಹೇಳುವುದೇನೆಂದರೆ ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಇಬ್ಬರು ಯುವಜನರ ಭವಿಷ್ಯ ಇದರಲ್ಲಿದೆ ಮತ್ತು ಈ ಪ್ರಕರಣದಲ್ಲಿ ನಮಗೆ ಧರ್ಮವು ಮುಖ್ಯವಲ್ಲ. ಆದರೆ ಈ ಮದುವೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ’ ಎಂದು ಬೇನಮ್ ಹೇಳಿದ್ದರು. ಆದರೂ ಸಹ ಹಿಂದುತ್ವವಾದಿಗಳು ಮುಸ್ಲಿಂ ಯುವಕನೊಂದಿಗೆ ಅವರ ಮಗಳ ಮದುವೆ ನಡೆಯಬಾರದೆಂದು ಆಗ್ರಹಿಸಿದ್ದರು.

ಬಿಜೆಪಿ ಸದಸ್ಯ ಮತ್ತು ರಾಜ್ಯ ಸರ್ಕಾರ ನಿರ್ವಹಿಸುವ ಗೋಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಧರ್ಮವೀರ್ ಗುಸೇನ್ ಎಂಬುವವರು ಮಾತನಾಡಿ, “ನಾವು ಈಗಲೂ ಉತ್ತರಾಖಂಡದಲ್ಲಿ ಚಿಕ್ಕ ಧೋತಿ (ಕೆಳಭಾಗದ ಬ್ರಾಹ್ಮಣ) ಮತ್ತು ಉದ್ದ ಧೋತಿ (ಮೇಲುಭಾಗದ ಬ್ರಾಹ್ಮಣ) ಸಂಪ್ರದಾಯವನ್ನು ಅನುಸರಿಸುತ್ತೇವೆ. ಇದರರ್ಥ ನಾವು ನಮ್ಮ ಸಂಪ್ರದಾಯಗಳನ್ನು ನಂಬುತ್ತೇವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಆಕ್ಷೇಪಾರ್ಹವಾದ ಯಾವುದನ್ನೂ ಸ್ವೀಕರಿಸಲು ಸಾಧ್ಯವಿಲ್ಲ. ಅಂತಹ ಮದುವೆಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದಾರೆ.

ಈ ವಿವಾದಗಳು ಭುಗಿಲೆದ್ದ ನಂತರ ತನ್ನ ಮಗಳ ಮದುವೆಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಮುಖಂಡ ಯಶಪಾಲ್ ಬೇನಮ್ ತಿಳಿಸಿದ್ದಾರೆ. “ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಹಾಗಾಗಿ ಸದ್ಯ ಮದುವೆ ಮುಂದೂಡುತ್ತಿದ್ದೇವೆ. ಅದೇ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತನ್ನ ಮಗಳು ಯಾರನ್ನು ಮದುವೆಯಾಗಬೇಕೆಂದು ನಿರ್ಧರಿಸುವ ಹಕ್ಕು ಅವಳಿಗಾಗಲಿ, ತನಗಾಗಲಿ ಇಲ್ಲದ ಪರಿಸ್ಥಿತಿ ಆ ಬಿಜೆಪಿ ಮುಖಂಡನದಾಗಿದೆ. ಇದು ಸಂವಿಧಾನಬಾಹಿರವಾದುದು. ಬೇವು ಬಿತ್ತಿ, ಮಾವು ನಿರೀಕ್ಷಿಸಲಾಗುವುದಿಲ್ಲ ಎಂಬ ಗಾದೆ ಮಾತಿನಂತೆ ಇದೊಂದು ಎಲ್ಲರಿಗೂ ದೊಡ್ಡ ಕರೆಗಂಟೆಯಾಗಿದೆ. ರಾಜಕೀಯಕ್ಕೆ ಧರ್ಮವನ್ನು ಎಳೆದು ತರಬಾರದು ಮತ್ತು ಪ್ರತಿಯೊಬ್ಬರ ಆಯ್ಕೆ ಮತ್ತು ಹಕ್ಕುಗಳನ್ನು ಗೌರವಿಸಬೇಕು. ಆಗ ಮಾತ್ರ ನಾವು ಸಹ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ಈ ಘಟನೆ ನಿರೂಪಿಸಿದೆ.

ಇದನ್ನೂ ಓದಿ; ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...