Homeಮುಖಪುಟಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಾಜಕೀಯ ಲಾಭಕ್ಕಾಗಿ ಒಂದು ಧರ್ಮದ ವಿರುದ್ಧ ದ್ವೇಷ ಭಾವನೆ ಹರಡುವುದು, ಪ್ರೊಪಗಂಡ ಮಾಡುವುದು ಕೊನೆಗೆ ತಮಗೆ ಎಂತಹ ದುಷ್ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರಾಖಂಡ ರಾಜ್ಯದ ಈ ಬಿಜೆಪಿ ಮುಖಂಡ ತಾಜಾ ಉದಾಹರಣೆಯಾಗಿ ನಮ್ಮ ಮುಂದಿದ್ದಾರೆ. ತನ್ನ ಮಗಳು ಪ್ರೀತಿಸಿದ್ದ ಹುಡುಗನೊಂದಿಗೆ ಮದುವೆ ನಿಶ್ಚಯಿಸಿದ್ದರು. ಆದರೆ ಹಿಂದುತ್ವವಾದಿಗಳು ಅತಿಯಾದ ಒತ್ತಡಕ್ಕೆ ಬಲಿಯಾಗಿ ಸ್ವಂತ ಮಗಳ ಮದುವೆಯನ್ನೇ ರದ್ದುಗೊಳಿಸಬೇಕಾದ ದುಸ್ಥಿತಿ ಅವರದಾಗಿದೆ.

ಉತ್ತರಾಖಂಡದ ಪೌರಿ ಗರ್ವಾಲ್ ನಾಗಲ್ ಪಾಲಿಕಾ (ಪುರಸಭೆ) ಅಧ್ಯಕ್ಷ, ಬಿಜೆಪಿ ಮುಖಂಡ ಯಶಪಾಲ್ ಬೇನಮ್ ಅವರ ಪುತ್ರಿ ಮೋನಿಕಾ ಎಂಬುವವರು ಲಕ್ನೋ ವಿವಿಯಲ್ಲಿ ಓದುತ್ತಿದ್ದಾಗ ರಯೀಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರನ್ನು ಪ್ರೀತಿಸಿದ್ದರು. ಇಬ್ಬರೂ ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರು. ಇದನ್ನು ಎರಡು ಕುಟುಂಬಗಳಿಗೆ ತಿಳಿಸಿ ಒಪ್ಪಿಗೆ ಪಡೆಯಲಾಗಿತ್ತು. ಮೇ 28 ರಂದು ಅವರ ಮದುವೆಗೆ ಸಕಲ ಸಿದ್ದತೆ ನಡೆಸಲಾಗಿತ್ತು. ಆದರೆ ಮದುವೆ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬಿಜೆಪಿ ಮುಖಂಡರು ಮತ್ತು ಹಿಂದುತ್ವವಾದಿಗಳು ಈ ಅಂತರ್‌ಧರ್ಮೀಯ ಮದುವೆಗೆ ಅಡ್ಡಿಪಡಿಸಿದರು. ಮದುವೆ ರದ್ದುಗೊಳಿಸುವಂತೆ ತೀವ್ರ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ್ದ ವಧುವಿನ ತಂದೆ ಬಿಜೆಪಿ ಮುಖಂಡ ಯಶಪಾಲ್ ಬೇನಮ್, “ಇದು 21ನೇ ಶತಮಾನ. ನಮ್ಮ ಮಕ್ಕಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ ಎಲ್ಲ ಹಕ್ಕುಗಳನ್ನು ಹೊಂದಿದ್ದಾರೆ. ಯಾರೂ ಅದನ್ನು ವಿರೋಧಿಸಬಾರದು” ಎಂದಿದ್ದರು. ಇಷ್ಟು ದಿನ ಬಿಜೆಪಿ ಪಕ್ಷ ಮತ್ತು ಹಿಂದುತ್ವವಾದಿಗಳು ಒಂದು ಧರ್ಮವನ್ನು ಗುರಿಯಾಗಿಸಿಕೊಂಡು ದ್ವೇಷ ಹರಡುತ್ತಿದ್ದಾಗ, ಲವ್ ಜಿಹಾದ್ ಎಂಬ ಸುಳ್ಳು ಕಥೆ ಕಟ್ಟುತ್ತಿದ್ದಾಗ ಅದನ್ನು ನೋಡಿ ಬೆಂಬಲಿಸಿದ್ದ ಅಥವಾ ಸುಮ್ಮನಿದ್ದ ಯಶಪಾಲ್ ಬೇನಮ್ ಈಗ ತನ್ನದೇ ಮಗಳ ಮದುವೆಗೆ ಬರುತ್ತಿರುವ ವಿರೋಧವನ್ನು ಟೀಕಿಸಿದ್ದಾರೆ.

‘ಈ ಘಟನೆಯನ್ನು ಧರ್ಮದ ಮೂಲಕ ನೋಡುತ್ತಿರುವವರಿಗೆ ನಾನು ಹೇಳುವುದೇನೆಂದರೆ ಇದು ಎರಡು ಕುಟುಂಬಗಳಿಗೆ ಸಂಬಂಧಿಸಿದ ಮಹತ್ವದ ವಿಷಯವಾಗಿದೆ. ಇಬ್ಬರು ಯುವಜನರ ಭವಿಷ್ಯ ಇದರಲ್ಲಿದೆ ಮತ್ತು ಈ ಪ್ರಕರಣದಲ್ಲಿ ನಮಗೆ ಧರ್ಮವು ಮುಖ್ಯವಲ್ಲ. ಆದರೆ ಈ ಮದುವೆ ಹಿಂದೂ ಸಂಪ್ರದಾಯದಂತೆ ನಡೆಯಲಿದೆ’ ಎಂದು ಬೇನಮ್ ಹೇಳಿದ್ದರು. ಆದರೂ ಸಹ ಹಿಂದುತ್ವವಾದಿಗಳು ಮುಸ್ಲಿಂ ಯುವಕನೊಂದಿಗೆ ಅವರ ಮಗಳ ಮದುವೆ ನಡೆಯಬಾರದೆಂದು ಆಗ್ರಹಿಸಿದ್ದರು.

ಬಿಜೆಪಿ ಸದಸ್ಯ ಮತ್ತು ರಾಜ್ಯ ಸರ್ಕಾರ ನಿರ್ವಹಿಸುವ ಗೋಸಂರಕ್ಷಣಾ ಆಯೋಗದ ಅಧ್ಯಕ್ಷರಾದ ಧರ್ಮವೀರ್ ಗುಸೇನ್ ಎಂಬುವವರು ಮಾತನಾಡಿ, “ನಾವು ಈಗಲೂ ಉತ್ತರಾಖಂಡದಲ್ಲಿ ಚಿಕ್ಕ ಧೋತಿ (ಕೆಳಭಾಗದ ಬ್ರಾಹ್ಮಣ) ಮತ್ತು ಉದ್ದ ಧೋತಿ (ಮೇಲುಭಾಗದ ಬ್ರಾಹ್ಮಣ) ಸಂಪ್ರದಾಯವನ್ನು ಅನುಸರಿಸುತ್ತೇವೆ. ಇದರರ್ಥ ನಾವು ನಮ್ಮ ಸಂಪ್ರದಾಯಗಳನ್ನು ನಂಬುತ್ತೇವೆ ಮತ್ತು ನಮ್ಮ ಸಂಸ್ಕೃತಿಯಲ್ಲಿ ಆಕ್ಷೇಪಾರ್ಹವಾದ ಯಾವುದನ್ನೂ ಸ್ವೀಕರಿಸಲು ಸಾಧ್ಯವಿಲ್ಲ. ಅಂತಹ ಮದುವೆಗಳನ್ನು ನಾವು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದಿದ್ದಾರೆ.

ವಿಎಚ್‌ಪಿ, ಭೈರವ ಸೇನೆ ಮತ್ತು ಬಜರಂಗದಳ ಕಾರ್ಯಕರ್ತರು ಮದುವೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಇಂತಹ ಮದುವೆಯನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ಜಿಲ್ಲಾ ವಿಎಚ್‌ಪಿ ಕಾರ್ಯಾಧ್ಯಕ್ಷ ದೀಪಕ್ ಗೌಡ ಹೇಳಿದ್ದಾರೆ.

ಈ ವಿವಾದಗಳು ಭುಗಿಲೆದ್ದ ನಂತರ ತನ್ನ ಮಗಳ ಮದುವೆಯನ್ನು ರದ್ದುಗೊಳಿಸುವುದಾಗಿ ಬಿಜೆಪಿ ಮುಖಂಡ ಯಶಪಾಲ್ ಬೇನಮ್ ತಿಳಿಸಿದ್ದಾರೆ. “ಸಾರ್ವಜನಿಕ ಪ್ರತಿನಿಧಿಯಾದ ನನಗೆ ನನ್ನ ಮಗಳ ಮದುವೆ ಪೊಲೀಸ್ ಮತ್ತು ಆಡಳಿತದ ರಕ್ಷಣೆಯಲ್ಲಿ ನಡೆಯುವುದು ಇಷ್ಟವಿಲ್ಲ. ನಾನು ಸಾರ್ವಜನಿಕ ಭಾವನೆಗಳನ್ನು ಗೌರವಿಸುತ್ತೇನೆ. ಹಾಗಾಗಿ ಸದ್ಯ ಮದುವೆ ಮುಂದೂಡುತ್ತಿದ್ದೇವೆ. ಅದೇ ವ್ಯಕ್ತಿಯೊಂದಿಗೆ ತಮ್ಮ ಮಗಳ ಮದುವೆಯ ಬಗ್ಗೆ ಕುಟುಂಬದವರು, ಹಿತೈಷಿಗಳು ಮತ್ತು ವರನ ಕಡೆಯವರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ತನ್ನ ಮಗಳು ಯಾರನ್ನು ಮದುವೆಯಾಗಬೇಕೆಂದು ನಿರ್ಧರಿಸುವ ಹಕ್ಕು ಅವಳಿಗಾಗಲಿ, ತನಗಾಗಲಿ ಇಲ್ಲದ ಪರಿಸ್ಥಿತಿ ಆ ಬಿಜೆಪಿ ಮುಖಂಡನದಾಗಿದೆ. ಇದು ಸಂವಿಧಾನಬಾಹಿರವಾದುದು. ಬೇವು ಬಿತ್ತಿ, ಮಾವು ನಿರೀಕ್ಷಿಸಲಾಗುವುದಿಲ್ಲ ಎಂಬ ಗಾದೆ ಮಾತಿನಂತೆ ಇದೊಂದು ಎಲ್ಲರಿಗೂ ದೊಡ್ಡ ಕರೆಗಂಟೆಯಾಗಿದೆ. ರಾಜಕೀಯಕ್ಕೆ ಧರ್ಮವನ್ನು ಎಳೆದು ತರಬಾರದು ಮತ್ತು ಪ್ರತಿಯೊಬ್ಬರ ಆಯ್ಕೆ ಮತ್ತು ಹಕ್ಕುಗಳನ್ನು ಗೌರವಿಸಬೇಕು. ಆಗ ಮಾತ್ರ ನಾವು ಸಹ ಸ್ವತಂತ್ರವಾಗಿ ಬದುಕಲು ಸಾಧ್ಯ ಎಂಬುದನ್ನು ಈ ಘಟನೆ ನಿರೂಪಿಸಿದೆ.

ಇದನ್ನೂ ಓದಿ; ಕರಾವಳಿ: ಬೆಚ್ಚಿ ಬೀಳಿಸಿದ ಬುದ್ಧಿವಂತರ ಸೀಮೆಯ “ತಿರುಚು” ಫಲಿತಾಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...