Homeಮುಖಪುಟಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

ಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

- Advertisement -
- Advertisement -

ಸತತ ಸೋಲುಗಳ ಅಥವಾ ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳ ಗೆಲುವು ಹೊಸ ಹುಮ್ಮಸ್ಸು ನೀಡಿದೆ. ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಯಾಗಿದ್ದು, ಕಾಂಗ್ರೆಸ್ ಹೊಸ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕರ್ನಾಟಕದಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್‌ನ ಮುಂದಿನ ಹಾದಿ ಅಷ್ಟು ಸುಲಭವಿಲ್ಲ. 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಯಲ್ಲಿಯೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಅದರ ಪಕ್ಷಿನೋಟ ಇಲ್ಲಿದೆ.

2023 ನವೆಂಬರ್ – ಡಿಸೆಂಬರ್: ಮಧ್ಯಪ್ರದೇಶ ಚುನಾವಣೆ

2023ರ ನವೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದಿತ್ತು. ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 116 ಸ್ಥಾನಗಳ ಬಹುಮತ ಸಾಧಿಸಿ ಕಮಲ್ ನಾಥ್ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆದರೆ ಒಂದೇ ವರ್ಷದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಬಣ ಆಪರೇಷನ್ ಕಮಲಕ್ಕೆ ಬಲಿಯಾದ ಪರಿಣಾಮ ಅಧಿಕಾರ ಕಳೆದುಕೊಳ್ಳಬೇಕಾಯಿತು. ಶಾಸಕರನ್ನು ಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿದ್ದಾರೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ಹೊಂದಿದೆ.

2023 ನವೆಂಬರ್ – ಡಿಸೆಂಬರ್: ಚತ್ತೀಸ್‌ಘಡ ಚುನಾವಣೆ

90 ವಿಧಾನಸಭಾ ಕ್ಷೇತ್ರಗಳ ಚತ್ತೀಸ್‌ಘಡದಲ್ಲಿ ಇದೇ ನವೆಂಬರ್-ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 68 ಸ್ಥಾನಗಳಲ್ಲಿ ಗೆದ್ದು ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ, ಭೂಪೇಶ್ ಭಾಘೇಲ್ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಚತ್ತೀಸ್‌ಘಡ ಸ್ವತಂತ್ರ ರಾಜ್ಯವಾದ ನಂತರ ಬಿಜೆಪಿ ಮೂರು ಬಾರಿ ಸತತವಾಗಿ ಗೆದ್ದುಬಂದಿತ್ತು. ಬಿಜೆಪಿ ಓಟಕ್ಕೆ ಬ್ರೇಕ್ ಹಾಕಿದ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ವರ್ಷವೂ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ವ ಪ್ರಯತ್ನ ನಡೆಸಲಿದೆ.

2023 ನವೆಂಬರ್ – ಡಿಸೆಂಬರ್: ರಾಜಸ್ಥಾನ ಚುನಾವಣೆ

200 ವಿಧಾನಸಭಾ ಕ್ಷೇತ್ರಗಳಿರುವ ರಾಜಸ್ಥಾನದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಫೀನಿಕ್ಸ್‌ನಂತೆ ಎದ್ದುಬಂದ ಕಾಂಗ್ರೆಸ್ ಬರೋಬ್ಬರಿ 100 ಸ್ಥಾನಗಳನ್ನು ಗೆಲ್ಲುವ ಮೂಲಕ, ಬಿಎಸ್‌ಪಿ, ಪಕ್ಷೇತರರನ್ನು ಪಕ್ಷಕ್ಕೆ ಸೆಳೆದುಕೊಂಡು ಸರಳ ಬಹುಮತ ಸಾಧಿಸಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದರೆ, ಸಚಿನ್ ಪೈಲಟ್ ಅವರ ಮಗ್ಗುಲ ಮುಳ್ಳಾಗಿ ಕಾಡುತ್ತಿದ್ದಾರೆ. ತಾನು ಸಿಎಂ ಆಗಬೇಕೆಂದು ಹಠ ಹಿಡಿದಿದ್ದ ಸಚಿನ್ ಪೈಲಟ್ ಬಣ ಕಟ್ಟಿಕೊಂಡು ಬ್ಲಾಕ್‌ ಮೇಲ್ ಮಾಡುತ್ತಲೇ ಇದ್ದಾರೆ. ಸದ್ಯ ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿರುವ ಅವರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಜನ ಸಂಘರ್ಷ್ ಯಾತ್ರೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಆಡಳಿತ ವಿರೋಧಿ ಅಲೆ ಕೂಡ ಬೀಸುತ್ತಿದೆ. ಹಾಗಾಗಿ ಈ ಬಾರಿ ರಾಜಸ್ಥಾನ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಕಷ್ಟಕರವಾಗಿದೆ. ಆದರೂ ಪ್ರಯತ್ನ ಮುಂದುವರೆಸಿದೆ.

2023 ನವೆಂಬರ್ – ಡಿಸೆಂಬರ್: ತೆಲಂಗಾಣ ಚುನಾವಣೆ

ಆಂಧ್ರ ಪ್ರದೇಶ ರಾಜ್ಯದಿಂದ 2014ರಿಂದ ಬೇರ್ಪಟ್ಟಿರುವ ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ. ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದ್ದು 2014ರಲ್ಲಿ 63 ಸ್ಥಾನ ಗೆದ್ದಿದ್ದ ಕೆ.ಚಂದ್ರಶೇಖರ್‌ ರಾವ್‌ರವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು 2018ರಲ್ಲಿಯೂ ಸಹ 88 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. ರಾಷ್ಟ್ರಮಟ್ಟಕ್ಕೆ ಪಕ್ಷ ವಿಸ್ತರಿಸಿರುವ ಕೆಸಿಆರ್ ಪಕ್ಷದ ಹೆಸರನ್ನು ಟಿಆರ್‌ಎಸ್ ಬದಲಿಗೆ ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಈಗ ನವೆಂಬರ್ ಡಿಸೆಂಬರ್‌ನಲ್ಲಿ ರಾಜ್ಯದ ಮೂರನೇ ಚುನಾವಣೆ ನಡೆಯಲಿದೆ. ಅಲ್ಲಿ ಬಿಜೆಪಿ ಪಕ್ಷ ವೇಗವಾಗಿ ಬೆಳಯುತ್ತಿದ್ದು, ಇತ್ತೀಚಿಗೆ ನಾಲ್ಕು ಜನ ಟಿಆರ್‌ಎಸ್ ಶಾಸಕರನ್ನು ಕೊಳ್ಳಲು ಹೋಗಿ ಸಿಕ್ಕಿಬಿದ್ದಿತ್ತು. ಕಾಂಗ್ರೆಸ್ ಪಕ್ಷ ಕೂಡ ಅಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ.

2023 ನವೆಂಬರ್ – ಡಿಸೆಂಬರ್: ಮಿಜೋರಾಂ ಚುನಾವಣೆ

ಈ ನಾಲ್ಕು ರಾಜ್ಯಗಳಲ್ಲದೇ 40 ವಿಧಾನಸಭಾ ಕ್ಷೇತ್ರಗಳ ಪುಟ್ಟ ರಾಜ್ಯ ಮಿಜೋರಾಂನಲ್ಲಿಯೂ ನವೆಂಬರ್ – ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಅಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ಅದೇ ರೀತಿ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿಯೂ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರಭಾವ ಬೀರುವ ಮೂಲಕ 2024ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳಲು ಯತ್ನಿಸುತ್ತಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...