Homeಕರ್ನಾಟಕಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

ಬೆಂಗಳೂರಿನಲ್ಲಿ ಭಾರೀ ಮಳೆ: ಕೆಆರ್‌ ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಸಿಲುಕಿ ಯುವತಿ ಸಾವು

- Advertisement -
- Advertisement -

ಬೆಂಗಳೂರಿನಲ್ಲಿ ಇಂದು (ಭಾನುವಾರ) ಮಧಾಹ್ನ ಸುರಿದ ಭಾರೀ ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಪ್ರವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

ನಗರದಲ್ಲಿ ಮಧಾಹ್ನ 3 ಗಂಟೆ ಸುಮಾರಿಗೆ ಸುರಿದ ಆಲಿಕಲ್ಲು ಮಳೆಯಿಂದ ರಸ್ತೆ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಕೆಆರ್‌ ವೃತ್ತದ ಬಳಿ ಇರುವ ಅಂಡರ್‌ಪಾಸ್‌ (ಕೆಳಸೇತುವೆ) ಸಂಪೂರ್ಣ ನೀರು ತುಂಬಿತ್ತು. ಆ ಮೂಲಕ ತೆರಳಿದ ಕಾರು ಮಳೆಗೆ ಮುಳುಗಡೆಯಾಗಿದ್ದು, ಆ ಕಾರಿನಲ್ಲಿದ್ದ ಕುಟುಂಬಸ್ಥರು ಸಿಲುಕಿಕೊಂಡಿರು. ಕೂಡಲೇ ಅಲ್ಲಿದ್ದ ಆಟೋ ಚಾಲಕರು ಗಮನಿಸಿ ರಕ್ಷಣೆಗೆ ಮುಂದಾಗಿದ್ದು, ಆ ಕಾರಿನಲ್ಲಿದ್ದ ಆರು ಜನರ ಪೈಕಿ ಒಬ್ಬಳು ಯುವತಿ ಸಾವಿಗೀಡಾಗಿದ್ದಾಳೆ.

ಮೃತ ಯುವತಿ ಭಾನುರೇಖಾ (22) ಎಂದು ಗುರುತಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ 6 ಜನರ ಕುಟುಂಬ ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದರು ಎಂದು ಮೂಲಗಳು ತಿಳಿಸಿವೆ.

ಯುವತಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಕೆಯನ್ನು ಸಮೀಪದ ಸೆಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ತ್ವರಿತವಾಗಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಿಲ್ಲ ಎಂಬ ಆರೋಪವನ್ನು ಪೋಷಕರು ಹಾಗೂ ಸ್ಥಳೀಯ ಪ್ರತ್ಯಕ್ಷದರ್ಶಿಗಳು ಮಾಡಿದ್ದಾರೆ. ಈ ಬಗ್ಗೆ ಆಸ್ಪತ್ರೆಯಲ್ಲಿ ಗಲಾಟೆ ಮಾಡಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ”ಮಳೆಯಿಂದ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ” ಎಂದು ತಿಳಿಸಿದ್ದಾರೆ.

”ನಾವು ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇವೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ ಕೆಲಸ ಮಾಡುತ್ತೇವೆ. ಆಸ್ಪತ್ರೆಯಿಂದ ನಿರ್ಲಕ್ಷ್ಯ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ. ಆದರೆ ರೋಗಿ ಆಸ್ಪತ್ರೆಗೆ ಬರುವಷ್ಟೊತ್ತಿಗೆ ಮೃತಪಟ್ಟಿದ್ದರು ಅಂತ ವೈದ್ಯರು ಹೇಳುತ್ತಿದ್ದಾರೆ. ಏನೇ ಆಗಿದ್ದರೂ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಕೆಆರ್‌ ವೃತ್ತದ ಅಂಡರ್‌ ಪಾಸ್‌ನಲ್ಲಿ ಸಾಕಷ್ಟು ನೀರು ತುಂಬಿ ಸಿಲಿಕಿದ್ದ ವಾಹನಗಳನ್ನು ಅಗ್ನಿ ಶಾಮಕ ಸಿಬ್ಬಂದಿ ಹೊರತೆಗಿದಿದ್ದಾರೆ. ಸದ್ಯ ನೀರನ್ನು ಸಹ ಮೋಟರ್‌ ಪಂಪ್‌ ಬಳಸಿ ಹೊರ ಹಾಕಲಾಗುತ್ತಿದೆ. ಸದ್ಯ ಅಂಡರ್‌ಪಾಸ್‌ ಬಳಸದಂತೆ ಸಂಚಾರಿ ಪೊಲೀಸರ್‌ ಸೂಚನೆ ನೀಡಿದ್ದಾರೆ.

ಈ ಬಗ್ಗೆ  ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿ ಬಿಬಿ ಎಂಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ”ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ರಭಸ ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ” ಎಂದು ಕಿಡಿಕಾರಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ?” ಎಂದು ಪ್ರಶ್ನಿಸಿದ್ದಾರೆ.

”ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು” ಎಂದಿದ್ದಾರೆ.

”ಬಿಬಿಎಂಪಿ ಅಧಿಕಾರಿಗಳು ಕೂಡಲೇ ನಗರದ ಉದ್ದಗಲಕ್ಕೂ ಎಲ್ಲಾ ಅಂಡರ್ ಪಾಸ್ ಗಳನ್ನು ವಿಸ್ತೃತವಾಗಿ ಪರಿಶೀಲಿಸಿ, ಕಸಕಡ್ಡಿ ವಿಲೇವಾರಿ ಮಾಡಿಸಿ ಮಳೆನೀರು ಸರಾಗವಾಗಿ ಹರಿದುಹೋಗುವಂತೆ ಮಾಡಬೇಕು. ಇನ್ನೊಂದು ಪ್ರಾಣನಷ್ಟವೂ ಆಗುವುದಕ್ಕೆ ಅವಕಾಶ ನೀಡಬಾರದು” ಎಚ್ಚರಿಸಿದ್ದಾರೆ.

ಮೃತ ನತದೃಷ್ಟ ಯುವತಿ ಕುಟುಂಬಕ್ಕೆ ಪರಿಹಾರ ನೀಡಿರುವುದು ಸ್ವಾಗತಾರ್ಹ. ಆದರೆ, ಇಂತಹ ದುರಂತಗಳು ಮರುಕಳಿಸದಂತೆ ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರ ಶಾಶ್ವತ ಪರಿಹಾರ ರೂಪಿಸಬೇಕು. ಅಂಡರ್ ಪಾಸ್, ರಸ್ತೆ, ಚರಂಡಿ, ಒಳಚರಂಡಿಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎನ್ನುವುದು ನನ್ನ ಆಗ್ರಹ” ಎಂದು ಟ್ವೀಟ್ ಎಚ್‌ಡಿಕೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...