Homeಮುಖಪುಟಲೋಕಸಭಾ ಚುನಾವಣೆಗೆ ತಯಾರಿ: ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಅಖಿಲೇಶ್ ಯಾದವ್

ಲೋಕಸಭಾ ಚುನಾವಣೆಗೆ ತಯಾರಿ: ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಅಖಿಲೇಶ್ ಯಾದವ್

- Advertisement -
- Advertisement -

ದೇಶದಲ್ಲಿಯೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು (80) ಹೊಂದಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ಚಟುವಟಿಕೆಗಳು ಆರಂಭವಾಗಿವೆ. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ಇಲ್ಲಿ ಪರಾಕ್ರಮ ಮೆರೆದಿದೆ. ಈ ಹಿಂದೆ ಇಲ್ಲಿ ಪ್ರಬಲವಾಗಿದ್ದ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್ ಕುಸಿದಿವೆ. 2024ರ ಚುನಾವಣೆಯಲ್ಲಿ ಮತ್ತೆ ತಮ್ಮ ಅಸ್ತಿತ್ವ ಸಾರಲು ಮುಂದಾಗಿವೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ತಯಾರಿ ಆರಂಭಿಸಿದ್ದಾರೆ. ಸದ್ಯಕ್ಕೆ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿರುವ ಅವರು ಮುಂದಿನ ವರ್ಷದ ಸಂಸತ್ ಚುನಾವಣೆಯಲ್ಲಿ ತಮ್ಮ ಕುಟುಂಬದ ಭದ್ರನೆಲೆಯಾದ ಮತ್ತು ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಕನೌಜ್ ಸಮಾಜವಾದಿಗಳ ನೆಲೆ. ಈ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ (1967) ಸಮಾಜವಾದಿ ಹೋರಾಟಗಾರ ರಾಮಮನೋಹರ ಲೋಹಿಯಾರವರು ಸ್ಪರ್ಧಿಸಿ ಗೆಲುವು ಕಂಡಿದ್ದರು. ಅಖಿಲೇಶ್ ಯಾದವರ್‌ರವರು ಲೋಹಿಯಾರವರ ಅನುಯಾಯಿಯಾಗಿದ್ದಾರೆ. ಹಾಗಾಗಿ ಪಕ್ಷ ನಿರ್ಧರಿಸಿದರೆ ಅಲ್ಲಿಂದಲೇ ಸ್ಪರ್ಧಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.

1999ರಲ್ಲಿ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್‌ರವರು ಕನೌಜ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2000 ನೇ ಇಸವಿಯಲ್ಲಿ ಅವರು ಸಂಭಾಲ್‌ಗೆ ಹೋಗಿ ತಮ್ಮ ಪುತ್ರ ಅಖಿಲೇಶ್‌ ಯಾದವ್ ಕನೌಜ್‌ನಿಂದ ಸ್ಪರ್ಧಿಸಲು ಅನುವು ಮಾಡಿಕೊಟ್ಟಿದ್ದರು. ಮೊದಲ ಯತ್ನದಲ್ಲಿಯೇ ಅಖಿಲೇಶ್ ಯಾದವ್ ಅಲ್ಲಿ ಜಯ ಗಳಿಸಿದ್ದರು. ಆನಂತರ 2004 ಮತ್ತು 2008ರಲ್ಲಿಯೂ ಗೆದ್ದು ಬಂದರು. 2014ರಲ್ಲಿ ಅವರ ಪತ್ನಿ ಡಿಂಪಲ್ ಯಾದವ್ ಅಲ್ಲಿಂದ ಸ್ಪರ್ಧಿಸಿ ಜಯ ಗಳಿಸಿದರು. 2019ರ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅಜಂಘರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆದರೆ 2019ರಲ್ಲಿ ಡಿಂಪಲ್ ಯಾದವ್ ಕನೌಜ್‌ನಲ್ಲಿ ಬಿಜೆಪಿಯ ಸುಬ್ರಾತ್ ಪಾಠಕ್ ಎದುರು ಸೋಲು ಕಂಡರು. ಆನಂತರ ಮುಲಾಯಂ ಸಿಂಗ್ ಯಾದವ್‌ ನಿಧನದ ನಂತರ ತೆರವಾದ ಮೈನ್‌ಪುರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

2022ರಲ್ಲಿ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕಾರಣ ಅಜಂಘರ್ ಕ್ಷೇತ್ರದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಸಹೋದರ ಸಂಬಂಧಿ ಧರ್ಮೇಂದ್ರ ಯಾದವ್ ಸ್ಪರ್ಧಿಸಿ ಸೋಲು ಕಂಡಿದ್ದಾರೆ.

ಕನೌಜ್ ಕ್ಷೇತ್ರದಲ್ಲಿ ಮುಸ್ಲಿಮರು, ದಲಿತರು ಮತ್ತು ಯಾದವರು ಪ್ರಾಬಲ್ಯ ಹೊಂದಿದ್ದಾರೆ. ಮೂರು ಲಕ್ಷ ಮುಸ್ಲಿಂ ಮತದಾರರಿದ್ದರೆ, ದಲಿತ ಮತದಾರರು ಸುಮಾರು 2.8 ಲಕ್ಷ ಮತ್ತು ಯಾದವರು 2.5 ಲಕ್ಷದಷ್ಟಿದ್ದಾರೆ. ಕಳೆದ ಬಾರಿ ಯಾದವ ಮತ್ತು ದಲಿತ ಮತದಾರರು ತಮ್ಮ ನಿಷ್ಠೆಯನ್ನು ಬಿಜೆಪಿಗೆ ಬದಲಾಯಿಸಿದ ಪರಿಣಾಮ ಸಮಾಜವಾದಿ ಪಕ್ಷ ಸೋಲಬೇಕಾಯಿತು.

ಅಖಿಲೇಶ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕನೌಜ್‌ನಿಂದ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಅದಕ್ಕಾಗಿ ಸಿದ್ಧತೆ ಆರಂಭಿಸಿದ್ದೇವೆ. ಜೂನ್ 1 ರಿಂದ ಪಕ್ಷವು ಬೂತ್ ಸಮಿತಿಗಳ ಪುನರ್ ರಚನೆಯನ್ನು ಪ್ರಾರಂಭಿಸುತ್ತದೆ. ಜಿಲ್ಲಾ ಸಮಿತಿಯನ್ನು ಸಹ ರಚಿಸಲಾಗುವುದು ಎಂದು ಸಮಾಜವಾದಿ ಪಕ್ಷದ ಕನೌಜ್ ಜಿಲ್ಲಾ ಘಟಕದ ಅಧ್ಯಕ್ಷ ಕಲೀಂ ಖಾನ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಸಮಾಜವಾದಿ ಪಕ್ಷ ಉತ್ತಮ ಸಾಧನೆ ಮಾಡಿಲ್ಲ. 5 ಮುನಿಸಿಪಲ್‌ಗಳಲ್ಲಿ ಒಂದರಲ್ಲಿ ಮಾತ್ರ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ಹಾಗಾಗಿ ಅಖಿಲೇಶ್ ಯಾದವ್‌ರವರ ಸ್ಪರ್ಧೆಯಿಂದ ಪಕ್ಷಕ್ಕೆ ಬಲ ಬರುತ್ತದೆ ಎಂದು ಸ್ಥಳೀಯ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳ ಒಗ್ಗಟ್ಟು ಯತ್ನ: ಖರ್ಗೆ, ರಾಹುಲ್ ಭೇಟಿಯಾಗಲಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...