Homeಮುಖಪುಟಲೋಕಸಭಾ ಚುನಾವಣೆಗೆ ತಯಾರಿ: ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಅಖಿಲೇಶ್ ಯಾದವ್

ಲೋಕಸಭಾ ಚುನಾವಣೆಗೆ ತಯಾರಿ: ಕನೌಜ್ ಕ್ಷೇತ್ರದಿಂದ ಕಣಕ್ಕಿಳಿಯಲಿರುವ ಅಖಿಲೇಶ್ ಯಾದವ್

- Advertisement -
- Advertisement -

ದೇಶದಲ್ಲಿಯೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು (80) ಹೊಂದಿರುವ ಉತ್ತರ ಪ್ರದೇಶದಲ್ಲಿ ಚುನಾವಣಾ ಚಟುವಟಿಕೆಗಳು ಆರಂಭವಾಗಿವೆ. ಕಳೆದ ಎರಡು ಚುನಾವಣೆಗಳಲ್ಲಿ ಬಿಜೆಪಿ ಇಲ್ಲಿ ಪರಾಕ್ರಮ ಮೆರೆದಿದೆ. ಈ ಹಿಂದೆ ಇಲ್ಲಿ ಪ್ರಬಲವಾಗಿದ್ದ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಕಾಂಗ್ರೆಸ್ ಕುಸಿದಿವೆ. 2024ರ ಚುನಾವಣೆಯಲ್ಲಿ ಮತ್ತೆ ತಮ್ಮ ಅಸ್ತಿತ್ವ ಸಾರಲು ಮುಂದಾಗಿವೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅಖಿಲೇಶ್ ಯಾದವ್ ತಯಾರಿ ಆರಂಭಿಸಿದ್ದಾರೆ. ಸದ್ಯಕ್ಕೆ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಸದಸ್ಯರಾಗಿರುವ ಅವರು ಮುಂದಿನ ವರ್ಷದ ಸಂಸತ್ ಚುನಾವಣೆಯಲ್ಲಿ ತಮ್ಮ ಕುಟುಂಬದ ಭದ್ರನೆಲೆಯಾದ ಮತ್ತು ಮೊದಲ ಬಾರಿಗೆ ಚುನಾವಣೆ ಎದುರಿಸಿದ್ದ ಕನೌಜ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಕನೌಜ್ ಸಮಾಜವಾದಿಗಳ ನೆಲೆ. ಈ ಕ್ಷೇತ್ರದಲ್ಲಿ ಒಂದು ಕಾಲದಲ್ಲಿ (1967) ಸಮಾಜವಾದಿ ಹೋರಾಟಗಾರ ರಾಮಮನೋಹರ ಲೋಹಿಯಾರವರು ಸ್ಪರ್ಧಿಸಿ ಗೆಲುವು ಕಂಡಿದ್ದರು. ಅಖಿಲೇಶ್ ಯಾದವರ್‌ರವರು ಲೋಹಿಯಾರವರ ಅನುಯಾಯಿಯಾಗಿದ್ದಾರೆ. ಹಾಗಾಗಿ ಪಕ್ಷ ನಿರ್ಧರಿಸಿದರೆ ಅಲ್ಲಿಂದಲೇ ಸ್ಪರ್ಧಿಸುತ್ತಾರೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಜೇಂದ್ರ ಚೌಧರಿ ತಿಳಿಸಿದ್ದಾರೆ.

1999ರಲ್ಲಿ ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್‌ರವರು ಕನೌಜ್‌ನಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2000 ನೇ ಇಸವಿಯಲ್ಲಿ ಅವರು ಸಂಭಾಲ್‌ಗೆ ಹೋಗಿ ತಮ್ಮ ಪುತ್ರ ಅಖಿಲೇಶ್‌ ಯಾದವ್ ಕನೌಜ್‌ನಿಂದ ಸ್ಪರ್ಧಿಸಲು ಅನುವು ಮಾಡಿಕೊಟ್ಟಿದ್ದರು. ಮೊದಲ ಯತ್ನದಲ್ಲಿಯೇ ಅಖಿಲೇಶ್ ಯಾದವ್ ಅಲ್ಲಿ ಜಯ ಗಳಿಸಿದ್ದರು. ಆನಂತರ 2004 ಮತ್ತು 2008ರಲ್ಲಿಯೂ ಗೆದ್ದು ಬಂದರು. 2014ರಲ್ಲಿ ಅವರ ಪತ್ನಿ ಡಿಂಪಲ್ ಯಾದವ್ ಅಲ್ಲಿಂದ ಸ್ಪರ್ಧಿಸಿ ಜಯ ಗಳಿಸಿದರು. 2019ರ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅಜಂಘರ್ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆದರೆ 2019ರಲ್ಲಿ ಡಿಂಪಲ್ ಯಾದವ್ ಕನೌಜ್‌ನಲ್ಲಿ ಬಿಜೆಪಿಯ ಸುಬ್ರಾತ್ ಪಾಠಕ್ ಎದುರು ಸೋಲು ಕಂಡರು. ಆನಂತರ ಮುಲಾಯಂ ಸಿಂಗ್ ಯಾದವ್‌ ನಿಧನದ ನಂತರ ತೆರವಾದ ಮೈನ್‌ಪುರಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

2022ರಲ್ಲಿ ಅಖಿಲೇಶ್ ಯಾದವ್ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕಾರಣ ಅಜಂಘರ್ ಕ್ಷೇತ್ರದ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅವರ ಸಹೋದರ ಸಂಬಂಧಿ ಧರ್ಮೇಂದ್ರ ಯಾದವ್ ಸ್ಪರ್ಧಿಸಿ ಸೋಲು ಕಂಡಿದ್ದಾರೆ.

ಕನೌಜ್ ಕ್ಷೇತ್ರದಲ್ಲಿ ಮುಸ್ಲಿಮರು, ದಲಿತರು ಮತ್ತು ಯಾದವರು ಪ್ರಾಬಲ್ಯ ಹೊಂದಿದ್ದಾರೆ. ಮೂರು ಲಕ್ಷ ಮುಸ್ಲಿಂ ಮತದಾರರಿದ್ದರೆ, ದಲಿತ ಮತದಾರರು ಸುಮಾರು 2.8 ಲಕ್ಷ ಮತ್ತು ಯಾದವರು 2.5 ಲಕ್ಷದಷ್ಟಿದ್ದಾರೆ. ಕಳೆದ ಬಾರಿ ಯಾದವ ಮತ್ತು ದಲಿತ ಮತದಾರರು ತಮ್ಮ ನಿಷ್ಠೆಯನ್ನು ಬಿಜೆಪಿಗೆ ಬದಲಾಯಿಸಿದ ಪರಿಣಾಮ ಸಮಾಜವಾದಿ ಪಕ್ಷ ಸೋಲಬೇಕಾಯಿತು.

ಅಖಿಲೇಶ್ ಯಾದವ್ ಅವರು 2024 ರ ಲೋಕಸಭೆ ಚುನಾವಣೆಯಲ್ಲಿ ಕನೌಜ್‌ನಿಂದ ಸ್ಪರ್ಧಿಸುವುದಾಗಿ ಈಗಾಗಲೇ ಹೇಳಿದ್ದಾರೆ. ಅದಕ್ಕಾಗಿ ಸಿದ್ಧತೆ ಆರಂಭಿಸಿದ್ದೇವೆ. ಜೂನ್ 1 ರಿಂದ ಪಕ್ಷವು ಬೂತ್ ಸಮಿತಿಗಳ ಪುನರ್ ರಚನೆಯನ್ನು ಪ್ರಾರಂಭಿಸುತ್ತದೆ. ಜಿಲ್ಲಾ ಸಮಿತಿಯನ್ನು ಸಹ ರಚಿಸಲಾಗುವುದು ಎಂದು ಸಮಾಜವಾದಿ ಪಕ್ಷದ ಕನೌಜ್ ಜಿಲ್ಲಾ ಘಟಕದ ಅಧ್ಯಕ್ಷ ಕಲೀಂ ಖಾನ್ ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಸಮಾಜವಾದಿ ಪಕ್ಷ ಉತ್ತಮ ಸಾಧನೆ ಮಾಡಿಲ್ಲ. 5 ಮುನಿಸಿಪಲ್‌ಗಳಲ್ಲಿ ಒಂದರಲ್ಲಿ ಮಾತ್ರ ಅಧಿಕಾರ ಹಿಡಿಯಲು ಸಾಧ್ಯವಾಗಿದೆ. ಹಾಗಾಗಿ ಅಖಿಲೇಶ್ ಯಾದವ್‌ರವರ ಸ್ಪರ್ಧೆಯಿಂದ ಪಕ್ಷಕ್ಕೆ ಬಲ ಬರುತ್ತದೆ ಎಂದು ಸ್ಥಳೀಯ ಕಾರ್ಯಕರ್ತರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳ ಒಗ್ಗಟ್ಟು ಯತ್ನ: ಖರ್ಗೆ, ರಾಹುಲ್ ಭೇಟಿಯಾಗಲಿರುವ ನಿತೀಶ್ ಕುಮಾರ್, ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...