Homeಕರ್ನಾಟಕಕಾಂಗ್ರೆಸ್‌ನ 6ನೇ ಗ್ಯಾರೆಂಟಿ- 'PSI, ಬಿಟ್‌ಕಾಯಿನ್ ಹಗರಣ'ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

ಕಾಂಗ್ರೆಸ್‌ನ 6ನೇ ಗ್ಯಾರೆಂಟಿ- ‘PSI, ಬಿಟ್‌ಕಾಯಿನ್ ಹಗರಣ’ಗಳಿಗೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿಗಳ ಘೋಷಣೆಯಿಂದ ಭರ್ಜರಿ ಗೆಲುವು ದಾಖಲಿಸಿದೆ. ”ಐದು ಗ್ಯಾರೆಂಟಿಗಳು ಪ್ರಮುಖವಾಗಿದದ್ದು, ಈಗ ಸರ್ಕಾರ ರಚನೆಯ ಬಳಿಕ ಪಿಎಸ್‌ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ” ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ”ಬಿಜೆಪಿ ಸರ್ಕಾರದ ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ವೇಳೆ ಐದು ಗ್ಯಾರೆಂಟಿಗಳಿ ಶರತ್ತು ವಿಧಿಸಿರುವ ಬಗ್ಗೆಮಾಧ್ಯಮದವರು  ಪ್ರಶ್ನೆ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ”ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ?” ಎಂದು ಪ್ರಶ್ನಿಸಿದ್ದಾರೆ.

”ಕೇಂದ್ರ ಸರ್ಕಾರದ ಯೋಜನೆಗಳಿರಲಿ ಅಥವಾ ರಾಜ್ಯ ಸರ್ಕಾರದ ಯೋಜನೆಗಳಿರಲಿ ಷರತ್ತುಗಳು ಅನ್ವಯಿಸಲಿವೆ. ಬಡವರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ, ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಯಾಬಿನೆಟಟ್‌ನಲ್ಲಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿಕೃತ ಆದೇಶ ಆಗಬಹುದು” ಎಂದು ಹೇಳಿದ್ದಾರೆ.

”ಚಿತ್ತಾಪುರದಿಂದ ಮೂರು ಬಾರಿ ಗೆದ್ದಿದ್ದೇನೆ. ನನ್ನನ್ನು ಸೋಲಿಸಲು ಅನೇಕ ರೀತಿಯಲ್ಲಿ ಬಿಜೆಪಿ ಪ್ರಯತ್ನ ಮಾಡಿತ್ತು. ಆದರೆ, ನನ್ನ ಕ್ಷೇತ್ರದ ಜನ ನನ್ನ ಕೈ ಬಿಡಲಿಲ್ಲ. ನನ್ನ ವಿರುದ್ಧ ಪ್ರಚಾರಕ್ಕೆಂದು ಬಿಜೆಪಿಯ ಘಟಾನುಘಟಿ ನಾಯಕರು ಬಂದಿದ್ದರು. ಆದರೂ ನನಗೇ ಗೆಲುವಾಗಿದ್ದು ಈಗ ಸಚಿವ ಸ್ಥಾನ ನೀಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ನಾಯಕರನ್ನು ಅಭಿನಂದಿಸುತ್ತೇನೆ” ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.

ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಪ್ರಮುಖ ಕಾರಣವಾಗಿವೆ. ಕಳೆದ ಅವಧಿಯ ಬಿಜೆಪಿ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನರ ಮುಂದೆ ಇಟ್ಟು ಸರ್ಕಾರದ ಅವ್ಯವಹಾರವನ್ನು ಹೊರಗೆಳಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಅವಕಾಶವನ್ನ ಮಾಡಿಕೊಡಬಾರದು ಎಂದು ಕಾಂಗೆಸ್‌ ಸರ್ಕಾರವು ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಸೋಲಿಗೆ ಈ ಐದು ಅಂಶಗಳು ಪ್ರಮುಖ ಕಾರಣ

ಪಿಎಸ್‌ಐ ಹಗರಣ

ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಿಎಸ್‌ಐ ಹಗರಣ ಬೆಳಕಿಗೆ ಬಂದಿತು. 2021ರ ಅಕ್ಟೋಬರ್‌ನಲ್ಲಿ ನಡೆದ 545 ಪಿಎಸ್‌ಐ ಹುದ್ದೆ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಅಕ್ರಮವೆಸಗಲಾಗಿತ್ತು. ಕೇವಲ 21 ಪ್ರಶ್ನೆಗಳಿಗೆ ಉತ್ತರ ಬರೆದವರಿಗೆ 100 ಅಂಕ ನೀಡಲಾಗಿತ್ತು. ಖಾಲಿ ಬಿಟ್ಟ ಓಎಂಆರ್ ಶೀಟ್‌ಅನ್ನು ಪರೀಕ್ಷೆ ಮುಗಿದ ಬಳಿಕ ತುಂಬಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಗರಣದ ಕಿಂಗ್ ಪಿನ್ ದಿವ್ಯಾ ಹಾಗರಗಿ ಕಲಬುರಗಿಯ ಬಿಜೆಪಿ ನಾಯಕಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಅವರು ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಗೌಡರೊಂದಿಗೆ ಇರುವ ಫೋಟೊಗಳು ವೈರಲ್ ಆಗಿದ್ದವು. ಆದರೆ ಇದರ ತನಿಖೆಯು ತಾರ್ಕಿಕ ಅಂತ್ಯ ಕಂಡಿಲ್ಲ.

ಬಿಟ್ ಕಾಯಿನ್ ಹಗರಣ

ಬೊಮ್ಮಾಯಿಯವರು ಮುಖ್ಯಮಂತ್ರಿ ಆದ ಮೂರೇ ತಿಂಗಳಿನಲ್ಲಿ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಯಾಗಿ ಅವರ ಹೆಸರು ಕೇಳಿಬಂದಿತ್ತು. ‘ಕಾಂಗ್ರೆಸ್‌ನವರು ಇದರಲ್ಲಿ ಇದ್ದಾರೆ ಎಚ್ಚರಿಕೆ’ ಎಂಬ ಹೇಳಿಕೆಗಳನ್ನು ಅವರು ನೀಡಿದರೇ ಹೊರತು ನಿಷ್ಪಕ್ಷಪಾತ ತನಿಖೆಗೆ ಮುಂದಾಗಲಿಲ್ಲ. ಆನಂತರ ಶ್ರೀಕಿ ಎಂಬ ಹ್ಯಾಕರ್‌ನನ್ನು ಬಂಧಿಸಲಾಯಿತು. ಡ್ರಗ್ಸ್ ಜಾಲ ಎಂದು ಕರೆಯಲಾಯಿತಾದರೂ, ಬಿಜೆಪಿಯವರೆ ಈ ಬಿಟ್ ಕಾಯಿನ್ ಹಗರಣ ಮಾಹಿತಿಯನ್ನು ಹೊರಹಾಕಿದ್ದರು. ಆದರೆ ಅದರ ತನಿಖೆ ಮಾತ್ರ ಸರಿಯಾದ ರೀತಿಯಲ್ಲಿ ನಡೆಸಲಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...