Homeಮುಖಪುಟಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

- Advertisement -
- Advertisement -

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅತಿ ಹೆಚ್ಚು ಸಾಲ ಮಾಡಿ ‘ಬಿಟ್ಟಿ ಭಾಗ್ಯಗಳನ್ನು’ ನೀಡಿದ್ದಾರೆ ಎಂಬ ಫೇಕ್‌ ನ್ಯೂಸ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಎಂಬ ಬರಹವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ “ಎಸ್ ಎಂ ಕೃಷ್ಣ ಅವಧಿಯಲ್ಲಿ ₹3,590 ಕೋಟಿ, ಧರ್ಮಸಿಂಗ್ ₹15,635 ಕೋಟಿ, ಎಚ್ ಡಿ ಕುಮಾರಸ್ವಾಮಿ ₹3,545 ಕೋಟಿ, ಬಿ ಎಸ್‌ ಯಡಿಯೂರಪ್ಪ ₹25,653 ಕೋಟಿ, ಸದಾನಂದಗೌಡ ₹9,464 ಕೋಟಿ, ಜಗದೀಶ್‌ ಶೆಟ್ಟರ್ ₹13,464 ಕೋಟಿ, ಸಿದ್ದರಾಮಯ್ಯ ₹2,42,000 ಕೋಟಿ ಸಾಲ ಮಾಡಿದ್ದರು. ಎಸ್ಎಂ ಕೃಷ್ಣ ಅವಧಿಯಿಂದ ಶೆಟ್ಟರ್‌ವರೆಗೆ ಮಾಡಿದ ಒಟ್ಟು ಸಾಲ ₹71,331 ಕೋಟಿ, ಸಿದ್ದರಾಮಯ್ಯ ಅವರು ಮಾಡಿದ ‌ಸಾಲ ₹2,42,000 ಕೋಟಿ. ಹೀಗಿರುವಾಗ ‘ಬಿಟ್ಟಿ ಭಾಗ್ಯ’ ಕೊಡದೆ ಇನ್ನೇನು” ಎಂಬ ಬರಹವನ್ನು ಫೇಸ್‌ಬುಕ್‌ನಲ್ಲಿ ಶಿಕ್ಷಕ ಶಾಂತಮೂರ್ತಿ ಹಂಚಿಕೊಂಡಿದ್ದರು. ಈ ಮಾಹಿತಿಯನ್ನು ವಾಟ್ಸಾಪ್‌ ಗ್ರೂಪ್‌ಗಳಿಗೂ ಶೇರ್‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ 1996 ಮತ್ತು 2021ರ ಉಲ್ಲಂಘನೆ ಆರೋಪದಲ್ಲಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಶಿಕ್ಷಕ ಹಂಚಿಕೊಂಡಿರುವ ಪೋಸ್ಟ್ ಫೇಕ್ ನ್ಯೂಸ್ ಆಗಿದ್ದು, ಈ ಹಿಂದೆ ಸಾಕಷ್ಟು ಜನ ಅದನ್ನು ಹಂಚಿಕೊಂಡಿದ್ದರು. ಅದು ಸಂಪೂರ್ಣ ಸುಳ್ಳು ಸುದ್ದಿಯೆಂದು ನಾನುಗೌರಿ.ಕಾಂ ಸೇರಿದಂತೆ ಹಲವು ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿವೆ. ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡಾಗ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ ಇತ್ತು. ಹಾಗೆಯೇ  ಸಿದ್ದರಾಮಯ್ಯನವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ಈ ಸರಳ ತಿಳಿವಳಿಕೆ ಅಥವಾ ಕನಿಷ್ಟ ಓದು ಸಂಶೋಧನೆ ಇಲ್ಲದೆ ಆ ಶಿಕ್ಷಕ ಪೋಸ್ಟ್ ಮಾಡಿ ಶಿಕ್ಷೆಗೆ ಗುರಿಯಾಗಿದ್ದಾರೆ.

ಈ ರೀತಿಯ ಕ್ರಮಗಳಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲವೇ? ಅಮಾನತಿನಂತಹ ಕಠಿಣ ಕ್ರಮ ಬೇಕಿತ್ತೆ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯರವರು, “ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಅದನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಮಾತನಾಡುವವರಿಗೆ ಕನಿಷ್ಟ ತಿಳಿವಳಿಕೆಯಿರಬೇಕು. ಅವರು ಹೇಳುವ ವಿಚಾರಗಳಿಗೆ ತಾರ್ಕಿಕತೆ ಇದ್ದಲ್ಲಿ, ಕಾರಣಗಳಿದ್ದರೆ ಒಪ್ಪೋಣ. ಆದರೆ ಈ ಶಿಕ್ಷಕ ಪೂರ್ವಾಗ್ರಹ ಪ್ರೇರಿತವಾಗಿ ಸುಳ್ಳು ಸುದ್ದಿ ಹರಡಿದ್ದಾರೆ. ಬಿಟ್ಟಿ ಭಾಗ್ಯಗಳು ಎಂದು ಕರೆಯುವುದೇ ತಪ್ಪು. ಜನರ ದುಡ್ಡನ್ನು ಜನರಿಗೆ ಖರ್ಚು ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಪ್ರತಿಯೊಬ್ಬರು ತೆರಿಗೆ ಕಟ್ಟುತ್ತಾರೆ ಎನ್ನುವುದನ್ನು ಮರೆಯಬಾರದು. ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಟೀಕಿಸುವವರು ದೊಡ್ಡ ಬಂಡವಾಳಿಗರ ಲಕ್ಷಾಂತರ ಕೋಟಿ ತೆರಿಗೆ ಮನ್ನಾದ ಬಗ್ಗೆ ಏಕೆ ಮಾತನಾಡುವುದಿಲ್ಲ? ಬೇರೆಯವರು ಹೋಗಲಿ, ಶಿಕ್ಷಕರಿಗೆ ಈ ಕನಿಷ್ಟ ತಿಳುವಳಿಕೆ ಇರಬಾರದೇ” ಎಂದರು.

ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಶಿಕ್ಷಕ ವೀರಣ್ಣ ಮಡಿವಾಳರು ಸರ್ಕಾರಿ ಶಾಲೆ ಮುಚ್ಚುವುದರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಅವರ ಮೇಲೆಯೂ ಇದೇ ರೀತಿಯ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿತ್ತು. ಆಗ ನಾವು ಅವರ ಬೆಂಬಲಕ್ಕೆ ನಿಂತಿದ್ದೆವು. ಶಾಲೆಗಳ ಬಗ್ಗೆ ಶಿಕ್ಷಕರು ಮಾತನಾಡದೇ ಇನ್ಯಾರು ಮಾತನಾಡಬೇಕು ಎಂದಿದ್ದೇವೆ. ಆದರೆ ಈ ಪ್ರಕರಣದಲ್ಲಿ ಶಿಕ್ಷಕ ಶಾಂತಮೂರ್ತಿ ಸರ್ಕಾರದ ಮೇಲಿನ ದ್ವೇಷಕ್ಕೆ ಪರಿಶೀಲಿಸದೆ ಸುಳ್ಳು ಸುದ್ದಿ ಹರಡಿದ್ದಾರೆ. ಶಿಕ್ಷಕರಾದವರೆ ಹೀಗೆ ಮಾಡಿದರೆ ಬೇರೆಯವರ ಕಥೆಯೇನು? ವೈಜ್ಞಾನಿಕತೆ, ವೈಚಾರಿಕತೆ ಬಿತ್ತಬೇಕಾದವರು ಹೀಗೆ ಮಾಡುವುದು ಸರಿಯಲ್ಲ. ಈ ಕುರಿತು ಆ ಶಿಕ್ಷಕರಿಂದ ಸ್ಪಷ್ಟೀಕರಣ ಪಡೆಯಬೇಕು. ಉಳಿದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮುನ್ನ ಪರೀಶಿಲಿಸಬೇಕು ಎಂದರು.

ಇದನ್ನೂ ಓದಿ; ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...