Homeಮುಖಪುಟಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

- Advertisement -
- Advertisement -

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅತಿ ಹೆಚ್ಚು ಸಾಲ ಮಾಡಿ ‘ಬಿಟ್ಟಿ ಭಾಗ್ಯಗಳನ್ನು’ ನೀಡಿದ್ದಾರೆ ಎಂಬ ಫೇಕ್‌ ನ್ಯೂಸ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಎಂಬ ಬರಹವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ “ಎಸ್ ಎಂ ಕೃಷ್ಣ ಅವಧಿಯಲ್ಲಿ ₹3,590 ಕೋಟಿ, ಧರ್ಮಸಿಂಗ್ ₹15,635 ಕೋಟಿ, ಎಚ್ ಡಿ ಕುಮಾರಸ್ವಾಮಿ ₹3,545 ಕೋಟಿ, ಬಿ ಎಸ್‌ ಯಡಿಯೂರಪ್ಪ ₹25,653 ಕೋಟಿ, ಸದಾನಂದಗೌಡ ₹9,464 ಕೋಟಿ, ಜಗದೀಶ್‌ ಶೆಟ್ಟರ್ ₹13,464 ಕೋಟಿ, ಸಿದ್ದರಾಮಯ್ಯ ₹2,42,000 ಕೋಟಿ ಸಾಲ ಮಾಡಿದ್ದರು. ಎಸ್ಎಂ ಕೃಷ್ಣ ಅವಧಿಯಿಂದ ಶೆಟ್ಟರ್‌ವರೆಗೆ ಮಾಡಿದ ಒಟ್ಟು ಸಾಲ ₹71,331 ಕೋಟಿ, ಸಿದ್ದರಾಮಯ್ಯ ಅವರು ಮಾಡಿದ ‌ಸಾಲ ₹2,42,000 ಕೋಟಿ. ಹೀಗಿರುವಾಗ ‘ಬಿಟ್ಟಿ ಭಾಗ್ಯ’ ಕೊಡದೆ ಇನ್ನೇನು” ಎಂಬ ಬರಹವನ್ನು ಫೇಸ್‌ಬುಕ್‌ನಲ್ಲಿ ಶಿಕ್ಷಕ ಶಾಂತಮೂರ್ತಿ ಹಂಚಿಕೊಂಡಿದ್ದರು. ಈ ಮಾಹಿತಿಯನ್ನು ವಾಟ್ಸಾಪ್‌ ಗ್ರೂಪ್‌ಗಳಿಗೂ ಶೇರ್‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ 1996 ಮತ್ತು 2021ರ ಉಲ್ಲಂಘನೆ ಆರೋಪದಲ್ಲಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಶಿಕ್ಷಕ ಹಂಚಿಕೊಂಡಿರುವ ಪೋಸ್ಟ್ ಫೇಕ್ ನ್ಯೂಸ್ ಆಗಿದ್ದು, ಈ ಹಿಂದೆ ಸಾಕಷ್ಟು ಜನ ಅದನ್ನು ಹಂಚಿಕೊಂಡಿದ್ದರು. ಅದು ಸಂಪೂರ್ಣ ಸುಳ್ಳು ಸುದ್ದಿಯೆಂದು ನಾನುಗೌರಿ.ಕಾಂ ಸೇರಿದಂತೆ ಹಲವು ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿವೆ. ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡಾಗ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ ಇತ್ತು. ಹಾಗೆಯೇ  ಸಿದ್ದರಾಮಯ್ಯನವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ಈ ಸರಳ ತಿಳಿವಳಿಕೆ ಅಥವಾ ಕನಿಷ್ಟ ಓದು ಸಂಶೋಧನೆ ಇಲ್ಲದೆ ಆ ಶಿಕ್ಷಕ ಪೋಸ್ಟ್ ಮಾಡಿ ಶಿಕ್ಷೆಗೆ ಗುರಿಯಾಗಿದ್ದಾರೆ.

ಈ ರೀತಿಯ ಕ್ರಮಗಳಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲವೇ? ಅಮಾನತಿನಂತಹ ಕಠಿಣ ಕ್ರಮ ಬೇಕಿತ್ತೆ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯರವರು, “ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಅದನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಮಾತನಾಡುವವರಿಗೆ ಕನಿಷ್ಟ ತಿಳಿವಳಿಕೆಯಿರಬೇಕು. ಅವರು ಹೇಳುವ ವಿಚಾರಗಳಿಗೆ ತಾರ್ಕಿಕತೆ ಇದ್ದಲ್ಲಿ, ಕಾರಣಗಳಿದ್ದರೆ ಒಪ್ಪೋಣ. ಆದರೆ ಈ ಶಿಕ್ಷಕ ಪೂರ್ವಾಗ್ರಹ ಪ್ರೇರಿತವಾಗಿ ಸುಳ್ಳು ಸುದ್ದಿ ಹರಡಿದ್ದಾರೆ. ಬಿಟ್ಟಿ ಭಾಗ್ಯಗಳು ಎಂದು ಕರೆಯುವುದೇ ತಪ್ಪು. ಜನರ ದುಡ್ಡನ್ನು ಜನರಿಗೆ ಖರ್ಚು ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಪ್ರತಿಯೊಬ್ಬರು ತೆರಿಗೆ ಕಟ್ಟುತ್ತಾರೆ ಎನ್ನುವುದನ್ನು ಮರೆಯಬಾರದು. ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಟೀಕಿಸುವವರು ದೊಡ್ಡ ಬಂಡವಾಳಿಗರ ಲಕ್ಷಾಂತರ ಕೋಟಿ ತೆರಿಗೆ ಮನ್ನಾದ ಬಗ್ಗೆ ಏಕೆ ಮಾತನಾಡುವುದಿಲ್ಲ? ಬೇರೆಯವರು ಹೋಗಲಿ, ಶಿಕ್ಷಕರಿಗೆ ಈ ಕನಿಷ್ಟ ತಿಳುವಳಿಕೆ ಇರಬಾರದೇ” ಎಂದರು.

ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಶಿಕ್ಷಕ ವೀರಣ್ಣ ಮಡಿವಾಳರು ಸರ್ಕಾರಿ ಶಾಲೆ ಮುಚ್ಚುವುದರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಅವರ ಮೇಲೆಯೂ ಇದೇ ರೀತಿಯ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿತ್ತು. ಆಗ ನಾವು ಅವರ ಬೆಂಬಲಕ್ಕೆ ನಿಂತಿದ್ದೆವು. ಶಾಲೆಗಳ ಬಗ್ಗೆ ಶಿಕ್ಷಕರು ಮಾತನಾಡದೇ ಇನ್ಯಾರು ಮಾತನಾಡಬೇಕು ಎಂದಿದ್ದೇವೆ. ಆದರೆ ಈ ಪ್ರಕರಣದಲ್ಲಿ ಶಿಕ್ಷಕ ಶಾಂತಮೂರ್ತಿ ಸರ್ಕಾರದ ಮೇಲಿನ ದ್ವೇಷಕ್ಕೆ ಪರಿಶೀಲಿಸದೆ ಸುಳ್ಳು ಸುದ್ದಿ ಹರಡಿದ್ದಾರೆ. ಶಿಕ್ಷಕರಾದವರೆ ಹೀಗೆ ಮಾಡಿದರೆ ಬೇರೆಯವರ ಕಥೆಯೇನು? ವೈಜ್ಞಾನಿಕತೆ, ವೈಚಾರಿಕತೆ ಬಿತ್ತಬೇಕಾದವರು ಹೀಗೆ ಮಾಡುವುದು ಸರಿಯಲ್ಲ. ಈ ಕುರಿತು ಆ ಶಿಕ್ಷಕರಿಂದ ಸ್ಪಷ್ಟೀಕರಣ ಪಡೆಯಬೇಕು. ಉಳಿದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮುನ್ನ ಪರೀಶಿಲಿಸಬೇಕು ಎಂದರು.

ಇದನ್ನೂ ಓದಿ; ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...