Homeಮುಖಪುಟಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

ಸಿಎಂ ಸಿದ್ದರಾಮಯ್ಯನವರ ಕುರಿತು ಫೇಕ್ ನ್ಯೂಸ್ ಹಂಚಿ ಅಮಾನತ್ತಾದ ಶಿಕ್ಷಕ: ಈ ಕ್ರಮ ಸರಿಯೇ?

- Advertisement -
- Advertisement -

ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅತಿ ಹೆಚ್ಚು ಸಾಲ ಮಾಡಿ ‘ಬಿಟ್ಟಿ ಭಾಗ್ಯಗಳನ್ನು’ ನೀಡಿದ್ದಾರೆ ಎಂಬ ಫೇಕ್‌ ನ್ಯೂಸ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಹೊಸದುರ್ಗ ತಾಲೂಕಿನ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಎಂಬ ಬರಹವನ್ನು ಫೇಸ್‌ಬುಕ್‌ ಮತ್ತು ವಾಟ್ಸಾಪ್‌ಗಳಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಶಿಕ್ಷಕ ಎಂ ಜಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌ ಜಯಪ್ಪ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಸಂದರ್ಭದಲ್ಲಿ “ಎಸ್ ಎಂ ಕೃಷ್ಣ ಅವಧಿಯಲ್ಲಿ ₹3,590 ಕೋಟಿ, ಧರ್ಮಸಿಂಗ್ ₹15,635 ಕೋಟಿ, ಎಚ್ ಡಿ ಕುಮಾರಸ್ವಾಮಿ ₹3,545 ಕೋಟಿ, ಬಿ ಎಸ್‌ ಯಡಿಯೂರಪ್ಪ ₹25,653 ಕೋಟಿ, ಸದಾನಂದಗೌಡ ₹9,464 ಕೋಟಿ, ಜಗದೀಶ್‌ ಶೆಟ್ಟರ್ ₹13,464 ಕೋಟಿ, ಸಿದ್ದರಾಮಯ್ಯ ₹2,42,000 ಕೋಟಿ ಸಾಲ ಮಾಡಿದ್ದರು. ಎಸ್ಎಂ ಕೃಷ್ಣ ಅವಧಿಯಿಂದ ಶೆಟ್ಟರ್‌ವರೆಗೆ ಮಾಡಿದ ಒಟ್ಟು ಸಾಲ ₹71,331 ಕೋಟಿ, ಸಿದ್ದರಾಮಯ್ಯ ಅವರು ಮಾಡಿದ ‌ಸಾಲ ₹2,42,000 ಕೋಟಿ. ಹೀಗಿರುವಾಗ ‘ಬಿಟ್ಟಿ ಭಾಗ್ಯ’ ಕೊಡದೆ ಇನ್ನೇನು” ಎಂಬ ಬರಹವನ್ನು ಫೇಸ್‌ಬುಕ್‌ನಲ್ಲಿ ಶಿಕ್ಷಕ ಶಾಂತಮೂರ್ತಿ ಹಂಚಿಕೊಂಡಿದ್ದರು. ಈ ಮಾಹಿತಿಯನ್ನು ವಾಟ್ಸಾಪ್‌ ಗ್ರೂಪ್‌ಗಳಿಗೂ ಶೇರ್‌ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮ 1996 ಮತ್ತು 2021ರ ಉಲ್ಲಂಘನೆ ಆರೋಪದಲ್ಲಿ ಶಾಂತಮೂರ್ತಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಶಿಕ್ಷಕ ಹಂಚಿಕೊಂಡಿರುವ ಪೋಸ್ಟ್ ಫೇಕ್ ನ್ಯೂಸ್ ಆಗಿದ್ದು, ಈ ಹಿಂದೆ ಸಾಕಷ್ಟು ಜನ ಅದನ್ನು ಹಂಚಿಕೊಂಡಿದ್ದರು. ಅದು ಸಂಪೂರ್ಣ ಸುಳ್ಳು ಸುದ್ದಿಯೆಂದು ನಾನುಗೌರಿ.ಕಾಂ ಸೇರಿದಂತೆ ಹಲವು ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿವೆ. ಸಿದ್ದರಾಮಯ್ಯನವರು ಅಧಿಕಾರ ವಹಿಸಿಕೊಂಡಾಗ 2013 ನೇ ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ  1,12,666.6 ಕೋಟಿ ರೂಪಾಯಿ ಇತ್ತು. ಹಾಗೆಯೇ  ಸಿದ್ದರಾಮಯ್ಯನವರ ಅಧಿಕಾರಾವಧಿ ಪೂರ್ಣಗೊಂಡಾಗ, ಅಂದರೆ 2018ನೇ ಇಸವಿಯ ಮಾರ್ಚ್ ಕೊನೆ ವೇಳೆಗೆ 2,45,950.6 ಕೋಟಿ ರೂಪಾಯಿ. ಅಂದರೆ 2018 ರಲ್ಲಿ ಇದ್ದ ಸಾಲದ ಮೊತ್ತವನ್ನು 2013ರಲ್ಲಿ ಇದ್ದ ಒಟ್ಟು ಸಾಲದೊಂದಿದೆ ಕಳೆದಾಗ ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ರಾಜ್ಯಕ್ಕಾಗಿ ಮಾಡಿದ ಸಾಲ 1,33,284 ಕೋಟಿ ರೂಪಾಯಿಯಷ್ಟು ಆಗುತ್ತದೆ.

ಹಾಗೆ ನೋಡಿದರೆ ಸಿದ್ದರಾಮಯ್ಯನವರಿಗಿಂತ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರ ಮಾಡಿದ ಸಾಲವೇ ಅಧಿಕವಾಗಿದೆ. 2019ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ರಾಜ್ಯದ ಒಟ್ಟು ಸಾಲ 2,86,328.7 ಕೋಟಿ ರೂಪಾಯಿ ಇತ್ತು. ಈಗ 2023ರಲ್ಲಿ 5,35,156.7 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಅಲ್ಲಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಹೊಸದಾಗಿ 2,48, 828 ಕೋಟಿ ರೂಗಳ ಸಾಲ ಮಾಡಿದೆ. ಅದು ಸಿದ್ದರಾಮಯ್ಯನವರು 5 ವರ್ಷದ ಆಡಳಿತದಲ್ಲಿ ಮಾಡಿದ್ದಕ್ಕಿಂತ ಎರಡು ಪಟ್ಟು ಹೆಚ್ಚಿದೆ. ಈ ಸರಳ ತಿಳಿವಳಿಕೆ ಅಥವಾ ಕನಿಷ್ಟ ಓದು ಸಂಶೋಧನೆ ಇಲ್ಲದೆ ಆ ಶಿಕ್ಷಕ ಪೋಸ್ಟ್ ಮಾಡಿ ಶಿಕ್ಷೆಗೆ ಗುರಿಯಾಗಿದ್ದಾರೆ.

ಈ ರೀತಿಯ ಕ್ರಮಗಳಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುವುದಿಲ್ಲವೇ? ಅಮಾನತಿನಂತಹ ಕಠಿಣ ಕ್ರಮ ಬೇಕಿತ್ತೆ ಎಂಬ ಪ್ರಶ್ನೆಗಳು ಸಹ ಎದ್ದಿವೆ.

ಈ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ತಜ್ಞ ನಿರಂಜನಾರಾಧ್ಯರವರು, “ಅಭಿವ್ಯಕ್ತಿ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇದೆ. ಅದನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಮಾತನಾಡುವವರಿಗೆ ಕನಿಷ್ಟ ತಿಳಿವಳಿಕೆಯಿರಬೇಕು. ಅವರು ಹೇಳುವ ವಿಚಾರಗಳಿಗೆ ತಾರ್ಕಿಕತೆ ಇದ್ದಲ್ಲಿ, ಕಾರಣಗಳಿದ್ದರೆ ಒಪ್ಪೋಣ. ಆದರೆ ಈ ಶಿಕ್ಷಕ ಪೂರ್ವಾಗ್ರಹ ಪ್ರೇರಿತವಾಗಿ ಸುಳ್ಳು ಸುದ್ದಿ ಹರಡಿದ್ದಾರೆ. ಬಿಟ್ಟಿ ಭಾಗ್ಯಗಳು ಎಂದು ಕರೆಯುವುದೇ ತಪ್ಪು. ಜನರ ದುಡ್ಡನ್ನು ಜನರಿಗೆ ಖರ್ಚು ಮಾಡಬೇಕಿರುವುದು ಸರ್ಕಾರದ ಕರ್ತವ್ಯ. ಪ್ರತಿಯೊಬ್ಬರು ತೆರಿಗೆ ಕಟ್ಟುತ್ತಾರೆ ಎನ್ನುವುದನ್ನು ಮರೆಯಬಾರದು. ಬಡವರ ಕಲ್ಯಾಣ ಕಾರ್ಯಕ್ರಮಗಳನ್ನು ಟೀಕಿಸುವವರು ದೊಡ್ಡ ಬಂಡವಾಳಿಗರ ಲಕ್ಷಾಂತರ ಕೋಟಿ ತೆರಿಗೆ ಮನ್ನಾದ ಬಗ್ಗೆ ಏಕೆ ಮಾತನಾಡುವುದಿಲ್ಲ? ಬೇರೆಯವರು ಹೋಗಲಿ, ಶಿಕ್ಷಕರಿಗೆ ಈ ಕನಿಷ್ಟ ತಿಳುವಳಿಕೆ ಇರಬಾರದೇ” ಎಂದರು.

ಈ ಹಿಂದೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಶಿಕ್ಷಕ ವೀರಣ್ಣ ಮಡಿವಾಳರು ಸರ್ಕಾರಿ ಶಾಲೆ ಮುಚ್ಚುವುದರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಅವರ ಮೇಲೆಯೂ ಇದೇ ರೀತಿಯ ಕ್ರಮಕ್ಕೆ ಶಿಕ್ಷಣ ಇಲಾಖೆ ಮುಂದಾಗಿತ್ತು. ಆಗ ನಾವು ಅವರ ಬೆಂಬಲಕ್ಕೆ ನಿಂತಿದ್ದೆವು. ಶಾಲೆಗಳ ಬಗ್ಗೆ ಶಿಕ್ಷಕರು ಮಾತನಾಡದೇ ಇನ್ಯಾರು ಮಾತನಾಡಬೇಕು ಎಂದಿದ್ದೇವೆ. ಆದರೆ ಈ ಪ್ರಕರಣದಲ್ಲಿ ಶಿಕ್ಷಕ ಶಾಂತಮೂರ್ತಿ ಸರ್ಕಾರದ ಮೇಲಿನ ದ್ವೇಷಕ್ಕೆ ಪರಿಶೀಲಿಸದೆ ಸುಳ್ಳು ಸುದ್ದಿ ಹರಡಿದ್ದಾರೆ. ಶಿಕ್ಷಕರಾದವರೆ ಹೀಗೆ ಮಾಡಿದರೆ ಬೇರೆಯವರ ಕಥೆಯೇನು? ವೈಜ್ಞಾನಿಕತೆ, ವೈಚಾರಿಕತೆ ಬಿತ್ತಬೇಕಾದವರು ಹೀಗೆ ಮಾಡುವುದು ಸರಿಯಲ್ಲ. ಈ ಕುರಿತು ಆ ಶಿಕ್ಷಕರಿಂದ ಸ್ಪಷ್ಟೀಕರಣ ಪಡೆಯಬೇಕು. ಉಳಿದವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಮುನ್ನ ಪರೀಶಿಲಿಸಬೇಕು ಎಂದರು.

ಇದನ್ನೂ ಓದಿ; ಸಿದ್ದರಾಮಯ್ಯನವರ ಸಿಎಂ ಅವಧಿಯಲ್ಲಿ ರಾಜ್ಯದ ಸಾಲ ಅತಿ ಹೆಚ್ಚು ಎಂಬುದು ಸುಳ್ಳು; ಇಲ್ಲಿದೆ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...