Homeಮುಖಪುಟಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್...

ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

- Advertisement -
- Advertisement -

ನಮ್ಮ ಸೈನಿಕರ ಶವಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಪುನರುಚ್ಚರಿಸುವ ಮೂಲಕ ಸರ್ಕಾರದ ಮೇಲೆ ಮತ್ತೊಮ್ಮೆ ವಾಗ್ಧಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಸೋಮವಾರ ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು 2019 ರ ಲೋಕಸಭೆಯ ಚುನಾವಣೆಯು ”ನಮ್ಮ ಸೈನಿಕರ ಮೃತದೇಹಗಳ ಮೇಲೆ ನಡೆಸಲಾಯಿತು” ಎಂದು ಹೇಳಿದ್ದಾರೆ.

”ಆ ಘಟನೆ ನಡೆದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದೆ. ಆದರೆ ಅವರು ನನಗೆ ಮೌನವಾಗಿರಲು ಹೇಳಿದರು. ಆಗಲೇ ತನಿಖೆ ನಡೆಸಿದ್ದರೆ ಅಂದಿನ ಗೃಹ ಸಚಿವರು ರಾಜೀನಾಮೆ ನೀಡಬೇಕೇತ್ತು” ಎಂದರು.

”2019ರ ಲೋಕಸಭೆ ಚುನಾವಣೆಗಳು ನಮ್ಮ ಸೈನಿಕರ ಶವಗಳ ಮೇಲೆ ನಡೆಸಿದರು. ಆ ಬಗ್ಗೆ ಯಾವುದೇ ತನಿಖೆಯನ್ನು ಮಾಡಲಿಲ್ಲ. ಒಂದು ವೇಳೆ ತನಿಖೆ ನಡೆಸಿದ್ದರೆ, ಆಗಿನ ಗೃಹ ಸಚಿವ (ರಾಜನಾಥ್ ಸಿಂಗ್) ರಾಜೀನಾಮೆ ನೀಡಬೇಕಾಗಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು” ಎಂದು ಅಲ್ವಾರ್ ಜಿಲ್ಲೆಯ ಬನ್ಸೂರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಲಿಕ್ ಹೇಳಿದ್ದಾರೆ.

ಲಡಾಖ್ ಮತ್ತು ಜಮ್ಮು-ಕಾಶ್ಮೀರದ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಾಜ್ಯವನ್ನು ವಿಭಜಿಸುವ ಮೊದಲು, ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದರು, ಅಲ್ಲಿ ಅವರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

2019ರ ಫೆಬ್ರವರಿ 14, ಭಾನುವಾರ ಪುಲ್ವಾಮಾ ದಾಳಿ ನಡೆಯಿತು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಿಕರಣಕ್ಕಾಗಿ ಚಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿದ್ದರು. ಅಲ್ಲಿಂದ ಅವರು ಬಂದ ಮೇಲೆ ನನಗೆ ಕರೆ ಮಾಡಿದರು. ನಮ್ಮ ಸೈನಿಕರು ಬಲಿಯಾಗಿದ್ದಾರೆ. ನಮ್ಮ ತಪ್ಪಿನಿಂದಾಗಿ ಅವರು ಬಲಿಯಾಗುವಂತಾಯಿತು ಎಂದು ಹೇಳಿದೆ. ಆದರೆ, ಅವರು ಈ ಬಗ್ಗೆ ಮಾತನಾಡಬೇಡಿ, ಸುಮ್ಮನಿರುವಂತೆ ಸೂಚಿಸಿದರು ಎಂದು ಸತ್ಯಪಾಲ್ ಮಲಿಕ್ ಅವರು ಹೇಳಿದರು.

ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ವಿಮಾ ಯೋಜನೆಯ ಫೈಲ್‌ಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡಲಾಯಿತು ಎಂಬ ಅವರ ಹೇಳಿಕೆಯ ಬಗ್ಗೆ ಸಿಬಿಐ ಇತ್ತೀಚೆಗೆ ಮಲಿಕ್ ಅವರನ್ನು ಪ್ರಶ್ನಿಸಿದೆ.

ಇದೇ ವೇಳೆ ಮೋದಿ ಮತ್ತು ಅದಾನಿ ವಿಚಾರವನ್ನು ಪ್ರಸ್ತಾಪಿಸಿದ ಮಲೀಕ್, ”ಅದಾನಿ ಕೇವಲ ಮೂರು ವರ್ಷಗಳಲ್ಲಿ ಸಾಕಷ್ಟು ಹಣವನ್ನು ಗಳಿಸಿದ್ದಾರೆ. ಅವರು ಅಷ್ಟು ಕಡಿಮೆ ಅವಧಿಯಲ್ಲಿ ಅಷ್ಟು ಶ್ರೀಮಂತರಾಗಲು ಸಾಧ್ಯವೇ?” ಎಂದು ಅಲ್ಲಿದ್ದ ಜನರನ್ನು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...