Homeಮುಖಪುಟಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್...

ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

- Advertisement -
- Advertisement -

ನಮ್ಮ ಸೈನಿಕರ ಶವಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಪುನರುಚ್ಚರಿಸುವ ಮೂಲಕ ಸರ್ಕಾರದ ಮೇಲೆ ಮತ್ತೊಮ್ಮೆ ವಾಗ್ಧಾಳಿ ನಡೆಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಸೋಮವಾರ ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು ಮತ್ತು 2019 ರ ಲೋಕಸಭೆಯ ಚುನಾವಣೆಯು ”ನಮ್ಮ ಸೈನಿಕರ ಮೃತದೇಹಗಳ ಮೇಲೆ ನಡೆಸಲಾಯಿತು” ಎಂದು ಹೇಳಿದ್ದಾರೆ.

”ಆ ಘಟನೆ ನಡೆದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಳಿಯ ಬಗ್ಗೆ ಮಾಹಿತಿ ನೀಡಿದ್ದೆ. ಆದರೆ ಅವರು ನನಗೆ ಮೌನವಾಗಿರಲು ಹೇಳಿದರು. ಆಗಲೇ ತನಿಖೆ ನಡೆಸಿದ್ದರೆ ಅಂದಿನ ಗೃಹ ಸಚಿವರು ರಾಜೀನಾಮೆ ನೀಡಬೇಕೇತ್ತು” ಎಂದರು.

”2019ರ ಲೋಕಸಭೆ ಚುನಾವಣೆಗಳು ನಮ್ಮ ಸೈನಿಕರ ಶವಗಳ ಮೇಲೆ ನಡೆಸಿದರು. ಆ ಬಗ್ಗೆ ಯಾವುದೇ ತನಿಖೆಯನ್ನು ಮಾಡಲಿಲ್ಲ. ಒಂದು ವೇಳೆ ತನಿಖೆ ನಡೆಸಿದ್ದರೆ, ಆಗಿನ ಗೃಹ ಸಚಿವ (ರಾಜನಾಥ್ ಸಿಂಗ್) ರಾಜೀನಾಮೆ ನೀಡಬೇಕಾಗಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು” ಎಂದು ಅಲ್ವಾರ್ ಜಿಲ್ಲೆಯ ಬನ್ಸೂರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಲಿಕ್ ಹೇಳಿದ್ದಾರೆ.

ಲಡಾಖ್ ಮತ್ತು ಜಮ್ಮು-ಕಾಶ್ಮೀರದ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ರಾಜ್ಯವನ್ನು ವಿಭಜಿಸುವ ಮೊದಲು, ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದರು, ಅಲ್ಲಿ ಅವರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದರು.

ಇದನ್ನೂ ಓದಿ: ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

2019ರ ಫೆಬ್ರವರಿ 14, ಭಾನುವಾರ ಪುಲ್ವಾಮಾ ದಾಳಿ ನಡೆಯಿತು. ಆಗ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ರಿಕರಣಕ್ಕಾಗಿ ಚಿಮ್ ಕಾರ್ಬೆಟ್ ನ್ಯಾಷನಲ್ ಪಾರ್ಕ್‌ನಲ್ಲಿದ್ದರು. ಅಲ್ಲಿಂದ ಅವರು ಬಂದ ಮೇಲೆ ನನಗೆ ಕರೆ ಮಾಡಿದರು. ನಮ್ಮ ಸೈನಿಕರು ಬಲಿಯಾಗಿದ್ದಾರೆ. ನಮ್ಮ ತಪ್ಪಿನಿಂದಾಗಿ ಅವರು ಬಲಿಯಾಗುವಂತಾಯಿತು ಎಂದು ಹೇಳಿದೆ. ಆದರೆ, ಅವರು ಈ ಬಗ್ಗೆ ಮಾತನಾಡಬೇಡಿ, ಸುಮ್ಮನಿರುವಂತೆ ಸೂಚಿಸಿದರು ಎಂದು ಸತ್ಯಪಾಲ್ ಮಲಿಕ್ ಅವರು ಹೇಳಿದರು.

ಆಗಸ್ಟ್ 23, 2018 ರಿಂದ ಅಕ್ಟೋಬರ್ 30, 2019 ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ವಿಮಾ ಯೋಜನೆಯ ಫೈಲ್‌ಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ಲಂಚವಾಗಿ ನೀಡಲಾಯಿತು ಎಂಬ ಅವರ ಹೇಳಿಕೆಯ ಬಗ್ಗೆ ಸಿಬಿಐ ಇತ್ತೀಚೆಗೆ ಮಲಿಕ್ ಅವರನ್ನು ಪ್ರಶ್ನಿಸಿದೆ.

ಇದೇ ವೇಳೆ ಮೋದಿ ಮತ್ತು ಅದಾನಿ ವಿಚಾರವನ್ನು ಪ್ರಸ್ತಾಪಿಸಿದ ಮಲೀಕ್, ”ಅದಾನಿ ಕೇವಲ ಮೂರು ವರ್ಷಗಳಲ್ಲಿ ಸಾಕಷ್ಟು ಹಣವನ್ನು ಗಳಿಸಿದ್ದಾರೆ. ಅವರು ಅಷ್ಟು ಕಡಿಮೆ ಅವಧಿಯಲ್ಲಿ ಅಷ್ಟು ಶ್ರೀಮಂತರಾಗಲು ಸಾಧ್ಯವೇ?” ಎಂದು ಅಲ್ಲಿದ್ದ ಜನರನ್ನು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...