Homeಮುಖಪುಟಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಮೋದಿ ಕುರಿತಾದ ಸಾಕ್ಷ್ಯಚಿತ್ರದಿಂದ ಭಾರತದ ಪ್ರತಿಷ್ಠೆಗೆ ಧಕ್ಕೆ: ಬಿಬಿಸಿಗೆ ದೆಹಲಿ ಹೈಕೋರ್ಟ್ ಸಮನ್ಸ್

- Advertisement -
- Advertisement -

2002ರ ಗುಜರಾತ್ ಗಲಭೆ ಕುರಿತ ಎರಡು ಭಾಗಗಳ ಸಾಕ್ಷ್ಯಚಿತ್ರದಿಂದ ಭಾರತ, ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಪ್ರತಿಷ್ಠೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಬಿಬಿಸಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಜಸ್ಟಿಸ್ ಆನ್ ಟ್ರಯಲ್ ಎಂಬ ಗುಜರಾತ್ ಮೂಲದ ಸರ್ಕಾರೇತರ ಸಂಸ್ಥೆ ಈ ಪ್ರಕರಣವನ್ನು ದಾಖಲಿಸಿದೆ. ನ್ಯಾಯಮೂರ್ತಿ ಸಚಿನ್ ದತ್ತಾ ಅವರು ಸೆಪ್ಟೆಂಬರ್‌ನಲ್ಲಿ ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೀಗ ದೆಹಲಿ ಹೈಕೋರ್ಟ್‌ ಬ್ರಿಟನ್‌ನ ಬಿಬಿಸಿ ಸಂಸ್ಥೆಗೆ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಬಿಬಿಸಿಯು ‘ಭಾರತ: ಮೋದಿ ಪ್ರಶ್ನೆ’ ಎನ್ನುವ ಸಾಕ್ಷ್ಯಚಿತ್ರದ ಮೊದಲ ಭಾಗವನ್ನು ಜನವರಿ 17 ರಂದು ಬಿಡುಗಡೆ ಮಾಡಿತು. ಆಗ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಮೋದಿ ಅವರು, ಆ ಹತ್ಯಾಕಾಂಡದ ವಾತಾವರಣಕ್ಕೆ ನೇರ ಹೊಣೆಗಾರರಾಗಿದ್ದಾರೆ. 2002ರ ಗಲಭೆಗಳು ಮತ್ತು ಅವರು ಮಧ್ಯಪ್ರವೇಶಿಸದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಿದ್ದರು ಎಂದು ಆ ಸಾಕ್ಷ್ಯ ಚಿತ್ರ ಹೇಳುತ್ತದೆ.

ಈ ಗಲಭೆಯಲ್ಲಿ 1,000 ಕ್ಕೂ ಹೆಚ್ಚು ಜನರು ಮುತ್ತಪಟ್ಟರು ಅವರಲ್ಲಿ ಹೆಚ್ಚಿನವರು ಮುಸ್ಲಿಂರಾಗಿದ್ದರು.

ಪ್ರಧಾನಿ ನರೇಂದ್ರ ಮೋದಿಯವರ ಕುರಿತಾದ ಈ ಸಾಕ್ಷ್ಯಚಿತ್ರವು ಮಾನಹಾನಿಕರವಾದ ಆರೋಪವನ್ನು ಮಾಡುತ್ತದೆ. ದೇಶ ಮತ್ತು ನ್ಯಾಯಾಂಗದ ಪ್ರತಿಷ್ಠೆಯ ಮೇಲೆ ಮತ್ತು ಪ್ರಧಾನ ಮಂತ್ರಿಯ ವಿರುದ್ಧ ನಿಂದನೆಗಳನ್ನು ಮಾಡುತ್ತದೆ ಎಂದು ವಾದಿಸಲಾಗಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಕೋರ್ಟ್‌ ತಿಳಿಸಿದೆ. ಎನ್‌ಜಿಒ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಿದ್ದಾರೆ. ಎರಡು ಭಾಗಗಳಲ್ಲಿರುವ ಸಾಕ್ಷ್ಯಚಿತ್ರವು ನ್ಯಾಯಾಂಗ ಸೇರಿದಂತೆ ದೇಶವನ್ನು ದೂಷಿಸಿದೆ ಎಂದು ಅವರು ಪ್ರತಿಪಾದಿಸಿದರು.

ಇತ್ತೀಚೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಬಿಬಿಸಿ, ವಿಕಿಮೀಡಿಯಾ ಫೌಂಡೇಶನ್ ಮತ್ತು ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್‌ ನೀಡಿತ್ತು. ಆರ್‌ಎಸ್‌ಎಸ್ ಮತ್ತು ವಿಶ್ವ ಹಿಂದೂ ಪರಿಷತ್‌ಗೆ ಸಂಬಂಧಪಟ್ಟಂತೆ ಯಾವುದೇ ಸಾಕ್ಷ್ಯಚಿತ್ರ ಪ್ರಕಟಿಸದಂತೆ ತಡೆಯಬೇಕೆಂದು ಬಿಜೆಪಿ ನಾಯಕ ಬಿನಯ್ ಕುಮಾರ್ ಸಿಂಗ್ ಅವರು ಕೋರ್ಟ್‌ಗೆ ಮನವಿ ಮಾಡಿದ್ದರು. ಈ ಪ್ರಕರಣ ವಿಚಾರಣೆ ಮಾಡಿದ ಬಳಿಕ ವಿಚಾರಣಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಸಿಡ್ನಿ ಭೇಟಿ; ಗುಜರಾತ್ ಹತ್ಯಾಕಾಂಡದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಸಿದ್ಧತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಆಗ ಗಲಭೆಯನ್ನು ಹತ್ತಿಕ್ಕುವಲ್ಲಿ ಮೋದಿ ನಿರ್ವಹಿಸಿದ್ದ ಪಾತ್ರ ಅನುಮಾನಾಸ್ಪದವಾಗಿದೆ ಎಂದು ಬಿಬಿಸಿಯ ಸಾಕ್ಷ್ಯಚಿತ್ರದಲ್ಲಿ ಆರೋಪಿಸಲಾಗಿತ್ತು. ಈ ಸಾಕ್ಷ್ಯಚಿತ್ರವನ್ನು ದೇಶದಲ್ಲಿ ಪ್ರಸಾರ ಆಗದಂತೆ ಮೋದಿ ಸರ್ಕಾರ ನಿಯಂತ್ರ ಹೇರಿತ್ತು. ಮಾಹಿತಿ ತಂತ್ರಜ್ಞಾನ ನಿಯಮಗಳು, 2021ರ ಅಡಿಯಲ್ಲಿ ಲಭ್ಯವಿರುವ ತುರ್ತು ಅಧಿಕಾರವನ್ನು ಬಳಸಿ, ಅದರ ಕ್ಲಿಪ್‌ಗಳನ್ನು ಹಂಚಿಕೊಳ್ಳದಂತೆ ತಡೆಯಲು ನಿರ್ದೇಶನಗಳನ್ನು ನೀಡಿತು.

ಇದಕ್ಕೂ ಮೊದಲು ಮೇ 3 ರಂದು, ಬಿಜೆಪಿ ಸದಸ್ಯ ಬಿನಯ್ ಕುಮಾರ್ ಸಿಂಗ್ ಅವರು ಸಲ್ಲಿಸಿದ ಮಾನನಷ್ಟ ದೂರಿನ ಮೇರೆಗೆ ದೆಹಲಿ ನ್ಯಾಯಾಲಯವು BBC, ಲಾಭರಹಿತ ಸಂಸ್ಥೆ ವಿಕಿಮೀಡಿಯಾ ಮತ್ತು ಡಿಜಿಟಲ್ ಲೈಬ್ರರಿ ಇಂಟರ್ನೆಟ್ ಆರ್ಕೈವ್‌ಗೆ ಸಮನ್ಸ್ ಜಾರಿ ಮಾಡಿತ್ತು.

ವಿಶ್ವ ಹಿಂದೂ ಪರಿಷತ್ ಮತ್ತು ಮೋದಿ ವಿರುದ್ಧ ಮಾನಹಾನಿಕರ ಮತ್ತು ಆಧಾರರಹಿತ ಆರೋಪಗಳನ್ನು ಸಾಕ್ಷ್ಯಚಿತ್ರ ಒಳಗೊಂಡಿದೆ. ಹಾಗಾಗಿ ಈ ಸಾಕ್ಷ್ಯಚಿತ್ರವನ್ನು ಪ್ರಸಾರ ಮಾಡದಂತೆ ಬಿಬಿಸಿ, ವಿಕಿಪೀಡಿಯಾ ಮತ್ತು ಇಂಟರ್ನೆಟ್ ಆರ್ಕೈವ್ ಅನ್ನು ನಿರ್ಬಂಧಿಸಲು ಸಿಂಗ್ ಅವರು ನ್ಯಾಯಾಲಯದಿಂದ ನಿರ್ದೇಶನಗಳನ್ನು ಕೋರಿದರು.

ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ BBC ಬೆದರಿಕೆಗಳನ್ನು ಎದುರಿಸುತ್ತಿದೆ. ಬಿಡುಗಡೆಯಾದ ಕೇವಲ ಒಂದು ತಿಂಗಳ ನಂತರ, ಭಾರತದಲ್ಲಿರುವ ಅವರ ಕಛೇರಿಗಳ ಮೇಲೆ ಐಟಿ ದಾಳಿ ನಡೆಸಿತು. ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಸಮೀಕ್ಷೆ ಹೆಸರಿನಲ್ಲಿ ದಾಳಿ ನಡೆಸಿತು. ಭಾರತದಲ್ಲಿ ಬಿಬಿಸಿಯ ಆದಾಯವು ದೇಶದಲ್ಲಿನ ಕಾರ್ಯಾಚರಣೆಗಳ ಪ್ರಮಾಣಕ್ಕೆ ಹೊಂದಾಣಿಕೆಯಾಗಿಲ್ಲ ಎಂದು ತೆರಿಗೆ ಇಲಾಖೆ ಹೇಳಿಕೊಂಡಿದೆ.

ಕಳೆದ ತಿಂಗಳು, ಜಾರಿ ನಿರ್ದೇಶನಾಲಯವು (ಇಡಿ) ಬಿಬಿಸಿ ಇಂಡಿಯಾ ವಿರುದ್ಧ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘನೆಯ ಪ್ರಕರಣವನ್ನು ದಾಖಲಿಸಿದೆ. ಬ್ರಿಟಿಷ್ ಬ್ರಾಡ್‌ಕಾಸ್ಟರ್‌ನ ಭಾರತ ಘಟಕದ ವಿದೇಶಿ ರವಾನೆಗಳನ್ನು ಪರಿಶೀಲಿಸಿದ ನಂತರ ಕೇಂದ್ರೀಯ ಏಜೆನ್ಸಿಯು ಮಾಧ್ಯಮ ಕಂಪನಿಯನ್ನು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...