Homeಮುಖಪುಟಲೈಂಗಿಕ ಕಿರುಕುಳದ ಆರೋಪಿ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್‌ನಿಂದ ಮಹಾ ರ್ಯಾಲಿ

ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಸಿಂಗ್‌ನಿಂದ ಮಹಾ ರ್ಯಾಲಿ

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿಯ ಕೈಸರ್‌ಗಂಜ್ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಏಳು ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ. ಅವರ ವಿರುದ್ಧ ವಿರೋಧ ಪಕ್ಷಗಳು, ನಾಗರಿಕರು ಮತ್ತು ರೈತ ಸಂಘಟನೆಗಳು ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ಅವರು ಜೂನ್ 5ರಂದು ಅಯೋಧ್ಯೆಯಲ್ಲಿ ರ್ಯಾಲಿ ನಡೆಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಆದರೆ, ಅಯೋಧ್ಯೆ ಬಿಜೆಪಿ ಘಟಕವು ಈ ರ‍್ಯಾಲಿಯಿಂದ ದೂರ ಸರಿದಿದೆ.

ಬ್ರಿಜ್ ಭೂಷಣ್ ಅವರು ಅಯೋಧ್ಯೆಯ ರಾಮ್ ಕಥಾ ಪಾರ್ಕ್‌ನಲ್ಲಿ ಜನ ಚೇತನ ಮಹಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಸಾಧುಗಳು, ಕಾನೂನು ತಜ್ಞರು ಹಾಗೂ ಶಿಕ್ಷಣ ತಜ್ಞರನ್ನು ಆಹ್ವಾನಿಸಲಾಗಿದೆ. ದೆಹಲಿ ಪೊಲೀಸರು ಸಂಸದರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿರುವ ಸಮಯದಲ್ಲಿ ರ್ಯಾಲಿ ನಡೆಸಲಾಗುತ್ತಿದೆ. ಎಫ್‌ಐಆರ್ ದಾಖಲಾದಾಗಿನಿಂದ ಸಿಂಗ್ ರಾಜಕೀಯ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಆದರೆ, ಅವರು ಅಯೋಧ್ಯೆ ರ್ಯಾಲಿಗೆ ಜನರನ್ನು ಆಹ್ವಾನಿಸಲು ಕಳೆದ ವಾರದಿಂದ ಯುಪಿಯ ಅವಧ್ ಪ್ರದೇಶದ ಗೊಂಡಾ, ಅಯೋಧ್ಯೆ, ಬಹ್ರೈಚ್ ಮತ್ತು ಬಸ್ತಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ.

”ಬಿಜೆಪಿಗೂ ಈ ರ್ಯಾಲಿಗೂ ಸಂಬಂಧವಿಲ್ಲ. ಅದರ ನಾಯಕರು ನಮ್ಮನ್ನು ಕೇಳಿದರೆ ಮಾತ್ರ ನಾವು ಭಾಗವಹಿಸುತ್ತೇವೆ. ಇಲ್ಲಿಯವರೆಗೆ ನಮಗೆ ಅಂತಹ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಬಿಜೆಪಿಯ ಅಯೋಧ್ಯೆ ಜಿಲ್ಲಾಧ್ಯಕ್ಷ ಸಂಜೀವ್ ಸಿಂಗ್ ಹೇಳಿದ್ದಾರೆ.

ಈ ಬಗ್ಗೆ ಕೈಸರ್‌ಗಂಜ್ ಸಂಸದ ಸಂಜೀವ್ ಸಿಂಗ್ ಮಾತನಾಡಿ, ”ಇದು ರಾಜಕೀಯ ರ್ಯಾಲಿ ಅಲ್ಲ. ಯಾರನ್ನಾದರೂ ಮಾನಹಾನಿ ಮಾಡಲು ಕಾನೂನನ್ನು ದುರುಪಯೋಗಪಡಿಸಇಕೊಳ್ಳುವವರನ್ನು ನಾವು ಹೇಗೆ ಎದುರಿಸಬೇಕು ಎಂಬುದರ ಕುರಿತು ಸಾಧುಗಳು ಮತ್ತು ಬುದ್ಧಿಜೀವಿಗಳೊಂದಿಗೆ ಈ ಮಹಾ ರ್ಯಾಲಿಯಲ್ಲಿ ಚರ್ಚೆ ನಡೆಯಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾರ್ಕೋ ಪರೀಕ್ಷೆಗೆ ಒಳಗಾಗುತ್ತೇನೆ, ಆದರೆ ಒಂದು ಷರತ್ತು.. : ಬ್ರಿಜ್ ಭೂಷಣ್ ಶರಣ್ ಸಿಂಗ್

ಸುಳ್ಳು ಆರೋಪಗಳನ್ನು ಹೊರಿಸುವವರನ್ನು ಪ್ರಸ್ತುತ ಐಪಿಸಿ ಸೆಕ್ಷನ್ 182 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಆದರೆ ಶಿಕ್ಷೆಯು ಅಪರಾಧಕ್ಕೆ ಅನುಗುಣವಾಗಿಲ್ಲ ಎಂದು ಸಂಸದರ ಸಹವರ್ತಿ ಹೇಳಿದರು. ”ಐಪಿಸಿ ಸೆಕ್ಷನ್ 182 ರ ಅಡಿಯಲ್ಲಿ ಒದಗಿಸಲಾದ ಕ್ರಮವು ಸಾಕಾಗುವುದಿಲ್ಲ. ರ್ಯಾಲಿಯಲ್ಲಿ, ಕಾನೂನನ್ನು ತಿದ್ದುಪಡಿ ಮಾಡಲು ಮತ್ತು ಅಂತಹ ಪ್ರಕರಣಗಳಲ್ಲಿ ಶಿಕ್ಷೆಯನ್ನು ಕಠಿಣಗೊಳಿಸುವಂತೆ ಒತ್ತಾಯಿಸಲಾಗುವುದು. ಬ್ರಿಜ್ ಭೂಷಣ್ ವಿರುದ್ಧದ ಆರೋಪಗಳು ಸುಳ್ಳು ಎಂದು ಅವರು ಹೇಳಿದರು. ಈ ರ್ಯಾಲಿಗೆ ಸಾಧುಗಳ ಭ್ರಾತೃತ್ವವು ಕರೆಯನ್ನು ನೀಡಿತು ಮತ್ತು ಸಂಸದರು ಇದರ ವ್ಯವಸ್ಥೆಗಳನ್ನು ಮಾತ್ರ ಮಾಡುತ್ತಿದ್ದಾರೆ” ಎಂದು ಸಂಜೀವ್ ಸಿಂಗ್ ಹೇಳಿದ್ದಾರೆ.

ಬಿಜೆಪಿ ಇದುವರೆಗೆ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಸಂಸದನ ವಿರುದ್ಧ ಕ್ರಮಕೈಗೊಂಡಿಲ್ಲ ಮತ್ತು ಮೂಲಗಳ ಪ್ರಕಾರ ಅವರಿಗೆ ಶೋಕಾಸ್ ನೋಟಿಸ್ ಕೂಡ ನೀಡಿಲ್ಲ. ಕಳೆದ ವಾರ, ಲಕ್ನೋದಲ್ಲಿ ನಡೆದ ಬಿಜೆಪಿಯ ಅವಧ್ ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿಂಗ್ ಭಾಗವಹಿಸಿದ್ದರು.

ಕೈಸರ್‌ಗಂಜ್ ಸಂಸದ ಮತ್ತು ಅವರ ರ್ಯಾಲಿಯ ಬಗ್ಗೆ ಪಕ್ಷದ ಅನೇಕ ನಾಯಕರು ಅಸಹನೀಯರಾಗಿದ್ದಾರೆ ಎಂದು ಬಿಜೆಪಿಯ ಮೂಲಗಳು ಹೇಳಿವೆ. ಮತ್ತೊಂದೆಡೆ ಬಿಜೆಪಿ ನಾಯಕರೊಬ್ಬರು, ”2024ರ ಲೋಕಸಭೆ ಚುನಾವಣೆಗೆ ಮತ್ತೆ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ. ಆದ್ದರಿಂದ, ಈ ರ್ಯಾಲಿಯನ್ನು ನಡೆಸುವ ಮೂಲಕ ತಮಗಾದ ಹಾನಿಯನ್ನು ನಿಯಂತ್ರಣ ಮಾಡುವ ಕ್ರಮವಾಗಿದೆ. ಇದು ಜನರು ಮತ್ತು ಸಾಧು ಸಮುದಾಯದ ಬೆಂಬಲವನ್ನು ಪಡೆಯುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...