Homeಮುಖಪುಟಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು ದೇವರಾಜ...

ಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು ದೇವರಾಜ ಅರಸು

- Advertisement -
- Advertisement -

ಕರ್ನಾಟಕದ ಸಿಎಂ ಆಯ್ಕೆ ಕಗ್ಗಂಟು ಮುಗಿದಿದ್ದು ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ಈ ನಡುವೆ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಎಂಬ ಎಂ.ಬಿ ಪಾಟೀಲ್‌ರವರ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಒಂದು ವೇಳೆ ಸಿದ್ದರಾಮಯ್ಯನವರು ಈ ಬಾರಿಯೂ ಪೂರ್ಣಾವಧಿ ಸಿಎಂ ಆದಲ್ಲಿ ಹಲವಾರು ದಾಖಲೆಗಳಿಗೆ ಪಾತ್ರರಾಗಲಿದ್ದಾರೆ. ಏಕೆಂದರೆ ಇದುವರೆಗೂ ಪೂರ್ಣಾವಧಿಗೆ ಮುಖ್ಯಮಂತ್ರಿಯಾದವರು ಮೂರು ಜನ ಮಾತ್ರ. ಸಿದ್ದರಾಮಯ್ಯ ಎರಡನೇ ಬಾರಿಗೆ ಪೂರ್ಣಾವಧಿ ಮುಖ್ಯಮಂತ್ರಿಯಾದ ವಿಶಿಷ್ಟ ದಾಖಲೆ ಮಾಡಬಹುದು.

ಪೂರ್ಣಾವಧಿ ಸಿಎಂಗಳು

ಎಸ್‌ ನಿಜಲಿಂಗಪ್ಪನವರು 1962ರಿಂದ 1967ರವರೆಗೆ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದರು. ಅವರ ನಂತರ ದೇವರಾಜ ಅರಸುರವರು 1972 ರಿಂದ 1977ರವರೆಗೆ ಪೂರ್ಣಾವಧಿ ಸಿಎಂ ಆಗಿದ್ದರು. ಆದಾದ ನಂತರ 2013ರಲ್ಲಿ ಸಿಎಂ ಆದ ಸಿದ್ದರಾಮಯ್ಯನವರು 2018ರವರೆಗೂ ಪೂರ್ಣಾವಧಿ ಪೂರೈಸಿದ್ದರು.

1999ರ ಅಕ್ಟೋಬರ್​ನಲ್ಲಿ ರಾಜ್ಯದಲ್ಲಿ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿ ಅಧಿಕಾರ ಹಿಡಿದಿತ್ತು. ಆದರೆ ಇನ್ನೇನು ಪೂರ್ಣಾವಧಿ ಮುಗಿಸಲು ಕೇವಲ 5 ತಿಂಗಳು ಇದೆ ಎನ್ನುವಾಗಲೇ ಲೋಕಸಭಾ ಚುನಾವಣೆ ಎದುರಾಗಿತ್ತು. ಹೀಗಾಗಿ ವಿಧಾನಸಭೆ ಚುನಾವಣೆಯೂ ಒಟ್ಟಿಗೇ ನಡೆಯಲಿ ಎನ್ನುವ ಉದ್ದೇಶದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಹೀಗಾಗಿ ಪೂರ್ಣಾವಧಿ ಸಿಎಂ ಪಟ್ಟಿಗೆ ಅವರ ಹೆಸರು ಸೇರ್ಪಡೆಯಾಗಲಿಲ್ಲ.

ಹೆಚ್ಚು ದಿನ ಕರ್ನಾಟಕದ ಸಿಎಂ ಆದವರು 

  1. ಎಸ್. ನಿಜಲಿಂಗಪ್ಪ: 2,729 ದಿನಗಳು
  2. ದೇವರಾಜ ಅರಸು: 2,790 ದಿನಗಳು
  3. ರಾಮಕೃಷ್ಣ ಹೆಗ್ಡೆ: 1,967 ದಿನಗಳು
  4. ಸಿದ್ದರಾಮಯ್ಯ*: 1,828+++ ದಿನಗಳು

ಕಡಿದಾಳು ಮಂಜಪ್ಪನವರು ಅತಿ ಕಡಿಮೆ ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಅವರು ಕೇವಲ 73 ದಿನಗಳ ಕಾಲ ಅಧಿಕಾರದಲ್ಲಿದ್ದರು.

ವರ್ಷಗಳ ಕಾಲ ಅಧಿಕಾರ ನಡೆಸಿದ ಮುಖ್ಯಮಂತ್ರಿಗಳ ಸಂಖ್ಯೆ

1 ವರ್ಷದವರೆಗೆ ಅಧಿಕಾರದಲ್ಲಿದ್ದವರು: 09
2 ವರ್ಷದವರೆಗೆ ಅಧಿಕಾರದಲ್ಲಿದ್ದವರು: 08
3 ವರ್ಷದವರೆಗೆ ಅಧಿಕಾರದಲ್ಲಿದ್ದವರು: 06
4 ವರ್ಷದವರೆಗೆ ಅಧಿಕಾರದಲ್ಲಿದ್ದವರು: 3
5 ವರ್ಷದವರೆಗೆ ಅಧಿಕಾರದಲ್ಲಿದ್ದವರು: 3
5 ವರ್ಷ ಮೇಲ್ಪಟ್ಟು ಅಧಿಕಾರದಲ್ಲಿದ್ದವರು: 3

ಇದನ್ನೂ ಓದಿ: ಇದುವರೆಗಿನ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಜಾತಿ ಪ್ರಾತಿನಿಧ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...