Homeಮುಖಪುಟಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

ಪ್ರಧಾನಿಯ ಪದವಿ ಪ್ರಕರಣ: ಮಾನನಷ್ಟ ಮೊಕದ್ದಮೆಯಲ್ಲಿ ಕೇಜ್ರಿವಾಲ್, ಎಎಪಿ ಸಂಸದನಿಗೆ ಸಮನ್ಸ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದಂತೆ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್‌, ಎಎಪಿ ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಅವರಿಗೆ ಸ್ಥಳೀಯ ಕೋರ್ಟ್ ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

ಜೂನ್ 7ರಂದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್‌ನಲ್ಲಿ ಸೂಚಿಸಿದೆ. ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆ ಕುರಿತು ಇಬ್ಬರ ಹೇಳಿಕೆಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯವು ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲಿಸಿತ್ತು.

ಈ ಹಿಂದೆ ಮೇ 23 ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿ ಸಮನ್ಸ್‌ ನೀಡಿದ್ದರೂ ಕೂಡ ಯಾರೊಬ್ಬರೂ ಹಾಜರಾಗಿರಲಿಲ್ಲ ಎಂದು ದೂರದಾರರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು. ಆ ನಂತರ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್‌ಜೆ ಪಾಂಚಾಲ್ ಅವರ ನ್ಯಾಯಾಲಯವು ಕೇಜ್ರಿವಾಲ್ ಮತ್ತು ಸಿಂಗ್‌ಗೆ ಸಮನ್ಸ್ ನೀಡಿತು.

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಯ ವಿಚಾರವಾಗಿ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ಕೇಜ್ರಿವಾಲ್ ಅವರು “ವ್ಯಂಗ್ಯ” ಮತ್ತು “ಅವಹೇಳನಕಾರಿ” ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳಿಗಾಗಿ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯೇಶ್ ಚೋವಾಟಿಯಾ ಅವರ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ಜಾರಿ ಮಾಡಿತ್ತು.

ಇದನ್ನೂ ಓದಿ: ಮೋದಿ ಪದವಿ ವಿಚಾರ: ಮಾನಹಾನಿ ಪ್ರಕರಣದಲ್ಲಿ ಕೇಜ್ರಿವಾಲ್‌, ಸಂಜಯ್ ಸಿಂಗ್‌ಗೆ ಗುಜರಾತ್ ಕೋಟ್‌ ಸಮನ್ಸ್

ಅರವಿಂದ್ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರಿಗೆ ನ್ಯಾಯಾಲಯ ನೀಡಿರುವ ಸಮನ್ಸ್ ಇನ್ನೂ ಬಂದಿಲ್ಲ ಎಂದು ಗುಜರಾತ್‌ನ ಎಎಪಿಯ ಕಾನೂನು ಘಟಕದ ಮುಖ್ಯಸ್ಥ ಪ್ರಣವ್ ಠಕ್ಕರ್ ಸೋಮವಾರ ಹೇಳಿದ್ದಾರೆ.

ಗುಜರಾತ್‌ನ ಎಎಪಿ ಕಾನೂನು ವಿಭಾಗದ ಮುಖ್ಯಸ್ಥ ಪ್ರಣವ್ ಠಕ್ಕರ್ ಅವರು, ಕೋರ್ಟ್ ಜಾರಿಮಾಡಿದ್ದ ಸಮನ್ಸ್ ಅನ್ನು ಇಬ್ಬರೂ ಮುಖಂಡರು ಸ್ವೀಕರಿಸಬೇಕಾಗಿದೆ ಎಂದರು. ಗುಜರಾತ್ ವಿಶ್ವವಿದ್ಯಾಲಯ ಪ್ರತಿನಿಧಿಸಿದ್ದ ವಕೀಲ ಅಮಿತ್ ನಾಯರ್‌, ನೂತನ ನ್ಯಾಯಾಧೀಶರಿಗೆ ಪ್ರಕರಣದ ಹಿನ್ನೆಲೆ ಮತ್ತು ಹಿಂದೆ ಸಮನ್ಸ್ ಜಾರಿಯಾಗಿದ್ದನ್ನು ವಿವರಿಸಿದರು.

ಪ್ರಕರಣದ ಹಿನ್ನೆಲೆ

ಪ್ರಧಾನಿ ಮೋದಿ ಅವರ ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿ ವಿಶ್ವವಿದ್ಯಾಲಯದ ವಿರುದ್ಧ ವ್ಯಂಗ್ಯ, ಮಾನಹಾನಿಕರ ಹೇಳಿಕೆ ನೀಡಲಾಗಿದೆ ಎಂದು ಆರೋಪಿಸಿ ಅರವಿಂದ ಕೇಜಿವಾಲ್‌ ಮತ್ತು ಸಂಜಯ್ ಸಿಂಗ್ ವಿರುದ್ಧ ಕ್ರಿಮಿನಲ್‌ ಮಾನಹಾನಿ ಪ್ರಕರಣ ದಾಖಲಿಸಲಾಗಿತ್ತು.

ಕೇಜ್ರಿವಾಲ್ ಅವರು ಪತ್ರಿಕಾಗೋಷ್ಠಿಗಳಲ್ಲಿ ಮತ್ತು ಟ್ವಿಟರ್ ಹ್ಯಾಂಡಲ್‌ಗಳಲ್ಲಿ ಮೋದಿ ಪದವಿಯ ಬಗ್ಗೆ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು “ಮಾನಹಾನಿಕರ” ಹೇಳಿಕೆಗಳನ್ನು ನೀಡಿದ್ದರು. ವಿಶ್ವವಿದ್ಯಾನಿಲಯವನ್ನು ಗುರಿಯಾಗಿಸಿಕೊಂಡು ಅವರ ಹೇಳಿಕೆಗಳು ಮಾನಹಾನಿಕರ ಮತ್ತು ಸಾರ್ವಜನಿಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂದು ಆರೋಪಿಸಿದ್ದಾರೆ.

”ಪದವಿ ಇದ್ದರೆ ಮತ್ತು ಅದು ನಿಜವಾಗಿದ್ದರೆ, ಅದನ್ನು ಏಕೆ ನೀಡುತ್ತಿಲ್ಲ? ಅವರು ಪದವಿಯನ್ನು ನೀಡುತ್ತಿಲ್ಲ ಏಕೆಂದರೆ ಅದು ನಕಲಿಯಾಗಿರಬಹುದು.. ಮತ್ತು ಒಂದು ವೇಳೆ ಪ್ರಧಾನ ಮಂತ್ರಿಗಳು ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದರೆ, ಆನಂತರ ಗುಜರಾತ್ ವಿಶ್ವವಿದ್ಯಾಲಯವು ತನ್ನ ವಿದ್ಯಾರ್ಥಿ ದೇಶದ ಪ್ರಧಾನಿಯಾದುದನ್ನು ಆಚರಿಸಬೇಕಿತ್ತಲ್ಲವೇ? ಎಂದು ಕೇಜ್ರಿವಾಲ್‌ ಅವರ ಹೇಳಿಕೆಗಳನ್ನು ದೂರುದಾರರು ಉಲ್ಲೇಖಿಸಿದ್ದಾರೆ.

”ಅವರು ( ಗುಜರಾತ್ ವಿಶ್ವವಿದ್ಯಾಲಯ) ಪ್ರಧಾನಿಯ ನಕಲಿ ಪದವಿಯನ್ನು ಅಸಲಿ ಎಂದು ಸಾಬೀತುಪಡಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಸಿಂಗ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...