Homeಕರ್ನಾಟಕಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ...

ಸಿದ್ದರಾಮಯ್ಯರ ಕೊಲೆಗೆ ಪ್ರಚೋದನೆ ನೀಡಿದವರ ಮೇಲೆ ಕೇಸ್ ಹಾಕಲಿಲ್ಲ ಯಾಕೆ?: ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ತರಾಟೆ

- Advertisement -
- Advertisement -

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರಚೋದನೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ಲವೇ?” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು  ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೊಲೀಸ್ ಇಲಾಖೆ ನಡೆದಕೊಂಡ ರೀತಿಯನ್ನು ನೆನಪಿಸುತ್ತ ಪೊಲೀಸ್ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಅವರು ಕ್ಲಾಸ್ ತಗೆದುಕೊಂಡಿದ್ದಾರೆ. ”ನೀವು ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡುವುದಿಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ದೀರಿ ಎನ್ನುವುದು ನಮಗೆ ಗೊತ್ತಿದೆ.  ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ದರೆ ರಾಷ್ಟ್ರ ಧ್ವಜ ಹಾಕಿಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೊಲ್ಲ” ಎಂದು ಹೇಳಿದರು.

”PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ omr ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ ಎನ್ನುವುದು ಅರ್ಥವಾಗುತ್ತದೆ. ಪ್ರೆಸ್ ಕಾನ್ಫರೆನ್ಸ್ ಮಾಡಿ ಪ್ರಕರಣ ಬಯಲಿಗೆ ತಂದ ಪ್ರಿಯಾಂಕ್ ಖರ್ಗೆ ಅವರಿಗೆ ನೀವು ತೊಂದರೆ ಕೊಟ್ಟಿದ್ದೀರಿ. ಇಡೀ ದೇಶದಲ್ಲಿ ಕರ್ನಾಟಕ ಪೊಲೀಸ್ ಇಲಾಖೆಗೆ ಒಳ್ಳೆಯ ಹೆಸರಿತ್ತು. ಆ ಗೌರವ, ಘನತೆಯನ್ನ ಹಾಳು‌ ಮಾಡಿದ್ದೀರಿ. ಎಲ್ಲಿ ನೋಡಿದ್ರು ಬರೀ ಕಾಸು, ಕಾಸು, ಕಾಸು. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ಈ ಸರಕಾರದಿಂದ ಬಹುದೊಡ್ಡ ಬದಲಾವಣೆಯನ್ನು ನಿರೀಕ್ಷೆ ಮಾಡಿದ್ದಾರೆ. ಅದು ಪೊಲೀಸ್ ಇಲಾಖೆಯಿಂದಲೇ ಶುರು ಆಗಬೇಕು. ಈ ಸರಕಾರದಿಂದ ಬದಲಾವಣೆ ಸಂದೇಶ ಜನರಿಗೆ ಹೋಗಬೇಕು. ನಿಮ್ಮಿಂದ ನಮಗೆ ನಯಾಪೈಸೆ ಹಣ ಬೇಕಿಲ್ಲ. ನೀವು ಯಾರಿಗೂ ಹಣ ಕೊಡುವುದೂ ಬೇಡ. ಜನ ನರಳದಂತೆ ಉತ್ತಮವಾಗಿ ಕೆಲಸ ಮಾಡಿದರೆ ಅಷ್ಟೇ ಸಾಕು” ಎಂದು ಅಧಿಕಾರಿಕಾರಿಗಳಿಗೆ ತಿಳಿಸಿದ್ದಾರೆ.

”ಈ ಹಿಂದೆ ಪೇ ಸಿಎಂ ಅಭಿಯಾನ ಮಾಡಿದಾಗ ನನ್ನ ಮತ್ತು ಸಿದ್ದರಾಮಯ್ಯರ ಜೊತೆ ಹೇಗೆ ನಡೆದುಕೊಂಡಿದ್ದೀರಾ ಎನ್ನುವುದು ಗೊತ್ತಿದೆ. ನಮ್ಮ ಮೇಲೆ ಕೇಸ್ ಹಾಕಿದ್ದೀರಿ. ನಮ್ಮ ಕಾರ್ಯಕರ್ತರ ಮೇಲೆ ಸುಳ್ಳು, ಸುಳ್ಳು ಸಾವಿರಾರು ಕೇಸ್ ಹಾಕಿ ತೊಂದರೆ ಕೊಟ್ಟಿದ್ದೀರಿ. ನಮ್ಮನ್ನ, ಸಿದ್ದರಾಮಯ್ಯ ಅವರನ್ನೇ ಬಿಡದ ನೀವು ಇನ್ನು ಸಾಮಾನ್ಯ ಜನರನ್ನು ಬಿಡುತ್ತೀರಾ? ಆದರೆ ಬಿಜೆಪಿ ವಿರುದ್ಧ ಮಾತ್ರ ಯಾವುದೇ ಕೇಸ್ ಹಾಕಲಿಲ್ಲ. ಅವರ ಜತೆ ಶಾಮೀಲಾಗಿ ಅವರು ಹೇಳಿದಂತೆ ನಡೆದುಕೊಂಡಿದ್ದೀರಿ” ಎಂದು ಆರೋಪ ಮಾಡಿದರು.

”ಟಿಪ್ಪು ಸುಲ್ತಾನ್ ಅವರನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಕೊಲೆ ಮಾಡಲು ಕರೆ ನೀಡಿದ, ಪ್ರೇರಣೆ ನೀಡಿದವರ ವಿರುದ್ಧ ಯಾಕೆ ಕೇಸ್ ಹಾಕಲಿಲ್ಲ? ಅದು ಕ್ರೈಂ ಅಲ್ವಾ? ನೀವು ಏನೇನೂ ಮಾಡಿದ್ದೀರಾ ಎನ್ನುವ ಬಗ್ಗೆ ನಮ್ಮ ಬಳಿ ಸಾಕ್ಷಿ ಇವೆ. ನಾವು ಎಲ್ಲವನ್ನೂ ನೋಡಿದ್ದೇವೆ. ಇವೆಲ್ಲ ನಮ್ಮ ಸರ್ಕಾರದಲ್ಲಿ ನಡೆಯುವುದಿಲ್. ನೀವು ಬದಲಾಗಬೇಕು, ನಿಮ್ಮ ವರ್ತನೆ ಬದಲಾಗಬೇಕು. ಇಲ್ಲದಿದ್ದರೆ ನಿಮ್ಮನ್ನೇ ಬದಲಾವಣೆ ಮಾಡಬೇಕಾಗುತ್ತದೆ” ಎಂದು ಅಧಿಕಾರಿಗಳಿಗಳಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರಿಗೆ ತೊಂದರೆಯಾಗಬಾರದೆಂದು ಜೀರೊ ಟ್ರಾಪಿಕ್‌ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

”ನಾವು ದ್ವೇಷ ಸಾಧಿಸೋದಿಲ್ಲ, ಅದರಲ್ಲಿ ನಮಗೆ ನಂಬಿಕೆ ಇಲ್ಲ. ನೀವು ಬದಲಾಗಿ, ಹಳೆಯದು ಬಿಡಿ. ಹೊಸದಾಗಿ ಕೆಲಸ ಶುರು ಮಾಡಿ, ಜನರ ನೆಮ್ಮದಿ ಕಾಪಾಡಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ನಾವು ನಿಮ್ಮ ಜೊತೆ ಇರುತ್ತೇವೆ. ಈ ಸರ್ಕಾರದ ಮೇಲೆ ಜನ ನಂಬಿಕೆ ಇಟ್ಟಿದ್ದಾರೆ. ಅದನ್ನ ಉಳಿಸಿಕೊಳ್ಳಿ. ಈ ಸರಕಾರದಿಂದ ಬದಲಾವಣೆ ಆಗುತ್ತಿದೆ ಎಂಬ ಸಂದೇಶವನ್ನು ನಿಮ್ಮ ಕೆಲಸದ ಮೂಲಕ ಜನರಿಗೆ ಭರವಸೆ ಮೂಡಿಸಬೇಕು” ಎಂದು ಪೊಲೀಸ್ ಅಧಿಕಾರಿಗಳಿಗೆ ಡಿಕೆಶಿ ಹೇಳಿದ್ದಾರೆ.

ಡಿಸಿ, ಜಿಪಂ ಸಿಇಒಗಳಿಗೂ ಡಿಕೆಶಿ ವಾರ್ನಿಂಗ್

ಜಿಲ್ಲಾಧಿಕಾರಿಗಳು (ಡಿಸಿ) ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ (ಸಿಇಒ) ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಡಿಯೋ ಸಂವಾದ ನಡೆಸಿದರು. ನೀವು ಸರಿಯಾಗಿ ಕೆಲಸ ಮಾಡಬೇಕು ಇಲ್ಲದಿದ್ದರೆ ನಾವು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

”ಹಿಂದಿನ ಸರಕಾರದ ಅವಧಿಯಲ್ಲಿ ನಿಮ್ಮ ಕೆಲಸ ವೈಖರಿ ಸರಿ ಇರಲಿಲ್ಲ. ರಾಜ್ಯದ ಜನ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮಳೆ, ಪ್ರವಾಹದಿಂದ ಸಾಕಷ್ಟು ಬೆಳೆ ನಷ್ಟವಾಗಿದೆ. ಹಲವರು ಪ್ರಾಣವನ್ನೇ ಕಳೆದುಕೊಂಡರು. ಮನೆ ಮಠ ಇಲ್ಲದೇ ನಿರ್ಗತಿಕರಾದರು. ಆದರೆ ನಿಮ್ಮಲ್ಲಿ ಸಾಕಷ್ಟು ಾಧಿಕಾರಿಗಳು ಈ ಅನಾಹುತ ಸಂದರ್ಭದಲ್ಲಿ ಸರಿಯಾಗಿ ಸ್ಪಂದಿಸಲಿಲ್ಲ” ಎಂದು ಗರಂ ಆದರು.

”ಸರಕಾರಕ್ಕೆ ಉತ್ತಮ ಹೆಸರು ತರುವುದು, ಬಿಡುವುದು ನಿಮ್ಮ ಕೈಯಲ್ಲಿಯೇ ಇದೆ. ನೀವು ಸರಿಯಾಗಿ ಕೆಲಸ ಮಾಡಿದರೆ ಸರಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ನಮ್ಮ ಸರಕಾರ ನಿಮ್ಮಿಂದ ಉತ್ತಮ ಕೆಲಸ ಬಯಸುತ್ತದೆ. ಸರಿಯಾಗಿ ಕೆಲಸ ಮಾಡದಿದ್ದರೆ ನಾವು ಸಹಿಸುವುದಿಲ್ಲ. ನಾವು ಕಠಿಣ ಕ್ರಮ ತೆಗೆದುಕೊಳ್ಳಲು ಅವಕಾಶ ಕೊಡಬೇಡಿ. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ” ಎಂದು ಹೇಳಿದರು.

”ರೈತರಿಗೆ ಅಗತ್ಯ ವಸ್ತುಗಳು ಪೂರೈಕೆ ಆಗುವಂತೆ ನೋಡಿಕೊಳ್ಳಿ. ಸಂಬಂಧ ಪಟ್ಟ ಇಲಾಖೆಗಳಲ್ಲಿ ಶೋಷಣೆ ನಡೆಯದಂತೆ ನೋಡಿಕೊಳ್ಳಿ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಮಾರೋಪಾದಿಯಲ್ಲಿ ಕೆಲಸ ಮಾಡಿ. ಸರಕಾರಕ್ಕೆ ಉತ್ತಮ ಹೆಸರು ಬರುವಂತೆ ಕೆಲಸ ಮಾಡಬೇಕು” ಎಂದು ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...