Homeಮುಖಪುಟಜ್ಞಾನವಾಪಿ ಸಂಬಂಧಿತ ಏಳು ಮೊಕದ್ದಮೆ ಒಟ್ಟಿಗೆ ವಿಚಾರಣೆ ನಡೆಸಲಾಗುವುದು: ವಾರಣಾಸಿ ಕೋರ್ಟ್ ಆದೇಶ

ಜ್ಞಾನವಾಪಿ ಸಂಬಂಧಿತ ಏಳು ಮೊಕದ್ದಮೆ ಒಟ್ಟಿಗೆ ವಿಚಾರಣೆ ನಡೆಸಲಾಗುವುದು: ವಾರಣಾಸಿ ಕೋರ್ಟ್ ಆದೇಶ

- Advertisement -
- Advertisement -

ವಿವಿಧ ನ್ಯಾಯಾಲಯಗಳ ಮುಂದೆ ಬಾಕಿ ಇರುವ ಜ್ಞಾನವಾಪಿ ಸಂಬಂಧಿತ ಮೊಕದ್ದಮೆಗಳನ್ನು ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯಕ್ಕೆ ವರ್ಗಾಯಿಸಲು ಕೋರಿ ಸಲ್ಲಿಸಲಾದ ಏಳು ಅರ್ಜಿಗಳನ್ನು ವಾರಣಾಸಿ ನ್ಯಾಯಾಲಯವು ಮಂಗಳವಾರ ಕ್ರೋಢೀಕರಿಸಿದೆ.

ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ತಮ್ಮ ವಿಶೇಷ ಅಧಿಕಾರ ಬಳಸಿ, ಪ್ರತಿವಾದಿಗಳ ಆಕ್ಷೇಪದ ನಡುವೆಯೂ ಪ್ರಕರಣಗಳನ್ನು ಕ್ರೋಢೀಕರಿಸಿ ವಿಚಾರಣೆ ನಡೆಸಲು ಆದೇಶ ನೀಡಿದರು ಎಂದು ಜ್ಞಾನವಾಪಿ ಮತ್ತು ಆದಿ ವಿಶ್ವೇಶ್ವರ್ ಪ್ರಕರಣಗಳ ಪರ ವಿಶೇಷ ವಕೀಲ ರಾಜೇಶ್ ಮಿಶ್ರಾ ಹೇಳಿದರು.

”ಈ ಎಲ್ಲಾ ಪ್ರಕರಣಗಳು ಬೇರೆ ಬೇರೆ ನ್ಯಾಯಾಲಯಗಳಲ್ಲಿ ಬಾಕಿ ಉಳಿದರೆ ವ್ಯತಿರಿಕ್ತ ಆದೇಶಗಳು ಬರುವ ಸಾಧ್ಯತೆ ಇದೆ” ಎಂದು ಜಿಲ್ಲಾ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ”ಈ ಎಲ್ಲಾ ಪ್ರಕರಣಗಳು ಒಂದೇ ನ್ಯಾಯಾಲಯದಲ್ಲಿ ಉಳಿದಿದ್ದರೆ, ಈ ಎಲ್ಲಾ ಪ್ರಕರಣಗಳಲ್ಲಿ ಯಾವುದೇ ವ್ಯತಿರಿಕ್ತ ತೀರ್ಪು ಅಥವಾ ಆದೇಶದ ಸಾಧ್ಯತೆ ಇರುವುದಿಲ್ಲ” ಎಂದು ಮಿಶ್ರಾ ಹೇಳಿದರು.

”ಒಂದೇ ನ್ಯಾಯಾಲಯದಲ್ಲಿ ಎರಡು ಅಥವಾ ಹೆಚ್ಚಿನ ಪ್ರಕರಣಗಳು ಬಾಕಿ ಇರುವಾಗ ಮತ್ತು ನ್ಯಾಯದ ಹಿತಾಸಕ್ತಿಯಿಂದ ನ್ಯಾಯಾಲಯವು ಅಭಿಪ್ರಾಯಪಟ್ಟರೆ, ಅವುಗಳ ಜಂಟಿ ವಿಚಾರಣೆಗೆ ಆದೇಶಿಸಬಹುದು” ಎಂದು ಸಿಪಿಸಿಯ 4ಎ ಆದೇಶವನ್ನು ಉಲ್ಲೇಖಿಸಿ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಎಲ್ಲಾ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸುವುದು ನ್ಯಾಯದ ಹಿತದೃಷ್ಟಿಯಿಂದ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಜ್ಞಾನವಾಪಿ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ ಆದೇಶವನ್ನು ಮುಂದೂಡಿದ ಸುಪ್ರೀಂ

ಇಡೀ ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಸಮೀಕ್ಷೆ ಮಾಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಮುಸ್ಲಿಂ ಕಡೆಯವರು ಸೋಮವಾರ ವಾರಣಾಸಿ ಜಿಲ್ಲಾ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದರು.

ಮುಸ್ಲಿಮರ ಪರ ವಾದ ಮಂಡಿಸಿದ್ದ ವಕೀಲ ಮೊಹಮ್ಮದ್ ತೊಹಿದ್ ಖಾನ್ ಅವರು, ಎಲ್ಲಾ ಏಳು ಪ್ರಕರಣಗಳ ವಿಚಾರಣೆಯನ್ನು ವಿರೋಧಿಸಿದರು. ”ಜ್ಞಾನವಾಪಿಗೆ ಸಂಬಂಧಿಸಿದ ವಿಷಯಗಳು ಇನ್ನೂ ಒಂದು ಹಂತಕ್ಕೆ ಬಂದಿಲ್ಲ, ಅವುಗಳನ್ನು ಒಟ್ಟಿಗೆ ಆಲಿಸುವ ನಿರ್ಧಾರ ಹಿಂತೆಗೆದುಕೊಳ್ಳಬೇಕು” ಎಂದು ಪ್ರತಿಪಾದಿಸಿದರು.

‘ಈಗಿನಂತೆ ಎಲ್ಲಾ ಪ್ರಕರಣಗಳ ಸಾಕ್ಷ್ಯವನ್ನು ನ್ಯಾಯಾಲಯವು ನೋಡಬೇಕಿತ್ತು. ಸಾಕ್ಷಿ ಒಂದೇ ಆಗಿದ್ದರೆ, ಅಂತಹ ತೀರ್ಪು ನೀಡಬಹುದು’ ಎಂದು ಖಾನ್ ಹೇಳಿದರು.

ಶೃಂಗಾರ್ ಗೌರಿ-ಜ್ಞಾನವಾಪಿ ಪ್ರಕರಣದ ದಾವೆದಾರರಾದ ಲಕ್ಷ್ಮಿ ದೇವಿ, ರೇಖಾ ಪಾಠಕ್, ಸೀತಾ ಸಾಹು ಮತ್ತು ಮಂಜು ವ್ಯಾಸ್ ಏಳು ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...