Homeಮುಖಪುಟಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ:...

ಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ: ಆರೋಪ

- Advertisement -
- Advertisement -

ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಅಪಘಾತದ ಬಳಿಕ ಸಾಯಿ ವರ್ಷಿತ್ ಕಂದುಲಾ, ನಾಜಿ ಧ್ವಜವನ್ನು ಬೆನ್ನಹಿಂದಿನಿಂದ ಹೊರತಗೆದು, ಅಮೆರಿಕಾ ಅಧ್ಯಕ್ಷರನ್ನು ಕೊಲ್ಲಲು ಬಯಸಿದ್ದೇನೆ. ನಾನು ಅಡಾಲ್ಫ್ ಹಿಟ್ಲರ್‌ನನ್ನು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಾಯಿ ವರ್ಷಿತ್ ಕಂದುಲಾ ಯಾರು?

19ವರ್ಷದ ಸಾಯಿ ವರ್ಷ್ ಕಂದುಲಾ ಭಾರತೀಯ ಮೂಲದ ವ್ಯಕ್ತಿಯಾಗಿದ್ದು, ಶ್ವೇತಭವನದ ಉದ್ಯಾನವನದಲ್ಲಿ ಅಡ್ಡಲಾಗಿರುವ ಭದ್ರತಾ ತಡೆಗೋಡೆಗೆ ಉದ್ದೇಶಪೂರ್ವಕವಾಗಿ ಟ್ರಕ್‌ನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಜಿ, ಹಿಟ್ಲರ್ ಅಭಿಮಾನಿಯಾಗಿರುವ ಕಂದುಲಾ, ಅಮೆರಿಕಾ ಸರ್ಕಾರದಿಂದ “ಅಧಿಕಾರವನ್ನು ವಶಪಡಿಸಿಕೊಳ್ಳುವ” ಯೋಜನೆ ಹಾಕಿಕೊಂಡಿದ್ದೇನೆ ಎಂದು ನಾಜಿ ಧ್ವಜವನ್ನು ಸುತ್ತಲೂ ಬೀಸಿದನು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರು ಅಥವಾ ಕುಟುಂಬದ ಸದಸ್ಯರನ್ನು ಕೊಲ್ಲುವ ಅಥವಾ ಅಪಹರಿಸುವ ಅಥವಾ ಹಾನಿ ಮಾಡುವ ಬೆದರಿಕೆ ಹಾಕುವ ಆರೋಪವನ್ನು ಕುಂದುಲಾ ವಿರುದ್ಧ ಹೊರಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಿಸೌರಿಯ ನಿವಾಸಿ ಕಂದುಲಾ ಅವರು ಸೋಮವಾರ ಸಂಜೆ ವಾಷಿಂಗ್ಟನ್‌ಗೆ ತಲುಪಿದರು. ಅಲ್ಲಿ ವಿಮಾನ ನಿಲ್ದಾಣದ ಬಳಿಯಿಂದ ಟ್ರಕ್ ಅನ್ನು ಬಾಡಿಗೆಗೆ ಪಡೆದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ರಾತ್ರಿ 9.35 ರ ಸುಮಾರಿಗೆ, ಅವರು ಶ್ವೇತಭವನದ ಮುಂಭಾಗದ ಉದ್ಯಾನವನವಾದ ಲಫಯೆಟ್ಟೆ ಸ್ಕ್ವೇರ್ ಬಳಿಯ ಪಾದಚಾರಿ ಮಾರ್ಗದಲ್ಲಿ ಭದ್ರತಾ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು, ಆ ನಂತರ ಟ್ರಕ್ ಅನ್ನು ಹಿಮ್ಮುಖವಾಗಿ ಚಲಿಸಿ ತಡೆಗೋಡೆಗೆ ಪದೇ ಪದೇ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ಕುಂದುಲಾನನ್ನು ಬಂಧಿಸಿದ ನಂತರ, ಅವರು ನಾಜಿಗಳ “ಮಹಾ ಇತಿಹಾಸ” ಮತ್ತು ಅವರ “ಸರ್ವಾಧಿಕಾರಿ ಸ್ವಭಾವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರ ಆಡಳಿತಾತ್ಮಕ ಕ್ರಮ ಇಷ್ಟವಾಗಿ ನಾನು ಆನ್ಲೈನ್‌ನಲ್ಲಿ ನಾಜಿಯಾದ ಧ್ವಜ ಖರಿಸಿದ್ದೇನೆ ಎಂದು ಭದ್ರತಾ ಅಧಿಕಾರಿಗಳಿಗೆ ತಿಳಿಸಿದರು. ಹಿಟ್ಲರ್ ಪ್ರಬಲ ನಾಯಕರಾಗಿದ್ದರು, ಅಫಿಡವಿಟ್‌ನಲ್ಲಿ ಕುಂದುಲಾ ಹೇಳಿಕೊಂಡಿದ್ದಾನೆ.

ಟ್ರಕ್‌ನಲ್ಲಿ ಯಾವುದೇ ಸ್ಫೋಟಕಗಳು ಅಥವಾ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಕಂದುಲಾ ಅವರೊಂದಿಗೆ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಯು-ಹಾಲ್ ಟ್ರಕ್‌ಅನ್ನು ಬಾಡಿಗೆಗೆ ಪಡೆದಿದ್ದರ ಬಗ್ಗೆ ಕಂಪನಿ ದಾಖಲೆ ನೀಡಿದೆ.

ಅಧಿಕಾರಿಗಳು ಕಂದುಲಾ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸುವ ನಿರೀಕ್ಷೆಯಿದೆ ಮತ್ತು ಅವರು ಬುಧವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...