Homeಮುಖಪುಟಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ:...

ಅಮೆರಿಕದ ವೈಟ್​ಹೌಸ್​ ತಡೆಗೋಡೆಗೆ ಟ್ರಕ್​ ಡಿಕ್ಕಿ; ಭಾರತೀಯ ಮೂಲದ ವ್ಯಕ್ತಿಯಿಂದ ಜೋ ಬೈಡನ್ ​ಹತ್ಯೆಗೆ ಯತ್ನ: ಆರೋಪ

- Advertisement -
- Advertisement -

ಭಾರತೀಯ ಮೂಲದ ಸಾಯಿ ವರ್ಷಿತ್ ಕಂದುಲಾ ಎನ್ನುವ ವ್ಯಕ್ತಿ ಸೋಮವಾರ ಅಮೆರಿಕದ ಶ್ವೇತಭವನದ ಬಳಿ ಭದ್ರತಾ ತಡೆಗೋಡೆಗಳಿಗೆ ಟ್ರಕ್‌ನಿಂದ ಡಿಕ್ಕಿ ಹೊಡೆದಿದ್ದಾನೆ. ಆತನನ್ನು ವಾಷಿಂಗ್ಟನ್‌ನಲ್ಲಿ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಟ್ರಕ್​ನಲ್ಲಿ ಸ್ವಸ್ತಿಕ್ ಚಿಹ್ನೆಯ ಬಾವುಟವೊಂದು ಪತ್ತೆಯಾಗಿದೆ, ಎರಡು ಬಾರಿ ತಡೆಗೋಡೆಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಡೆಗೋಡೆಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ​ನನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಅಪಘಾತದ ಬಳಿಕ ಸಾಯಿ ವರ್ಷಿತ್ ಕಂದುಲಾ, ನಾಜಿ ಧ್ವಜವನ್ನು ಬೆನ್ನಹಿಂದಿನಿಂದ ಹೊರತಗೆದು, ಅಮೆರಿಕಾ ಅಧ್ಯಕ್ಷರನ್ನು ಕೊಲ್ಲಲು ಬಯಸಿದ್ದೇನೆ. ನಾನು ಅಡಾಲ್ಫ್ ಹಿಟ್ಲರ್‌ನನ್ನು ಇಷ್ಟಪಡುತ್ತೇನೆ ಎಂದು ಹೇಳಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಸಾಯಿ ವರ್ಷಿತ್ ಕಂದುಲಾ ಯಾರು?

19ವರ್ಷದ ಸಾಯಿ ವರ್ಷ್ ಕಂದುಲಾ ಭಾರತೀಯ ಮೂಲದ ವ್ಯಕ್ತಿಯಾಗಿದ್ದು, ಶ್ವೇತಭವನದ ಉದ್ಯಾನವನದಲ್ಲಿ ಅಡ್ಡಲಾಗಿರುವ ಭದ್ರತಾ ತಡೆಗೋಡೆಗೆ ಉದ್ದೇಶಪೂರ್ವಕವಾಗಿ ಟ್ರಕ್‌ನ್ನು ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಜಿ, ಹಿಟ್ಲರ್ ಅಭಿಮಾನಿಯಾಗಿರುವ ಕಂದುಲಾ, ಅಮೆರಿಕಾ ಸರ್ಕಾರದಿಂದ “ಅಧಿಕಾರವನ್ನು ವಶಪಡಿಸಿಕೊಳ್ಳುವ” ಯೋಜನೆ ಹಾಕಿಕೊಂಡಿದ್ದೇನೆ ಎಂದು ನಾಜಿ ಧ್ವಜವನ್ನು ಸುತ್ತಲೂ ಬೀಸಿದನು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರು ಅಥವಾ ಕುಟುಂಬದ ಸದಸ್ಯರನ್ನು ಕೊಲ್ಲುವ ಅಥವಾ ಅಪಹರಿಸುವ ಅಥವಾ ಹಾನಿ ಮಾಡುವ ಬೆದರಿಕೆ ಹಾಕುವ ಆರೋಪವನ್ನು ಕುಂದುಲಾ ವಿರುದ್ಧ ಹೊರಿಸಲಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಿಸೌರಿಯ ನಿವಾಸಿ ಕಂದುಲಾ ಅವರು ಸೋಮವಾರ ಸಂಜೆ ವಾಷಿಂಗ್ಟನ್‌ಗೆ ತಲುಪಿದರು. ಅಲ್ಲಿ ವಿಮಾನ ನಿಲ್ದಾಣದ ಬಳಿಯಿಂದ ಟ್ರಕ್ ಅನ್ನು ಬಾಡಿಗೆಗೆ ಪಡೆದರು ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ. ರಾತ್ರಿ 9.35 ರ ಸುಮಾರಿಗೆ, ಅವರು ಶ್ವೇತಭವನದ ಮುಂಭಾಗದ ಉದ್ಯಾನವನವಾದ ಲಫಯೆಟ್ಟೆ ಸ್ಕ್ವೇರ್ ಬಳಿಯ ಪಾದಚಾರಿ ಮಾರ್ಗದಲ್ಲಿ ಭದ್ರತಾ ತಡೆಗೋಡೆಗಳಿಗೆ ಡಿಕ್ಕಿ ಹೊಡೆದು, ಆ ನಂತರ ಟ್ರಕ್ ಅನ್ನು ಹಿಮ್ಮುಖವಾಗಿ ಚಲಿಸಿ ತಡೆಗೋಡೆಗೆ ಪದೇ ಪದೇ ಡಿಕ್ಕಿ ಹೊಡೆದಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿ: ಸೈನಿಕರ ಶವಗಳ ಮೇಲೆ 2019ರ ಚುನಾವಣೆ ನಡೆಯಿತು; ಮೋದಿ ವಿರುದ್ಧ ಸತ್ಯಪಾಲ್ ಮಲಿಕ್ ವಾಗ್ದಾಳಿ

ಕುಂದುಲಾನನ್ನು ಬಂಧಿಸಿದ ನಂತರ, ಅವರು ನಾಜಿಗಳ “ಮಹಾ ಇತಿಹಾಸ” ಮತ್ತು ಅವರ “ಸರ್ವಾಧಿಕಾರಿ ಸ್ವಭಾವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರ ಆಡಳಿತಾತ್ಮಕ ಕ್ರಮ ಇಷ್ಟವಾಗಿ ನಾನು ಆನ್ಲೈನ್‌ನಲ್ಲಿ ನಾಜಿಯಾದ ಧ್ವಜ ಖರಿಸಿದ್ದೇನೆ ಎಂದು ಭದ್ರತಾ ಅಧಿಕಾರಿಗಳಿಗೆ ತಿಳಿಸಿದರು. ಹಿಟ್ಲರ್ ಪ್ರಬಲ ನಾಯಕರಾಗಿದ್ದರು, ಅಫಿಡವಿಟ್‌ನಲ್ಲಿ ಕುಂದುಲಾ ಹೇಳಿಕೊಂಡಿದ್ದಾನೆ.

ಟ್ರಕ್‌ನಲ್ಲಿ ಯಾವುದೇ ಸ್ಫೋಟಕಗಳು ಅಥವಾ ಶಸ್ತ್ರಾಸ್ತ್ರಗಳು ಕಂಡುಬಂದಿಲ್ಲ. ಕಂದುಲಾ ಅವರೊಂದಿಗೆ ವರ್ಜೀನಿಯಾದ ಹೆರ್ಂಡನ್‌ನಲ್ಲಿ ಯು-ಹಾಲ್ ಟ್ರಕ್‌ಅನ್ನು ಬಾಡಿಗೆಗೆ ಪಡೆದಿದ್ದರ ಬಗ್ಗೆ ಕಂಪನಿ ದಾಖಲೆ ನೀಡಿದೆ.

ಅಧಿಕಾರಿಗಳು ಕಂದುಲಾ ವಿರುದ್ಧ ಹೆಚ್ಚಿನ ಆರೋಪಗಳನ್ನು ಹೊರಿಸುವ ನಿರೀಕ್ಷೆಯಿದೆ ಮತ್ತು ಅವರು ಬುಧವಾರ ಫೆಡರಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...