Homeಕರ್ನಾಟಕರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಸರ್ಕಾರದಿಂದ ಮೊದಲ ಸಿಹಿ ಸುದ್ದಿ: ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ

- Advertisement -
- Advertisement -

ರಾಜ್ಯದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವಾರದೊಳಗೆ ರಾಜ್ಯ ಸರ್ಕಾರಿ ನೌಕರರಿಗೆ ಮೊದಲ ಸಿಹಿ ಸುದ್ದಿ ನೀಡಿದೆ. ಕಳೆದ ಒಂದು ತಿಂಗಳಿನಿಂದ ರಾಜ್ಯ ನೌಕರರು ತುಟ್ಟಿ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದರು. ಇದೀಗ ಕೇಂದ್ರ ಸರ್ಕಾರದಂತೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಹಿ ಹಾಕಿದ್ದಾರೆ. ಆರ್ಥಿಕ ಇಲಾಖೆಯು ಗುರುವಾರ ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಿದೆ.

ಏಪ್ರಿಲ್ 3ರಂದು ಕೇಂದ್ರ ಸರ್ಕಾರಿ ನೌಕರರಿಗೆ ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿತ್ತು. ಕೇಂದ್ರ ಸರ್ಕಾರ ಹೆಚ್ಚಳ ಮಾಡುತ್ತಿದ್ದಂತೆಯೇ ರಾಜ್ಯ ಸರ್ಕಾರ ಕೂಡ ಹೆಚ್ಚಳ ಮಾಡುವುದು ವಾಡಿಕೆಯಾಗಿದೆ. ಹೀಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಂತೆ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ.

ಜನವರಿ 1ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ. 4ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಬೇಕೆಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ ನೂತನ ಸರ್ಕಾರವನ್ನೂ ಕೋರಿದ್ದರು. ಬುಧವಾರ ಈ ಸಂಬಂಧದ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಧನ್ಯವಾದ ತಿಳಿಸಿದ್ದಾರೆ. ಗುರುವಾರವೇ ಶೇ. 4 ಬಾಕಿ ತುಟ್ಟಿಭತ್ಯೆ ಆದೇಶವನ್ನು ದಿನಾಂಕ 01-01- 2023 ರಿಂದ ಜಾರಿಗೆ ಬರುವಂತೆ ಆರ್ಥಿಕ ಇಲಾಖೆಯು ಆದೇಶ ಹೊರಡಿಸಲಿದೆ ಎಂದು ಷಡಕ್ಷರಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

7ನೇ ವೇತನ ಆಯೋಗದ ಮಧ್ಯಂತರ ಪರಹಾರವಾಗಿ ಶೇ.17 ವೇತನ ಹೆಚ್ಚಳ ಮಾಡಿ ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಹೆಚ್ಚಳವನ್ನು ಏಪ್ರಿಲ್ ತಿಂಗಳ ವೇತನದಲ್ಲಿಯೇ ಜಾರಿಗೆ ತರಲಾಗಿದೆ.

ರಾಜ್ಯ ಸರ್ಕಾರವು ಕಳೆದ ಅಕ್ಟೋಬರ್‌ನಲ್ಲಿ ಶೇ. 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇದು 2022ರ ಜುಲೈ1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ ರೂ 1,282.72 ಕೋಟಿ ರೂ. ಭರಿಸಿತ್ತು. ಅದಕ್ಕೂ ಮೊದಲು ಏಪ್ರಿಲ್‌ನಲ್ಲಿ ಶೇ. 2.75 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿತ್ತು. ಇದು ಜನವರಿ 1 ರಿಂದ ಜಾರಿಗೆ ಬಂದಿತ್ತು. ಇದಕ್ಕಾಗಿ ಸರ್ಕಾರ 1,447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...