Homeಮುಖಪುಟಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

ಮಣಿಪುರ; ಮತ್ತೆ ಉದ್ವಿಗ್ನತೆ, ಗುಂಡಿನ ದಾಳಿಗೆ ವ್ಯಕ್ತಿ ಬಲಿ

- Advertisement -
- Advertisement -

ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಬುಧವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಬಿಷ್ಣುಪುರ್ ಜಿಲ್ಲೆಯ ತಮ್ನಾಪೋಕ್ಪಿ ತಪ್ಪಲಿನಲ್ಲಿ ವ್ಯಕ್ತಿಯೊಬ್ಬರು ಗುಂಡಿಗೆ ಬಲಿಯಾಗಿದ್ದಾರೆ.

ಬುಧವಾರ ಬೆಳಿಗ್ಗೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ವ್ಯಕ್ತಿ ಬಲಿಯಾಗಿದ್ದಾನೆ. ಗಾಯಗೊಂಡಿದ್ದ ಅವರನ್ನು ಇಂಫಾಲ್ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ.

ಹತ್ಯೆಗೀಡಾದ ವ್ಯಕ್ತಿಯನ್ನು ಚುರಾಚಂದ್‌ಪುರದ ಥೆಂಗ್ರಾ ಲೈರಾಕ್‌ನ ತೋಯಿಜಮ್ ಚಂದ್ರಮಣಿ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಮೊಯಿರಾಂಗ್‌ನ ನಿರಾಶ್ರಿತ ಶಿಬಿರದಲ್ಲಿ ತಂಗಿದ್ದರು ಎಂದು ವರದಿಯಾಗಿದೆ.

ಬಿಷ್ಣುಪುರ್ ಜಿಲ್ಲೆಯಲ್ಲೂ ಉದ್ವಿಗ್ನತೆ ಭುಗಿಲೆದ್ದಿದೆ. ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದಾಸ್ ಕೊಂತೌಜಮ್ ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ.

ಬುಧವಾರ ಸಂಜೆ ನಿಂಗ್‌ತೌಖೋಂಗ್ ಪಟ್ಟಣದಲ್ಲಿರುವ ಸಚಿವರ ನಿವಾಸಕ್ಕೆ ಗುಂಪೊಂದು ನುಗ್ಗಿತು. ಘಟನೆ ನಡೆದಾಗ ಸ್ವತಃ ಸಚಿವರಾಗಲೀ ಅವರ ಕುಟುಂಬದವರಾಗಲೀ ಮನೆಯಲ್ಲಿ ಇರಲಿಲ್ಲ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ತಿಳಿಸಿದೆ.

ಬಿಷ್ಣುಪುರ್ ಜಿಲ್ಲೆಯಲ್ಲಿ ಮತ್ತೆ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಕರ್ಫ್ಯೂವನ್ನೂ ನಾಲ್ಕು ಗಂಟೆಗಳ ಕಾಲ ಮುಂದುವರಿಸಲಾಗಿದೆ.

ಎಸ್‌ಟಿ ಮೀಸಲಾತಿ ವಿಚಾರವಾಗಿ ಮಣಿಪುರ ಹೊತ್ತಿ ಉರಿಯುತ್ತಿದೆ. ಮೇ 3 ರಂದು ಕುಕಿಗಳು ಮತ್ತು ಮೈಥೇಯಿ ನಡುವಿನ ಜನಾಂಗೀಯ ಹಿಂಸಾಚಾರ ಉಲ್ಬಣಗೊಂಡ ನಂತರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ಗೆ ಸಲಹೆ ನೀಡಲು ಮಣಿಪುರಕ್ಕೆ ಕಳುಹಿಸಲಾದ ಮಾಜಿ ಸಿಆರ್‌ಪಿಎಫ್ ಡಿಜಿ ಕುಲ್ದೀಪ್ ಸಿಂಗ್ ಪ್ರತಿಕ್ರಿಯಿಸಿದ್ದು, “ಇತ್ತೀಚಿನ ಹಿಂಸಾಚಾರವು ಮಂಗಳವಾರ ಮತ್ತು ಬುಧವಾರ ರಾತ್ರಿ ಪ್ರಾರಂಭವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಟ್ರೋಂಗ್ಲಾಬಿ ಪ್ರದೇಶದಲ್ಲಿ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಎರಡೂ ಸಮುದಾಯಗಳಿಗೆ ಸೇರಿದ ಹೆಚ್ಚಿನ ಮನೆಗಳು ಬೆಂಕಿಗಾಹುತಿಯಾಗಿವೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

“ಬೆಳಿಗ್ಗೆ 9.30ರ ಸುಮಾರಿಗೆ ಬಿಷ್ಣುಪುರದ ಟ್ರೋಂಗ್ಲಾಬಿ ಪ್ರದೇಶದಲ್ಲಿ ಜನರ ಗುಂಪಿನ ಮೇಲೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆದಲ್ಲೇ ಮೃತಪಟ್ಟಿದ್ದಾರೆ.”

ಕುಕಿ ಪ್ರಾಬಲ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಗಡಿಯಲ್ಲಿರುವ ಇಂಫಾಲ್ ವೆಸ್ಟ್‌ನ ಸಿಂಗ್ಡಾದಲ್ಲಿ, ಶಂಕಿತ ಉಗ್ರಗಾಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮೈಥೇಯಿ ನಿವಾಸಿಯೊಬ್ಬರು ಗಾಯಗೊಂಡಿದ್ದಾರೆ.

ಮೇ 3ರಂದು ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಆರಂಭವಾದವು. 70 ಕ್ಕೂ ಹೆಚ್ಚು ಜನರು ಈ ಹಿಂಸಾಚಾರದಲ್ಲಿ ಈವರೆಗೆ ಹತರಾಗಿದ್ದಾರೆ, ಸುಮಾರು 200 ಜನರು ಗಾಯಗೊಂಡಿದ್ದಾರೆ ಮತ್ತು 40,000ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೈಥೇಯಿ ಸಮುದಾಯ ಬೇಡಿಕೆ ಇಟ್ಟಿತ್ತು. ಇದನ್ನು ಗೌಹಾಟಿ ಹೈಕೋರ್ಟ್ ಬೆಂಬಲಿಸಿತು. ಆನಂತರದಲ್ಲಿ ಉದ್ವಿಗ್ನತೆ ಉಂಟಾಗಿದೆ.

ಮಣಿಪುರದ ಗುಡ್ಡಗಾಡು ಬುಡಕಟ್ಟು ಜನಾಂಗದವರು ಬಹುಸಂಖ್ಯಾತ ಮೈಥೇಯಿ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನವನ್ನು ನೀಡುವುದು ಅನ್ಯಾಯವೆಂದು ಭಾವಿಸಿದ್ದಾರೆ. ಇದರಿಂದಾಗಿ ಉದ್ಯೋಗಗಳು ಮತ್ತು ಶಿಕ್ಷಣದ ಅವರ ಹಕ್ಕು ಪಲ್ಲಟಗೊಳ್ಳುತ್ತದೆ ಎಂಬುದು ಕುಕಿ ಸಮುದಾಯದ ವಾದ.

ಪ್ರಸ್ತುತ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಸುಮಾರು 10,000 ಸಿಬ್ಬಂದಿ, ಸಿಆರ್‌ಪಿಎಫ್ ಮತ್ತು ಗಡಿ ಭದ್ರತಾ ಪಡೆ ಬಿಎಸ್‌ಎಫ್‌ನ 7,000 ಸಿಬ್ಬಂದಿ ಮಣಿಪುರದಲ್ಲಿ ಇದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ದೆಹಲಿಯಲ್ಲಿರುವ ಕೇಂದ್ರ ಸಚಿವ ರಾಜ್‌ಕುಮಾರ್ ರಂಜನ್ ಸಿಂಗ್ ಅವರ ನಿವಾಸದಲ್ಲಿ ಮೈಥೇಯಿ ಮತ್ತು ಕುಕಿ ಎರಡೂ ಸಮುದಾಯಗಳ ಚಿಂತಕರು ಭೇಟಿಯಾಗಿ ಮಾತನಾಡಿರುವುದಾಗಿ ವರದಿಯಾಗಿದೆ. ಮಣಿಪುರದ ಏಕೈಕ ಸಂಸದ ಲೋರ್ಹೋ ಎಸ್. ಫೋಜ್ ಕೂಡ ಸಭೆಯಲ್ಲಿ ಪಾಲ್ಗೊಂಡರು ಎಂದು ಎನ್‌ಡಿಟಿವಿ ತಿಳಿಸಿದೆ.

“ಮೈಥೇಯಿ ಮತ್ತು ಕುಕಿ ಸಮುದಾಯಗಳ ತಲಾ ಹತ್ತು ಮಂದಿ ಚಿಂತಕರು ಇದ್ದರು. ಮಣಿಪುರದಲ್ಲಿ ಶಾಂತಿ ಮತ್ತು ಸಾಮರಸ್ಯವನ್ನು ಹೇಗೆ ತರುವುದು ಮತ್ತು ಮುಂದಿನ ದಾರಿ ಹೇಗಿರಬೇಕು ಎಂದು ಚರ್ಚಿಸಿದ್ದಾರೆ.

ಮಣಿಪುರದ ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ನಾಗರಿಕತೆಯ ಬಗ್ಗೆ ಚಿಂತಕರು ಮಾತನಾಡಿದ್ದಾರೆ. ಇದನ್ನು ಕಳೆದುಕೊಳ್ಳಲು ಬಿಡಬಾರದೆಂದು ಚಿಂತಿಸಿದ್ದಾರೆ” ಎಂದು ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ‘ಎನ್‌ಡಿಟಿವಿ’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...