Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

ನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

- Advertisement -
- Advertisement -

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಎಂಟು ಶಾಸಕರಲ್ಲಿ ಬಿಟಿಎಂ ಲೇಔಟ್ ಕ್ಷೇತ್ರದಿಂದ ಗೆದ್ದಿರುವ ರಾಮಲಿಂಗಾ ರೆಡ್ಡಿ ಸಹ ಒಬ್ಬರು.

ಸೌಮ್ಯ ಸ್ವಭಾವದ ವ್ಯಕ್ತಿತ್ವದ ರಾಮಲಿಂಗಾ ರೆಡ್ಡಿಯವರು, ಕಳೆದ 20 ವರ್ಷಗಳಿಂದ ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರಷ್ಟೇ ಶಕ್ತಿಯುತ ರಾಜಕಾರಣಿಯಾಗಿರುವ ರಾಮಲಿಂಗಾ ರೆಡ್ಡಿ ಅವರು, ತಮ್ಮ ರಾಜಕಾರಣದ ಪ್ರಾಬಲ್ಯವನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ಯಾವ ಕ್ಷೇತ್ರದಲ್ಲಾದರೂ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯ ಹೊಂದಿರುವಂತಹವರು.

ರಾಮಲಿಂಗಾ ರೆಡ್ಡಿ ಮೇಲಿರುವ ಗಂಭೀರವಾದ ಆರೋಪವೆಂದರೆ ಅದು ಹೊಂದಾಣಿಕೆ ರಾಜಕಾರಣಿ. ಈ ಹೊಂದಾಣಿಕೆ ರಾಜಕಾರಣವು ಬಿಜೆಪಿಯ ದಿ.ಅನಂತಕುಮಾರ್ ಕಾಲದಿಂದ ಈಗಿನ ಆರ್. ಆಶೋಕ್ ಅವರ ಕಾಲದವರೆಗೂ ಇದೆ ಎನ್ನುವ ಆರೋಪಗಳು ಕೇಳಿಬಂದಿವೆ. ಅನಂತ್‌ಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೊಂದಾಣಿಕೆ ರಾಜಕಾರಣದಲ್ಲಿ ಅದೆಷ್ಟೋ ನಾಯಕರು ಸೋಲುಕಂಡಿದ್ದಾರೆ ಎನ್ನಲಾಗುತ್ತದೆ. ಈಗಲೂ ಆರ್. ಅಶೋಕ್ ಜೊತೆಗೆ ಅದೇ ಹೊಂದಾಣಿಕೆ ಮುಂದುವರಿಸಿದ್ದಾರೆ; ಇದು ಕಾಂಗ್ರೆಸ್‌ಗೆ ಒಂದು ರೀತಿಯಲ್ಲಿ ಒಳ್ಳೆಯದು ಹೌದು ಕೆಟ್ಟದ್ದು ಕೂಡಾ ಹೌದು ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿವೆ.

ರಾಮಲಿಂಗಾ ರೆಡ್ಡಿ ಅವರು ಈಗ ಎರಡು ಇಲಾಖೆಗಳನ್ನು ನಿರ್ವಹಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾಗಿ ಖಾತೆ ಹಂಚಿಕೆಯಾಗಿದ್ದರೂ ತಮ್ಮ ಹಿರಿತನಕ್ಕೆ ಇನ್ನೂ ದೊಡ್ಡ ಖಾತೆ ಸಿಗಬೇಕಿತ್ತು ಎಂಬ ಅಸಮಧಾನ ಹೊಂದಿದ್ದಾರೆಂಬ ವದಂತೆ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು.

ರಾಜಕಾರಣದ ಹಿನ್ನೆಲೆ

ರಾಮಲಿಂಗಾ ರೆಡ್ಡಿ ಅವರು ಇಂದಿರಾ ಗಾಂಧಿ ಮತ್ತು ದೇವರಾಜ್ ಅರಸ್ ಅವರ ಬಡತನ ನಿರ್ಮೂಲನ ಕಾರ್ಯಕ್ರಮಗಳಿಂದ ಪ್ರೇರಿತರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದರು. 1973ರಲ್ಲಿ ಎನ್‌ಎಸ್‌ಯುಐಗೆ ಸೇರಿ, ಕೇರಳದ ತಿರುವನಂತಪುರದಲ್ಲಿ ಎನ್‌ಎಸ್‌ಯುಐ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. ವಿದ್ಯಾರ್ಥಿ ದಿನಗಳಿಂದಲೇ ರಾಜಕೀಯದ ಒಲವು ಬೆಳೆಸಿಕೊಂಡಿದ್ದ ಅವರು 1973-74ರವರೆಗೆ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿಯಾದರು. 1977-78ರ ಅವಧಿಯಲ್ಲಿ ನಗರದ ಲಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು. 1980-83ರ ಸಮಯದಲ್ಲಿ ಬೆಂಗಳೂರು ವಿವಿಯಲ್ಲಿ ಸೆನೆಟ್ ಮತ್ತು ಹಣಕಾಸು ಸಮಿತಿ ಸದಸ್ಯರಾದರು. 1983ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆದರು. ಇದೇ ವೇಳೆ 1985-90ರವರೆಗೂ ಜಯನಗರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದರು. ಹೀಗೆ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕ ಜೀವನದಲ್ಲಿ ಹಂತಹಂತವಾಗಿ ಬೆಳೆದವರು.

ರಾಜ್ಯ ಚುನಾವಣಾ ರಾಜಕಾರಣ ಹಾದಿ

ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ರಾಮಲಿಂಗಾ ರೆಡ್ಡಿಯವರು ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದಾರೆ. ಅವರು 1989ರಿಂದ ಈವರೆಗೂ ಎದುರಿಸಿದ 8 ವಿಧಾನಸಭಾ ಚುನಾವಣೆಗಳಲ್ಲೂ ಗೆಲುವು ಕಂಡಿದ್ದಾರೆ.

1989ರಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ರಾಮಲಿಂಗಾ ರೆಡ್ಡಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುತ್ತಾರೆ. ಬೆಂಗಳೂರಿನ ಹಳೆ ತಲೆಮಾರಿಗೆ ಈ ಚುನಾವಣೆಯು ಬಹಳ ನೆನಪಿನಲ್ಲಿ ಉಳಿದಿರುತ್ತದೆ. ಏಕೆಂದರೆ, ಈ ಸಮಯದಲ್ಲಿ ಭೂಗತ ಪಾತಕಿಯಾಗಿದ್ದ ಡಾನ್ ಜಯರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹುಲಿಯನ್ನು ಬೋನ್‌ನಲ್ಲಿಟ್ಟುಕೊಂಡು ಚುನಾವಣಾ ಪ್ರಚಾರ ಮಾಡಿದ್ದರು. ಆದರೆ ಚುನಾವಣೆಗೂ ಮುನ್ನವೇ ಅವರು ಲಾಲ್‌ಬಾಗ್ ಬಳಿ ಕೊಲೆಯಾಗಿ ಹೋದರು. ಆನಂತರ ಆ ಕ್ಷೇತ್ರದಲ್ಲಿ ಚುನಾವಣೆಯನ್ನೂ ಮುಂದೂಡಲಾಯಿತು. ಆ ಬಳಿಕ ನಡೆದ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಗೆಲುವು ಕಂಡರು.

1989ರಿಂದ 2008ರವರೆಗೂ ಅಂದರೆ 20ವರ್ಷಗಳ ಕಾಲ ಜಯನಗರದಲ್ಲಿ ಪಾರುಪತ್ಯ ಸ್ಥಾಪಿಸಿದ್ದರು. ಹೌದು 1989ರಲ್ಲಿ ಗೆಲುವಿನ ಓಟ ಆರಂಭಿಸಿದ ಅವರು, 1994, 1999, 2004ರವರೆಗೂ ಜಯನಗರದಲ್ಲಿ ಸ್ಪರ್ಧಿಸಿ ಗೆಲುವು ಕಂಡರು. ಆ ಬಳಿಕ 2008ರಲ್ಲಿ ಅವರು ಬಿಟಿಎಂ ಲೇಔಟ್ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಮೇಲೆ ಅಲ್ಲಿಗೆ ವಲಸೆ ಹೋದರು. ಈವರೆಗೆ ಇಲ್ಲಿ ಒಟ್ಟು ನಾಲ್ಕು (2008, 2013, 2018 ಮತ್ತು 2023) ಚುನಾವಣೆಗಳು ನಡೆದಿವೆ. ಇಲ್ಲಿಯೂ ರಾಮಲಿಂಗಾ ರೆಡ್ಡಿ ಅವರು ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. 2018ರಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. 2023ರ ಚುನವಾಣೆಯಲ್ಲಿ ಮರುಎಣಿಕೆಯ ಪ್ರಹಸನ ಎದುರಾಗಿ ಕೇವಲ 16 ವೋಟುಗಳಿಂದ ಸೌಮ್ಯಾ ಸೋಲುಂಡಿದ್ದಾರೆ.

ಅಧಿಕಾರದ ಮೈಲಿಗಲ್ಲುಗಳು

ರಾಮಲಿಂಗಾ ರೆಡ್ಡಿ ಅವರು ಮೊದಲು 1992ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಹಣಕಾಸು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ ಮತ್ತು ಎಪಿಎಂಸಿ ಸಚಿವರಾಗಿದ್ದರು. 1993-94ರವರೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿದ್ದರು.

2002ರಲ್ಲಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಎನ್. ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.

2013ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ, ರಾಮಲಿಂಗಾ ರೆಡ್ಡಿ ಅವರು 18 ಮೇ 2013ರಿಂದ 2 ಸೆಪ್ಟೆಂಬರ್ 2017ವರೆಗೆ ಕರ್ನಾಟಕದ ಸಾರಿಗೆ ಸಚಿವರಾಗಿದ್ದರು ಮತ್ತು 2 ಸೆಪ್ಟೆಂಬರ್ 2017ರಿಂದ 17 ಮೇ 2018ರವರೆಗೆ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿದ್ದರು.

2021ರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕಸ ವಿಲೇವಾರಿ ಉದ್ಯಮದಲ್ಲಿ ಹಿಡಿತ ಸಾಧಿಸಿರುವ ರಾಮಲಿಂಗಾರೆಡ್ಡಿಯವರು, ಪೌರಕಾರ್ಮಿಕರು ಮತ್ತು ಕಸ ಸಂಗ್ರಹಿಸುವ, ವಾಹನ ಚಲಾಯಿಸುವವರು ಕಾಯಂ ಆಗಲು ತಡೆಯಾಗಿದ್ದಾರೆ ಎಂಬ ಆರೋಪ ಸಹ ಅವರ ಮೇಲಿದೆ.

ಇನ್ನು ಬೆಂಗಳೂರಿನ ನಾಯಕರಾದ ಅವರಿಗೆ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟದಲ್ಲಿ ಉತ್ತಮ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಸಾರಿಗೆ ಮತ್ತು ಮುಜರಾಯಿ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...