Homeಮುಖಪುಟವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

ವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

- Advertisement -
- Advertisement -

ಭಾರತೀಯ ವಿದ್ಯಾರ್ಥಿಗಳ ವೀಸಾ ವಂಚನೆಯ ಬಗ್ಗೆ ಆಸ್ಟ್ರೇಲಿಯಾದ ಸರ್ಕಾರವು ಕಳವಳ ವ್ಯಕ್ತಪಡಿಸಿದ ನಂತರ ಅಲ್ಲಿಯ ಇನ್ನೂ ಎರಡು ವಿಶ್ವವಿದ್ಯಾಲಯಗಳು ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದಕ್ಕೆ ನಿಷೇಧ ಹೇರಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾನಿಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆಸ್ಟ್ರೇಲಿಯಾದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳನ್ನು ನಿರಾಕರಿಸಲಾಗುತ್ತಿದೆ. ಗೃಹ ವ್ಯವಹಾರಗಳ ಇಲಾಖೆಯ ಪ್ರಕಾರ, ಈಗ ನಾಲ್ಕು ಅರ್ಜಿಗಳಲ್ಲಿ ಒಂದು ನಕಲಿ ವೀಸಾ ಹೊಂದಿರುವವರದ್ದಾಗಿರುತ್ತದೆ ಎಂದು ಹೇಳಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬೆನೀಸ್ ಅವರೊಂದಿಗೆ ಆಸ್ಟ್ರೇಲಿಯಾಕ್ಕೆ ಬರುವ ಭಾರತೀಯ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಪ್ರಯಾಣವನ್ನು ಹೆಚ್ಚಿಸಲು ವಲಸೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಈ ಬೆಳವಣಿಗೆ ನಡೆದಿದೆ.

ಅಗ್ಗದ ದರದಲ್ಲಿ ವೃತ್ತಿಪರ ಶಿಕ್ಷಣ ನೀಡುವುದಾಗಿ ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿಗಳನ್ನು ಸಂಸ್ಥೆಗಳಿಗೆ ತೆರಳಲು ಪ್ರೇರಣೆಗಳನ್ನು ನೀಡುತ್ತಿರುವ ಶಿಕ್ಷಣ ಏಜೆಂಟ್‌ಗಳ ”ನಿರ್ಲಜ್ಜ ವರ್ತನೆ”ಯ ಬಗ್ಗೆ ತನಗೆ ತಿಳಿದಿದೆ ಎಂದು ಆಸ್ಟ್ರೇಲಿಯನ್ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಸೇರಲು ಶಿಕ್ಷಣ ಏಜೆಂಟ್‌ಗಳು ಪ್ರಮುಖ ಸಾಧನವಾಗಿದೆ. ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಸೇರಿಸಲು ಪ್ರತಿ ವಿದ್ಯಾರ್ಥಿಯು ದಾಖಲಾತಿಗಳಿಗಾಗಿ ಏಜೆಂಟರ್‌ಗೆ ಸಾವಿರಾರು ಡಾಲರ್‌ಗಳ ಕಮಿಷನ್‌ಗಳನ್ನು ನೀಡುತ್ತಾರೆ.

ಫೆಡರೇಶನ್ ವಿಶ್ವವಿದ್ಯಾಲಯವು ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಏಜೆಂಟರಿಗೆ ನಿರ್ದೇಶನ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಫೆಡರೇಶನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಜನರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಅವರಲ್ಲಿ ಎಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬುದು ಸ್ಪಷ್ಟವಾಗಿಲ್ಲ.

ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸಿದೆ. 2022 ರಲ್ಲಿ ದಾಖಲಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಹೊರಗುಳಿದಿದ್ದಾರೆ ಎಂದು ಹೇಳಿದೆ.

ಕಳೆದ ವಾರ, ಗೃಹ ವ್ಯವಹಾರಗಳ ಇಲಾಖೆಯು ಫೆಡರಲ್ ಸಂಸದೀಯ ವಿಚಾರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು 2019ರಲ್ಲಿ, 12.5% ರಿಂದ 20.1% ಅರ್ಜಿಗಳನ್ನು ನಿರಾಕರಿಸುತ್ತಿವೆ ಎಂದು ಹೇಳಿತ್ತು. ಆದರೆ ಈಗ ಭಾರತದಿಂದ ಅರ್ಜಿಗಳ ನಿರಾಕರಣೆ ಪ್ರಮಾಣವು 24.3% ಆಗಿದೆ, ಇದು 2012 ರಿಂದ ಅತ್ಯಧಿಕವಾಗಿದೆ ಎಂದು ಹೇಳಿದೆ.

ಆಸ್ಟ್ರೇಲಿಯಾದ ಇಂಟರ್‌ನ್ಯಾಶನಲ್ ಎಜುಕೇಶನ್ ಅಸೋಸಿಯೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಫಿಲ್ ಹನಿವುಡ್ ವಿಚಾರಣೆಯ ಸಮಯದಲ್ಲಿ, ”ಬೇರೆ ದೇಶಗಳ ಅನೇಕ ಪೋಷಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಬಯಸುತ್ತಾರೆ ಮತ್ತು ಸಾಮಾನ್ಯವಾಗಿ ಶಿಕ್ಷಣ ಏಜೆಂಟ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಕಳೆದ ತಿಂಗಳು, ನಾಲ್ಕು ವಿಶ್ವವಿದ್ಯಾನಿಲಯಗಳು ಪಂಜಾಬ್ ಮತ್ತು ಹರಿಯಾಣದಂತಹ ನಿರ್ದಿಷ್ಟ ಭಾರತೀಯ ರಾಜ್ಯಗಳಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಇತರ ಎರಡು ವಿಶ್ವವಿದ್ಯಾನಿಲಯಗಳು ದಾಖಲಾತಿಯನ್ನು ನಿಷೇಧಿಸಿವೆ ಆದರೆ ಯಾವುದೇ ನಿರ್ದಿಷ್ಟ ರಾಜ್ಯವನ್ನು ಉಲ್ಲೇಖಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...