Homeಮುಖಪುಟವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

ವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

- Advertisement -
- Advertisement -

ಭಾರತೀಯ ವಿದ್ಯಾರ್ಥಿಗಳ ವೀಸಾ ವಂಚನೆಯ ಬಗ್ಗೆ ಆಸ್ಟ್ರೇಲಿಯಾದ ಸರ್ಕಾರವು ಕಳವಳ ವ್ಯಕ್ತಪಡಿಸಿದ ನಂತರ ಅಲ್ಲಿಯ ಇನ್ನೂ ಎರಡು ವಿಶ್ವವಿದ್ಯಾಲಯಗಳು ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದಕ್ಕೆ ನಿಷೇಧ ಹೇರಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾನಿಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆಸ್ಟ್ರೇಲಿಯಾದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳನ್ನು ನಿರಾಕರಿಸಲಾಗುತ್ತಿದೆ. ಗೃಹ ವ್ಯವಹಾರಗಳ ಇಲಾಖೆಯ ಪ್ರಕಾರ, ಈಗ ನಾಲ್ಕು ಅರ್ಜಿಗಳಲ್ಲಿ ಒಂದು ನಕಲಿ ವೀಸಾ ಹೊಂದಿರುವವರದ್ದಾಗಿರುತ್ತದೆ ಎಂದು ಹೇಳಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬೆನೀಸ್ ಅವರೊಂದಿಗೆ ಆಸ್ಟ್ರೇಲಿಯಾಕ್ಕೆ ಬರುವ ಭಾರತೀಯ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಪ್ರಯಾಣವನ್ನು ಹೆಚ್ಚಿಸಲು ವಲಸೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಈ ಬೆಳವಣಿಗೆ ನಡೆದಿದೆ.

ಅಗ್ಗದ ದರದಲ್ಲಿ ವೃತ್ತಿಪರ ಶಿಕ್ಷಣ ನೀಡುವುದಾಗಿ ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿಗಳನ್ನು ಸಂಸ್ಥೆಗಳಿಗೆ ತೆರಳಲು ಪ್ರೇರಣೆಗಳನ್ನು ನೀಡುತ್ತಿರುವ ಶಿಕ್ಷಣ ಏಜೆಂಟ್‌ಗಳ ”ನಿರ್ಲಜ್ಜ ವರ್ತನೆ”ಯ ಬಗ್ಗೆ ತನಗೆ ತಿಳಿದಿದೆ ಎಂದು ಆಸ್ಟ್ರೇಲಿಯನ್ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಸೇರಲು ಶಿಕ್ಷಣ ಏಜೆಂಟ್‌ಗಳು ಪ್ರಮುಖ ಸಾಧನವಾಗಿದೆ. ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಸೇರಿಸಲು ಪ್ರತಿ ವಿದ್ಯಾರ್ಥಿಯು ದಾಖಲಾತಿಗಳಿಗಾಗಿ ಏಜೆಂಟರ್‌ಗೆ ಸಾವಿರಾರು ಡಾಲರ್‌ಗಳ ಕಮಿಷನ್‌ಗಳನ್ನು ನೀಡುತ್ತಾರೆ.

ಫೆಡರೇಶನ್ ವಿಶ್ವವಿದ್ಯಾಲಯವು ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಏಜೆಂಟರಿಗೆ ನಿರ್ದೇಶನ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಫೆಡರೇಶನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಜನರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಅವರಲ್ಲಿ ಎಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬುದು ಸ್ಪಷ್ಟವಾಗಿಲ್ಲ.

ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸಿದೆ. 2022 ರಲ್ಲಿ ದಾಖಲಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಹೊರಗುಳಿದಿದ್ದಾರೆ ಎಂದು ಹೇಳಿದೆ.

ಕಳೆದ ವಾರ, ಗೃಹ ವ್ಯವಹಾರಗಳ ಇಲಾಖೆಯು ಫೆಡರಲ್ ಸಂಸದೀಯ ವಿಚಾರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು 2019ರಲ್ಲಿ, 12.5% ರಿಂದ 20.1% ಅರ್ಜಿಗಳನ್ನು ನಿರಾಕರಿಸುತ್ತಿವೆ ಎಂದು ಹೇಳಿತ್ತು. ಆದರೆ ಈಗ ಭಾರತದಿಂದ ಅರ್ಜಿಗಳ ನಿರಾಕರಣೆ ಪ್ರಮಾಣವು 24.3% ಆಗಿದೆ, ಇದು 2012 ರಿಂದ ಅತ್ಯಧಿಕವಾಗಿದೆ ಎಂದು ಹೇಳಿದೆ.

ಆಸ್ಟ್ರೇಲಿಯಾದ ಇಂಟರ್‌ನ್ಯಾಶನಲ್ ಎಜುಕೇಶನ್ ಅಸೋಸಿಯೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಫಿಲ್ ಹನಿವುಡ್ ವಿಚಾರಣೆಯ ಸಮಯದಲ್ಲಿ, ”ಬೇರೆ ದೇಶಗಳ ಅನೇಕ ಪೋಷಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಬಯಸುತ್ತಾರೆ ಮತ್ತು ಸಾಮಾನ್ಯವಾಗಿ ಶಿಕ್ಷಣ ಏಜೆಂಟ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಕಳೆದ ತಿಂಗಳು, ನಾಲ್ಕು ವಿಶ್ವವಿದ್ಯಾನಿಲಯಗಳು ಪಂಜಾಬ್ ಮತ್ತು ಹರಿಯಾಣದಂತಹ ನಿರ್ದಿಷ್ಟ ಭಾರತೀಯ ರಾಜ್ಯಗಳಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಇತರ ಎರಡು ವಿಶ್ವವಿದ್ಯಾನಿಲಯಗಳು ದಾಖಲಾತಿಯನ್ನು ನಿಷೇಧಿಸಿವೆ ಆದರೆ ಯಾವುದೇ ನಿರ್ದಿಷ್ಟ ರಾಜ್ಯವನ್ನು ಉಲ್ಲೇಖಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...