Homeಮುಖಪುಟವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

ವೀಸಾ ವಂಚನೆ: ಭಾರತೀಯ ವಿದ್ಯಾರ್ಥಿಗಳಿಗೆ ನಿಷೇಧ ಹೇರಿದ ಆಸ್ಟ್ರೇಲಿಯಾದ ಎರಡು ವಿಶ್ವವಿದ್ಯಾಲಯಗಳು

- Advertisement -
- Advertisement -

ಭಾರತೀಯ ವಿದ್ಯಾರ್ಥಿಗಳ ವೀಸಾ ವಂಚನೆಯ ಬಗ್ಗೆ ಆಸ್ಟ್ರೇಲಿಯಾದ ಸರ್ಕಾರವು ಕಳವಳ ವ್ಯಕ್ತಪಡಿಸಿದ ನಂತರ ಅಲ್ಲಿಯ ಇನ್ನೂ ಎರಡು ವಿಶ್ವವಿದ್ಯಾಲಯಗಳು ಪಂಜಾಬ್ ಮತ್ತು ಹರಿಯಾಣ ಸೇರಿದಂತೆ ಕೆಲವು ರಾಜ್ಯಗಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳುವುದಕ್ಕೆ ನಿಷೇಧ ಹೇರಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ವಿಕ್ಟೋರಿಯಾದಲ್ಲಿನ ಫೆಡರೇಶನ್ ವಿಶ್ವವಿದ್ಯಾನಿಲಯ ಮತ್ತು ನ್ಯೂ ಸೌತ್ ವೇಲ್ಸ್‌ನ ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಈ ನಿರ್ಧಾರವನ್ನು ತೆಗೆದುಕೊಂಡಿವೆ. ಆಸ್ಟ್ರೇಲಿಯಾದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಅರ್ಜಿಗಳನ್ನು ನಿರಾಕರಿಸಲಾಗುತ್ತಿದೆ. ಗೃಹ ವ್ಯವಹಾರಗಳ ಇಲಾಖೆಯ ಪ್ರಕಾರ, ಈಗ ನಾಲ್ಕು ಅರ್ಜಿಗಳಲ್ಲಿ ಒಂದು ನಕಲಿ ವೀಸಾ ಹೊಂದಿರುವವರದ್ದಾಗಿರುತ್ತದೆ ಎಂದು ಹೇಳಿದೆ.

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಬುಧವಾರ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬೆನೀಸ್ ಅವರೊಂದಿಗೆ ಆಸ್ಟ್ರೇಲಿಯಾಕ್ಕೆ ಬರುವ ಭಾರತೀಯ ವಿದ್ಯಾರ್ಥಿಗಳು ಮತ್ತು ವ್ಯಾಪಾರ ಪ್ರಯಾಣವನ್ನು ಹೆಚ್ಚಿಸಲು ವಲಸೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಈ ನಡುವೆ ಈ ಬೆಳವಣಿಗೆ ನಡೆದಿದೆ.

ಅಗ್ಗದ ದರದಲ್ಲಿ ವೃತ್ತಿಪರ ಶಿಕ್ಷಣ ನೀಡುವುದಾಗಿ ವಿಶ್ವವಿದ್ಯಾನಿಲಯಗಳಿಂದ ವಿದ್ಯಾರ್ಥಿಗಳನ್ನು ಸಂಸ್ಥೆಗಳಿಗೆ ತೆರಳಲು ಪ್ರೇರಣೆಗಳನ್ನು ನೀಡುತ್ತಿರುವ ಶಿಕ್ಷಣ ಏಜೆಂಟ್‌ಗಳ ”ನಿರ್ಲಜ್ಜ ವರ್ತನೆ”ಯ ಬಗ್ಗೆ ತನಗೆ ತಿಳಿದಿದೆ ಎಂದು ಆಸ್ಟ್ರೇಲಿಯನ್ ಶಿಕ್ಷಣ ಇಲಾಖೆ ಹೇಳಿದೆ.

ಇದನ್ನೂ ಓದಿ: ನಕಲಿ ಶೈಕ್ಷಣಿಕ ದಾಖಲಾತಿ ಪತ್ರ ಸಲ್ಲಿಕೆ: ಕೆನಡಾದಿಂದ 700ಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಗಡಿಪಾರು!

ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯಗಳಿಗೆ ಸೇರಲು ಶಿಕ್ಷಣ ಏಜೆಂಟ್‌ಗಳು ಪ್ರಮುಖ ಸಾಧನವಾಗಿದೆ. ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಸೇರಿಸಲು ಪ್ರತಿ ವಿದ್ಯಾರ್ಥಿಯು ದಾಖಲಾತಿಗಳಿಗಾಗಿ ಏಜೆಂಟರ್‌ಗೆ ಸಾವಿರಾರು ಡಾಲರ್‌ಗಳ ಕಮಿಷನ್‌ಗಳನ್ನು ನೀಡುತ್ತಾರೆ.

ಫೆಡರೇಶನ್ ವಿಶ್ವವಿದ್ಯಾಲಯವು ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳದಂತೆ ಏಜೆಂಟರಿಗೆ ನಿರ್ದೇಶನ ನೀಡಿದೆ ಎಂದು ಪತ್ರಿಕೆ ವರದಿ ಮಾಡಿದೆ.

ಫೆಡರೇಶನ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಜನರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಅವರಲ್ಲಿ ಎಷ್ಟು ವಿದ್ಯಾರ್ಥಿಗಳು ಭಾರತೀಯರು ಎಂಬುದು ಸ್ಪಷ್ಟವಾಗಿಲ್ಲ.

ವೆಸ್ಟರ್ನ್ ಸಿಡ್ನಿ ವಿಶ್ವವಿದ್ಯಾನಿಲಯವು ಪಂಜಾಬ್, ಹರಿಯಾಣ ಮತ್ತು ಗುಜರಾತ್‌ನ ವಿದ್ಯಾರ್ಥಿಗಳ ನೇಮಕಾತಿಯನ್ನು ನಿಲ್ಲಿಸಿದೆ. 2022 ರಲ್ಲಿ ದಾಖಲಾದವರಲ್ಲಿ ಹೆಚ್ಚಿನ ಸಂಖ್ಯೆಯವರು ಹೊರಗುಳಿದಿದ್ದಾರೆ ಎಂದು ಹೇಳಿದೆ.

ಕಳೆದ ವಾರ, ಗೃಹ ವ್ಯವಹಾರಗಳ ಇಲಾಖೆಯು ಫೆಡರಲ್ ಸಂಸದೀಯ ವಿಚಾರಣೆಯ ಸಮಯದಲ್ಲಿ ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳು 2019ರಲ್ಲಿ, 12.5% ರಿಂದ 20.1% ಅರ್ಜಿಗಳನ್ನು ನಿರಾಕರಿಸುತ್ತಿವೆ ಎಂದು ಹೇಳಿತ್ತು. ಆದರೆ ಈಗ ಭಾರತದಿಂದ ಅರ್ಜಿಗಳ ನಿರಾಕರಣೆ ಪ್ರಮಾಣವು 24.3% ಆಗಿದೆ, ಇದು 2012 ರಿಂದ ಅತ್ಯಧಿಕವಾಗಿದೆ ಎಂದು ಹೇಳಿದೆ.

ಆಸ್ಟ್ರೇಲಿಯಾದ ಇಂಟರ್‌ನ್ಯಾಶನಲ್ ಎಜುಕೇಶನ್ ಅಸೋಸಿಯೇಷನ್‌ನ ಮುಖ್ಯ ಕಾರ್ಯನಿರ್ವಾಹಕ ಫಿಲ್ ಹನಿವುಡ್ ವಿಚಾರಣೆಯ ಸಮಯದಲ್ಲಿ, ”ಬೇರೆ ದೇಶಗಳ ಅನೇಕ ಪೋಷಕರು ತಮ್ಮ ಮಕ್ಕಳನ್ನು ವಿದೇಶಕ್ಕೆ ಕಳುಹಿಸಲು ಬಯಸುತ್ತಾರೆ ಮತ್ತು ಸಾಮಾನ್ಯವಾಗಿ ಶಿಕ್ಷಣ ಏಜೆಂಟ್‌ಗಳ ಸಹಾಯವನ್ನು ತೆಗೆದುಕೊಳ್ಳುತ್ತಾರೆ” ಎಂದು ಹೇಳಿದರು.

ಕಳೆದ ತಿಂಗಳು, ನಾಲ್ಕು ವಿಶ್ವವಿದ್ಯಾನಿಲಯಗಳು ಪಂಜಾಬ್ ಮತ್ತು ಹರಿಯಾಣದಂತಹ ನಿರ್ದಿಷ್ಟ ಭಾರತೀಯ ರಾಜ್ಯಗಳಿಂದ ವಿದ್ಯಾರ್ಥಿಗಳ ದಾಖಲಾತಿಯನ್ನು ನಿಷೇಧಿಸಿವೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ. ಇತರ ಎರಡು ವಿಶ್ವವಿದ್ಯಾನಿಲಯಗಳು ದಾಖಲಾತಿಯನ್ನು ನಿಷೇಧಿಸಿವೆ ಆದರೆ ಯಾವುದೇ ನಿರ್ದಿಷ್ಟ ರಾಜ್ಯವನ್ನು ಉಲ್ಲೇಖಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...