Homeಮುಖಪುಟಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಹೈದ್ರಾಬಾದ್: ಜೊತೆಗಾತಿಯ ಕೊಂದು ತುಂಡುತುಂಡಾಗಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಆರೋಪಿ ಅರೆಸ್ಟ್‌

ಆರೋಪಿ ಬಿ.ಚಂದ್ರ ಮೋಹನ್‌ನನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದು, ಶ್ರದ್ಧಾ ವಾಕರ್‌, ನಿಕ್ಕಿ ಯಾದವ್‌ ಪ್ರಕರಣಗಳಿಗೆ ಈ ಕೇಸ್‌ ಸಾಮ್ಯತೆ ಹೊಂದಿದೆ

- Advertisement -
- Advertisement -

ತನ್ನ ಲಿವ್‌ ಇನ್‌ ಪಾರ್ಟರ್‌ (ಸಂಗಾತಿ)ಅನ್ನು ಕೊಂದ ವ್ಯಕ್ತಿಯು, ಆಕೆಯ ದೇಹವನ್ನು ಕಲ್ಲು ಕತ್ತರಿಸುವ ಯಂತ್ರದಲ್ಲಿ ತುಂಡರಿಸಿ, ವಿವಿಧ ಸ್ಥಳಗಳಿಗೆ ವಿಲೇವಾರಿ ಮಾಡಿರುವ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ.

ಆರೋಪಿಯು ತನ್ನ ಸಂಗಾತಿಯ ಕೈ ಮತ್ತು ಕಾಲುಗಳನ್ನು ಮನೆಯ ರೆಫ್ರಿಜರೇಟರ್‌ನಲ್ಲಿ ಇಟ್ಟಕೊಂಡಿದ್ದನು. ದುರ್ವಾಸನೆ ತಪ್ಪಿಸಲು ಸೋಂಕುನಿವಾರಕ ಮತ್ತು ಸುಗಂಧ ದ್ರವ್ಯಗಳನ್ನು ಸಿಂಪಡಿಸುತ್ತಿದ್ದನು.

ಕತ್ತರಿಸಿದ ಸ್ಥಿತಿಯಲ್ಲಿ ಮಹಿಳೆಯ ತಲೆ ಮೇ 17ರಂದು ನಗರದ ಮೂಸಿ ನದಿಯ ಬಳಿ ಪತ್ತೆಯಾಗಿತ್ತು. ಅದನ್ನು ಬೆನ್ನು ಹತ್ತಿದ ಹೈದರಾಬಾದ್ ಪೊಲೀಸರು ಪ್ರಕರಣವನ್ನು ಬಯಲಿಗೆಳೆದಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವು ದೆಹಲಿಯ ಶ್ರದ್ದಾ ವಾಕರ್ ಮತ್ತು ನಿಕ್ಕಿ ಯಾದವ್ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಹೊಂದಿದೆ. ತಮ್ಮ ಸಂಗಾತಿಯನ್ನು ಕೊಲೆ ಮಾಡಿದ ಬಳಿಕ ಆರೋಪಿಯು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ದೇಹದ ಭಾಗಗಳನ್ನು ವಿಲೇವಾರಿ ಮಾಡಲು ರೆಫ್ರಿಜರೇಟರ್‌ಗಳಲ್ಲಿ ಸಂಗ್ರಹಿಸಿರುವ ಕ್ರಮಬದ್ಧತೆಯನ್ನು ಈ ಮೂರು ಪ್ರಕರಣಗಳಲ್ಲಿಯೂ ಗುರುತಿಸಬಹುದು.

ಹೈದ್ರಾಬಾದ್‌ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತ ರೂಪೇಶ್ ಚೆನ್ನೂರಿ ಮಾತನಾಡಿ, “ಷೇರು ಮಾರುಕಟ್ಟೆಯಲ್ಲಿ ಆನ್‌ಲೈನ್ ವಹಿವಾಟು ನಡೆಸುತ್ತಿದ್ದ, ಬ್ಯಾಚೂಲರ್‌ ಆಗಿದ್ದ ಬಿ.ಚಂದ್ರ ಮೋಹನ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

48ರ ವರ್ಷದ ಚಂದ್ರ ಮೋಹನ್‌, 55 ವರ್ಷದ ಯರ್ರಂ ಅನುರಾಧಾ ರೆಡ್ಡಿ ಅವರ ಜೊತೆಯಲ್ಲಿ ಕಳೆದ 15 ವರ್ಷಗಳಿಂದ ವಿವಾಹೇತರ ಸಂಬಂಧ ಹೊಂದಿದ್ದನು.

ಬಹಳ ಹಿಂದೆಯೇ ಪತಿಯಿಂದ ಬೇರ್ಪಟ್ಟಿದ್ದ ಅನುರಾಧಾ ಅವರು, ಚಂದ್ರಮೋಹನ್ ಜೊತೆಯಲ್ಲಿ ದಿಲ್‌ಸುಖ್‌ನಗರದ ಚೈತನ್ಯಪುರಿ ಕಾಲೋನಿಯಲ್ಲಿ ಆತನ ಮನೆಯಲ್ಲಿ ವಾಸವಿದ್ದರು.

ಅನುರಾಧ ಅವರು ಬಡ್ಡಿ ವ್ಯವಹಾರವನ್ನು 2018ರಿಂದಲೂ ನಡೆಸುತ್ತಿದ್ದರು. ಅಗತ್ಯವಿರುವವರಿಗೆ ಬಡ್ಡಿಯ ಮೇಲೆ ಸಾಲ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ವ್ಯಾಪಾರ ಮಾಡಲು ಅನುರಾಧ ಅವರಿಂದ ಸುಮಾರು 7 ಲಕ್ಷ ರೂಪಾಯಿಗಳನ್ನು ತೆಗೆದುಕೊಂಡ ಮೋಹನ್, ಆಕೆಗೆ ಹಣವನ್ನು ಹಿಂತಿರುಗಿಸಿರಲಿಲ್ಲ. ಪದೇ ಪದೇ ಕೇಳಿದರೂ ಹಣ ವಾಪಸ್ ನೀಡುವಲ್ಲಿ ವಿಫಲನಾಗಿದ್ದನು. ಇದರಿಂದ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು.

ಹಣ ವಾಪಸ್ ಕೊಡುವಂತೆ ಅನುರಾಧ ಅವರು ಆತನ ಮೇಲೆ ಒತ್ತಡ ಹೇರುತ್ತಿದ್ದರಿಂದ ಕೊಲೆ ಮಾಡಲು ಆತ ಸಂಚು ರೂಪಿಸಿದ್ದನು. ಮೇ 12 ರಂದು ಮೋಹನ್‌, ಅನುರಾಧ ಜೊತೆಯಲ್ಲಿ ಜಗಳ ಮಾಡಿಕೊಂಡು ಚಾಕುವಿನಿಂದ ಹಲ್ಲೆ ನಡೆಸಿದ್ದನು.

ಅನುರಾಧ ಅವರ ಎದೆ ಮತ್ತು ಹೊಟ್ಟೆಗೆ ಚಾಕುವಿನಿಂದ ಚುಕ್ಕಿದ್ದನು. ಇದರಿಂದಾಗಿ ಅವರು ಸಾವನ್ನಪ್ಪಿದ್ದರು. ಕೊಲೆ ಮಾಡಿದ ನಂತರ, ಆಕೆಯ ದೇಹವನ್ನು ತುಂಡುತುಂಡಾಗಿ ಕತ್ತರಿಸಿ ವಿಲೇವಾರಿ ಮಾಡಲೆಂದು ಕಲ್ಲು ಕತ್ತರಿಸುವ ಎರಡು ಸಣ್ಣ ಯಂತ್ರಗಳನ್ನು ಆರೋಪಿ ಖರೀದಿಸಿದ್ದನು.

ತಲೆ ಕತ್ತರಿಸಿ ಕಪ್ಪು ಪಾಲಿಥಿನ್ ಕವರ್‌ನಲ್ಲಿಟ್ಟಿದ್ದನು. ನಂತರ ಕಾಲುಗಳು ಮತ್ತು ಕೈಗಳನ್ನು ಬೇರ್ಪಡಿಸಿದನು. ಅವುಗಳನ್ನು ರೆಫ್ರಿಜರೇಟರ್‌ನಲ್ಲಿ ಸುರಕ್ಷಿತವಾಗಿ ಇಟ್ಟಿದ್ದನು. ದೇಹದ ಭಾಗಗಳನ್ನು ವಿಲೇವಾರಿ ಮಾಡಲು ಸೂಟ್‌ಕೇಸ್ ಬಳಸುತ್ತಿದ್ದನು.

ಮೇ 15ರಂದು ತಲೆಯನ್ನು ಆಟೊರಿಕ್ಷಾದಲ್ಲಿ ತಂದು ‘ಮೂಸಿ ನದಿ’ ಬಳಿ ಎಸೆದಿದ್ದನು. ಫಿನಾಯ್ಲ್‌, ಡೆಟಾಲ್, ಸುಗಂಧ ದ್ರವ್ಯ, ಅಗರಬತ್ತಿ ಮತ್ತು ಕರ್ಪೂರವನ್ನು ಖರೀದಿಸಿ ದೇಹದ ಇತರ ಭಾಗಗಳಿಗೆ ನಿಯಮಿತವಾಗಿ ಸಿಂಪಡಿಸುತ್ತಿದ್ದನು. ಸುತ್ತಮುತ್ತ ದುರ್ವಾಸನೆ ಹರಡದಂತೆ ನೋಡಿಕೊಂಡಿದ್ದನು.

ಇದನ್ನೂ ಓದಿರಿ: ಅಫ್ತಾಬ್-ಶ್ರದ್ಧಾ 2019ರಿಂದಲೂ ಜೊತೆಯಲ್ಲಿದ್ದರು; ಮುಂಬೈ ತೊರೆದು ದೆಹಲಿಗೆ ಹೋದರು: ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು ಹೀಗೆ…

ದೇಹದ ಭಾಗಗಳನ್ನು ಹೇಗೆ ವಿಲೇವಾರಿ ಮಾಡಬೇಕು ಎಂಬ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಿದ್ದನು. ಮೃತಳ ಸೆಲ್ ಫೋನ್ ಬಳಸಿ, “ಆಕೆ ಜೀವಂತವಾಗಿದ್ದಾಳೆ ಮತ್ತು ಬೇರೆಡೆ ಇದ್ದಾಳೆ” ಎಂದು ನಂಬುವಂತೆ ಆಕೆಯ ಪರಿಚಿತರಿಗೆ ಸಂದೇಶಗಳನ್ನು ಕಳುಹಿಸುತ್ತಿದ್ದನು.

ಮೇ 17ರಂದು ಮೂಸಿ ನದಿಯ ಬಳಿಯ ಅಫ್ಜಲ್ ನಗರದ ಸಮುದಾಯ ಭವನದ ಎದುರು ಕಸ ಸುರಿಯುವ ಸ್ಥಳದಲ್ಲಿ ಪೌರಕಾರ್ಮಿಕರು ಮಹಿಳೆಯ ತಲೆಯನ್ನು ಪತ್ತೆ ಹಚ್ಚಿದ್ದರು. ಮಲಕಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪ್ರಕರಣ ಭೇದಿಸಲು ಎಂಟು ತಂಡಗಳನ್ನು ರಚಿಸಿದ್ದರು.

ಸಿಸಿಟಿವಿ ದೃಶ್ಯಾವಳಿಗಳು, ಇತರ ತಂತ್ರಜ್ಞಾನವನ್ನು ಬಳಸಿದ ತನಿಖಾಧಿಕಾರಿಗಳು ಆರೋಪಿಯನ್ನು ಗುರುತಿಸುವಲ್ಲಿ ಸಫಲರಾಗಿದ್ದಾರೆ. ಸಂತ್ರಸ್ತೆಯ ದೇಹದ ಇತರ ಭಾಗಗಳನ್ನು ಆರೋಪಿಯ ಮನೆಯಿಂದ ವಶಪಡಿಸಿಕೊಂಡ ಪೊಲೀಸರು ಅವುಗಳನ್ನು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...