Homeಕರ್ನಾಟಕನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

ನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

- Advertisement -
- Advertisement -

ಉದ್ಯಮ ಹಾಗೂ ರಾಜಕಾರಣವನ್ನು ಜೊತೆ ಜೊತೆಯಾಗಿಯೇ ಮುನ್ನಡೆಸುವ ಹಾಗೂ ಎರಡರಲ್ಲೂ ಯಶಸ್ಸು ಕಾಣುವ ಮುಖಂಡರ ಪೈಕಿ ಕೆ.ಜೆ ಜಾರ್ಜ್ ಮುಂಚೂಣಿಯ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿ, ಯಾರೇ ಮುಖ್ಯಮಂತ್ರಿಯಾಗಲಿ ಕೆ.ಜೆ ಜಾರ್ಜ್ ಅವರಿಗೆ ಪ್ರಮುಖ ಖಾತೆ ಖಚಿತ ಎಂಬ ಮಾತು ಸಾಮಾಜಿಕ ವಲಯದಲ್ಲಿ ಜನಜನಿತವಾಗುವಷ್ಟು ಅವರು ತಮ್ಮ ವರ್ಚಸ್ಸನ್ನು ಕಳೆದ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವೃದ್ಧಿಸಿಕೊಂಡಿದ್ದರು. ಈ ಹಿಂದಿನ ಸರ್ಕಾರದಲ್ಲಿ ಅವರು ಪ್ರಮುಖ ಗೃಹ ಇಲಾಖೆಯ ನಂತರ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈಗ ಇಂಧನ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರು ಬಾರಿ ಶಾಸಕರಾಗಿದ್ದರೂ, ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಲ್ಲಿ 2003ರಿಂದ ಸತತ ನಾಲ್ಕು ಬಾರಿ ಪುನರಾಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಕೆ.ಜೆ ಜಾರ್ಜ್ ಅವರ ಬದುಕು ಮತ್ತು ಕರ್ನಾಟಕ ರಾಜಕೀಯದಲ್ಲಿ ಅವರು ಕಂಡ ಯಶಸ್ಸು ಸಾಕಷ್ಟು ರೋಚಕ.

ಕೆ.ಜೆ ಜಾರ್ಜ್ ಅವರ ಪೂರ್ಣ ಹೆಸರು ಕೇಳಚಂದ್ರ ಜೋಸೆಫ್ ಜಾರ್ಜ್. ನನಾಯ ಸಿರಿಯನ್ ಜಾಕೋಬೈಟ್ ಕ್ರಿಶ್ಚಿಯನ್ ಸಮುದಾಯದ ಜೋಸೆಫ್ ಕೇಳಚಂದ್ರ ಚಾಕೋ ಮತ್ತು ಮರಿಯಮ್ಮ ದಂಪತಿ ಪುತ್ರನಾಗಿ 1946ರಂದು ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಆಗಸ್ಟ್ ತಿಂಗಳಲ್ಲಿ ಅವರು ಜನಿಸಿದರು. ಈ ಕುಟುಂಬ 1960ರ ಸುಮಾರಿಗೆ ಕೊಡಗಿಗೆ ಬಂದು ನೆಲೆಸಿತ್ತು.

ಬಾಲ್ಯವನ್ನು ಕೊಡಗಿನಲ್ಲೇ ಕಳೆದ ಜಾರ್ಜ್ 1968ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಗೋಣಿಕೊಪ್ಪಲು ಪಟ್ಟಣದಿಂದ ಆರಂಭಿಸಿದರು. 1969ರಲ್ಲಿ ಗೋಣಿಕೊಪ್ಪಲು ಪಟ್ಟಣದ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದರು. 1971-77ರವರೆಗೆ ಇಲ್ಲಿನ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದರು.

1975-78ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಖಜಾಂಚಿಯಾಗಿ, 1982-85ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು. ತಮ್ಮ 37ನೇ ವಯಸ್ಸಿನಲ್ಲಿ 1983ರ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಭಾರತಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾರ್ಜ್ ಸ್ಪರ್ಧಿಸಿದ್ದರು. ಆದರೆ ಮೊದಲ ಚುನಾವಣೆಯಲ್ಲೇ ಅವರಿಗೆ ಸೋಲು ಎದುರಾಯಿತು. ಜಾರ್ಜ್ ಫರ್ನಾಂಡಿಸ್ ಸಹೋದರ ಜನತಾ ಪಾರ್ಟಿಯ ಮೈಕಲ್ ಫರ್ನಾಂಡಿಸ್ ವಿರುದ್ಧ ಅವರು ಸೋಲು ಕಂಡರು.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊದಲ ಸ್ಪೀಕರ್ ಯು.ಟಿ. ಖಾದರ್

1985ರಲ್ಲಿ ನಡೆದ ಚುನಾವಣೆಯಲ್ಲಿ ಬೆಂಗಳೂರಿನ ಇದೇ ಭಾರತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದರು. 1989-94ರವರೆಗೆ ಮತ್ತೊಂದು ಅವಧಿಗೆ ಭಾರತಿನಗರ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸಿ ಗೆದ್ದರು. ಕಳೆದ ಐದು ದಶಕಗಳ ರಾಜಕೀಯ ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಸಹ ಕೆಜೆ ಜಾರ್ಜ್ ಕಂಡಿದ್ದಾರೆ. ಹಲವು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಎಸ್.ಬಂಗಾರಪ್ಪ ಸರ್ಕಾರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಕೆಜೆ ಜಾರ್ಜ್ ಅವರಿಗಿದೆ.

1994ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಸೇರಿದ್ದ ಜಾರ್ಜ್ ಮತ್ತೊಮ್ಮೆ ಸೋಲು ಕಾಣುವಂತಾಗಿತ್ತು. ಈ ಸೋಲಿನಿಂದ ಶೀಘ್ರವೇ ಸುಧಾರಿಸಿದ್ದ ಜಾರ್ಜ್ ಮತ್ತೆ ಮಾತೃ ಪಕ್ಷಕ್ಕೆ ಹಿಂತಿರುಗಿದ್ದರು. ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡರು. ಅವರ ಕುಟುಂಬಕ್ಕೂ ಹತ್ತಿರವಾಗುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಜಾತಶತ್ರುವಾಗಿ ಬೆಳೆದುನಿಂತಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಿದಾಗ ಕೆ.ಜೆ ಜಾರ್ಜ್ ಅವರಿಗೆ ಮಹತ್ವದ ಗೃಹ ಇಲಾಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ವೇಳೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಗಣಪತಿ ಆತ್ಮಹತ್ಯೆಗೆ ಜಾರ್ಜ್ ಅವರೇ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಅವರ ರಾಜೀನಾಮೆಗೂ ಒತ್ತಾಯಿಸಿದ್ದರು. ಹೀಗಾಗಿ ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಪೊಲೀಸರು ಕೊನೆಗೂ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ನೀಡಿತ್ತು. ಅದೇ ಸರ್ಕಾರದಲ್ಲಿ ನಂತರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2018ರ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಜಾರ್ಜ್ ಅವರಿಗೆ ಪ್ರಸಕ್ತ ಸಂಪುಟದಲ್ಲಿ ಇಂಧನ ಖಾತೆ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...