Homeಕರ್ನಾಟಕನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

ನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

- Advertisement -
- Advertisement -

ಉದ್ಯಮ ಹಾಗೂ ರಾಜಕಾರಣವನ್ನು ಜೊತೆ ಜೊತೆಯಾಗಿಯೇ ಮುನ್ನಡೆಸುವ ಹಾಗೂ ಎರಡರಲ್ಲೂ ಯಶಸ್ಸು ಕಾಣುವ ಮುಖಂಡರ ಪೈಕಿ ಕೆ.ಜೆ ಜಾರ್ಜ್ ಮುಂಚೂಣಿಯ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿ, ಯಾರೇ ಮುಖ್ಯಮಂತ್ರಿಯಾಗಲಿ ಕೆ.ಜೆ ಜಾರ್ಜ್ ಅವರಿಗೆ ಪ್ರಮುಖ ಖಾತೆ ಖಚಿತ ಎಂಬ ಮಾತು ಸಾಮಾಜಿಕ ವಲಯದಲ್ಲಿ ಜನಜನಿತವಾಗುವಷ್ಟು ಅವರು ತಮ್ಮ ವರ್ಚಸ್ಸನ್ನು ಕಳೆದ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವೃದ್ಧಿಸಿಕೊಂಡಿದ್ದರು. ಈ ಹಿಂದಿನ ಸರ್ಕಾರದಲ್ಲಿ ಅವರು ಪ್ರಮುಖ ಗೃಹ ಇಲಾಖೆಯ ನಂತರ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈಗ ಇಂಧನ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರು ಬಾರಿ ಶಾಸಕರಾಗಿದ್ದರೂ, ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಲ್ಲಿ 2003ರಿಂದ ಸತತ ನಾಲ್ಕು ಬಾರಿ ಪುನರಾಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಕೆ.ಜೆ ಜಾರ್ಜ್ ಅವರ ಬದುಕು ಮತ್ತು ಕರ್ನಾಟಕ ರಾಜಕೀಯದಲ್ಲಿ ಅವರು ಕಂಡ ಯಶಸ್ಸು ಸಾಕಷ್ಟು ರೋಚಕ.

ಕೆ.ಜೆ ಜಾರ್ಜ್ ಅವರ ಪೂರ್ಣ ಹೆಸರು ಕೇಳಚಂದ್ರ ಜೋಸೆಫ್ ಜಾರ್ಜ್. ನನಾಯ ಸಿರಿಯನ್ ಜಾಕೋಬೈಟ್ ಕ್ರಿಶ್ಚಿಯನ್ ಸಮುದಾಯದ ಜೋಸೆಫ್ ಕೇಳಚಂದ್ರ ಚಾಕೋ ಮತ್ತು ಮರಿಯಮ್ಮ ದಂಪತಿ ಪುತ್ರನಾಗಿ 1946ರಂದು ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಆಗಸ್ಟ್ ತಿಂಗಳಲ್ಲಿ ಅವರು ಜನಿಸಿದರು. ಈ ಕುಟುಂಬ 1960ರ ಸುಮಾರಿಗೆ ಕೊಡಗಿಗೆ ಬಂದು ನೆಲೆಸಿತ್ತು.

ಬಾಲ್ಯವನ್ನು ಕೊಡಗಿನಲ್ಲೇ ಕಳೆದ ಜಾರ್ಜ್ 1968ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಗೋಣಿಕೊಪ್ಪಲು ಪಟ್ಟಣದಿಂದ ಆರಂಭಿಸಿದರು. 1969ರಲ್ಲಿ ಗೋಣಿಕೊಪ್ಪಲು ಪಟ್ಟಣದ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದರು. 1971-77ರವರೆಗೆ ಇಲ್ಲಿನ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದರು.

1975-78ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಖಜಾಂಚಿಯಾಗಿ, 1982-85ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು. ತಮ್ಮ 37ನೇ ವಯಸ್ಸಿನಲ್ಲಿ 1983ರ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಭಾರತಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾರ್ಜ್ ಸ್ಪರ್ಧಿಸಿದ್ದರು. ಆದರೆ ಮೊದಲ ಚುನಾವಣೆಯಲ್ಲೇ ಅವರಿಗೆ ಸೋಲು ಎದುರಾಯಿತು. ಜಾರ್ಜ್ ಫರ್ನಾಂಡಿಸ್ ಸಹೋದರ ಜನತಾ ಪಾರ್ಟಿಯ ಮೈಕಲ್ ಫರ್ನಾಂಡಿಸ್ ವಿರುದ್ಧ ಅವರು ಸೋಲು ಕಂಡರು.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊದಲ ಸ್ಪೀಕರ್ ಯು.ಟಿ. ಖಾದರ್

1985ರಲ್ಲಿ ನಡೆದ ಚುನಾವಣೆಯಲ್ಲಿ ಬೆಂಗಳೂರಿನ ಇದೇ ಭಾರತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದರು. 1989-94ರವರೆಗೆ ಮತ್ತೊಂದು ಅವಧಿಗೆ ಭಾರತಿನಗರ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸಿ ಗೆದ್ದರು. ಕಳೆದ ಐದು ದಶಕಗಳ ರಾಜಕೀಯ ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಸಹ ಕೆಜೆ ಜಾರ್ಜ್ ಕಂಡಿದ್ದಾರೆ. ಹಲವು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಎಸ್.ಬಂಗಾರಪ್ಪ ಸರ್ಕಾರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಕೆಜೆ ಜಾರ್ಜ್ ಅವರಿಗಿದೆ.

1994ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಸೇರಿದ್ದ ಜಾರ್ಜ್ ಮತ್ತೊಮ್ಮೆ ಸೋಲು ಕಾಣುವಂತಾಗಿತ್ತು. ಈ ಸೋಲಿನಿಂದ ಶೀಘ್ರವೇ ಸುಧಾರಿಸಿದ್ದ ಜಾರ್ಜ್ ಮತ್ತೆ ಮಾತೃ ಪಕ್ಷಕ್ಕೆ ಹಿಂತಿರುಗಿದ್ದರು. ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡರು. ಅವರ ಕುಟುಂಬಕ್ಕೂ ಹತ್ತಿರವಾಗುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಜಾತಶತ್ರುವಾಗಿ ಬೆಳೆದುನಿಂತಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಿದಾಗ ಕೆ.ಜೆ ಜಾರ್ಜ್ ಅವರಿಗೆ ಮಹತ್ವದ ಗೃಹ ಇಲಾಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ವೇಳೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಗಣಪತಿ ಆತ್ಮಹತ್ಯೆಗೆ ಜಾರ್ಜ್ ಅವರೇ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಅವರ ರಾಜೀನಾಮೆಗೂ ಒತ್ತಾಯಿಸಿದ್ದರು. ಹೀಗಾಗಿ ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಪೊಲೀಸರು ಕೊನೆಗೂ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ನೀಡಿತ್ತು. ಅದೇ ಸರ್ಕಾರದಲ್ಲಿ ನಂತರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2018ರ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಜಾರ್ಜ್ ಅವರಿಗೆ ಪ್ರಸಕ್ತ ಸಂಪುಟದಲ್ಲಿ ಇಂಧನ ಖಾತೆ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...