Homeಕರ್ನಾಟಕನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

ನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

- Advertisement -
- Advertisement -

ತುಮಕೂರು ಜಿಲ್ಲೆ ತಮ್ಮ ಕಾರ್ಯಕ್ಷೇತ್ರವಾದರೂ, ರಾಜ್ಯದ ರಾಜಕಾರಣದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿ ಬೆಳೆದು ಗುರುತಿಸಿಕೊಂಡವರು ಡಾ. ಜಿ ಪರಮೇಶ್ವರ್. ದೀರ್ಘಕಾಲದವರೆಗೆ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದವರು. ಶಾಸಕ, ಸಚಿವ, ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಅಲಂಕರಿಸಿ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ಡಾ. ಜಿ. ಪರಮೇಶ್ವರ್ ಮೂಲತಃ ತುಮಕೂರು ಜಿಲ್ಲೆಯ ಗೊಲ್ಲಹಳ್ಳಿಯ ಗ್ರಾಮದವರು. ತಂದೆ ಹೆಚ್.ಎಂ. ಗಂಗಾಧರಯ್ಯನವರು ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಭೀಷ್ಮ ಎಂದೇ ಹೆಸರಾಗಿದ್ದರು. ದಲಿತ ಕುಟುಂಬದಲ್ಲಿ ಹುಟ್ಟಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸಿದ್ಧಾರ್ಥ ಹೆಸರಿನ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಕಟ್ಟಿಬೆಳೆಸಿದರು. ಹೆಚ್.ಎಂ. ಗಂಗಾಧರಯ್ಯನವರ ನಂತರ ಅವರ ಹಿರಿಯ ಪುತ್ರ ಡಾ. ಜಿ ಶಿವಪ್ರಸಾದ್ ಹಾಗೂ ಪರಮೇಶ್ವರ್‌ರವರು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯನ್ನು ಹೊತ್ತುಕೊಂಡರು. ಅಣ್ಣ ನಿಧನರಾದ ನಂತರ ಈಗ ಸಂಪೂರ್ಣವಾಗಿ ಪರಮೇಶ್ವರ್‌ರವರೇ ಸಂಸ್ಥೆಗಳ ಹೊಣೆಗಾರಿಕೆ ಹೊತ್ತಿದ್ದಾರೆ.

ಡಾ. ಜಿ. ಪರಮೇಶ್ವರ್ ತುಮಕೂರು ರಾಜಕಾರಣದ ಹಳೆಯ ಹೆಸರು ಎನ್ನಬಹುದು. ಅವರದ್ದು ಒಂದು ರೀತಿಯ ಶಿಸ್ತುಬದ್ಧ ರಾಜಕೀಯ ಜೀವನ ಎನ್ನಬಹುದು.

1987ರಲ್ಲಿ ಸಿದ್ಧಾರ್ಥ ಸಂಸ್ಥೆಯ ಕಾರ್ಯಕ್ರಮವೊಂದಕ್ಕೆ ಬಂದಿದ್ದ ರಾಜೀವ್ ಗಾಂಧಿಯವರಿಂದ ಪ್ರಭಾವಿತರಾಗಿ ರಾಜಕೀಯದಲ್ಲಿ ಸಕ್ರಿಯರಾದ ಪರಮೇಶ್ವರ್ ಮುಂದೆ ದೊಡ್ಡದೊಡ್ಡ ಜವಾಬ್ದಾರಿಯುತ ಹುದ್ದೆಗಳನ್ನೇ ಕಾಂಗ್ರೆಸ್ ಪಕ್ಷದಲ್ಲಿ ನಿಭಾಯಿಸಿದ್ದಾರೆ.

ರಾಜ್ಯದ ಪ್ರಮುಖ ದಲಿತ ರಾಜಕಾರಣಿಗಳಲ್ಲಿ ಒಬ್ಬರಾದ ಡಾ.ಜಿ. ಪರಮೇಶ್ವರ್‌ರವರಿಗೆ ರಾಜಕೀಯ ಜೀವನವನ್ನು ನೀಡಿದ ಕ್ಷೇತ್ರ ಮಧುಗಿರಿ. ಡಿ.ಎಂ. ನಂಜುಂಡಪ್ಪನವರ ವರದಿಯ ಪ್ರಕಾರ ಅತಿ ಹಿಂದುಳಿದ ತಾಲ್ಲೂಕಾದ ಮಧುಗಿರಿ ಮೀಸಲು ಕ್ಷೇತ್ರ, ಹಿಂದುಳಿದ ಮತ್ತು ದಲಿತ ಸಮುದಾಯಗಳು ಅತಿಹೆಚ್ಚು ಮತದಾರರನ್ನು ಹೊಂದಿದೆ. ಪರಮೇಶ್ವರ್‌ರವರು ಇಲ್ಲಿಂದ ಮೂರು ಬಾರಿ ಗೆದ್ದು ಶಾಸಕರಾಗಿದ್ದಾರೆ. 1988ರಲ್ಲಿ ಮೊದಲಬಾರಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾದ ಇವರು 1999, 2004ರಲ್ಲಿಯೂ ಸಹ ಶಾಸಕರಾಗಿ ಮರು ಆಯ್ಕೆಯಾಗಿದ್ದಾರೆ. ಮೂರು ಬಾರಿ ಶಾಸಕರಾಗಿ, ಸಚಿವರನ್ನಾಗಿಸಿದ ಕ್ಷೇತ್ರಕ್ಕೆ ವಿಶೇಷವಾಗಿ ಏನೂ ಮಾಡಿಲ್ಲವೆಂಬುದು ಸ್ಥಳೀಯರ ಸಿಟ್ಟು ಸಹ ಇದೆ. ಅದೇ ರೀತಿ ಇಂದಿಗೂ ಇವರ ಅಭಿಮಾನಿಗಳು ಕ್ಷೇತ್ರದಲ್ಲಿ ಇರುವುದು ವಿಶೇಷ.

ಇದನ್ನೂ ಓದಿ: ಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು…

1993ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಪರಮೇಶ್ವರ್, 1999ರಲ್ಲಿ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾಗಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಿಕ್ಕ ಖಾತೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ಕಾರಣ ಪರಮೇಶ್ವರ್ ಅವರ ಪ್ರಭಾವ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯಿತು.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ.

ಕ್ಷೇತ್ರ ವಿಂಗಡಣೆಯ ಕಾರಣದಿಂದ ಮಧುಗಿರಿ ಮೀಸಲು ಕ್ಷೇತ್ರದಿಂದ ಸಾಮಾನ್ಯ ಕ್ಷೇತ್ರವಾಗಿ ಬದಲಾಗುತ್ತದೆ. ಆಗ ಪರಮೇಶ್ವರ್‌ರವರು ಕ್ಷೇತ್ರ ಬದಲಾವಣೆ ಮಾಡಿ ಪಕ್ಕದ ಕೊರಟಗೆರೆಯ ಕಡೆ ಮುಖ ಮಾಡುತ್ತಾರೆ. 2008ರಲ್ಲಿ ಕೊರಟಗೆರೆ ಕ್ಷೇತ್ರಕ್ಕೆ ಬಂದ ಪರಮೇಶ್ವರ್ ಅಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದೂ ಸೋಲನುಭವಿಸಬೇಕಾಗಿ ಬಂದಿತ್ತು. ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದರೂ, ಸೋತಿದ್ದರಿಂದ ಮುಖ್ಯಮಂತ್ರಿ ಸ್ಥಾನವೂ ತಪ್ಪಿತು ಎಂಬ ಚರ್ಚೆಗಳಿವೆ. ವಿಧಾನಪರಿಷತ್ ಸದಸ್ಯರಾಗಿ 2013ರ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಮತ್ತು ಕ್ರೀಡೆ, ಬೆಂಗಳೂರು ನಗರಾಭಿವೃದ್ದಿ ಖಾತೆಗಳನ್ನು ನಿಭಾಯಿಸುತ್ತಾರೆ.

ಎಷ್ಟೋ ಬಾರಿ ಸ್ವಪಕ್ಷದವರಿಂದಲೇ ಮತ್ತು ಬೇರೆ ಪಕ್ಷದವರಿಂದಲೂ ತೀವ್ರ ಟೀಕೆಗಳಿಗೆ ಗುರಿಯಾದಾಗಲೂ ವಾಪಸ್ಸು ಟೀಕಿಸದೆ ಶಾಂತಚಿತ್ತದಿಂದಲೂ ಇರುವ ಪರಮೇಶ್ವರ್ ಮಿತಿಮೀರಿದಾಗ ಮಾತ್ರ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಏನೇ ಆಗಲಿ ಜನರಿಗೆ ತಳ ಸಮುದಾಯಗಳ ಸಿಟ್ಟು ದುರಹಂಕಾರವೆಂಬಂತೆ ಕಾಣುವುದು, ಮೇಲ್ಜಾತಿಗಳೆನಿಸಿಕೊಂಡ ಸಮುದಾಯಗಳ ಸಿಟ್ಟು ಸಾಮಾನ್ಯ ನಡವಳಿಕೆ ಎಂಬಂತೆ ಕಾಣುವುದು ನಮ್ಮ ಸಮಾಜದ ದುರಂತ ವಾಸ್ತವ. ಇಂತಹ ಮನೋಧರ್ಮಕ್ಕೆ ಪರಮೇಶ್ವರ್ ಅವರೂ ಹಲವು ಬಾರಿ ತುತ್ತಾಗಿದ್ದಾರೆ. ತುಮಕೂರು ಜಿಲ್ಲೆಯ ಮಟ್ಟಿಗೆ ಎಲ್ಲಾ ಸಮುದಾಯಗಳೂ ಪರಮೇಶ್ವರ್ ಅವರ ಮೇಲೆ ಅಭಿಮಾನ ಇರಿಸಿಕೊಂಡಿರುವುದು ನಿಜ. ಇವರ ದಕ್ಷತೆಯ ಕಾರಣದಿಂದಾಗಿ ತುಮಕೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಸಾವಿರಾರು ಜನರಿಗೆ ನೆರವಾಗಿದೆ.

ಸುದೀರ್ಘವಾದ ರಾಜಕೀಯ ಜೀವನದಲ್ಲಿ ಯಾವುದೇ ಗುರುತರವಾದ ಹಗರಣ ಅಥವಾ ಭ್ರಷ್ಟಾಚಾರದ ಆರೋಪ ತಮ್ಮ ಮೇಲೆ ಇಲ್ಲದಂತೆ ರಾಜಕೀಯ ಜೀವನವನ್ನು ಪರಮೇಶ್ವರ್ ರೂಪಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳ ಹೊಣೆಯ ಜೊತೆಜೊತೆಗೆ ರಾಜಕಾರಣವನ್ನು ಸಮಚಿತ್ತದಿಂದ ಮಾಡಿಕೊಂಡು ಬಂದವರು.

ವೈಟ್‌ಕಾಲರ್ ರಾಜಕಾರಣಿ, ಶ್ರೀಮಂತ ರಾಜಕಾರಣಿ, ಜನರ ಸಂಪರ್ಕಕ್ಕೆ ಬಾರದ ರಾಜಕಾರಣಿ ಎಂಬ ಟೀಕೆಗಳು ಡಾ.ಜಿ. ಪರಮೇಶ್ವರ್‌ರವರ ಮೇಲೆ ಇರುವುದೂ ನಿಜ. ಸ್ವತಃ ದಲಿತರಾಗಿದ್ದರೂ ದಲಿತ ಯುವಕರನ್ನು ಬೆಳೆಸುವಲ್ಲಿ, ದಲಿತರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ, ದಲಿತರ ಪರವಾಗಿ ಗಟ್ಟಿ ದನಿಯಲ್ಲಿ ಮಾತಾಡುವಲ್ಲಿ ಬಹಳ ಹಿಂದೆ ಬಿದ್ದಿದ್ದಾರೆ ಎಂಬ ಆರೋಪಗಳು ಸಹ ಇವೆ. ಕ್ಷೇತ್ರದ ವಿಷಯಕ್ಕೆ ಬಂದರೆ ಮೇಲ್ಜಾತಿ ಸಮುದಾಯದ ಮೂರು ನಾಲ್ಕು ಜನರ ತಂಡ ಇಡೀ ಕ್ಷೇತ್ರದ ಕೆಲಸಗಳನ್ನು ನಿಭಾಯಿಸುವುದು ಬಿಟ್ಟರೆ ಗೆದ್ದಮೇಲೆ ನಾಪತ್ತೆಯಾಗುತ್ತಾರೆ ಎಂಬ ಆರೋಪಗಳೂ ಇವೆ. ಆದರೆ ಕಳೆದೆರಡು ವರ್ಷಗಳಲ್ಲಿ ಅತಿ ಹೆಚ್ಚು ಜನಸಂಪರ್ಕದಲ್ಲಿದ್ದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ತೊಡಗಿಸಿಕೊಂಡಿದ್ದರು; ಹಾಗಾಗಿಯೇ ಈ ಬಾರಿ ಗೆಲ್ಲಲು ಸಾಧ್ಯವಾಯಿತು. ಈ ಬಾರಿ ಪರಮೇಶ್ವರ್‌ರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನವನ್ನು ಮಾಡಿತಾದರೂ ಅದರಲ್ಲಿ ಯಶಸ್ಸು ಕಾಣಲಿಲ್ಲ. ಉಳಿದಂತೆ ಜಿಲ್ಲೆಯಲ್ಲಿ ಸಜ್ಜನ ಸಂಭಾವಿತ ರಾಜಕಾರಣಿ ಎಂಬ ಹೆಗ್ಗಳಿಕೆಯೊಂದಿಗೆ ಈ ಬಾರಿಯೂ ಸಚಿವರಾಗಿ ಮುಂದುವರಿಯುತ್ತಿದ್ದಾರೆ. ಸಚಿವರಾದ್ದರಿಂದ ಜಿಲ್ಲೆ ಮತ್ತು ಕ್ಷೇತ್ರದಲ್ಲಿ ಭಾರಿ ನಿರೀಕ್ಷೆಯೂ ಸಹ ಮೂಡಿದೆ.

ಇದನ್ನೂ ಓದಿ: ಬಿಕ್ಕಟ್ಟಿನಲ್ಲೂ ಸೆಕ್ಯುಲರ್ ಮೌಲ್ಯಗಳನ್ನು ಬಿಡದ ಎತ್ತರದ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...